dhakshina kannada

ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಉಳ್ಳಾಲ, ನ. 12. ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಳ್ಳಾಲ ನಗರಸಭಾ ವ್ಯಾಪ್ತಿಯ ಅಕ್ಕರೆಕೆರೆ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಅಕ್ಕರೆಕೆರೆ ನಿವಾಸಿ ಅಬ್ದುಲ್ ಅಝೀಝ್ ಉಸ್ತಾದ್ ಹಾಗೂ ಜಮೀಲಾ ದಂಪತಿಯ ಪುತ್ರ ಮುಝೈನ್(22) ಎಂದು ಗುರುತಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದ ಮುಝೈನ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.  

ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಜಾಗದ ವಿವಾದಕ್ಕೆ ಅಣ್ಣ ತಮ್ಮಂದಿರ ಜಗಳ: ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ) newskadaba.com ಕಡಬ, ನ. 09. ಜಾಗದ ವಿವಾದಕ್ಕೆ ಸಂಬಂಧಿಸಿ ಅಣ್ಣ ತಮ್ಮನ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಕಡಬ ತಾಲೂಕಿನ ಗೋಳಿತೊಟ್ಟು ಸಮೀಪದ ಆಲಂತಾಯ ಗ್ರಾಮದ ಪೆರ್ಲ ಎಂಬಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಪೆರ್ಲ ನಿವಾಸಿಯಾಗಿದ್ದ ರಮೇಶ ಗೌಡ(51) ಎಂದು ಗುರುತಿಸಲಾಗಿದೆ. ಕೊಲೆ ಮಾಡಿದ ಆರೋಪಿ ಮೃತರ ಸಂಬಂಧಿ ಹರೀಶ್ ಎಂಬಾತ ಎನ್ನಲಾಗಿದೆ. ರಮೇಶ್ ಅವರು ಬೈಕ್ ನಲ್ಲಿ ಬರುತ್ತಿರುವ ವೇಳೆ ಅವರನ್ನು ಅಡ್ಡ ಕಟ್ಟಿ ಕತ್ತಿಯಿಂದ ಕಡಿದು ಕೊಲೆ

ಕಡಬ: ಜಾಗದ ವಿವಾದಕ್ಕೆ ಅಣ್ಣ ತಮ್ಮಂದಿರ ಜಗಳ: ಕೊಲೆಯಲ್ಲಿ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ದೇವಸ್ಥಾನದಲ್ಲಿ ಕಳವು ಪ್ರಕರಣ: ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಸುಳ್ಯ, ನ. 07. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದಲ್ಲಿರುವ ಸುಬ್ರಹ್ಮಣ್ಯದ ಅಭಯ ಆಂಜನೇಯ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿದ್ದಾರೆ.   ಬಂಧಿತ ಆರೋಪಿಯನ್ನು ಧಾರವಾಡದ ವೀರಣ್ಣ ಗೌಡ (26) ಎಂದು ಗುರುತಿಸಲಾಗಿದ್ದು, ನ.3ರಂದು ರಾತ್ರಿ ದೇವಸ್ಥಾನದಲ್ಲಿ ಪೂಜಾ ಪರಿಕರಗಳು ಹಾಗೂ ಸಿಸಿಟಿವಿ ಕ್ಯಾಮರಾ ಕದ್ದೊಯ್ದಿದ್ದಾರೆ. ಕುಕ್ಕೆ ದೇವಸ್ಥಾನದ ಸಿಇಒ ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆರೋಪಿಯು ಗೋಣಿ ಚೀಲದಲ್ಲಿ ಕದ್ದ

ದೇವಸ್ಥಾನದಲ್ಲಿ ಕಳವು ಪ್ರಕರಣ: ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ನ. 24 ರಂದು ‘ಎಚ್’ಪಿಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ’

(ನ್ಯೂಸ್ ಕಡಬ) newskadaba.com ಉಡುಪಿ, ನ. 07. ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನೇತೃತ್ವದಲ್ಲಿ ಲಯನ್ಸ್ ಜಿಲ್ಲೆ 317Cಯ ಲಯನ್ ದಂಪತಿಗಳಿಗೆ ವಿನೂತನ ರೀತಿಯ ಆದರ್ಶ ದಂಪತಿ ಸ್ಪರ್ಧೆ ಉದ್ಯಾವರ ಚರ್ಚ್ ವಠಾರದಲ್ಲಿ ನವಂಬರ್ 24 ಆದಿತ್ಯವಾರದಂದು ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಎಚ್’ಪಿಆರ್ ಫಿಲಂಸ್ ಪ್ರಾಯೋಜಿತ ಆದರ್ಶ ದಂಪತಿ ಸ್ಪರ್ಧೆಯ ಪೋಸ್ಟರ್ ಅನ್ನು ಎಚ್’ಪಿಆರ್ ಫಿಲಂಸ್ ಮುಖ್ಯಸ್ಥ ಮತ್ತು ಎಲ್’ಸಿಯಫ್ ಕೋಆರ್ಡಿನೇಟರ್ ಲಯನ್ ಹರಿಪ್ರಸಾದ್ ರೈ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉದ್ಯಮಿ

