election

ಪತ್ರಕರ್ತರ ಸಂಘದ ಚುನಾವಣೆ: ಜಿಲ್ಲಾ ಅಧ್ಯಕ್ಷರಾಗಿ ಬಾಬುರಾವ ಯಡ್ರಾಮಿ ಪುನರಾಯ್ಕೆ

(ನ್ಯೂಸ್‌ ಕಡಬ) newskadaba.com,  ನ.11  ಕಲಬುರಗಿ:ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪತ್ರಕರ್ತ ಬಾಬುರಾವ ಯಡ್ರಾಮಿ ಅವರು ಪುನರಾಯ್ಕೆಯಾಗಿದ್ದಾರೆ. ಆ ಮೂಲಕ ಯಡ್ರಾಮಿ ಅವರು 4ನೇ ಬಾರಿಗೆ ಜಿಲ್ಲಾಧ್ಯಕ್ಷರಾದಂತಾಗಿದೆ. ನಗರದ ಪತ್ರಿಕಾ ಭವನದಲ್ಲಿ ಸಂಘದ ಜಿಲ್ಲಾ ಘಟಕದ ಪ್ರಯುಕ್ತ ಭಾನುವಾರ ಮತದಾನ ನಡೆಯಿತು. ಬಾಬುರಾವ ಯಡ್ರಾಮಿ 170 ಮತ ಪಡೆದು ಗೆಲುವು ಸಾಧಿಸಿದರೆ, ಪ್ರತಿಸ್ಪರ್ಧಿ ಚಂದ್ರಶೇಖರ ಕೌಲಗಾ 120 ಮತಗಳನ್ನು ಪಡೆದು ಪರಾಭವಗೊಂಡರು. 185 ಮತ ಗಳಿಸಿದ ಭೀಮಾಶಂಕರ […]

ಪತ್ರಕರ್ತರ ಸಂಘದ ಚುನಾವಣೆ: ಜಿಲ್ಲಾ ಅಧ್ಯಕ್ಷರಾಗಿ ಬಾಬುರಾವ ಯಡ್ರಾಮಿ ಪುನರಾಯ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂಡಿಯಾ ಬಣದ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಘೋಷಣೆ; ಮುಖೇಶ್ ಸಹಾನಿ ಸೇರಿ ಇಬ್ಬರು ಉಪಮುಖ್ಯಮಂತ್ರಿ

(ನ್ಯೂಸ್‌ ಕಡಬ) newskadaba.com,  ಅ.23: ಬಿಹಾರ ವಿಧಾನಸಭಾ ಚುನಾವಣೆಗೆ ಆರ್‌ಜೆಡಿ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ವಿರೋಧ ಪಕ್ಷಗಳ ಇಂಡಿಯಾ ಬಣ ಗುರುವಾರ ಘೋಷಿಸಿದೆ. ಎಲ್ಲ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಈ ಘೋಷಣೆ ಮಾಡಿದರು. ಈ ನಿರ್ಧಾರವನ್ನು ತಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಸಿದ್ದಾರೆ ಎಂದು ಪ್ರತಿಪಾದಿಸಿದರು. ಇಂಡಿಯಾ ಬಣವು ಬಿಹಾರದಲ್ಲಿ ಸರ್ಕಾರ

ಇಂಡಿಯಾ ಬಣದ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಘೋಷಣೆ; ಮುಖೇಶ್ ಸಹಾನಿ ಸೇರಿ ಇಬ್ಬರು ಉಪಮುಖ್ಯಮಂತ್ರಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಕಾಂಗ್ರೆಸ್ ಗೆ ಗೆಲುವು

(ನ್ಯೂಸ್‌ ಕಡಬ) newskadaba.com ಆ.20 : ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ 8 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತ ಗಳಿಸಿದೆ. ಬಿಜೆಪಿ ಐದು ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಒಟ್ಟು 13 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಬೆಳಗ್ಗೆ 8 ಗಂಟೆಗೆ ಆರಂಭಗೊಂಡ ಮತ ಎಣಿಕೆ ಪ್ರಕ್ರಿಯೆ 9:45ರ ವೇಳೆ ಮುಕ್ತಾಯಗೊಂಡಿದೆ. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕಳಾರ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ತಮನ್ನಾ ಜಬೀನ್ ಜಯ ಗಳಿಸಿದರೆ. 8ನೇ ಪಿಜಕ್ಕಳ ವಾರ್ಡ್ ನಲ್ಲಿ

ಕಡಬ ಪಟ್ಟಣ ಪಂಚಾಯತ್ ಚುನಾವಣೆ: ಕಾಂಗ್ರೆಸ್ ಗೆ ಗೆಲುವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೆಹಲಿ: ಮತದಾನ ದಿನಾಂಕ ಘೋಷಣೆ; ಫೆ.5ಕ್ಕೆ ಮತದಾನ, ಫೆ.8ರಂದು ಮತ ಎಣಿಕೆ

