death

ಬೆಂಗಳೂರಲ್ಲಿ ಮಾನವೀಯತೆ ಮರೆತ ಜನ….! ➤  ರಕ್ತದ ಮಡುವಿನಲ್ಲಿ ಒದ್ದಾಡಿ ಯುವತಿ ಮೃತ್ಯು !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಖಾಸಗಿ ಬಸ್ ಓವರ್ ಸ್ಪೀಡ್‌ ಆಗಿ ಬಂದು ಸೈಡ್‌ ಅಲ್ಲಿ ನಿಂತಿದ್ದ ಗಾಡಿಗೆ ಗುದ್ದಿದ ಭೀಕರ ಅಪಘಾತ ಯಶವಂತಪುರದಲ್ಲಿ ನಡೆದಿದೆ. ಅಪಘಾತದಲ್ಲಿ ಡಿಯೋ ಗಾಡಿ ಓಡಿಸುತ್ತಿದ್ದ ಯುವತಿ ತಲೆಗೆ ಗಂಭೀರ ಪೆಟ್ಟು ಬಿದ್ದು ಕೆಳಗೆ ಬಿದ್ದಿದ್ದಾರೆ. ಅರ್ಧಗಂಟೆಗಳ ಕಾಲ ರಕ್ತದ ಮಡುವಿನಲ್ಲಿ ಯುವತಿ ನರಳಾಡುತ್ತಿದ್ರೂ ಜನ ಆಸ್ಪತ್ರೆಗೆ ಸೇರಿಸಲು ಹಿಂದೇಟು ಹಾಕಿದ್ದಾರೆ. ಗಾಡಿಯನ್ನು ಸೈಡ್‌ಗೆ ಹಾಕಿದ್ದ ವಿನುತಾ ಯಶವಂತಪುರ ಸತ್ವ ಅಪಾರ್ಟ್‌ಮೆಂಟ್‌ ಮುಂಭಾಗದ ರಸ್ತೆಯಲ್ಲಿ ಈ ಅವಘಡ ನಡೆದಿದೆ. ಡಿಯೋ ಓಡಿಸುತ್ತಿದ್ದ […]

ಬೆಂಗಳೂರಲ್ಲಿ ಮಾನವೀಯತೆ ಮರೆತ ಜನ….! ➤  ರಕ್ತದ ಮಡುವಿನಲ್ಲಿ ಒದ್ದಾಡಿ ಯುವತಿ ಮೃತ್ಯು ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ಸ್ಪರ್ಶದಿಂದ ಲೈನ್‌ಮ್ಯಾನ್ ಮೃತ್ಯು..! ➤ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದ ಕುಟುಂಬಸ್ಥರು

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಟ್ರಾನ್ಸ್ ಫಾರ್ಮರ್ ದುರಸ್ತಿ ಮಾಡುತಿದ್ದ 26 ವರ್ಷದ ಲೈನ್‌ಮ್ಯಾನ್ ಒಬ್ಬರು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಾಗಡಿ ರಸ್ತೆಯ ಗೋಪಾಲಪುರದಲ್ಲಿ ಟ್ರಾನ್ಸ್‌ಫಾರ್ಮರ್ ದುರಸ್ತಿ ಮಾಡುತ್ತಿದ್ದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) 26 ವರ್ಷದ ಲೈನ್‌ಮ್ಯಾನ್ ಗೌತಮ್ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ. ಮೃತ ಗೌತಮ್ ಅವರು ಕಳೆದ ಆರು ವರ್ಷಗಳಿಂದ ಬೆಸ್ಕಾಂನಲ್ಲಿ ಖಾಯಂ ಉದ್ಯೋಗಿಯಾಗಿದ್ದು, ಟ್ರಾನ್ಸ್‌ಫಾರ್ಮರ್ ಸಮಸ್ಯೆಯಿಂದ ವಿದ್ಯುತ್ ಕಡಿತವಾಗಿದೆ ಎಂಬ ದೂರಿನ ಮೇರೆಗೆ ತನ್ನ ಸಹೋದ್ಯೋಗಿ ಸಿದ್ದರಾಮ

