Dehali

ದೆಹಲಿ ಕೆಂಪು ಕೋಟೆ ಬಳಿ ಸ್ಫೋಟ: 25 ಸ್ಥಳಗಳಲ್ಲಿ ಇಡಿ ದಾಳಿ

(ನ್ಯೂಸ್‌ ಕಡಬ) newskadaba.com,  ನ.18 : ಕೆಂಪು ಕೋಟೆ ಸ್ಫೋಟದ ತನಿಖೆಗೆ ಸಂಬಂಧಿಸಿದಂತೆ ಹರ್ಯಾಣದಲ್ಲಿರುವ ಅಲ್-ಫಲಾಹ್ ವಿಶ್ವವಿದ್ಯಾಲಯ ಮತ್ತು ಅದರ ಜೊತೆ ಸಂಬಂಧ ಹೊಂದಿರುವ ವ್ಯಕ್ತಿಗಳಿಗೆ ಸಂಬಂಧಪಟ್ಟಂತೆ ದೆಹಲಿ ಮತ್ತು ಫರಿದಾಬಾದ್‌ನ 25 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸಿದೆ. ‘ವೈಟ್ ಕಾಲರ್’ ಫರಿದಾಬಾದ್ ಭಯೋತ್ಪಾದಕ ಘಟಕದಲ್ಲಿ ಆರೋಪಿಗಳಾಗಿದ್ದ ಇತರರು ಕೆಲಸ ಮಾಡಿದ ವಿಶ್ವವಿದ್ಯಾಲಯ ಮತ್ತು ಸಂಸ್ಥೆಯ ಮಾಲೀಕರನ್ನು ಒಳಗೊಂಡಂತೆ ಹಣಕಾಸಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಇಡಿ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ಅಡಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದೆ. ಬೆಳಿಗ್ಗೆ […]

ದೆಹಲಿ ಕೆಂಪು ಕೋಟೆ ಬಳಿ ಸ್ಫೋಟ: 25 ಸ್ಥಳಗಳಲ್ಲಿ ಇಡಿ ದಾಳಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿ

(ನ್ಯೂಸ್‌ ಕಡಬ) newskadaba.com,  ಅ..24:  ಕರ್ನಾಟಕ ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ಚರ್ಚೆ ಜೋರಾಗುತ್ತಿರುವ ಸಮಯದಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾನುವಾರ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್ ನಾಯಕರನ್ನು ಅವರು ಅಲ್ಲಿ ಭೇಟಿಯಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಡಿಕೆ ಶಿವಕುಮಾರ್ ಅವರು ನವೆಂಬರ್ 11ರಂದು ಮತ್ತೆ ದೆಹಲಿಗೆ ತೆರಳಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಪ್ರತ್ಯೇಕ ಮಾತುಕತೆಗೆ ಸಮಯ ಕೇಳಿದ್ದಾರೆ ಎಂಬ ಮಾಹಿತಿ ಹೊರಬಂದಿದೆ. ಆ ಭೇಟಿಯ ವೇಳೆ ಅಧಿಕಾರ ಹಂಚಿಕೆ, ರಾಜ್ಯದ ರಾಜಕೀಯ ಭವಿಷ್ಯ ಮತ್ತು

ದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ

(ನ್ಯೂಸ್‌ ಕಡಬ) newskadaba.com,  ಅ.15 ನವದೆಹಲಿ: ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ (Supreme Court) ಅವಕಾಶ ನೀಡಿದೆ. ಅಕ್ಟೋಬರ್ 18ರಿಂದ 21ರವರೆಗೆ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅನುಮತಿ ನೀಡಿದೆ. ಪಟಾಕಿ ಸಿಡಿಸುವ ಬಗ್ಗೆ ಸಮತೋಲನದ ತೀರ್ಮಾನ ಕೈಗೊಳ್ಳಬೇಕಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವಲಯದ ನಗರಗಳಲ್ಲಿ ಪಟಾಕಿ ಸಿಡಿತದಿಂದ ವಾಯು ಮಾಲಿನ್ಯ ಮಿತಿ ಮೀರುತ್ತದೆ. ಮೂರು ನಾಲ್ಕು ದಿನಗಳವರೆಗೂ ಜನರು ಮನೆಯಿಂದ ಹೊರ ಬರಲು ಸಾಧ್ಯವಾಗದಂಥ ಸ್ಥಿತಿ ನಿರ್ಮಾಣವಾಗುತ್ತದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿ: ಭಾರೀ ಮಳೆ ಹಿನ್ನೆಲೆ ರಸ್ತೆಗಳಿಗೆ ನುಗ್ಗಿದ ನೀರು, ವಿಮಾನ ಹಾರಾಟ ವಿಳಂಬ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30: ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಲವಾರು ಪ್ರದೇಶಗಳಲ್ಲಿ ವ್ಯಾಪಕ ನೀರು ನಿಂತಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಅಲ್ಲದೇ ದೆಹಲಿ ವಿಮಾನ ನಿಲ್ದಾಣದಲ್ಲಿಯೂ ವಿಮಾನಗಳ ಕಾರ್ಯಾಚರಣೆಯಲ್ಲಿ ಸಮಸ್ಯೆಯುಂಟಾಗಿ ನಿರ್ಗಮನ ಮತ್ತು ಆಗಮನದಲ್ಲಿ ವಿಳಂಬವಾಗಿದೆ. ನಿರಂತರ ಮಳೆಯ ಹಿನ್ನೆಲೆ ನೋಯ್ಡಾ ಮತ್ತು ಗಾಜಿಯಾಬಾದ್‌ಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಮಳೆಯಿಂದಾಗಿ ಪ್ರಗತಿ ಮೈದಾನ,

