dhakshina kannada

ರಾಜ್ಯ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ರಾಜ್ಯ ನಿರ್ದೇಶಕರಾಗಿ ಅಬ್ದುಲ್ ಸಲಾಂ ಚಿತ್ತೂರು ನೇಮಕ

(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 08. ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ಕೇಂದ್ರ ವೇದಿಕೆಯ ಇದರ ರಾಜ್ಯ ನಿರ್ದೇಶಕರಾಗಿ ಅಬ್ದುಲ್ ಸಲಾಂ ಚಿತ್ತೂರು ನೇಮಕ ಮಾಡಲಾಗಿದೆ. ಕುಂದಾಪುರ ತಾಲೂಕು ಉಡುಪಿ ಜಿಲ್ಲೆ ಇವರನ್ನು ಕರ್ನಾಟಕ ರಾಜ್ಯ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆಯ ಸಂಚಾಲಕ ಮೊಯಿದಿನ್ ಕುಟ್ಟಿ ಅವರು ಮುಂದಿನ ಅದೇಶದವರೆಗೆ ನೇಮಕ ಮಾಡಿ ಆದೇಶಿಸಲಾಗಿದೆ.  

ರಾಜ್ಯ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆ ರಾಜ್ಯ ನಿರ್ದೇಶಕರಾಗಿ ಅಬ್ದುಲ್ ಸಲಾಂ ಚಿತ್ತೂರು ನೇಮಕ Read More »

ಕರಾವಳಿ

ವಾರಂಟ್ ಆರೋಪಿ ಪರಾರಿ: ಆರೋಪಿಯ ಮಾಹಿತಿ ಕೋರಿ ಪೊಲೀಸರ ಮನವಿ

(ನ್ಯೂಸ್ ಕಡಬ)newskadaba.com  ಸುಳ್ಯ, ಅ. 07. ಪ್ರಕರಣವೊಂದರ ವಾರಂಟ್ ಆರೋಪಿಯೋರ್ವ ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ಆಸ್ಪತ್ರೆಯಿಂದಲೇ ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿರುವ ಆರೋಪಿ ಎಲ್ಲಾದರೂ ಕಂಡುಬಂದಲ್ಲಿ ಪೊಲೀಸರಿಗೆ ತಕ್ಷಣ ಮಾಹಿತಿ ನೀಡುವಂತೆ ಪೊಲೀಸರು ಫೋಟೋ ಸಹಿತ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಸುಳ್ಯದ ಕಲ್ಲುಗುಂಡಿ ಎಂಬಲ್ಲಿ ಕೆಲವು ವರ್ಷಗಳ ಹಿಂದೆ ನಡೆದಿದ್ದ ಕಳ್ಳತನ ಪ್ರಕರಣದ ಆರೋಪಿಯಾಗಿದ್ದ ತಮಿಳುನಾಡಿನ ಕೋಳಿ ಕರಣ್ ಎಂಬಾತ ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆತನನ್ನು ಅ. 5ರಂದು ಪೊಲೀಸರು ಬಂಧಿಸಿ ಸುಳ್ಯದ ಕೋರ್ಟ್ ಗೆ

ವಾರಂಟ್ ಆರೋಪಿ ಪರಾರಿ: ಆರೋಪಿಯ ಮಾಹಿತಿ ಕೋರಿ ಪೊಲೀಸರ ಮನವಿ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ದ್ವಿತೀಯ ಬಿಎಸ್ಸಿ ಪದವಿ ವಿದ್ಯಾರ್ಥಿ ಮನೋಜ್ ನಾಪತ್ತೆ- ಪೋಲಿಸರಿಗೆ ದೂರು

