dhakshina kannada

ರಸ್ತೆ ಅಪಘಾತ: ಮಗು-ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 24. ಮಗುವೊಂದನ್ನು ಚಿಕಿತ್ಸೆಗೆಂದು ಸುಳ್ಯದಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆಯಲ್ಲಿ ಆಂಬ್ಯುಲೆನ್ಸ್ ಅಪಘಾತಕ್ಕೀಡಾದ ಘಟನೆ ಸೋಮವಾರ ತಡರಾತ್ರಿ ವರದಿಯಾಗಿದೆ. ಸುಳ್ಯ ಆಸ್ಪತ್ರೆಯಲ್ಲಿ ಜನಿಸಿದ ಮಗುವೊಂದನ್ನು ಉಸಿರಾಟದ ತೊಂದರೆಗೆ ಸಂಬಂಧಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ಸಂದರ್ಭದಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಪಿಕಪ್ ಆಂಬ್ಯುಲೆನ್ಸ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಆಂಬ್ಯುಲೆನ್ಸ್ ನಲ್ಲಿದ್ದ ಮಗು ಹಾಗೂ ಚಾಲಕನಿಗೆ ಸಣ್ಣ- ಪುಟ್ಟ ಗಾಯಗಳಾಗಿವೆ. ಕೂಡಲೇ ಬೇರೆ ವಾಹನದಲ್ಲಿ […]

ರಸ್ತೆ ಅಪಘಾತ: ಮಗು-ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕೊಳತ ಸ್ಥಿತಿಯಲ್ಲಿ ವೃದ್ಧನ ಮೃತದೇಹ ಪತ್ತೆ..!                   

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 19.  ವಾರದ ಹಿಂದೆ ಮೃತಪಟ್ಟಿದ್ದ ವೃದ್ಧರೊಬ್ಬರ ಮೃತದೇಹವನ್ನು ಬುಧವಾರ ಅಂತ್ಯಕ್ರಿಯೆ ನಡೆಸಿದ ಘಟನೆ ತಾಲೂಕಿನ ಬಲ್ನಾಡು ಗ್ರಾಮದ ದೇರಾಜೆ ಎಂಬಲ್ಲಿ ನಡೆದಿದೆ. ಬಲ್ನಾಡು ಗ್ರಾಮದ ದೇರಾಜೆ ಅಟ್ಲಾರು ನಿವಾಸಿ ರಮೇಶ್ ರಾವ್ (70) ಮೃತಪಟ್ಟವರು. ಮಕ್ಕಳಿಲ್ಲದ ದಂಪತಿ ಮಾತ್ರ ಮನೆಯಲ್ಲಿದ್ದರು. ಪತ್ನಿ ತೀವ್ರ ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದು ಪತಿಯೇ ಮನೆಯ ದೈನಂದಿನ ಜವಾಬ್ದಾರಿ ನಿರ್ವಹಿಸುತ್ತಿದ್ದರು. ವಾರದ ಹಿಂದೆಯೇ ವೃದ್ಧ ಪತಿ ಮನೆಯೊಳಗೆ ಮೃತಪಟ್ಟಿದ್ದರೂ ಅನಾರೋಗ್ಯ ಪೀಡಿತ ಪತ್ನಿಗೆ ಗೊತ್ತಾಗದ ಕಾರಣ

ಕೊಳತ ಸ್ಥಿತಿಯಲ್ಲಿ ವೃದ್ಧನ ಮೃತದೇಹ ಪತ್ತೆ..!                    Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ ಜಿಲ್ಲೆಯಲ್ಲಿ ನಿಪಾಹ್ ವೈರಸ್ ಗೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 19. ಮಂಗನ ಜ್ವರದ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ (ದ.ಕ.) ಜಿಲ್ಲೆಯಲ್ಲಿ ವಿಶೇಷವಾಗಿ ನಿಪಾಹ್ ವೈರಸ್‌ನಿಂದಾಗಿ ಕೇರಳದಲ್ಲಿ ಸಾವು ಸಂಭವಿಸಿದ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಮಾತನಾಡಿ, ‘ಸದ್ಯ ಜಿಲ್ಲೆಯಲ್ಲಿ ಕೋತಿ ಜ್ವರದ ಪ್ರಕರಣಗಳು ವರದಿಯಾಗಿಲ್ಲ, ರಾಜ್ಯ ಸರ್ಕಾರದಿಂದ ಯಾವುದೇ ನಿರ್ದಿಷ್ಟ ಸೂಚನೆ ಬಂದಿಲ್ಲ.ಆದರೆ, ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಬಂದರುಗಳಿಗೆ ಆಗಮಿಸುವ ಪ್ರಯಾಣಿಕರು. ಮುನ್ನೆಚ್ಚರಿಕೆಯಾಗಿ ವೆನ್ಲಾಕ್

ದ.ಕ ಜಿಲ್ಲೆಯಲ್ಲಿ ನಿಪಾಹ್ ವೈರಸ್ ಗೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚನೆ Read More »