ದೆಹಲಿ: ಭಾರೀ ಮಳೆ ಹಿನ್ನೆಲೆ ರಸ್ತೆಗಳಿಗೆ ನುಗ್ಗಿದ ನೀರು, ವಿಮಾನ ಹಾರಾಟ ವಿಳಂಬ Read More »

ಬ್ರೇಕಿಂಗ್ ನ್ಯೂಸ್

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಆ.11 : ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ಹೊರಟಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಮಂದಿ ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚುನಾವಣಾ ಆಯೋಗದ ತಟಸ್ಥತೆಯ ವಿರುದ್ಧ ಸಾರ್ವಜನಿಕ ಪ್ರತಿಭಟನೆ ನಡೆಸಲಾಯಿತು. ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟದ ಸಂಸದರು, ಸಂಸತ್ ಭವನದಿಂದ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ನಡೆಸಲು ಮುಂದಾಗಿದ್ದರು. ಇದೀಗ ದೆಹಲಿ ಪೊಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿಯಲ್ಲಿ ಕುಸಿದು ಬಿದ್ದ 4 ಅಂತಸ್ತಿನ ಕಟ್ಟಡ – 14 ತಿಂಗಳ ಮಗು ಸೇರಿ 8 ಮಂದಿ ರಕ್ಷಣೆ

(ನ್ಯೂಸ್ ಕಡಬ) newskadaba.com, ಜು. 10. ನವದೆಹಲಿ: ಈಶಾನ್ಯ ದೆಹಲಿಯ ಸೀಲಾಮ್‌ಪುರದಲ್ಲಿ 4 ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಅವಘಡ ಸಂಭವಿಸಿದ್ದು, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ದೆಹಲಿಯ ವೆಲ್ಕಮ್ ಪ್ರದೇಶದಲ್ಲಿರುವ ಜನತಾ ಮಜ್ದೂರ್ ಕಾಲೋನಿಯಲ್ಲಿ ಶನಿವಾರ‌ ಜುಲೈ 12 ರಂದ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಈಗಾಗಲೇ 14 ತಿಂಗಳ ಮಗು ಸೇರಿ 8 ಮಂದಿಯನ್ನ ರಕ್ಷಿಸಲಾಗಿದೆ. ಇನ್ನೂ 6ಕ್ಕೂ ಹೆಚ್ಚು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು,

ದೆಹಲಿಯಲ್ಲಿ ಕುಸಿದು ಬಿದ್ದ 4 ಅಂತಸ್ತಿನ ಕಟ್ಟಡ – 14 ತಿಂಗಳ ಮಗು ಸೇರಿ 8 ಮಂದಿ ರಕ್ಷಣೆ Read More »

ಬ್ರೇಕಿಂಗ್ ನ್ಯೂಸ್

ದೆಹಲಿಯಲ್ಲಿ ನೂತನ ಕರ್ನಾಟಕ ಭವನ ‘ಕಾವೇರಿ’ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com , ಏ.03 ಬೆಂಗಳೂರು: ಕರ್ನಾಟಕ ಭವನ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ದೆಹಲಿಗೆ ಭೇಟಿ ನೀಡಿದ್ದು, ಈ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ನಿನ್ನೆಯಷ್ಟೇ ದೆಹಲಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು, ದೆಹಲಿಯಲ್ಲಿ 138 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಕರ್ನಾಟಕ ಭವನವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಶಾಸಕರು, ಸಂಸದರು

ದೆಹಲಿಯಲ್ಲಿ ನೂತನ ಕರ್ನಾಟಕ ಭವನ ‘ಕಾವೇರಿ’ ಲೋಕಾರ್ಪಣೆ Read More »