ವಿದ್ಯುತ್ ಸ್ಪರ್ಶದಿಂದ ಲೈನ್‌ಮ್ಯಾನ್ ಮೃತ್ಯು..! ➤ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದ ಕುಟುಂಬಸ್ಥರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ತನಗೆ ತಾನೇ ವಾಟ್ಸ್​ ಆಪ್​ ನಲ್ಲಿ ಶ್ರದ್ಧಾಂಜಲಿ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ..!

(ನ್ಯೂಸ್ ಕಡಬ)newskadaba.com  ಮುಂಬೈ, ಜ.24. ಕೆಲವರು ತಮಗೆ ತಾವೇ ವಿಚಿತ್ರವಾಗಿ ಅಂತ್ಯ ಹೇಳಿಕೊಳ್ಳುತ್ತಾರೆ. ಅಂಥದ್ದೇ ಒಂದು ಪ್ರಕರಣ ಇಲ್ಲೊಂದು ಕಡೆ ನಡೆದಿದ್ದು, ಯುವಕನೊಬ್ಬ ತನಗೇ ತಾನೇ ವಾಟ್ಸ್​ ಆಪ್​ನಲ್ಲಿ ಶ್ರದ್ಧಾಂಜಲಿ ಸ್ಟೇಟಸ್ ಹಾಕಿಕೊಂಡಿದ್ದ. ವಿಚಿತ್ರವೆಂದರೆ ಆತ ಹಾಗೆ ಸ್ಟೇಟಸ್ ಹಾಕಿಕೊಂಡ ಕೆಲವೇ ಗಂಟೆಗಳಲ್ಲಿ ಆತನ ಶವ ಮರವೊಂದರಲ್ಲಿ ನೇತಾಡುವ ಸ್ಥಿತಿಯಲ್ಲಿ ಕಂಡುಬಂದಿತ್ತು ಎನ್ನಲಾಗಿದೆ. ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ನೇರಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಇಲ್‌ಇನ ರಿಷಿಕೇಶ್ ದಿಲಿಪ್​ ಖೊಡ್ಪೆ (25) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು

ತನಗೆ ತಾನೇ ವಾಟ್ಸ್​ ಆಪ್​ ನಲ್ಲಿ ಶ್ರದ್ಧಾಂಜಲಿ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಂಗಭೂಮಿ ಕಲಾವಿದ ಕುಸಿದು ಬಿದ್ದು ಮೃತ್ಯು..!

(ನ್ಯೂಸ್ ಕಡಬ)newskadaba.com ಬ್ರಹ್ಮಾವರ, ಜ.24. ರಂಗ ಭೂಮಿ ಯುವ ನಟರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರದ ಕಾರ್ತಿಕ್ ಕುಮಾರ್(31) ಮೃತ ಯುವಕ ಎಂದು ಗುರುತಿಸಲಾಗಿದೆ. ಕಳೆದ 1 ತಿಂಗಳಿನಿಂದ ಕಾರ್ತಿಕ್ ವಿಪರೀತ ಕೆಮ್ಮು ಕಾಯಿಲೆಯಿಂದ ಬಳಲುತ್ತಿದ್ದು, ಅಕ್ಕನ ಮನೆಯ ದೈವದ ಮನೆಯಲ್ಲಿ ದರ್ಶನ ಆಗುತ್ತಿರುವಾಗ ಕುರ್ಚಿಯಲ್ಲಿ ಕುಳಿತಿದ್ದ ಕಾರ್ತಿಕ್ ಕುಸಿದು ಬಿದ್ದರೆನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರಾದರೂ ಸಂಜೆ ವೇಳೆ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಈ ಬಗ್ಗೆ

ರಂಗಭೂಮಿ ಕಲಾವಿದ ಕುಸಿದು ಬಿದ್ದು ಮೃತ್ಯು..! Read More »

ಕ್ರೈಮ್ ನ್ಯೂಸ್

ಸುರತ್ಕಲ್: ವಿವಾಹಿತ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ!!!  

