Dr.chuntaru

ವಿಶೇಷ ಲೇಖನ ವೈದ್ಯರ ದಿನ, ಜುಲೈ 1 “ವೈದ್ಯ ಮತ್ತು ರೋಗಿಯ ಸಂಬಂಧ ಉದಾರವಾಗಿರಲಿ”

(ನ್ಯೂಸ್ ಕಡಬ) newskadaba.com ಜೂ. 27. ಎಲ್ಲವೂ ವ್ಯಾಪಾರೀಕರಣವಾಗುತ್ತಿರುವ ಮತ್ತು ಮಾನವೀಯ ಸಂಬಂಧಗಳು ನಶಿಸಿ ಹೋಗುತ್ತಿರುವ ಈಗಿನ ಕಾಲಘಟದಲ್ಲಿ, ವೈದ್ಯ ಮತ್ತು ರೋಗಿಯ ಸಂಬಂಧವು ಮೊದಲಿನಂತೆ ಉಳಿದಿಲ್ಲ. ‘ವೈದ್ಯೋ ನಾರಾಯಣೋ ಹರಿ’ ಎಂಬ ಮಾತು ಈಗ ಬಹುಷಃ ಎಲ್ಲ ವೈದ್ಯರಿಗೂ ಅನ್ವಯಿಸಲಿಕ್ಕಿಲ್ಲ. ಅದೇ ರೀತಿ ಇಂದಿನ ರೋಗಿಗಳೂ ಕೂಡಾ ವೈದ್ಯರನ್ನು ಪೂರ್ತಿ ವಿಶ್ವಾಸದಿಂದ ನೋಡುವ ಸ್ಥಿತಿಯಲ್ಲಿ ಇಲ್ಲ. ಜುಲೈ ಒಂದರಂದು ಎಲ್ಲ ವೈದ್ಯರು ತಮ್ಮ ವೃತ್ತಿ ಜೀವನ ಏಳು ಬೀಳುಗಳತ್ತ ದೃಷ್ಟಿ ಹರಿಸಿ ತಮ್ಮ ತಪ್ಪು ಒಪ್ಪುಗಳನ್ನು […]

ವಿಶೇಷ ಲೇಖನ ವೈದ್ಯರ ದಿನ, ಜುಲೈ 1 “ವೈದ್ಯ ಮತ್ತು ರೋಗಿಯ ಸಂಬಂಧ ಉದಾರವಾಗಿರಲಿ” Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

‘ವಿಶ್ವ ಸಿಕಲ್ ಸೆಲ್ ದಿನ’ – ಜೂನ್ 19

(ನ್ಯೂಸ್ ಕಡಬ) newskadaba.com ಜೂ. 19. ಪ್ರತಿ ವರ್ಷ ಜೂನ್ 19ರಂದು ‘ವಿಶ್ವ ಸಿಕಲ್ ಸೆಲ್ ದಿನ’ ಎಂದು ಆಚರಿಸಲಾಗುತ್ತಿದ್ದು, 2009ರಿಂದ ವಿಶ್ವ ಸಂಸ್ಥೆ ಈ ರೋಗದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಈ ಆಚರಣೆಯನ್ನು ಜಾರಿಗೆ ತಂದಿತು. ಇದೊಂದು ರಕ್ತಸಂಬಂಧಿ ಅನುವಂಶೀಯ ಖಾಯಿಲೆ ಆಗಿದ್ದು, ಕೆಂಪು ರಕ್ತಕಣಗಳು ಈ ರೋಗದಿಂದ ಬಳಲುತ್ತವೆ. ಈ ರೋಗಿಗಳಲ್ಲಿ ಕೆಂಪು ರಕ್ತಕಣಗಳ ರಚನೆಯಲ್ಲಿ ವ್ಯತ್ಯಯ ಉಂಟಾಗಿ, ಕುಡುಗೋಲು ಅಥವಾ ಆಂಗ್ಲಭಾಷೆಯಲ್ಲಿ ‘ಸಿಕಲ್’ ಎಂಬ ರಚನೆ ಹೊಂದಿರುವುದರಿಂದ ಈ ರೋಗಕ್ಕೆ ಕುಡುಗೋಲು

