dhakshina kannada

crime, arrest, suspected

ಆಸ್ಪತ್ರೆಯಿಂದ ಪರಾರಿಯಾದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಸುಳ್ಯ, ಅ.28. ಆಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ರಾಘವನ್ ಕೆದೀಶ್ವರನ್ ಆಲಿಯಾಸ್ ಕೋಳಿ ಕರಣ್ ಎಂದು ಗುರುತಿಸಲಾಗಿದೆ. ಕಳ್ಳತನ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ, ಸುಳ್ಯ ಪೊಲೀಸ್ ಠಾಣೆಗೆ ಬೇಕಾಗಿದ್ದ ಆರೋಪಿ ರಾಘವನ್ ಕೆದೀಶ್ವರನ್ ನನ್ನು ಕೆಲವು ದಿನಗಳ ಹಿಂದೆ ಪೊಲೀಸರು ಬಂಧಿಸಿ ಕರೆ ತಂದ ಸಂದರ್ಭದಲ್ಲಿ ಆತ ಸುಳ್ಯದ ಆಸ್ಪತ್ರೆಯಿಂದ ಪರಾರಿಯಾಗಿದ್ದ. ಪೊಲೀಸರು ಆರೋಪಿಯನ್ನು ತಮಿಳುನಾಡಿನ ಸತ್ಯಮಂಗಲ ಎಂಬಲ್ಲಿ ಬಂಧಿಸಿದ್ದಾರೆ ಎನ್ನಲಾಗಿದೆ.    

ಆಸ್ಪತ್ರೆಯಿಂದ ಪರಾರಿಯಾದ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ.ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ 105 ಪದಕ ಗೆದ್ದ ಹೈಫ್ಲೈಯರ್ಸ್ ಕ್ಲಬ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 24. ಕರ್ನಾಟಕ ರಾಜ್ಯ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಮಂಗಳೂರಿನ ಅಶೋಕನಗರದ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಆಯೋಜಿಸಿದ ದ.ಕ ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಮಂಗಳೂರಿನ ಹೈ-ಫ್ಲೈಯರ್ ಸ್ಕೇಟಿಂಗ್ ಕ್ಲಬ್‌ನ ಸ್ಕೇಟರ್ ತಂಡವಾಗಿ ಪ್ರತಿನಿಧಿಸಿ 105 ಪದಕಗಳನ್ನು ಜಯಗಳಿಸಿದ್ದಾರೆ. ರಾಜ್ಯ ಮಟ್ಟಕ್ಕೆ ಕ್ಲಬ್ ನ 32 ಸ್ಕೇಟರ್ ಗಳು ಆಯ್ಕೆಯಾಗಿದ್ದಾರೆ. ಇವರು ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ಮೋಹನ ದಾಸ್ ಕೆ., ಜಯರಾಜ್ ಮತ್ತು ರಮಾನಂದ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

ದ.ಕ.ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ 105 ಪದಕ ಗೆದ್ದ ಹೈಫ್ಲೈಯರ್ಸ್ ಕ್ಲಬ್ Read More »