(ನ್ಯೂಸ್ ಕಡಬ)newskadaba.com ಸುರತ್ಕಲ್, ಜ.23. ವಿವಾಹಿತ ಯುವತಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದಲ್ಲಿ ನಡೆದಿದೆ. ಒಟ್ಟೆಕಾಯರ್ ಮನೆ ನಿವಾಸಿ ಹರೀಶ್ ಎಂಬವರ ಪತ್ನಿ ದಿವ್ಯಾ(26) ಮೃತರು. ದಿವ್ಯಾ ಒಂದೂವರೆ ವರ್ಷದ ಹಿಂದೆ ಹರೀಶ್ ರನ್ನು ಪ್ರೀತಿಸಿ ವಿವಾಹವಾಗಿದ್ದರು. ದಿವ್ಯಾ ಮನೆಯಲ್ಲಿ ಒಬ್ಬರೇ ಇರುವಾಗ ಬೆಡ್ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ದೂರು ನೀಡಲಾಗಿದೆ. ಈ ಕುರಿತು ಸುರತ್ಕಲ್ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.  

ಸುರತ್ಕಲ್: ವಿವಾಹಿತ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ!!!   Read More »

ಕರಾವಳಿ, ಕ್ರೈಮ್ ನ್ಯೂಸ್

ಆಸ್ತಿಗಾಗಿ ಆಂಧ್ರದಲ್ಲಿ ಹತ್ಯೆ ಮಾಡಿ ಕರ್ನಾಟಕದಲ್ಲಿ ಮೃತದೇಹ ಎಸೆದ ಸಂಬಂಧಿಕರು…!!!

(ನ್ಯೂಸ್ ಕಡಬ)newskadaba.com ವಿಜಯಪುರ, ಜ.23. ಹೊಸವರ್ಷದಂದು ಕೊಲೆ ಮಾಡಿ ಮೃತದೇಹವನ್ನು ಬೆಂಗಳೂರಿನ ದೇವನಹಳ್ಳಿಯಲ್ಲಿ ಎಸೆದು ಹೋಗಿದ್ದರು. ಎಷ್ಟರ ಮಟ್ಟಿಗೆ ಇವರು ಕ್ರೂರತನ ತೋರಿಸಿದ್ದರು ಎಂದರೆ ಮುಖದ ಗುರುತೇ ಸಿಗಬಾರದು ಎಂದು ಮುಖವನ್ನು ಕೊಚ್ಚಿ ಹಾಕಿ ವಿರೂಪಗೊಳಿಸಿದ್ದರು. ಮೃತ ವ್ಯಕ್ತಿಯ ಬಗ್ಗೆ ಯಾರಿಗೂ ಮಾಹಿತಿ ಸಿಗಬಾರದು ಎಂದು ಆತನನ್ನು ಬೆತ್ತಲೆ ಮಾಡಿ ಶವವನ್ನು ದೇವನ ಹಳ್ಳಿಯಲ್ಲಿ ಎಸೆದು ಹೋಗಿದ್ದರು. ಆದರೆ ಈ ಪ್ರಕರಣವನ್ನು ಪೊಲೀಸರು 20 ದಿನಗಳ ಒಳಗಾಗಿ ಭೇದಿಸಿದ್ದು ಆರೋಪಿಗಳನ್ನು ಬಂಧಿಸಿದ್ದಾರೆ. ಆಂಧ್ರದ ಅನಂತಪುರ ಮೂಲದ ಮುತ್ಯಾಲಪ್ಪ(40) ಎನ್ನುವಾತ

