death

ಸುರತ್ಕಲ್ : ರೈಲ್ವೇ ಹಳಿ  ಮೇಲೆ ಯುವಕನೋರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ಅಪರಿಚಿತ ಯುವಕನೊಬ್ಬನ ಮೃತದೇಹವು ರೈಲ್ವೇ ಹಳಿಗಳ ಮೇಲೆ ಪತ್ತೆಯಾಗಿರುವ ಘಟನೆ ಕುಳಾಯಿಗುಡ್ಡೆ ರೈಲ್ವೆ ಸೇತುವೆ ಬಳಿ ನಡೆದಿದೆ ಎಂದು ವರದಿ ತಿಳಿಸಿದೆ. 30 ವರ್ಷದ ಯುವಕನ ಛಿದ್ರವಾದ ಮೃತದೇಹ ಪತ್ತೆಯಾಗಿದ್ದು, ಈತ ರೈಲಿಗೆ ಸಿಲುಕಿ ಮೃತಪಟ್ಟ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯು ಕಪ್ಪು ನೈಟ್ ಪ್ಯಾಂಟ್, ಹಳದಿ ಬಣ್ಣದ ಪೂರ್ಣ ತೋಳಿನ ಶರ್ಟ್ ಮತ್ತು ಕಪ್ಪು ಜರ್ಕಿನ್ ಧರಿಸಿರುತ್ತಾರೆ. ಇವರ ಬಗ್ಗೆ ಮಾಹಿತಿ ಇದ್ದರೆ ಸುರತ್ಕಲ್ ಪೊಲೀಸರನ್ನು ಸಂಪರ್ಕಿಸಲು ಕೋರಲಾಗಿದೆ.  

ಸುರತ್ಕಲ್ : ರೈಲ್ವೇ ಹಳಿ  ಮೇಲೆ ಯುವಕನೋರ್ವನ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು ➤ ವಿವಾಹ ನಿಶ್ಚಯವಾಗಿದ್ದ ಯುವಕ‌ ಸೇರಿ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com  ಚಿಕ್ಕಮಗಳೂರು, ಜ.21. ಭೀಕರ ಅಪಘಾತದಲ್ಲಿ ವಿವಾಹ ನಿಶ್ಚಯಗೊಂಡ ಯುವಕ ಸೇರಿ ಇಬ್ಬರು ಮೃತಪಟ್ಟ ಘಟನೆ ಅಜ್ಜಂಪುರದ ಮಾಕನಹಳ್ಳಿಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ಮೂಲದ ಕಿರಣ್(32) ಹಾಗೂ ಅಜ್ಜಂಪುರ ತಾಲೂಕಿನ ಶಿವನಿ ಮೂಲದ ನಾಗರಾಜ್ (40) ಮೃತ ದುರ್ದೈವಿಗಳು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಿರಣ್​ ಮೆಸ್ಕಾಂನಲ್ಲಿ ಜೆಇ ಆಗಿ ಕೆಲಸ ಮಾಡುತ್ತಿದ್ದರು. ಕಿರಣ್​ಗೆ ಮದುವೆ ನಿಗದಿಯಾಗಿತ್ತು.ಇದೀಗ ಮದುವೆ ಮನೆಯಲ್ಲಿ ಶೋಕ ಮುಡುಗಟ್ಟಿದೆ.  

ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು ➤ ವಿವಾಹ ನಿಶ್ಚಯವಾಗಿದ್ದ ಯುವಕ‌ ಸೇರಿ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಂದೆಯ ಸಾವಿನ ಸುದ್ದಿ ತಿಳಿದ ಬಳಿಕ ಬಾವಿಗೆ ಹಾರಿದ 11 ವರ್ಷದ ಬಾಲಕಿ

(ನ್ಯೂಸ್ ಕಡಬ)newskadaba.com  ಮಧ್ಯಪ್ರದೇಶ, ಜ.21. ಮಧ್ಯಪ್ರದೇಶದ ಅಶೋಕನಗರ ಜಿಲ್ಲೆಯಲ್ಲಿ ತಂದೆಯ ಸಾವಿನ ಸುದ್ದಿ ತಿಳಿದ 11 ವರ್ಷದ ಬಾಲಕಿ ಬಾವಿಗೆ ಹಾರಿ ಮೃತಪಟ್ಟಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಬರ್ಖೇಡಾ ಜಾಗೀರ್ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ದೇಹತ್ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಪಹಲ್ವಾನ್ ಚೌಹಾನ್ ಹೇಳಿದ್ದಾರೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಾಲಕಿಯ ತಂದೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಆಸ್ಪತ್ರೆಗೆ ಬರುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಸಾವಿನ ಸುದ್ದಿಯನ್ನು ಅವರ