ಕರಾವಳಿ, ಕ್ರೀಡಾ ನ್ಯೂಸ್

ಪುತ್ತೂರು ವಿಭಾಗದ KSRTC ಬಸ್‌ಗಳಲ್ಲಿ ಕ್ಯಾಶ್‌ಲೆಸ್ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.23. ಕೆಎಸ್‌ಆರ್‌ಟಿಸಿ ವಿಭಾಗದ ನಿರ್ವಾಹಕರಿಗೆ ಈಗಾಗಲೇ 570 ಅಂಡ್ರಾಯಿಡ್ ಮಿಷನ್ ಗಳನ್ನು ವಿತರಣೆ ಮಾಡಲಾಗಿದೆ. ಇನ್ನು ಮುಂದೆ ಪುತ್ತೂರು ವಿಭಾಗದ ಜಿಲ್ಲೆಯ 5 ತಾಲೂಕು ಹಾಗೂ ಕೊಡಗು ಜಿಲ್ಲೆಯ ಸರ್ಕಾರಿ ಬಸ್ಸು ನಿರ್ವಾಹಕರು ಯುಪಿಐ ಮೂಲಕ ಕ್ಯಾಶ್‌ಲೆಸ್ ವ್ಯವಸ್ಥೆಗೆ ತಮ್ಮನ್ನು ತಾವು ತೆರೆದುಕೊಳ್ಳಲಿದ್ದಾರೆ. ಪುತ್ತೂರು ವಿಭಾಗದಲ್ಲಿ 5 ತಾಲೂಕುಗಳಲ್ಲಿ ಒಟ್ಟು ನಾಲ್ಕು ಡಿಪೋ ಹಾಗೂ ಮಡಿಕೇರಿಯ ಒಂದು ಡಿಪೋದಲ್ಲಿ ಈ ಮೆಷಿನ್ ವಿತರಣೆಯಾಗಿದೆ. ಸುಮಾರು 715 ಮಂದಿ ನಿರ್ವಾಹಕರು ಇರುವ ಈ

ಪುತ್ತೂರು ವಿಭಾಗದ KSRTC ಬಸ್‌ಗಳಲ್ಲಿ ಕ್ಯಾಶ್‌ಲೆಸ್ ವ್ಯವಸ್ಥೆ Read More »

ಕರಾವಳಿ

ಅ. 31 ರಂದು ದೀಪಾವಳಿಯ ಪ್ರಯುಕ್ತ ಸದಾ ಸಿದ್ದಿ ಬಳಗದ ಆಶಯದಲ್ಲಿ ಸಾಂಸ್ಕೃತಿಕ ಸಂಜೆ

(ನ್ಯೂಸ್ ಕಡಬ) newskadaba.com ಕಡಬ, ಅ.23. ದೀಪಾವಳಿ ಹಬ್ಬದ ಪ್ರಯುಕ್ತ ಸದಾ ಸಿದ್ದಿ ಮಿತ್ರ ಬಳಗದ ಅಶಯದಲ್ಲಿ ಅ. 31 ರಂದು ಸಂಜೆ 9 ಕ್ಕೆ ಕಡಬ ತಾಲೂಕಿನ ಬಳ್ಪ ಗ್ರಾಮದ ಬೀದಿಗುಡ್ಡೆ ವಥಾರದಲ್ಲಿ  21ನೇ ಸದಾ ಸಿದ್ದಿ ಸಾಂಸ್ಕೃತಿಕ ಸಂಜೆ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಶಾಲಾ ಮಕ್ಕಳಿಂದ ವೈವಿಧ್ಯಮಯ ನೃತ್ಯಗಳು ನಡೆಯಲಿದೆ. ರಾತ್ರಿ 9ಕ್ಕೆ ‘ಕುಸಾಲ್ದ ಗುರಿಕಾರೆ ‘ ದಿನೇಶ್‌ ಕೊಡಪದವು ಸಾರಥ್ಯದಲ್ಲಿ ಜಿಲ್ಲೆಯ ಪ್ರಸಿದ್ಧ ಹ್ಯಾಸಕಲಾವಿದರ ಸಮಾಗಮದೊಂದಿಗೆ ‘ಯಕ್ಷ ತೆಲಿಕೆ’ ಮನರಂಜಿಸಲಿದೆ.  