ಆಸ್ತಿಗಾಗಿ ಆಂಧ್ರದಲ್ಲಿ ಹತ್ಯೆ ಮಾಡಿ ಕರ್ನಾಟಕದಲ್ಲಿ ಮೃತದೇಹ ಎಸೆದ ಸಂಬಂಧಿಕರು…!!! Read More »

ಕ್ರೈಮ್ ನ್ಯೂಸ್

ಜಾತ್ರೆಯಲ್ಲಿ ದೇವರ ವಿಗ್ರಹವನ್ನು ಹೊತ್ತುಕೊಂಡಿದ್ದ ಕ್ರೇನ್‌ ಬಿದ್ದು ನಾಲ್ವರು ಮೃತ್ಯು

(ನ್ಯೂಸ್ ಕಡಬ)newskadaba.com ಚೆನ್ನೈ, ಜ.23. ಜಾತ್ರೆಯಲ್ಲಿ ದೇವರ ವಿಗ್ರಹವನ್ನು ಹೊತ್ತುಕೊಂಡಿದ್ದ ಕ್ರೇನ್‌ ಕೆಳಗೆ ಬಿದ್ದು ನಾಲ್ವರು ಮೃತಪಟ್ಟು, 9 ಮಂದಿ ಗಾಯಗೊಂಡಿರುವ ಘಟನೆ ಅರಕ್ಕೋಣಂ ಸಮೀಪದ ನೆಮಿಲಿಯ ಕಿಲ್ವೀಡಿ ಗ್ರಾಮದಲ್ಲಿ ನಡೆದಿದೆ. ಕೆ.ಮುತ್ತುಕುಮಾರ್(39),ಎಸ್.ಭೂಪಾಲನ್ (40), ಮತ್ತು ಬಿ.ಜೋತಿಬಾಬು (17) ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ. ಜಾತ್ರೆಯ ಪ್ರಯುಕ್ತ ದೇವತೆಯ ವಿಗ್ರಹವನ್ನು ಕ್ರೇನ್‌ ಮೂಲಕ ಗ್ರಾಮದಲ್ಲಿ ಹೊತ್ತುಕೊಂಡು ಮೆರವಣಿಗೆ ಮಾಡುತ್ತಿದ್ದರು. ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ದೇವರನ್ನು ಅಲಂಕರಿಸಲು ಎಂಟು ಜನ ಕ್ರೇನ್‌ ಮೇಲೆಯೇ ವಿಗ್ರಹದ ಪಕ್ಕದಲ್ಲಿದ್ದರು. ಈ ವೇಳೆ

ಜಾತ್ರೆಯಲ್ಲಿ ದೇವರ ವಿಗ್ರಹವನ್ನು ಹೊತ್ತುಕೊಂಡಿದ್ದ ಕ್ರೇನ್‌ ಬಿದ್ದು ನಾಲ್ವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗರ್ಭಿಣಿ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪಾಪಿ ಪತಿ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಪತ್ನಿಯ ನಡತೆಯನ್ನು ಶಂಕಿಯ ಗರ್ಭಿಣಿಯಾಗಿದ್ದ ಆಕೆಯನ್ನು ಕೊಲೆ ಮಾಡಿ ದೆಹಲಿಗೆ ಪರಾರಿಯಾಗಿದ್ದ 30 ವರ್ಷದ ವ್ಯಕ್ತಿಯನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನಾಸೀರ್ ಹುಸೇನ್ ಎಂದು ಗುರುತಿಸಲಾಗಿದ್ದು, ಮೆಕ್ಯಾನಿಕ್ ಆಗಿ ಕೆಲಸ ಮಾಡಿಕೊಂಡಿದ್ದ. ತಮ್ಮ ನಿವಾಸದಲ್ಲಿ ಪತ್ನಿ ನಾಜ್ ಖಾನುಮ್ (22) ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ. ಖಾನುಮ್ ಅವರನ್ನು ಕತ್ತು ಹಿಸುಕಿ ಕೊಂದ ನಂತರ, ಹುಸೇನ್ ತನ್ನ ಸಹೋದರ ಅಯೂಬ್ ಖಾನ್‌ಗೆ ಸಂದೇಶ ಕಳುಹಿಸಿದ್ದು, ತಾನು ಖಾನುಮ್‌ನನ್ನು ಕೊಲೆ ಮಾಡಿರುವುದಾಗಿ