ಆರೋಗ್ಯ ಮಾಹಿತಿ, ಕರಾವಳಿ

ಮಂಗಳೂರು: ದ.ಕ. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಡಾ. ಅಕ್ಷತಾ ಆದರ್ಶ್ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12.  ದಕ್ಷಿಣ ಕನ್ನಡ ಮಕ್ಕಳ ಕಲ್ಯಾಣ ಸಮಿತಿಗೆ ಅಧ್ಯಕ್ಷರನ್ನಾಗಿ ಮೂಡಬಿದ್ರೆಯ ವಕೀಲರಾದ ಡಾ. ಅಕ್ಷತಾ ಆದರ್ಶ್ ನೇಮಕಗೊಂಡಿದ್ದಾರೆ. ಸಮಿತಿಗೆ ಅಧ್ಯಕ್ಷರು ಹಾಗೂ ನಾಲ್ವರು ಸದಸ್ಯರನ್ನು ಮೂರು ವರ್ಷಗಳ ಅವಧಿಗೆ ಸರಕಾರ ನೇಮಕ ಮಾಡಿದೆ. ಸಮಿತಿಯ ಸದಸ್ಯರಾಗಿ ಅಬೂಬಕರ್ ಜಿ.ಎನ್ ಮಂಗಳೂರು, ಹರಿಣಿ ಬಿಕರ್ನಕಟ್ಟೆ, ಕಿಶೋರ್ ಕುಂದರ್ ಎಕ್ಕೂರ್, ಹರೀಶ ಎಂ. ನಾಗರಿ ಇವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತುಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರಕಾರದ ಅಧೀನ

ಮಂಗಳೂರು: ದ.ಕ. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ಡಾ. ಅಕ್ಷತಾ ಆದರ್ಶ್ ನೇಮಕ Read More »

ಕರಾವಳಿ

ಉಡುಪಿ: ಸೆ.22 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12.  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿನ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ನಗರದ ಅಜ್ಜರ ಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ, ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟವು ಹೆಜಮಾಡಿ ಕ್ರೀಡಾಂಗಣದಲ್ಲಿ, ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಕುಂದಾಪುರ ತಾಲೂಕು ಕ್ರೀಡಾಂಗಣದಲ್ಲಿ ಹಾಗೂ ಕಾರ್ಕಳ ಮತ್ತು ಹೆಬ್ರಿ ತಾಲೂಕು ಮಟ್ಟದ

ಉಡುಪಿ: ಸೆ.22 ರಂದು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ Read More »

ಕರಾವಳಿ

ನೋಟರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 12.  ಜಿಲ್ಲೆಯ ಬೈಂದೂರು ತಾಲೂಕಿಗೆ ಹೊಸದಾಗಿ ಸೃಜಿಸಲಾದ ಎರಡು ನೋಟರಿ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ. ವಕೀಲ ವೃತ್ತಿಯಲ್ಲಿ ಕನಿಷ್ಠ ಹತ್ತು ವರ್ಷಗಳ ಅನುಭವ ಹೊಂದಿರುವವರು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರೆ ವರ್ಗಗಳ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ವಕೀಲ ವೃತ್ತಿಯಲ್ಲಿ ಕನಿಷ್ಟ ಏಳು ವರ್ಷಗಳ ಅನುಭವ ಇರುವವರು ಸೆ.27ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಧಾನ

ನೋಟರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕಂಬಳಬೆಟ್ಟು ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಮಿತ್ತೂರು ನೌರತುಲ್ ಮದೀನಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ‘ಸಮಗ್ರ ಪ್ರಶಸ್ತಿ’

(ನ್ಯೂಸ್ ಕಡಬ) newskadaba.com ವಿಟ್ಲ, ಸೆ. 12.  ಕಂಬಳಬೆಟ್ಟು ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ‘ಪ್ರತಿಭಾ ಕಾರಂಜಿ’ ಯಲ್ಲಿ ಮಿತ್ತೂರು ನೌರತುಲ್ ಮದೀನಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸಮಗ್ರ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಅರಬಿಕ್ ಧಾರ್ಮಿಕ ಪಠಣದಲ್ಲಿ 6ನೆ ತರಗತಿಯ ಮುಹಮ್ಮದ್ ಹಸನ್ ಖಿದಾಷ್ ಮಿತ್ತೂರು, ಚಿತ್ರಕಲೆಯಲ್ಲಿ 7ನೇ ತರಗತಿಯ ಹಾಜರ ಮುಫೀದಾ ಕೊಡಾಜೆ, ಹಿಂದಿ ಕಂಠಪಾಠದಲ್ಲಿ 7ನೆ ತರಗತಿಯ ಆಯಿಷತುಲ್ ಹೈಫಾ ಪೆರುಮೊಗೇರು,  ಕವನ ವಾಚನದಲ್ಲಿ 6ನೆ ತರಗತಿಯ ಮುಹಮ್ಮದ್ ಹಸನ ಖಿದಾಷ್ ಮಿತ್ತೂರು ಪ್ರಥಮ