ಅ. 31 ರಂದು ದೀಪಾವಳಿಯ ಪ್ರಯುಕ್ತ ಸದಾ ಸಿದ್ದಿ ಬಳಗದ ಆಶಯದಲ್ಲಿ ಸಾಂಸ್ಕೃತಿಕ ಸಂಜೆ Read More »

ಕರಾವಳಿ

ಮಾಣಿ ಬಾಲವಿಕಾಸ ಶಾಲೆಯ ಮುಖ್ಯ ಶಿಕ್ಷಕಿ ಸುಪ್ರಿಯಾವರಿಗೆ ರಾಜ್ಯ ಮಟ್ಟದ ‘ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಅ. 22. ಅನುದಾನರಹಿತ ಖಾಸಗಿ ಶಾಲೆಗಳ ಸಂಘ (RUPSA) ನೀಡುವ ರಾಜ್ಯ ಮಟ್ಟದ ‘ವಿದ್ಯಾರತ್ನ’ ಪ್ರಶಸ್ತಿಗೆ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸುಪ್ರಿಯಾ ಡಿ. ಭಾಜನರಾಗಿದ್ದಾರೆ. ಅಕ್ಟೋಬರ್ 21ರಂದು ಬೆಂಗಳೂರಿನ ಜುಬಿಲಿ ಇಂಟರ್ ನ್ಯಾಶನಲ್ ಸ್ಕೂಲ್ ನಲ್ಲಿ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪರ ಉಪಸ್ಥಿತಿಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸುಪ್ರಿಯಾ ಪ್ರಶಸ್ತಿ ಸ್ವೀಕರಿಸಿದರು. ಇವರು ಮಂಗಳೂರಿನ ಜೆಪ್ಪು ನಿವಾಸಿ, ಮೆಸ್ಕಾಂ

ಮಾಣಿ ಬಾಲವಿಕಾಸ ಶಾಲೆಯ ಮುಖ್ಯ ಶಿಕ್ಷಕಿ ಸುಪ್ರಿಯಾವರಿಗೆ ರಾಜ್ಯ ಮಟ್ಟದ ‘ವಿದ್ಯಾರತ್ನ ಪ್ರಶಸ್ತಿ’ ಪ್ರದಾನ Read More »

ಕರಾವಳಿ

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.18. ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್(49) ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ವೇಳೆ ನ್ಯಾನೋ ಕಾರು ನಡುವೆ ಅಪಘಾತ ನಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಇಂದು ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.  

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ತುಳಸಿ ಗಿಡದಲ್ಲಿ ಅರಳುತ್ತಿವೆ ದಾಸವಾಳ ಹೂವುಗಳು..!

(ನ್ಯೂಸ್ ಕಡಬ) newskadaba.com ಸುಳ್ಯ, ಅ. 16. ತುಳಸಿ ಗಿಡದಲ್ಲಿ ದಾಸವಾಳ ಹೂವು ಅರಳುತ್ತಿವೆ ಎಂದರೆ ಅಚ್ಚರಿಯಾಗೋದು ಸಹಜ‌. ಆದರೆ ಇದು ನಿಜ ಎಂದು ಎಂದು ಅಜ್ಜಾವರದ ಶಾಂತಿಮಜಲಿನ ಈ ಮನೆಯವರು ಹೇಳುತ್ತಾರೆ‌. ಅಜ್ಜಾವರ ಗ್ರಾಮದ ಶಾಂತಿಮಜಲಿನ ಭವಾನಿ ಅವರ ಮನೆಯಂಗಳದ ತುಳಸಿ ಗಿಡದಲ್ಲಿ ಅರಳುತ್ತಿರುವುದು ದಾಸವಾಳ ಹೂವು. ಒಂದು ವಾರದಲ್ಲಿ 3ನೇ ಬಾರಿಗೆ ಈ ರೀತಿ ಹೂವು ಅರಳಿ ನಿಂತಿದೆ. ತುಳಸಿ ಗಿಡದಲ್ಲಿ ಇನ್ನೂ ಕೂಡ ಹೂವಿನ ಮೊಗ್ಗು ಇದ್ದು ಇನ್ನಷ್ಟು ದಾಸವಾಳ ಗಿಡಗಳು ಅರಳುವ

ತುಳಸಿ ಗಿಡದಲ್ಲಿ ಅರಳುತ್ತಿವೆ ದಾಸವಾಳ ಹೂವುಗಳು..! Read More »