(ನ್ಯೂಸ್ ಕಡಬ) newskadaba.com ಜ.07: ದೆಹಲಿಯ ವಿಧಾನಸಭಾ ಚುನಾವಣೆ ಫೆಬ್ರವರಿ 5 ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ದೆಹಲಿ ವಿಧಾನಸಭೆಗೆ ಚುನಾವಣೆಯ ವೇಳಾಪಟ್ಟಿಯನ್ನು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಇತರ ಹಿರಿಯ ಚುನಾವಣಾ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು. 70 ಸದಸ್ಯ ಬಲದ ಅಸೆಂಬ್ಲಿಯ ಅವಧಿ ಫೆಬ್ರವರಿ 23 ರಂದು ಕೊನೆಗೊಳ್ಳುತ್ತದೆ ಮತ್ತು ಹೊಸ ಸದನವನ್ನು ರಚಿಸಲು ಅದಕ್ಕೂ

ದೆಹಲಿ: ಮತದಾನ ದಿನಾಂಕ ಘೋಷಣೆ; ಫೆ.5ಕ್ಕೆ ಮತದಾನ, ಫೆ.8ರಂದು ಮತ ಎಣಿಕೆ Read More »

ರಾಷ್ಟ್ರೀಯ ನ್ಯೂಸ್

ವಿಧಾನ ಪರಿಷತ್ ಚುನಾವಣೆ- ನಿಷೇದಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆಯುವ ಉಪಚುನಾವಣೆ ಗೆ ಮತದಾನವು ಅಕ್ಟೋಬರ್ 21 ರಂದು ನಡೆಯಲಿದ್ದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪತವಾದ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಅಕ್ಟೋಬರ್ 19ರಂದು ಸಂಜೆ 4ಗಂಟೆಯಿಂದ ಅಕ್ಟೋಬರ್ 21ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲೆಯ ಒಟ್ಟು 234 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ

ವಿಧಾನ ಪರಿಷತ್ ಚುನಾವಣೆ- ನಿಷೇದಾಜ್ಞೆ ಜಾರಿ Read More »

ಕರಾವಳಿ

ಪರಿಷತ್ ಚುನಾವಣೆ- ಇಂದು ಅಧಿಸೂಚನೆ

(ನ್ಯೂಸ್ ಕಡಬ) newskadaba.com ಸೆ. 25. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ವಿಧಾನ ಪರಿಷತ್ತು ಉಪಚುನಾವಣೆ 2024 ಘೋಷಣೆಯಾಗಿದ್ದು ಮಾದರಿ ನೀತಿಸಂಹಿತೆ ಜಾರಿಯಲ್ಲಿದೆ. ಸೆಪ್ಟೆಂಬರ್ 26ರಂದು ಗುರುವಾರ ಅಧಿಸೂಚನೆ ಪ್ರಕಟವಾಗಲಿದೆ. ಅಕ್ಟೋಬರ್ 3 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ. ಅಕ್ಟೋಬರ್ 4 ರಂದು ನಾಮಪತ್ರಗಳ ಪರಿಶೀಲನೆ, ಅಕ್ಟೋಬರ್ 7ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಪರಿಷತ್ ಚುನಾವಣೆ- ಇಂದು ಅಧಿಸೂಚನೆ Read More »

ಕರಾವಳಿ

ಪರಿಷತ್ ಚುನಾವಣೆ- ನೀತಿ ಸಂಹಿತೆ ಉಲ್ಲಂಘನೆ ನಿಯಂತ್ರಿಸಲು ತಂಡಗಳ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 24. ಸ್ಥಳೀಯ ಪ್ರಾಧಿಕಾರದ ದ್ವೈವಾರ್ಷಿಕ ಚುನಾವಣಾ ಕ್ಷೇತ್ರಕ್ಕೆ ಉಪಚುನಾವಣಾ ವೇಳಾಪಟ್ಟಿಯನ್ನು ಹೊರಡಿಸಲಾಗಿದ್ದು. ಸೆಪ್ಟೆಂಬರ್ 19ರಿಂದ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಯಾಗದಂತೆ ತಡೆಗಟ್ಟುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ವಿವಿಧ ತಂಡಗಳನ್ನು ರಚಿಸಲಾಗಿದೆ. ಮಾದರಿ ನೀತಿ ಸಂಹಿತೆಯು ಅಕ್ಟೋಬರ್ 28ರ ವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ರಾಜಕೀಯ ಪಕ್ಷದವರು ಸಾರ್ವಜನಿಕ ಕಾರ್ಯಕ್ರಮಗಳನ್ನು ಮತ್ತು ಪ್ರಚಾರ ಕಾರ್ಯವನ್ನು ಆಯೋಜಿಸುವಾಗ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ 1ನೇ ಮಹಡಿಯಲ್ಲಿ ತೆರೆಯಲಾದ ಏಕಾಗವಾಕ್ಷಿ ಕೇಂದ್ರದಲ್ಲಿ