(ನ್ಯೂಸ್ ಕಡಬ)newskadaba.com ಪುತ್ತೂರು, ಅ. 07. ಸ್ನೇಹಿತನ ಮನೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟ ಯುವಕ ಕಾಣೆಯಾಗಿರುವುದಾಗಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ನೆಹರು ನಗರದ ಗಣೇಶ್ ಬಾಗ್ ನ ಲಕ್ಷ್ಮೀ ಪ್ರಸಾದ್ ಕಂಪೌಂಡ್ ನಿವಾಸಿ ದಿ.ಕೇಶವ ಮೂರ್ತಿ ಎಂಬುವರ ಪುತ್ರ 20 ವರ್ಷ ಪ್ರಾಯದ ಮನೋಜ್ ಕೆ. ಕಾಣೆಯಾದ ಯುವಕನಾಗಿದ್ದಾನೆ. ಪುತ್ತೂರಿನ ಸಂತ ಫಲೋಮಿನಾ ಕಾಲೇಜಿನಲ್ಲಿ 2ನೆ ವರ್ಷದ ಬಿಎಸ್ಸಿ ಪದವಿಗೆ ಕಲಿಯುತ್ತಿದ್ದ ಮನೋಜ್ ಅ.5ರಂದು ಬೆಳಿಗ್ಗೆ ಸ್ನೇಹಿತನ ಮನೆಗೆ ಹೋಗಿ

ಪುತ್ತೂರು: ದ್ವಿತೀಯ ಬಿಎಸ್ಸಿ ಪದವಿ ವಿದ್ಯಾರ್ಥಿ ಮನೋಜ್ ನಾಪತ್ತೆ- ಪೋಲಿಸರಿಗೆ ದೂರು Read More »

ಕರಾವಳಿ, ಕ್ರೈಮ್ ನ್ಯೂಸ್

ಸೈಬರ್ ವಂಚಕರಿಂದ ಎಚ್ಚರ ವಹಿಸಿ- ಪಿಎಸೈ ಹರೀಶ್ ಆರ್

(ನ್ಯೂಸ್ ಕಡಬ)newskadaba.com ಕುಂದಾಪುರ, ಅ. 07. ಇತ್ತೀಚಿನ ದಿನಗಳಲ್ಲಿ ವಿದ್ಯಾವಂತರು, ವೃತ್ತಿಪರರೇ ಹೆಚ್ಚಾಗಿ ವಂಚನೆಗೆ ಒಳಗಾಗುತ್ತಿದ್ದು ಸೈಬರ್ ಅಥವಾ ಆನ್ ಲೈನ್ ನಲ್ಲಿ ವ್ಯವಹರಿಸುವಾಗ ಹೆಚ್ಚು ಎಚ್ಚರದಿಂದ ಇರಬೇಕು ಎಂದು ಗಂಗೊಳ್ಳಿ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಹರೀಶ್ ಆರ್ ಅವರು ಸಲಹೆ ನೀಡಿದರು. ಅವರು ಭಾನುವಾರ ಗಂಗೊಳ್ಳಿ ಕೊಸೆಸಾಂವ್ ಅಮ್ಮನವರ ಚರ್ಚ್ ಇದರ ಕಥೊಲಿಕ್ ಸಭಾ ಘಟಕ, ಮಾಧ್ಯಮ ಆಯೋಗ ಜಂಟಿಯಾಗಿ ಆಯೋಜಿಸಿದ್ದ ಸೈಬರ್ ಕ್ರೈ ಕುರಿತ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದರು. ವಂಚನೆಗೆ ಒಳಗಾಗಿರುವುದು

ಸೈಬರ್ ವಂಚಕರಿಂದ ಎಚ್ಚರ ವಹಿಸಿ- ಪಿಎಸೈ ಹರೀಶ್ ಆರ್ Read More »