‘ವಿಶ್ವ ಸಿಕಲ್ ಸೆಲ್ ದಿನ’ – ಜೂನ್ 19 Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಡಾ.ಚೂಂತಾರು ರೆಡ್‌ಕ್ರಾಸ್ ರಾಜ್ಯ ಘಟಕಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ 2025-2028ರ ಮೂರು ವರ್ಷದ ಅವಧಿಗೆ ರಾಜ್ಯ ಘಟಕದ ಕಾರ್ಯಕಾರಿ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಡಾ.ಮುರಲೀ ಮೋಹನ್ ಚೂಂತಾರು ಅವರು  ಆಯ್ಕೆಯಾಗಿದ್ದಾರೆ. ರಾಜ್ಯಪಾಲರ ಸಚಿವಾಲಯ ಅವರ ನೇಮಕಾತಿ ಆದೇಶ ಹೊರಡಿಸಿದೆ. ಡಾ.ಮುರಲೀ ಮೋಹನ್ ಚೂಂತಾರು ಅವರು ರೆಡ್‌ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಶಾಖೆಯ ಚೇರ್‌ಮನ್ ಮತ್ತು  ಲೇಡಿಗೋಶನ್ ಆಸ್ಪತ್ರೆಯಲ್ಲಿರುವ ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್‌ನ ಚೇರ್‌ಮೆನ್ ಆಗಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ

ಡಾ.ಚೂಂತಾರು ರೆಡ್‌ಕ್ರಾಸ್ ರಾಜ್ಯ ಘಟಕಕ್ಕೆ ಆಯ್ಕೆ Read More »

ಕರಾವಳಿ

“ವಿಶ್ವ ಸ್ಟ್ರೋಕ್ ದಿನ – ಅಕ್ಟೋಬರ್-29”

(ನ್ಯೂಸ್ ಕಡಬ) newskadaba.com ಅ.29. ಪ್ರತಿ ವರ್ಷ ವಿಶ್ವದಾದ್ಯಂತ ಅಕ್ಟೋಬರ್ 29ರಂದು “ವಿಶ್ವ ಸ್ಟ್ರೋಕ್ ದಿವಸ” ಎಂದು ಆಚರಿಸಿ ಮೆದುಳಿನ ಆಘಾತ ಅಥವಾ ಸ್ಟ್ರೋಕ್ ಬಗ್ಗೆ ಜಾಗೃತಿ ಮೂಡಿಸಿ, ಸ್ಟ್ರೋಕ್ ಉಂಟಾಗುವ ಸಾಧ್ಯತೆಯನ್ನು ಕಡಿಮೆ ಮಾಡುವ ಪ್ರಯತ್ನವನ್ನು ಮಾಡಲಾಗುತ್ತದೆ. ಈ ಸ್ಟ್ರೋಕ್ ಎನ್ನುವುದು ಯಾರಿಗೆ ಬೇಕಾದರೂ, ಯಾವಾಗ ಬೇಕಾದರೂ, ಯಾವುದೇ ಹೊತ್ತಿನಲ್ಲಿ ಸಂಭವಿಸಬಹುದು. ಪ್ರತೀ ನಾಲ್ಕು ವಯಸ್ಕರಲ್ಲಿ ಒಬ್ಬರಿಗೆ ಜೀವನದಲ್ಲಿ ಒಮ್ಮೆಯಾದರೂ ಸ್ಟ್ರೋಕ್ ಆಗುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ತಿಳಿಸಿದೆ. ಜಾಗತಿಕವಾಗಿ  ಸಾವಿಗೆ ಅತೀ ಹೃದಯಾಘಾತದ

“ವಿಶ್ವ ಸ್ಟ್ರೋಕ್ ದಿನ – ಅಕ್ಟೋಬರ್-29” Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ವಿಶ್ವ ಬೊಜ್ಜು ಜಾಗೃತಿ ದಿನ- ಅಕ್ಟೋಬರ್ 26