ಗರ್ಭಿಣಿ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಪಾಪಿ ಪತಿ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೈಸೂರಿನಲ್ಲಿ ಮುಂದುವರಿದ ಚಿರತೆ ಹಾವಳಿ ➤ 11 ವರ್ಷದ ಬಾಲಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ತಿ.ನರಸೀಪುರ, ಜ.23. ಮೈಸೂರಿನ ತಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ನಾಪತ್ತೆಯಾಗಿದ್ದ 11 ವರ್ಷದ ಬಾಲಕ ಶವವಾಗಿ ಪತ್ತೆಯಾಗಿದ್ದು, ಚಿರತೆ ದಾಳಿಯ ಶಂಕೆ ವ್ಯಕ್ತವಾಗಿದೆ. ಮೃತನನ್ನು ಜಯಂತ್ ಎಂದು ಗುರುತಿಸಲಾಗಿದ್ದು, ಆತನ ಮೃತದೇಹ ಗ್ರಾಮದ ಹೊರವಲಯದಲ್ಲಿ 2 ಕಿ.ಮೀ ದೂರದಲ್ಲಿ ಗಿಡಗಂಟಿಗಳ ನಡುವೆ ಪತ್ತೆಯಾಗಿದೆ. ಕಳೆದ 48 ಗಂಟೆಗಳಲ್ಲಿ ಶಂಕಿತ ಚಿರತೆ ದಾಳಿಯಲ್ಲಿ ಇದು ಎರಡನೇ ಮತ್ತು ತಿ.ನರಸೀಪುರ ತಾಲೂಕಿನಲ್ಲಿ ನವೆಂಬರ್‌ ತಿಂಗಳಿನಿಂದ ನಾಲ್ಕನೇ ಸಾವಾಗಿದೆ. ದೂರು ಸ್ವೀಕರಿಸಿದ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದರೂ, ರಾತ್ರಿಯೇ

ಮೈಸೂರಿನಲ್ಲಿ ಮುಂದುವರಿದ ಚಿರತೆ ಹಾವಳಿ ➤ 11 ವರ್ಷದ ಬಾಲಕನೋರ್ವ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ತಾಯಿ ಮತ್ತು ಮಗಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಜ.23. ತಾಯಿ ಮತ್ತು ಮಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೇಡಡ್ಕ ಕುಂಡಂಗುಯಿಯಲ್ಲಿ ಸಂಭವಿಸಿದೆ ಎನ್ನಲಾಗಿದೆ. ಕುಂಡಂಗುಯಿ ಚಂದ್ರ ಎಂಬವರ ಪತ್ನಿ ನಾರಾಯಣಿ (46) ಮತ್ತು ಪುತ್ರಿ ಶ್ರೀನಂದಾ (12)ಮೃತದೇಹ ಪತ್ತೆಯಾಗಿದೆ. ಘಟನೆ ಬಗ್ಗೆ ಅನುಮಾನ ವ್ಯಕ್ತವಾಗಿದೆ ಎಂದು ವರದಿ ತಿಳಿಸಿದೆ. ನಾರಾಯಣಿರವರ ಮೃತದೇಹ ನೇಣು ಬಿಗಿದು ಹಾಗೂ ಶ್ರಿನಂದಾಳ ಮೃತದೇಹ ಮನೆಯ ಕೋಣೆಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಹೆಚ್ಚಿನ‌ ಮಾಹಿತಿ ನಿರೀಕ್ಷಿಸಲಾಗಿದೆ..

ಕಾಸರಗೋಡು: ತಾಯಿ ಮತ್ತು ಮಗಳ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top