ಕರಾವಳಿ

ಆಯತಪ್ಪಿ ನದಿಗೆ ಬಿದ್ದ ವೃದ್ಧ ವ್ಯಕ್ತಿ: ಸ್ಥಳೀಯ ಯುವಕರಿಂದ ರಕ್ಷಣೆ

(ನ್ಯೂಸ್ ಕಡಬ)newskadaba.com ವಿಟ್ಲ, ಅ. 07. ಉಕ್ಕಿ ಹರಿಯುತ್ತಿದ್ದ ನದಿಗೆ ಆಯತಪ್ಪಿ ಬಿದ್ದ ವೃದ್ಧ ವ್ಯಕ್ತಿಯನ್ನು ಯುವಕರಿಬ್ಬರು ರಕ್ಷಿಸಿರುವ ಘಟನೆ ರವಿವಾರ ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ಬಳಿ ನಡೆದಿದೆ. ಉಮ್ಮರ್ (70) ರಕ್ಷಿಸಲ್ಪಟ್ಟ ವ್ಯಕ್ತಿ. ವಿಟ್ಲ ಭಾಗದಲ್ಲಿ ರವಿವಾರ ವ್ಯಾಪಕ ಮಳೆಯಾಗಿದ್ದು, ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ದಾರಿಯಾಗಿ ಸಂಜೆ ವೇಳೆ ಉಮರ್ ಅವರು ಹೋಗುತ್ತಿದ್ದಾಗ ಆಯತಪ್ಪಿ ನದಿಗೆ ಬಿದ್ದಿದ್ದಾರೆ. ಸೇತುವೆಗೆ ಯಾವುದೇ ರೀತಿಯ ತಡೆ ಇಲ್ಲದೆ ಇರುವುದು ಇದಕ್ಕೆ‌ ಕಾರಣವೆನ್ನಲಾಗಿದೆ. ಯುವಕರ ಸಮಯಪ್ರಜ್ಞೆ

ಆಯತಪ್ಪಿ ನದಿಗೆ ಬಿದ್ದ ವೃದ್ಧ ವ್ಯಕ್ತಿ: ಸ್ಥಳೀಯ ಯುವಕರಿಂದ ರಕ್ಷಣೆ Read More »

ಕರಾವಳಿ

ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ನೇಮಕ

(ನ್ಯೂಸ್ ಕಡಬ)newskadaba.com ಮಂಗಳೂರು, ಅ. 07. ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಸಮಿತಿಗೆ ನೇಮಕಗೊಂಡಿರುವ ಕ್ಯಾ. ಚೌಟ ಅವರು ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ರೀತಿಯ ನೀತಿ-ನಿಯಮಗಳು, ಕಾರ್ಯಯೋಜನೆಗಳ ಬಗ್ಗೆ ಪುನರ್ ಪರಿಶೀಲಿಸುವ ಹಾಗೂ ನಿಗಾ ವಹಿಸುವಲ್ಲಿ ಪಾತ್ರವಹಿಸಲಿದ್ದಾರೆ.

ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ನೇಮಕ Read More »

ಕರಾವಳಿ

ಕಾಡಾನೆಗಳ ಹಾವಳಿ: ಕೃಷಿಗೆ ಹಾನಿ

ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಅ. 05. ಧರ್ಮಸ್ಥಳ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ನಿರಂತರವಾಗಿ ಮುಂದುವರಿದಿದೆ. ಶುಕ್ರವಾರ ರಾತ್ರಿಯ ವೇಳೆ ಧರ್ಮಸ್ಥಳ ಪೊಲಸೊಳಿಕೆ ನಿವಾಸಿ ಕೃಷ್ಣಪ್ಪ ಅವರ ಮನೆಯ ಸಮೀಪದ ತೋಟಕ್ಕೆ ನುಗ್ಗಿದ ಕಾಡಾನೆಗಳು ಬಾಳೆ ಹಾಗೂ ಅಡಿಕೆ ಗಿಡಗಳನ್ನು, ಮರಗೆಣಸಿನ ಗಿಡಗಳನ್ನು ನಾಶಗೊಳಿಸಿದೆ. ತೋಟದಲ್ಲಿದ್ದ ಬಾಳೆಗಿಡಗಳನ್ನು ಸಂಪೂರ್ಣವಾಗಿ ಮುರಿದು ಹಾಕಿದ್ದು ಮನೆಯ ಸಮೀಪವೇ ಆನೆಗಳು ಓಡಾಟ ನಡೆಸಿದ್ದು ಜನರಲ್ಲಿ ಭಯಮೂಡಿಸಿದೆ. ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪದ ನಿವಾಸಿ ಕ್ಸೇವಿಯರ್ ಎಂಬವರಿಗೆ ಸೇರಿದ ತೋಟಕ್ಕೆ ನುಗ್ಗಿದ ಕಾಡಾನೆಗಳು