(ನ್ಯೂಸ್ ಕಡಬ) newskadaba.com ಅ.26. ಪ್ರತಿ  ವರ್ಷ ವಿಶ್ವದಾದ್ಯಂತ ಅಕ್ಟೋಬರ್ 26ರಂದು ವಿಶ್ವ ಬೊಜ್ಜು ಜಾಗೃತಿ ದಿನ ಎಂದು ಆಚರಿಸಲಾಗುತ್ತದೆ ಮತ್ತು ಅಧಿಕ ಬೊಜ್ಜಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳು ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ. ಈ ಆಚರಣೆಯನ್ನು ವಿಶ್ವ ಆರೋಗ್ಯ ಸಂಸ್ಥೆ 2024ರಿಂದ ಆರಂಭಿಸಿತ್ತು.   ಬದುಕನ್ನು ಹೈರಾಣಾಗಿಸುವ ಬೊಜ್ಜು ಪ್ರತಿಯೊಬ್ಬ ಮನುಷ್ಯನಿಗೂ ತಾನು ಚೆನ್ನಾಗಿ ಕಾಣಿಸಬೇಕು ಮತ್ತು ತೆಳ್ಳಗೆ ಸ್ಲಿಮ್ ಆಗಿ ಇರಬೇಕು ಎಂದು ಮಹದಾಶೆ ಇರುವುದಂತೂ ಸತ್ಯ. ಆದರೆ ಬಾಯಿಚಪಲ ಬಿಡಬೇಕಲ್ಲ. ನಾಲಗೆಯ

ವಿಶ್ವ ಬೊಜ್ಜು ಜಾಗೃತಿ ದಿನ- ಅಕ್ಟೋಬರ್ 26 Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

“ಅಕ್ಟೋಬರ್ 12- ವಿಶ್ವ ಆಥ್ರೈಟಿಸ್ ದಿನ”; ಡಾ.ಚೂಂತಾರು

(ನ್ಯೂಸ್ ಕಡಬ) newskadaba.com  ಅ. 11. ನಮ್ಮ ದೇಹದಲ್ಲಿ ನೂರಾರು ಕೀಲುಗಳು ಇದೆ. ಬಹುತೇಕ ಕೀಲುಗಳು ಬಹಳ ಸಂಕೀರ್ಣವಾದ ರಚನೆ ಹೊಂದಿದೆ. ಈ ಕೀಲುಗಳಿಗೆ ಉಂಟಾಗುವ ಉರಿಯೂತ ಮತ್ತು ನೋವನ್ನು ಸಂಧಿವಾತ ಅಥವಾ ಆಥ್ರೈಟಿಸ್ ಎಂದು ಕರೆಯುತ್ತಾರೆ. ಈ ಸಂಧಿವಾತದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ತಪ್ಪು ಕಲ್ಪನೆಗಳನ್ನು ತೊಡೆದು ಹಾಕಲು 1996ರಿಂದ ಈ ವಿಶ್ವ ಸಂಧಿವಾತ ದಿನ ಆಚರಣೆಯನ್ನು ಆರಂಭ ಮಾಡಲಾಯಿತು.   ಮಂಡಿನೋವು ಎಂಬ ನರಕಯಾತನೆ ಮಂಡಿನೋವು ಎಂದಾಕ್ಷಣ ಜನರು ತಮಗೆ ಸಂಧಿವಾತ ಅಥವಾ