ತಂದೆಯ ಸಾವಿನ ಸುದ್ದಿ ತಿಳಿದ ಬಳಿಕ ಬಾವಿಗೆ ಹಾರಿದ 11 ವರ್ಷದ ಬಾಲಕಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಟೋ ಹತ್ತಿದ ಮಗಳನ್ನೇ ಪಟಾಯಿಸಿದ ➤ ಸೂಸೈಡ್​ ನಾಟಕ ಮಾಡಿದ ಯುವತಿ ಮೃತ್ಯು

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.21. ಆಟೋ ಡ್ರೈವರ್ ಜೊತೆಗೆ ಪ್ರೀತಿಗೆ ಬಿದ್ದಿದ್ದ ಮಗಳಿಗೆ ಪೋಷಕರು ಬುದ್ಧಿಮಾತು ಹೇಳಲು ಮುಂದಾಗಿದ್ದರು. ಆದರೆ ಈ ವೇಳೆ ಆತ್ಮಹತ್ಯೆ ಮಾಡಿಕೊಳ್ಳುವ ನಾಟಕ ಮಾಡಿದ್ದ ಯುವತಿ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ಹೆಚ್​​ಎಎಲ್​​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವತಿಯನ್ನು ಲಾವಣ್ಯ ಎಂದು ಗುರುತಿಸಲಾಗಿದ್ದು, ತನ್ನ ಪ್ರೀತಿಯನ್ನು ಸಾಬೀತು ಪಡಿಸಲು ಮುಂದಾಗಿ ವಿಷ ಸೇವನೆ ಮಾಡಿದ್ದ ಯುವತಿ ಸಾವು ಬದುಕಿನ ನಡುವಿನ ಹೋರಾಟದಲ್ಲಿ ಕೊನೆಯುಸಿರೆಳೆದಿದ್ದಾಳೆ.  

ಆಟೋ ಹತ್ತಿದ ಮಗಳನ್ನೇ ಪಟಾಯಿಸಿದ ➤ ಸೂಸೈಡ್​ ನಾಟಕ ಮಾಡಿದ ಯುವತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆಂಡತಿ ಜೊತೆ ಸಲುಗೆಯಿಂದ ಮಾತನಾಡಿದ್ದಕ್ಕೆ ಸಂಬಂಧಿಯನ್ನೇ ಹತ್ಯೆಗೈದ ಪತಿರಾಯ      

(ನ್ಯೂಸ್ ಕಡಬ)newskadaba.com  ವಿಜಯಪುರ, ಜ.21. ಹೆಂಡತಿ ಜೊತೆ ಸಲುಗೆಯಿಂದ ಮಾತನಾಡಿದ್ದಕ್ಕೆ ಗಂಡ ಸಂಬಂಧಿಯನ್ನೇ ಕೊಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ. ಕಾಳಿಕಾ ನಗರ ನಿವಾಸಿ ಈರಯ್ಯಾ ಮಠ ಎಂಬಾತನು ಅದೇ ಬಡಾವಣೆಯ ದಾನಯ್ಯ ಗಣಚಾರಿ ಪತ್ನಿ ವಾಣಿಯೊಂದಿಗೆ ಸಲುಗೆಯಿಂದ ಮಾತನಾಡುತ್ತಿದ್ದ. ಇದೇ ಕಾರಣಕ್ಕೆ ಅವಳ ಪತಿ ದಾನಯ್ಯ ಗಣಚಾರಿ ಕೊಲೆ ಮಾಡಿದ್ದಾನೆ. ಈ ಘಟನೆ ಸಂಬಂಧ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈರಯ್ಯಾ ಮಠ ಎಂಬುವವರು ತಮ್ಮ ಪತ್ನಿ ಕವಿತಾಳ ಜೊತೆಗೆ ಬಾಡಿಗೆ ಮನೆಯಲ್ಲಿ ವಾಸಗಿದ್ದರು.