ಪರಿಷತ್ ಚುನಾವಣೆ- ನೀತಿ ಸಂಹಿತೆ ಉಲ್ಲಂಘನೆ ನಿಯಂತ್ರಿಸಲು ತಂಡಗಳ ರಚನೆ Read More »

ಕರಾವಳಿ

ವಿಧಾನ ಪರಿಷತ್ ಚುನಾವಣೆ – ನೀತಿ ಸಂಹಿತೆ ಪಾಲಿಸಲು ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೂಚಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚೆಕ್ ಪೋಸ್ಟ್ ಹೊರತುಪಡಿಸಿ ಉಳಿದಂತೆ ಸಾಮಾನ್ಯ ಚುನಾವಣೆಯಲ್ಲಿ ಪಾಲನೆಯಾಗಿರುವ ಎಲ್ಲಾ ನೀತಿ

ವಿಧಾನ ಪರಿಷತ್ ಚುನಾವಣೆ – ನೀತಿ ಸಂಹಿತೆ ಪಾಲಿಸಲು ರಾಜಕೀಯ ಪಕ್ಷಗಳಿಗೆ ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ಸೆಪ್ಟೆಂಬರ್ 19ರಂದು ಮನಪಾ ಮೇಯರ್ ಉಪಮೇಯರ್ ಚುನಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 07. ಮಂಗಳೂರು ಮಹಾನಗರ ಪಾಲಿಕೆ 25ನೇ ಅವಧಿಯ ಮೇಯರ್ ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆಯು ಸೆಪ್ಟೆಂಬರ್ 19ರಂದು ಗುರುವಾರ ಮಧ್ಯಾಹ್ನ 12 ಗಂಟೆಗೆ ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.

ಸೆಪ್ಟೆಂಬರ್ 19ರಂದು ಮನಪಾ ಮೇಯರ್ ಉಪಮೇಯರ್ ಚುನಾವಣೆ Read More »

ಕರಾವಳಿ

ಚುನಾವಣೆಯಲ್ಲಿ ತೊಡಗಿಸಿಕೊಳ್ಳುವ ಯುವಕರಿಗೆ ಸಿಹಿ ಸುದ್ದಿ – ಸ್ಪರ್ಧಾ ವಯೋಮಿತಿ 25 ರಿಂದ 18ಕ್ಕೆ ಇಳಿಕೆ

(ನ್ಯೂಸ್ ಕಡಬ) newskadaba.com  ನವದೆಹಲಿ, ಆ. 05. ಇನ್ನುಮುಂದೆ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ವಿಧಿಸಲಾಗಿರುವ ಕನಿಷ್ಠ ವಯಸ್ಸಿನ ಮಿತಿಯನ್ನು ಕಡಿಮೆ ಮಾಡಲು ಸಂಸದೀಯ ಸಮಿತಿ ಸಲಹೆ ನೀಡಿದ್ದು, ಇದರಿಂದ ಯುವಕರಿಗೆ ಪ್ರಜಾಪ್ರಭುತ್ವದಲ್ಲಿ ತೊಡಗಿಸಿಕೊಳ್ಳಲು ಸಮಾನ ಅವಕಾಶ ನೀಡಿದಂತಾಗುತ್ತದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.   ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕನಿಷ್ಠ ವಯೋಮಿತಿಯನ್ನು 25 ರಿಂದ 18ಕ್ಕೆ ಇಳಿಸಲು ಶುಕ್ರವಾರದಂದು ಸಂಸದೀಯ ಸಮಿತಿ ಸಲಹೆ ನೀಡಿದೆ. ಬ್ರಿಟನ್, ಆಸ್ಟ್ರೇಲಿಯಾ, ಕೆನಡಾ ಮೊದಲಾದ ದೇಶಗಳಲ್ಲಿ ಪರಿಶೀಲನೆ ನಡೆಸಿದ

ಚುನಾವಣೆಯಲ್ಲಿ ತೊಡಗಿಸಿಕೊಳ್ಳುವ ಯುವಕರಿಗೆ ಸಿಹಿ ಸುದ್ದಿ – ಸ್ಪರ್ಧಾ ವಯೋಮಿತಿ 25 ರಿಂದ 18ಕ್ಕೆ ಇಳಿಕೆ Read More »

ರಾಷ್ಟ್ರೀಯ ನ್ಯೂಸ್
Scroll to Top