“ಅಕ್ಟೋಬರ್ 12- ವಿಶ್ವ ಆಥ್ರೈಟಿಸ್ ದಿನ”; ಡಾ.ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಸೆಪ್ಟೆಂಬರ್ 25- ವಿಶ್ವ ಫಾರ್ಮಸಿಸ್ಟರ ದಿನ- ಡಾ.ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 25. ಪ್ರತಿ ವರ್ಷ ಸಪ್ಟೆಂಬರ್ 25ರಂದು ವಿಶ್ವದಾದ್ಯಂತ ಫಾರ್ಮಸಿಸ್ಟ್ ಗಳು “ವಿಶ್ವ ಫಾರ್ಮಸಿಸ್ಟ್ ದಿನ” ಎಂದು ಆಚರಿಸಿರುತ್ತಾರೆ. 2009ರಲ್ಲಿ ಎಪ್‍ಐಪಿ ಅಂದರೆ ಇಂಟರ್ ನ್ಯಾಷನಲ್ ಫಾರ್ಮಸುಟಿಕಲ್ ಪೆಡರೇಶನ್‍ನ ಆದೇಶದಂತೆ ಈ ಆಚರಣೆಯನ್ನು ಜಾರಿಗೆ ತರಲಾಯಿತು. ಆರೋಗ್ಯ ಕ್ಷೇತ್ರದ ಅವಿಭಾಜ್ಯ ಅಂಗವಾದ ‘ಫಾರ್ಮಸಿ’ ವಿಭಾಗದ ತಜ್ಞರುಗಳು ತಮ್ಮ ವೃತ್ತಿ ಜೀವನದ ಏಳು ಬೀಳುಗಳನ್ನು ವಿಮರ್ಶಿಸಿ ಕುಂದು ಕೊರತೆಗಳನ್ನು ಪರಾಮರ್ಷಿಸಿ ಮಗದೊಮ್ಮೆ ತಮ್ಮನ್ನು ತಮ್ಮ ವೃತ್ತಿಗೆ ಸಮರ್ಪಿಸಿಕೊಂಡು ಶುಭಾಷಯಗಳನ್ನು ವಿನಿಮಯ ಮಾಡಿಕೊಳ್ಳುವ ಸುದಿನ. ಪ್ರತಿ

ಸೆಪ್ಟೆಂಬರ್ 25- ವಿಶ್ವ ಫಾರ್ಮಸಿಸ್ಟರ ದಿನ- ಡಾ.ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

“ಮೆದುಳು ತಿನ್ನುವ ಅಮೀಬಾ”- ಡಾ. ಚೂಂತಾರು

(ನ್ಯೂಸ್ ಕಡಬ) newskadaba.com ಸೆ. 24. ಅಮೀಬಿಕ್ ಮೆನಿಂಗೋ ಎನ್ ಸೆಫಲೈಟಿಸ್ ಎಂದು ಆಂಗ್ಲ ಬಾಷೆಯಲ್ಲಿ ಕರೆಯಲ್ಪಡುವ, ಮೆದುಳು ತಿನ್ನುವ ಅಮೇಬಾ ಎಂದು ಆಡುಬಾಷೆಯಲ್ಲಿ ಕುಖ್ಯಾತಿ ಪಡೆದಿರುವ ರೋಗ ಇತ್ತೀಚಿನ ದಿನಗಳಲ್ಲಿ ಕೇರಳದಲ್ಲಿ ಬಹಳಷ್ಟು ಸುದ್ದಿಮಾಡುತ್ತಿದೆ. ಅಮೀಬಾ ಎನ್ನುವುದು ಏಕಕೋಶಜೀವಿಯಾಗಿದ್ದು ಪರಾವಲಂಬಿ ಜೀವಿಯಾಗಿರುತ್ತದೆ. ಇತರ ಜೀವಿಗಳ ಸಹಾಯವಿಲ್ಲದೆ ಅದು ಬದುಕಲಾರದು. ಮೆದುಳಿನ ಉರಿಯೂತಕ್ಕೆ ಕಾರಣವಾಗಿ, ಮಾರಣಾಂತಿಕವಾಗಿ ಕಾಡುವ ಈ ಅಮೀಬಾ ಗುಂಪಿನ ನೆಗ್ಲೇರಿಯ ಫೌಲೇರಿ ಎಂಬ ಪರಾವಲಂಬಿ ಜೀವಿ ಹೆಚ್ಚಾಗಿ ಕಲುಷಿತ ಹೊಂಡ ಕೆರೆ, ಕುಂಟೆ, ನದಿಗಳ