ಹೆಂಡತಿ ಜೊತೆ ಸಲುಗೆಯಿಂದ ಮಾತನಾಡಿದ್ದಕ್ಕೆ ಸಂಬಂಧಿಯನ್ನೇ ಹತ್ಯೆಗೈದ ಪತಿರಾಯ       Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನ್ಯಕೋಮಿನ ಜೋಡಿ ಲಾಡ್ಜ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com  ಕಾಸರಗೋಡು, ಜ.21. ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ಲಾಡ್ಜ್ ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ರಾಜಾಪುರ ಕಲ್ಲಾರು ಒಕ್ಲಾವು ನಿವಾಸಿ ಮಹಮ್ಮದ್ ಶರೀಫ್ (40) ಮತ್ತು ಕಲ್ಲಾರು ಅಡಕಂ ಪುಲಿಕುಳಿಯ ಸಿಂಧು (36)ಮೃತರು ಎಂದು ಗುರುತಿಸಲಾಗಿದೆ. ಜನವರಿ 7ರಂದು ಇಬ್ಬರೂ ನಾಪತ್ತೆಯಾಗಿದ್ದರು. ಈ ಕುರಿತು ನಾಪತ್ತೆ ಪ್ರಕರಣ ದಾಖಲಿಸಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇದೀಗ ಗುರುವಾಯೂರು ಪಡಿಯಾರ ನಾಡೆಯ  ಕೊಠಡಿಯೊಳಗೆ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರೂ ಪತ್ತೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.  

ಅನ್ಯಕೋಮಿನ ಜೋಡಿ ಲಾಡ್ಜ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರ್ಕಳ: ಮಾನಸಿಕವಾಗಿ ನೊಂದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಾರ್ಕಳ, ಜ.21. ನೇಣುಬಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಡ್ಲಿಯಲ್ಲಿ ನಡೆದಿದೆ.ಮಜಯ ಪೂಜಾರಿ (48) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಅಂಗಡಿಗೆ ಹೋಗಿ ವಿಳ್ಯದೆಲೆ ಖರೀದಿಸಿಕೊಂಡು ಬರುತ್ತೇನೆಂದು ಹೇಳಿ ಮನೆಯಿಂದ ಹೋದವರು ವಾಪಾಸ್ ಬರದೇ ಇದ್ದುದರಿಂದ ಮನೆಯವರು ಹುಡುಕಾಡಿದಾಗ ಬೆಳ್ಸಾರ್‌ ಬೆಟ್ಟು ನರ್ಸರಿ ಎಂಬಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ವಿಪರೀತ ಮದ್ಯ ಸೇವನೆಯ ಚಟವೊಂದಿದ್ದ ಅವರು ಕಳೆದು ಏಳು ತಿಂಗಳಿಂದ ಕುಡಿತದ ಚಟದಿಂದ ಮುಕ್ತರಾಗಿದ್ದರು. ಯಾವುದೋ ಘಟನೆಯಿಂದಾಗಿ ಮಾನಸಿಕವಾಗಿ

ಕಾರ್ಕಳ: ಮಾನಸಿಕವಾಗಿ ನೊಂದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮೈಸೂರು: ಮುಂದುವರೆದ ಚಿರತೆ ಅಟ್ಟಹಾಸ ! ➤  ಮೂರನೇ ಬಲಿ ಪಡೆದು ಹೆಚ್ಚಿದ ಆತಂಕ