ಕರಾವಳಿ

ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 15. ಮನೆ ಮಂದಿ ಪ್ರವಾಸ ಹೋಗಿದ್ದ ಸಂದರ್ಭದಲ್ಲಿ ಮನೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಚಿನ್ನಾಭರಣ ಮತ್ತು ನಗದು ಕಳವು ನಡೆಸಿದ ಪ್ರಕರಣವು ಕಡಬ ತಾಲೂಕಿನ ಸವಣೂರು ಎಂಬಲ್ಲಿ ನಡೆದಿದೆ. ಸವಣೂರು ನಿವಾಸಿ ಸಲೀಂ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಸಲೀಂ ಅವರು ತನ್ನ ಪತ್ನಿ ಹಾಗೂ ಮಕ್ಕಳೊಂದಿಗೆ ಕಳೆದ ಶುಕ್ರವಾರ ಮನೆಗೆ ಬೀಗ ಹಾಕಿ ಪ್ರವಾಸ ಹೋಗಿದ್ದರು. ಪ್ರವಾಸ ಮುಗಿಸಿಕೊಂಡು ರವಿವಾರ ಮಧ್ಯರಾತ್ರಿ ವೇಳೆ ಮನೆಗೆ ವಾಪಾಸ್ಸು

ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳವು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ

(ನ್ಯೂಸ್ ಕಡಬ)newskadaba.com ಪುತ್ತೂರು, ಅ. 11.  ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಸೃಷ್ಟಿಯಾಗಿದ್ದು, ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 10ರೂ.ನಂತೆ ಏರಿಕೆ ಕಂಡಿದೆ. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 310 ರೂ. ಇದ್ದರೆ, ಹೊರ ಮಾರುಕಟ್ಟೆಯಲ್ಲಿ ಕೆ.ಜಿ. ಅಡಿಕೆಗೆ 350ರೂ. ಇತ್ತು. ಅ.10ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ 325 ರೂ. ಇದ್ದರೆ ಹೊರ ಮಾರುಕಟ್ಟೆಯಲ್ಲಿ ಕೆಲವೆಡೆ 355ರಿಂದ 360 ರೂ. ತನಕವೂ ಬೇಡಿಕೆ ಇತ್ತು. ಹೊಸ ಅಡಿಕೆ ಕೊರತೆ

ಪುತ್ತೂರು: ಕ್ಯಾಂಪ್ಕೋದಲ್ಲೂ ಹೊಸ ಅಡಿಕೆ ಧಾರಣೆ ಏರಿಕೆ Read More »

ಕರಾವಳಿ
crime, arrest, suspected

ಅಕ್ರಮ ಮರ ಸಾಗಾಟ ಆರೋಪ: 4 ಮಂದಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಪುತ್ತೂರು, ಅ. 08. ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದಿಂದ ಅಕ್ರಮವಾಗಿ ದೂಪದ ಮರದಿಂದ ಸಂಗ್ರಹಿಸಲಾದ ಹಾಲುಮಡ್ಡಿ ಶೇಖರಿಸಿ ಸಾಗಾಟ ಮಾಡುತ್ತಿದ್ದ 4 ಮಂದಿಯನ್ನು ಸೋಮವಾರ ಪುತ್ತೂರು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಸಾಗಾಟ ನಡೆಸುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ಬಾಯಬೆ ನಿವಾಸಿ ಉಮ್ಮರ್ ಫಾರೂಕ್ (44), ಪಾಟ್ರಕೋಡಿ ನಿವಾಸಿಗಳಾದ ಆಲಿ ಹೈದರ್ ಎಂ.ಕೆ(24), ಹಸೈನಾರ್(30) ಮತ್ತು ತಾಳಿಪಡ್ಪು ನಿವಾಸಿ ಉಮ್ಮರ್

ಅಕ್ರಮ ಮರ ಸಾಗಾಟ ಆರೋಪ: 4 ಮಂದಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top