fire accident

ಉಡುಪಿ: ಹೂಡೆಯಲ್ಲಿ ಗೂಡ್ಸ್ ವಾಹನಕ್ಕೆ ಬೆಂಕಿ; ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಡಿ. 17 ಉಡುಪಿ: ತೆಂಗಿನಕಾಯಿ ಕತ್ತ ಸಾಗಿಸುತ್ತಿದ್ದ ವಾಹನಕ್ಕೆ ತಡರಾತ್ರಿ ಬೆಂಕಿ ತಗುಲಿ ಸುಟ್ಟ ಘಟನೆ ಉಡುಪಿಯ ಹೂಡೆಯಲ್ಲಿ ಸಂಭವಿಸಿದೆ. ವಿದ್ಯುತ್ ತಂತಿ ತಗುಲಿ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಘಟನೆ ನಡೆದಿದೆ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಕದಲ್ಲೆ ವಸತಿ, ಹೊಟೇಲ್, ಕೆಫೆಯಿದ್ದು ಬೆಂಕಿ ವ್ಯಾಪಿಸಿದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಸೂಕ್ತ ಸಮಯದಲ್ಲಿ ಅಗ್ನಿ ಶಾಮಕ ದಳದ […]

ಉಡುಪಿ: ಹೂಡೆಯಲ್ಲಿ ಗೂಡ್ಸ್ ವಾಹನಕ್ಕೆ ಬೆಂಕಿ; ತಪ್ಪಿದ ಅನಾಹುತ Read More »

ಕರಾವಳಿ

ಉತ್ತರಪ್ರದೇಶ: ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 10 ನವಜಾತ ಶಿಶುಗಳ ಸಜೀವ ದಹನ

(ನ್ಯೂಸ್ ಕಡಬ) newskadaba.com ನ. 16. ಉತ್ತರ ಪ್ರದೇಶ: ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ಸ್ಥಳೀಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ದುರ್ಘಟನೆಯಲ್ಲಿ 10 ನವಜಾತ ಶಿಶುಗಳು ಸಜೀವ ದಹನವಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೆಂಕಿಯು ಶಿಶು ತೀವ್ರ ನಿಗಾ ಘಟಕದ ಸುತ್ತಲೂ ಆವರಿಸಿದೆ. ಬೆಂಕಿ ಹೊತ್ತಿಕೊಂಡಂತೆಯೇ ಕಂಗೆಟ್ಟ ಮಕ್ಕಳ ಪೋಷಕರು ಜೋರಾಗಿ ಕಿರುಚಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ಕೂಡ ಆಘಾತಗೊಂಡಿದ್ದು, ವೈದ್ಯರು

ಉತ್ತರಪ್ರದೇಶ: ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 10 ನವಜಾತ ಶಿಶುಗಳ ಸಜೀವ ದಹನ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಪೆಟ್ರೋಲ್ ಪಂಪ್ ಬಳಿ ಕಾರಿಗೆ ಹಠಾತ್ ಬೆಂಕಿ

(ನ್ಯೂಸ್ ಕಡಬ) newskadaba.com ನ. 09.ಮಂಗಳೂರು: ಮಂಗಳೂರಿನ ಲೇಡಿಹಿಲ್ ನ ಪೆಟ್ರೋಲ್ ಪಂಪ್  ಮುಂಭಾಗದಲ್ಲಿ ಮಾರುತಿ 800 ಕಾರ್ ಹಠಾತ್ ಬೆಂಕಿ ಹತ್ತಿಕೊಂಡ ಘಟನೆ ಆದಿತ್ಯವಾರ ಸಂಭವಿಸಿದೆ. ಕಾರಿನಲ್ಲಿದ್ದ ಮೂವರೂ ಪ್ರಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ರಸ್ತೆಯ ಅಂಚಿನಲ್ಲೇ ಇರುವ ಪೆಟ್ರೋಲ್ ಪಂಪ್ ಮುಂಭಾಗ ನಿಂತಿತ್ತು. ಕೂಡಲೇ ಪಂಪ್ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ರಸ್ತೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆದ ಕಾರಣ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ

ಮಂಗಳೂರು: ಪೆಟ್ರೋಲ್ ಪಂಪ್ ಬಳಿ ಕಾರಿಗೆ ಹಠಾತ್ ಬೆಂಕಿ Read More »