(ನ್ಯೂಸ್ ಕಡಬ)newskadaba.com ಮೈಸೂರು, ಜ.21.  ಟಿ.ನರಸೀಪುರ ತಾಲೂಕಿನಲ್ಲಿ ಚಿರತೆ ದಾಳಿ ಮುಂದುವರೆದಿದೆ. ಈ ಹಿಂದೆ ಇಬ್ಬರು ಚಿರತೆ ದಾಳಿಗೆ ಬಲಿಯಾಗಿದ್ದು ಇದೀಗ ವೃದ್ಧ ಮಹಿಳೆಯೊಬ್ಬರನ್ನು ಚಿರತೆ ಬಲಿ ಪಡೆದಿದೆ. ಕನ್ನನಾಯಕನಹಳ್ಳಿ ನಿವಾಸಿ 60 ವರ್ಷದ ಸಿದ್ದಮ್ಮ ಮೃತ ಮಹಿಳೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸೌದೆ ತರಲು ಮನೆಯಿಂದ ಹೊರಗೆ ಹೋಗಿದ್ದ ವೇಳೆ ಸಿದ್ದಮ್ಮರ ಮೇಲೆ ದಾಳಿ ಚಿರತೆ ದಾಳಿ ಮಾಡಿದೆ. ನಂತರ ಆಕೆಯನ್ನು ಎಳೆದುಕೊಂಡು ಹೋಗುತ್ತಿದ್ದುದ್ದನ್ನು ಕಂಡ ಗ್ರಾಮಸ್ಥರು ಕಿರುಚಾಡಿದ್ದಾರೆ. ಈ ವೇಳೆ ಸಿದ್ದಮ್ಮರನ್ನು ಅಲ್ಲೇ

ಮೈಸೂರು: ಮುಂದುವರೆದ ಚಿರತೆ ಅಟ್ಟಹಾಸ ! ➤  ಮೂರನೇ ಬಲಿ ಪಡೆದು ಹೆಚ್ಚಿದ ಆತಂಕ Read More »

ಕರ್ನಾಟಕ

ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಹೃದಯಾಘಾತದಿಂದ ಮೃತ್ಯು !

(ನ್ಯೂಸ್ ಕಡಬ)newskadaba.com ವಿಜಯಪುರ, ಜ.21. ಸಿಂದಗಿ ಕ್ಷೇತ್ರದ ಘೋಷಿತ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಸೋಮಜಾಳ (54) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಜೆಡಿಎಸ್ ಪಂಚರತ್ನ ಕಾರ್ಯಕ್ರಮದಲ್ಲಿ ಮತ್ತು ವಿಜಯಪುರದ ನಗರದ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಸಾರ್ವಜನಿಕ ಸಮಾವೇಶ ಕಾರ್ಯಕ್ರಮದಲ್ಲಿ‌ ಮಾಜಿ ಸಿಎಂ ಕುಮಾರಸ್ವಾಮಿ ಅವರೊಂದಿಗೆ ಭಾಗಿಯಾಗಿದ್ದರು. ಬಳಿಕ ಸಂಬಂಧಿಕರ ಮನೆಯಲ್ಲಿ ಅಸ್ವಸ್ಥಗೊಂಡಿದ್ದ ಶಿವಾನಂದ ಪಾಟೀಲ ಅವರನ್ನು ಸಿಂದಗಿ ಪಟ್ಟಣದ ವಾತ್ಸಲ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ವೈದ್ಯರು ತಿಳಿಸಿದ್ದಾರೆ.    

ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಹೃದಯಾಘಾತದಿಂದ ಮೃತ್ಯು ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುರತ್ಕಲ್: ಕರ್ತವ್ಯದ ವೇಳೆ ಪೊಲೀಸ್ ಕಾನ್ ಸ್ಟೇಬಲ್ ಮೃತ್ಯು ➤  ಮೃತರ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ..!

(ನ್ಯೂಸ್ ಕಡಬ)newskadaba.com  ಸುರತ್ಕಲ್, ಜ. 20. ಚಿತ್ತಾಪುರ್ ಶಾಸಕ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಇತ್ತೀಚಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಪೊಲೀಸ್ ಕಾನ್ ಸ್ಟೇಬಲ್ ಹನುಮಂತ ಅವರ ಕುಟುಂಬಕ್ಕೆ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು. ಪಣಂಬೂರು ಪೊಲೀಸ್ ಕ್ವಾಟ್ರಸ್ ನಲ್ಲಿ ವಾಸವಿದ್ದ ಬಾಗಲಕೋಟ ಮೂಲದ ಹನುಮಂತ ಅವರು ಕಾವೂರು ಠಾಣೆಯಲ್ಲಿ ಕರ್ತವ್ಯ ನಿರತರಾಗಿದ್ದ

ಸುರತ್ಕಲ್: ಕರ್ತವ್ಯದ ವೇಳೆ ಪೊಲೀಸ್ ಕಾನ್ ಸ್ಟೇಬಲ್ ಮೃತ್ಯು ➤  ಮೃತರ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top