ಹರೀಶ್ ಪೂಂಜಾ ವಿರುದ್ಧ FIR ದಾಖಲು

(ನ್ಯೂಸ್ ಕಡಬ) newskadaba.com, ಮೇ.05: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಭಟ್ರಬೈಲು ತೆಕ್ಕಾರು ಇಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ವೇದಿಕೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ‘ಗ್ರಾಮದ ಮುಸ್ಲಿಮರ ಬಗ್ಗೆ ಮಾನಹಾನಿಕಾರ ಮತ್ತು ಕೋಮು ಪ್ರಚೋದನೆಯಿಂದ ಕೂಡಿದ ದ್ವೇಷ ಭಾಷಣ ಮಾಡಿದ್ದಾರೆ’ ಎಂದು ಆರೋಪಿಸಿ, ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಈ ದೂರಿನಡಿ ಪೊಲೀಸರು ಎಫ್‌ಐಆ‌ರ್ ದಾಖಲಿಸಿಕೊಂಡಿದ್ದಾರೆ. ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಶನಿವಾರ ರಾತ್ರಿ ಜರುಗಿದ್ದು, ಕಾರ್ಯಕ್ರಮದಲ್ಲಿ ಹರೀಶ್ ಪೂಂಜಾ ಮಾತನಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಹರೀಶ್ ಪೂಂಜಾ ವಿರುದ್ಧ FIR ದಾಖಲು Read More »

ಕರಾವಳಿ