ಉಡುಪಿ: ನ. 24 ರಂದು ‘ಎಚ್’ಪಿಆರ್ ಫಿಲಂಸ್ ಆದರ್ಶ ದಂಪತಿ ಸ್ಪರ್ಧೆ’ Read More »

ಕರಾವಳಿ

ಚಲಿಸುತ್ತಿರುವ ಸಾರಿಗೆ ಬಸ್ ಗಳ ಬಾಗಿಲು ಮುಚ್ಚುವುದು ಕಡ್ಡಾಯ ನ.6ರಿಂದಲೇ ಜಾರಿಗೊಳಿಸಲು ಡಿಸಿ ಮುಲ್ಲೈ ಮುಗಿಲನ್ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 06.  ಸಿಟಿ ಬಸ್ ಹೊರತುಪಡಿಸಿ ನಗರದಿಂದ ಹೊರಡುವ ಎಲ್ಲ ಸಾರಿಗೆ ಬಸ್‌ಗಳು ಪ್ರಯಾಣಿಕರ ಹಿತದೃಷ್ಟಿಯಿಂದ ಬಸ್‌ಗಳ ಬಾಗಿಲು ಮುಚ್ಚುವ ಕ್ರಮವನ್ನು ಇಂದಿನಿಂದಲೇ (ನ.6) ಜಾರಿಗೊಳಿಸಬೇಕು. ಬಾಗಿಲು ಇಲ್ಲದ ಬಸ್‌ಗಳಿಗೆ ಡಿ.10ರ ಒಳಗಾಗಿ ಕಡ್ಡಾಯವಾಗಿ ಬಾಗಿಲು ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಮಂಗಳವಾರ ಇಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ, ಡಿಸಿಪಿ ದಿನೇಶ್ ಕುಮಾರ್ ಈ ವಿಷಯ ಪ್ರಸ್ತಾಪಿಸಿ, ಈ ಹಿಂದೆ ನಡೆದ ಸಭೆಯಲ್ಲಿ ಬಸ್‌ಗಳಿಗೆ ಬಾಗಿಲು

ಚಲಿಸುತ್ತಿರುವ ಸಾರಿಗೆ ಬಸ್ ಗಳ ಬಾಗಿಲು ಮುಚ್ಚುವುದು ಕಡ್ಡಾಯ ನ.6ರಿಂದಲೇ ಜಾರಿಗೊಳಿಸಲು ಡಿಸಿ ಮುಲ್ಲೈ ಮುಗಿಲನ್ ಆದೇಶ Read More »

ಕರಾವಳಿ

ಬಸ್ಸುಗಳಿಲ್ಲದೆ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ: ಸಾರ್ವಜನಿಕರ ಆಕ್ರೋಶ

(ನ್ಯೂಸ್ ಕಡಬ) newskadaba.com ಸುಳ್ಯ, ನ. 06. ಕೆಎಸ್‌ಆರ್‌ಟಿಸಿ ಬಸ್ಸು ನಿಲ್ದಾಣದಲ್ಲಿ ಸುಮಾರು ಒಂದು ಗಂಟೆಯ ತನಕ ಬಸ್ಸುಗಳಿಲ್ಲದೆ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಬಸ್ಸಿಗಾಗಿ ಕಾದು ಸಾರ್ವಜನಿಕರು ಆಕ್ರೋಶಗೊಂಡಿದ್ದರು. ಪುತ್ತೂರು ಮಂಗಳೂರು ಮತ್ತು ಮೈಸೂರು ಕಡೆ ಹೋಗುವ ಬಸ್ಸುಗಳು ಅದೇ ರೀತಿ ಗ್ರಾಮೀಣ ಭಾಗಗಳಿಗೆ ಹೋಗುವಂತಹ ಬಸ್ಸುಗಳು ಕೂಡ ಇಲ್ಲದೆ ಪ್ರಯಾಣಿಕರು ಬಸ್ಸು ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುವ ದೃಶ್ಯಗಳು ಕಂಡುಬಂದಿದ್ದು ಪ್ರಯಾಣಿಕರ ಪಾಡು ಹೇಳತೀರದ್ದಾಗಿದೆ. ದೀಪಾವಳಿ ಹಬ್ಬ ಕಳೆದ ಬಳಿಕ ತಮ್ಮ ತಮ್ಮ ಊರುಗಳಿಗೆ ಮತ್ತು

ಬಸ್ಸುಗಳಿಲ್ಲದೆ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ: ಸಾರ್ವಜನಿಕರ ಆಕ್ರೋಶ Read More »