ರಾಷ್ಟ್ರೀಯ ನ್ಯೂಸ್

ದೆಹಲಿ ಚುನಾವಣೆ: ಕಾಂಗ್ರೆಸ್‌ ʼಶೂನ್ಯʼ ಸಾಧನೆ-ʼಗ್ಯಾರಂಟಿ‌ʼ ಫ್ಲಾಪ್

(ನ್ಯೂಸ್ ಕಡಬ) newskadaba.com , ಫೆ.08. ನವದೆಹಲಿ: ಬಹು ನಿರೀಕ್ಷಿತ ದೆಹಲಿ ಚುನಾವಣೆಯ ಮತ ಎಣಿಕೆ ಪ್ರಾರಂಭವಾಗಿದ್ದು, ಬಿಜೆಪಿ ಭಾರೀ ಮುನ್ನಡೆಯನ್ನು ಸಾಧಿಸಿದೆ. 70 ವಿಧಾನಸಭಾ ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ಮುನ್ನಡೆಯಲ್ಲಿದ್ದು, ಆಪ್ 27 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಕಾಂಗ್ರೆಸ್‌  ಯಾವುದೇ ಕ್ಷೇತ್ರದಲ್ಲೂ ಮುನ್ನಡೆಯಲ್ಲಿಲ್ಲ. ಶೂನ್ಯ ಸಾಧನೆಯನ್ನು ತೋರಿಸಿದೆ. ಪ್ರಬಲ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್‌ ರಾಷ್ಟ್ರ ರಾಜಧಾನಿ ಚುನಾವಣೆಯ ಎಲ್ಲಾ ಕ್ಷೇತ್ರಗಳಲ್ಲೂ ಹೀನಾಯವಾಗಿ ಸೋಲುವ ಸಾಧ್ಯತೆಯಿದೆ. ಈ ಬಾರಿ ಮತದಾರ ಬಿಜೆಪಿ ಕೈ

ದೆಹಲಿ ಚುನಾವಣೆ: ಕಾಂಗ್ರೆಸ್‌ ʼಶೂನ್ಯʼ ಸಾಧನೆ-ʼಗ್ಯಾರಂಟಿ‌ʼ ಫ್ಲಾಪ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿಯಲ್ಲಿ ಬಿಜೆಪಿ ಬಹುಮತದ ಗಡಿ ದಾಟಿದೆ

(ನ್ಯೂಸ್ ಕಡಬ) newskadaba.com , ಫೆ.08. ಮೈಸೂರು: ಇಂದು ಶನಿವಾರ ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆ ಮುಂದುವರೆದಿದ್ದು, ಆರಂಭಿಕ ಟ್ರೆಂಡ್‌ಗಳಲ್ಲಿ ಭಾರತೀಯ ಜನತಾ ಪಕ್ಷ 37 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ ಬಹುಮತದ ಗಡಿ ದಾಟಿದರೆ, ಆಮ್ ಆದ್ಮಿ ಪಕ್ಷ 27 ಮತ್ತು ಕಾಂಗ್ರೆಸ್ ಒಂದು ಸ್ಥಾನದಲ್ಲಿ ಮುಂದಿದೆ. ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ, ದೆಹಲಿ ಕ್ಷೇತ್ರದಲ್ಲಿ ಬಿಜೆಪಿಯ ಪರ್ವೇಶ್ ವರ್ಮಾ ವಿರುದ್ಧ ಸ್ಪರ್ಧಿಸಿರುವ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹಿನ್ನಡೆಯಲ್ಲಿದ್ದಾರೆ. ಕಲ್ಕಾಜಿ ಕ್ಷೇತ್ರದಲ್ಲಿ, ಮುಖ್ಯಮಂತ್ರಿ ಅತಿಶಿ ಬಿಜೆಪಿಯ

ದೆಹಲಿಯಲ್ಲಿ ಬಿಜೆಪಿ ಬಹುಮತದ ಗಡಿ ದಾಟಿದೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೆಹಲಿ: ಮತದಾನ ದಿನಾಂಕ ಘೋಷಣೆ; ಫೆ.5ಕ್ಕೆ ಮತದಾನ, ಫೆ.8ರಂದು ಮತ ಎಣಿಕೆ

(ನ್ಯೂಸ್ ಕಡಬ) newskadaba.com ಜ.07: ದೆಹಲಿಯ ವಿಧಾನಸಭಾ ಚುನಾವಣೆ ಫೆಬ್ರವರಿ 5 ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ದೆಹಲಿ ವಿಧಾನಸಭೆಗೆ ಚುನಾವಣೆಯ ವೇಳಾಪಟ್ಟಿಯನ್ನು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಇತರ ಹಿರಿಯ ಚುನಾವಣಾ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು. 70 ಸದಸ್ಯ ಬಲದ ಅಸೆಂಬ್ಲಿಯ ಅವಧಿ ಫೆಬ್ರವರಿ 23 ರಂದು ಕೊನೆಗೊಳ್ಳುತ್ತದೆ ಮತ್ತು ಹೊಸ ಸದನವನ್ನು ರಚಿಸಲು ಅದಕ್ಕೂ

ದೆಹಲಿ: ಮತದಾನ ದಿನಾಂಕ ಘೋಷಣೆ; ಫೆ.5ಕ್ಕೆ ಮತದಾನ, ಫೆ.8ರಂದು ಮತ ಎಣಿಕೆ Read More »

ರಾಷ್ಟ್ರೀಯ ನ್ಯೂಸ್
Scroll to Top