ಕಾಡಾನೆಗಳ ಹಾವಳಿ: ಕೃಷಿಗೆ ಹಾನಿ Read More »

ಕರಾವಳಿ

ಅರಂಬೂರು: ವ್ಯಕ್ತಿತ್ವ ನಿರ್ಮಾಣಕ್ಕೆ ಎನ್ ಎಸ್ ಎಸ್ ಪೂರಕ -ಕೆ.ಆರ್.ಗಂಗಾಧರ್

(ನ್ಯೂಸ್ ಕಡಬ)newskadaba.com ಅರಂಬೂರು, ಅ. 05.  ಕರ್ನಾಟಕ ಸರಕಾರ , ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ (ಪದವಿಪೂರ್ವ)ಮತ್ತು ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ  ರಾಷ್ಟ್ರೀಯ ಸೇವಾ ಯೋಜನಾ ಘಟಕದ 16 ನೇ ವರ್ಷದ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಡ್ಯಡ್ಕ- ಅರಂಬೂರಿನಲ್ಲಿ ರಾಜ್ಯ ಉತ್ತಮ ಶಿಕ್ಷಕ ಪುರಸ್ಕೃತ ಮುಖ್ಯೋಪಾಧ್ಯಾಯರಾದ  ಶ್ರೀ ದಿವಾಕರ್ ನಾಯಕ್ ಸರಳಿಕುಂಜ ದೀಪ ಬೆಳಗಿಸಿ ಚಾಲನೆ ನೀಡಿ ಶಿಬಿರಕ್ಕೆ ಶುಭ ಹಾರೈಸಿದರು.ಕಾಲೇಜಿನ ಸಂಚಾಲಕರಾದ ಶ್ರೀ

ಅರಂಬೂರು: ವ್ಯಕ್ತಿತ್ವ ನಿರ್ಮಾಣಕ್ಕೆ ಎನ್ ಎಸ್ ಎಸ್ ಪೂರಕ -ಕೆ.ಆರ್.ಗಂಗಾಧರ್ Read More »

ಕರಾವಳಿ

ಕಾರು ಅಪಘಾತ: 4ನೇ ತರಗತಿ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 02.  ಕಾರು ಡಿಕ್ಕಿಯಾಗಿ 4ನೇ ತರಗತಿ ವಿದ್ಯಾರ್ಥಿಯೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಕೊಕ್ಕಡದ ಮಲ್ಲಿಗೆ ಮಜಲು ಎಂಬಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ನವಾಫ್ ಇಸ್ಮಾಯಿಲ್ (9) ಎಂದು ಗುರುತಿಸಲಾಗಿದ್ದು, ಈ ಪ್ರದೇಶದ ನಿವಾಸಿ ಅಬ್ದುಲ್ ಹಮೀದ್ ಅವರ ಪುತ್ರ. ಸಂಬಂಧಿಯೊಬ್ಬರು ಅಂಗಳದಲ್ಲಿ ಕಾರನ್ನು ಓಡಿಸುತ್ತಿದ್ದಾಗ ವಾಹನದ ಕ್ಲಚ್ ಜಾಮ್ ಆಗಿದ್ದು ಅದು ನವಾಫ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕನಿಗೆ ತೀವ್ರ ಗಾಯಗಳಾಗಿವೆ. ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ

ಕಾರು ಅಪಘಾತ: 4ನೇ ತರಗತಿ ವಿದ್ಯಾರ್ಥಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಹಾಯಕ ನಿಧನ

(ನ್ಯೂಸ್ ಕಡಬ) newskadaba.com  ಪುತ್ತೂರು, ಸೆ. 26. ಪುತ್ತೂರಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ರಾತ್ರಿ 11 ಗಂಟೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ನಿವಾಸಿಯಾಗಿರುವ ಕನಕರಾಜ್ ಈ ಹಿಂದೆ ಬೆಟ್ಟಂಪಾಡಿಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಪ್ರಥಮ ದರ್ಜೆ ಸಹಾಯಕರಾಗಿ ಭಡ್ತಿ ಪಡೆದು ತಾಲೂಕು

ಪುತ್ತೂರು: ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಹಾಯಕ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top