“ಮೆದುಳು ತಿನ್ನುವ ಅಮೀಬಾ”- ಡಾ. ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಮಾಧೇಷ್ಟ ಡಾ. ಚೂಂತಾರುರವರಿಗೆ ಬೆಳ್ಳಾರೆ ಗೃಹರಕ್ಷಕರಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಸೆ. 10. ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಗೃಹರಕ್ಷಕರಾದ ಸಮಾಧೇಷ್ಟ ಡಾ. ಮುರಲೀಮೋಹನ್ ಚೂಂತಾರುರವರಿಗೆ ಬೆಳ್ಳಾರೆ ಗೃಹರಕ್ಷಕರಿಂದ ಸನ್ಮಾನ ಕಾರ್ಯಲ್ರಮವು ಬೆಳ್ಳಾರೆ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸನ್ಮಾನ ನೆರವೇರಿಸಿ ಮಾತನಾಡಿದ ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕ ಈರಯ್ಯ ದೂಂತೂರು, ಹುಟ್ಟೂರಿನಲ್ಲಿ ಪಡೆದ ಸನ್ಮಾನ ರಾಷ್ಟ್ರ ಪ್ರಶಸ್ತಿ ಪಡೆದದ್ದಕೆ ಸಮಾನ. ವೈದ್ಯಕೀಯ ವೃತ್ತಿಯ ಜೊತೆಜೊತೆಗೆ ನಿರಂತರ ಬರಹಗಳನ್ನು ಬರೆಯುತ್ತಾ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುತ್ತಿರುವುದು ಇವರ ವಿಶೇಷತೆ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಷ್ಟ್ರಪತಿ

ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಮಾಧೇಷ್ಟ ಡಾ. ಚೂಂತಾರುರವರಿಗೆ ಬೆಳ್ಳಾರೆ ಗೃಹರಕ್ಷಕರಿಂದ ಸನ್ಮಾನ Read More »

ಕರಾವಳಿ

“ನೇತ್ರದಾನ ಮಹಾದಾನ”- ಡಾ.ಮುರಲೀ ಮೋಹನ ಚೂಂತಾರು

(ನ್ಯೂಸ್ ಕಡಬ) newskadaba.com ಆ. 30. ನೇತ್ರದಾನ ಬಹಳ ಪವಿತ್ರವಾದ ದಾನ. ನಾವು ಸತ್ತ ಬಳಿಕವೂ ಜಗತ್ತನ್ನು ಆನಂದಿಸಬೇಕಿದ್ದಲ್ಲಿ ನಮ್ಮ ಕಣ್ಣುಗಳನ್ನು ಇನ್ನೊಬ್ಬರಿಗೆ  ನಮ್ಮ ಮರಣಾನಂತರ ದಾನ ಮಾಡಬೇಕು. ನಮ್ಮ ಕಣ್ಣುಗಳ ಮುಖಾಂತರ ಮತ್ತೊಬ್ಬ ಅಂಧ ವ್ಯಕ್ತಿಯ ಬಾಳಿಗೆ ಬೆಳಕು ನೀಡಿದಾಗ ಸಿಗುವ ಸಾರ್ಥಕತೆ ಇನ್ಯಾವುದೇ ದಾನದಲ್ಲಿ ದೊರಕಲಿಕ್ಕಿಲ್ಲ. ಭಾರತದಲ್ಲಿ ಸರಿ ಸುಮಾರು 10 ಮಿಲಿಯನ್ ಮಂದಿ  ದೃಷ್ಟಿಹೀನತೆಯಿಂದ ಬಳಲುತ್ತಿದ್ದು 3ರಿಂದ 4 ಮಿಲಿಯನ್ ಮಂದಿ ಕಾರ್ನಿಯಾದ ಅಂಧತ್ವದಿಂದ ಬಳಲುತ್ತಿದ್ದಾರೆ. ಇದರಲ್ಲಿ ಶೇಕಡಾ 60 ಮಂದಿ 12ವರ್ಷಕ್ಕಿಂತ

“ನೇತ್ರದಾನ ಮಹಾದಾನ”- ಡಾ.ಮುರಲೀ ಮೋಹನ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು
Scroll to Top