ಕಂಬಳಬೆಟ್ಟು ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಮಿತ್ತೂರು ನೌರತುಲ್ ಮದೀನಾ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ‘ಸಮಗ್ರ ಪ್ರಶಸ್ತಿ’ Read More »

ಕರಾವಳಿ

ಬಣ್ಣದ ಮಾಂತ್ರಿಕ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ’ವನಜ ರಂಗಮನೆ ಪ್ರಶಸ್ತಿ- 2024’ಗೆ ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 11.  ಸುಳ್ಯದ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದಿಂದ ಪ್ರತಿವರ್ಷ ಕೊಡಮಾಡುವ ರಂಗಕರ್ಮಿ ಡಾ.ಜೀವನ್ ರಾಂ ಸುಳ್ಯರ ಮಾತೃಶ್ರೀ ದಿ| ವನಜಾಕ್ಷಿ ಜಯರಾಮ ಸ್ಮರಣಾರ್ಥ ನೀಡುವ 2024 ನೇ ಸಾಲಿನ ವನಜ ರಂಗಮನೆ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ ಪ್ರಸಿದ್ಧ ಬಣ್ಣದ ವೇಷದಾರಿ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ರವರನ್ನು ಆಯ್ಕೆ ಮಾಡಲಾಗಿದೆ. ರಾವಣ, ಕುಂಭಕರ್ಣ, ಮಹಿರಾವಣ, ಮಹಿಷಾಸುರ, ಕಾಕಾಸುರ, ವರಾಹ, ಸಿಂಹ, ಗಜೇಂದ್ರ ಮುಂತಾದ ಬಣ್ಣದ ವೇಷಗಳು ಅಲ್ಲದೆ ಅಜಮುಖಿ, ಶೂರ್ಪನಖಿ, ಪೂತನಿ,

ಬಣ್ಣದ ಮಾಂತ್ರಿಕ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ’ವನಜ ರಂಗಮನೆ ಪ್ರಶಸ್ತಿ- 2024’ಗೆ ಆಯ್ಕೆ Read More »

ಕರಾವಳಿ

ಪುತ್ತೂರು: ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ ಅಪಾಯದಿಂದ ಪಾರಾದ ರೋಗಿಗಳು    

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 11.  ಖಾಸಗಿ ಆಸ್ಪತ್ರೆಯ ವಿದ್ಯುತ್ ಸಂಪರ್ಕ ವ್ಯವಸ್ಥೆಯಲ್ಲಿ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಬೊಳುವಾರಿನ ಮುಖ್ಯ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗಿನ ಜಾವ 5ಗಂಟೆ ಸುಮಾರಿಗೆ ವಿದ್ಯುತ್ ಮೀಟರ್ ಬೋರ್ಡ್‌ನ ಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಜಂಕ್ಷನ್ ಬಾಕ್ಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಆಸ್ಪತ್ರೆಯ ತುಂಬಾ ಹೊಗೆ ತುಂಬಿಕೊಂಡಿದ್ದು, ತಕ್ಷಣ ಆಗ್ನಿಶಾಮಕ ದಳದವರು ಆಗಮಿಸಿ ಮುನ್ನೆಚ್ಚರಿಕೆಯನ್ನು ತೆಗೆದುಕೊಂಡಿದ್ದಾರೆ. ರೋಗಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು

ಪುತ್ತೂರು: ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ ಅಪಾಯದಿಂದ ಪಾರಾದ ರೋಗಿಗಳು     Read More »

ಕರಾವಳಿ

ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆ- ಕೃಷಿಗೆ ಹಾನಿ

(ನ್ಯೂಸ್ ಕಡಬ) newskadaba.com ಮಡಿಕೇರಿ, ಸೆ. 10.  ಕೊಡಗು ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿ ತಾಲ್ಲೂಕಿನಲ್ಲಿ ಮಳೆ ತೀವ್ರತೆಯನ್ನು ಪಡೆದುಕೊಂಡಿದ್ದು, ಜನರ ದೈನಂದಿನ ಬದುಕಿಗೆ ಅಡಚಣೆಯಾಗಿದೆ. ಅಲ್ಲದೆ ಕೃಷಿ ಫಸಲಿಗೆ ಅಪಾರ ಹಾನಿ ಸಂಭವಿಸುವ ಸಾಧ್ಯತೆಗಳಿದೆ ಎನ್ನಲಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಮಂಜು ಕವಿದ ವಾತಾವರಣದೊಂದಿಗೆ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಮೈಕೊರೆಯುವ ಚಳಿ ಇದೆ. ರಸ್ತೆಗಳ ಮೇಲೆ ಹರಿಯುತ್ತಿರುವ ನೀರು ಜನ ಮತ್ತು ವಾಹನಗಳ ಸಂಚಾರಕ್ಕೆ ತೊಡಕನ್ನುಂಟು ಮಾಡುತ್ತಿದೆ. ಹೊಂಡ ಗುಂಡಿಗಳಾಗಿರುವ ಮಡಿಕೇರಿ

ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆ- ಕೃಷಿಗೆ ಹಾನಿ Read More »

ಕರಾವಳಿ
Scroll to Top