ಕರಾವಳಿ
crime, arrest, suspected

ಸಿಲಿಂಡರ್ ಕಳವು ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ವಿಟ್ಲ, ಅ. 31. ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಮತ್ತು ಇನ್ನಿತರ ಸಾಮಗ್ರಿಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೋಳಿಯಾರ್ ಧರ್ಮ ನಗರ ನಿವಾಸಿ ರಿಯಾಝ್(38) ಮತ್ತು‌ ಹಳೆಕೋಟೆ ನಿವಾಸಿ ಇಮ್ತಿಯಾಝ್‌ (38) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 1.35 ಲಕ್ಷ ರೂ. ಮೌಲ್ಯದ ಗ್ಯಾಸ್ ಸಿಲಿಂಡರ್ ಹಾಗೂ ಮನೆ ಸಾಮಗ್ರಿಗಳು ಹಾಗೂ ಕಳ್ಳತನಕ್ಕೆ ಉಪಯೋಗಿಸಿದ ಅಟೊ ರಿಕ್ಷಾ ವಶಪಡಿಸಿಕೊಳ್ಳಲಾಗಿದೆ ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು

ಸಿಲಿಂಡರ್ ಕಳವು ಪ್ರಕರಣ: ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ದೈವನರ್ತಕ-ಪಾತ್ರಿ ಲೋಕಯ್ಯಸೇರಾ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಗೆ ಆಯ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಅ. 31.  ಕರ್ನಾಟಕ‌ ಸರ್ಕಾರ ಕೊಡಮಾಡುವ ಜಾನಪದ ಕ್ಷೇತ್ರದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ದೈವನರ್ತಕ-ಪಾತ್ರಿ ಲೋಕಯ್ಯಸೇರಾ ಆಯ್ಕೆಯಾಗಿದ್ದಾರೆ. ಕಳೆದ 57 ವರ್ಷಗಳಿಂದ ಜಾನಪದ ಕಲಾವಿದನಾಗಿ, ದೈವಾರಾಧನೆಯ ಕ್ಷೇತ್ರದಲ್ಲಿ ಭೂತಕಟ್ಟುವ ನರ್ತಕ-ಪಾತ್ರಿಯಾಗಿ ಗಣನೀಯ ಸೇವೆ ಸಲ್ಲಿಸಿರುತ್ತಾರೆ. ತುಳುನಾಡಿನ ಕಾರಣಿಕ ದೈವಗಳಾದ ಕಲ್ಲುರ್ಟಿ, ಕಲ್ಕುಡ, ಪಂಜುರ್ಲಿ, ಚಾಮುಂಡಿ, ಧೂಮಾವತಿ, ರಕೇಶ್ವರಿ ಇತ್ಯಾದಿಗಳಿಗೆ ನೇಮಗಳನ್ನು ಆಚಾರದಲ್ಲಿ ಕಟ್ಟಿರುತ್ತಾರೆ. ಬಂಟ್ವಾಳ ತಾಲೂಕಿನಲ್ಲಿ ನಲಿಕೆಯವರ ಸಮಾಜ ಸೇವಾ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಪ್ರಸ್ತುತ ಗೌರವ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು,

ದೈವನರ್ತಕ-ಪಾತ್ರಿ ಲೋಕಯ್ಯಸೇರಾ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಗೆ ಆಯ್ಕೆ Read More »

ಕರಾವಳಿ

ಬೈಕ್ ಅಪಘಾತ: ಓರ್ವ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.29. ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಬಳಿ ಸೋಮವಾರ ರಾತ್ರಿ ಸಂಭವಿಸಿದೆ. ಪುತ್ತೂರು ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಂತೋಷ್ ಶೆಟ್ಟಿ ಮತ್ತು ಕಾಸರಗೋಡಿನ ಉದಯ ಅವರು ಚಲಾಯಿಸುತ್ತಿದ್ದ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ್ದು, ಗಾಯಗೊಂಡವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.  

ಬೈಕ್ ಅಪಘಾತ: ಓರ್ವ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಪಟಾಕಿ ದುರಂತ: 154 ಮಂದಿ ಗಾಯ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.29. ಪಟಾಕಿ ದುರಂತ ಸಂಭವಿಸಿ 154 ಮಂದಿ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದಿದೆ. ವೀರರ್ಕಾವು ದೇವಸ್ಥಾನದ ಬಳಿಯ ತಾತ್ಕಾಲಿಕ ಶೆಡ್‌ನಲ್ಲಿ ಪಟಾಕಿ ಸಂಗ್ರಹಿಸಿಡಲಾಗಿತ್ತು. ಈ ಶೆಡ್‌ಗೆ ಮೂವಳಂಕುಜಿ ಚಾಮುಂಡಿ ತೆಯ್ಯಂನ ‘ವೆಳ್ಳಟ್ಟಂ ಪುರಪ್ಪಡು’ಗೆ ಸಂಬಂಧಿಸಿದಂತೆ ಪಟಾಕಿ ಸಿಡಿಸುವ ವೇಳೆ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ 154 ಮಂದಿ ಪೈಕಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, 8 ಮಂದಿ ಗಂಭೀರವಾಗಿದ್ದಾರೆ. ಹಾಗೂ 97 ಮಂದಿಯನ್ನು ಕಾಸರಗೋಡು, ಕಣ್ಣೂರು ಮತ್ತು ಮಂಗಳೂರಿನ ವಿವಿಧ

ಪಟಾಕಿ ದುರಂತ: 154 ಮಂದಿ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top