ಕರಾವಳಿ

ಉಡುಪಿ: ಪೆಟ್ರೋಲ್ ಪಂಪ್ ಬಳಿ ಸ್ಕೂಟರ್ ಬೆಂಕಿಗೆ ಆಹುತಿ

(ನ್ಯೂಸ್ ಕಡಬ) newskadaba.com ಅ.19, ಉಡುಪಿ: ಸೀಟಿನ ಕೆಳಗೆ ಶೇಖರಣೆಯಲ್ಲಿದ್ದ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಸ್ಕೂಟರ್ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಉಡುಪಿಯ ಚಿಟ್ಪಾಡಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಸ್ಕೂಟರ್ ಸವಾರ ಪೆಟ್ರೋಲ್ ಪಂಪ್‌ನಿಂದ ಬಾಟಲಿಯಲ್ಲಿ ಪೆಟ್ರೋಲ್ ಖರೀದಿಸಿ ವಾಹನದ ಸೀಟಿನ ಕೆಳಗೆ ಸಂಗ್ರಹಿಸಿದ್ದರು. ಬಳಿಕ ಅವರು ಸ್ಕೂಟರ್ ಅನ್ನು ಕಿಕ್-ಸ್ಟಾರ್ಟ್ ಮಾಡಲು ಪ್ರಯತ್ನಿಸಿದ್ದು, ಇಂಜಿನ್‌ನಿಂದ ಸೋರಿಕೆಯಾದ ಕಿಡಿಯು ಸೀಟ್ ಕೆಳಗೆ ಸೋರಿಕೆಯಾಗಿದ್ದ ಪೆಟ್ರೋಲ್‌ಗೆ ತಾಗಿ ದ್ವಿಚಕ್ರ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಸ್ಕೂಟರ್ ಸಂಪೂರ್ಣವಾಗಿ ಬೆಂಕಿಗೆ

ಉಡುಪಿ: ಪೆಟ್ರೋಲ್ ಪಂಪ್ ಬಳಿ ಸ್ಕೂಟರ್ ಬೆಂಕಿಗೆ ಆಹುತಿ Read More »

ಕರಾವಳಿ

ಬೆಂಕಿ ಅವಘಡ – ಹೆದ್ದಾರಿ ಮಧ್ಯೆ ಹೊತ್ತಿ ಉರಿದ BMW ಕಾರು

(ನ್ಯೂಸ್ ಕಡಬ) newskadaba.com ಸೆ. 28. ಹೆದ್ದಾರಿ ಮಧ್ಯೆ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದ ಘಟನೆ ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ನಡೆದಿದೆ. ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಹೊತ್ತಿ ಬೆಂಕಿ ಅವಘಾತಕ್ಕೀಡಾಗಿರುವುದಾಗಿ ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಬೆಂಕಿ ಅವಘಡ – ಹೆದ್ದಾರಿ ಮಧ್ಯೆ ಹೊತ್ತಿ ಉರಿದ BMW ಕಾರು Read More »

ಕರಾವಳಿ

ಬೆಂಕಿ ಅವಘಡ: ಹೊಸೂರಿನ ಟಾಟಾ ಎಲೆಕ್ರ್ಟಾನಿಕ್ಸ್

(ನ್ಯೂಸ್ ಕಡಬ) newskadaba.com ಸೆ. 27. ಚೆನ್ನೈ: ಇಂದು ಬೆಳಗ್ಗೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಸಮೀಪದಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೆಟ್‌ ಲಿಮಿಟೆಡ್‌ ಘಟಕದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಸೆಲ್‌ಫೋನ್‌ ಉತ್ಪಾದನಾ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಉದ್ಯೋಗಿಗಳನ್ನುಸ್ಥಳಾಂತರಿಸಲಾಗಿದೆ. ಸದ್ಯ ಯಾವುದೇ ಸಾವು-ನೋವಿನ ಬಗ್ಗೆ ತಿಳಿದು ಬಂದಿಲ್ಲ. ಹೆಚ್ಚಿನ ವಿವರ ಕಲೆ ಹಾಕಲಾಗುತ್ತಿದೆ. ಆಸ್ತಿಪಾಸ್ತಿಗೆ ಅಪಾರ ಹಾನಿಯಾಗಿದ್ದು, ಪ್ರಸ್ತುತ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಲು ಶ್ರಮಿಸುತ್ತಿದ್ದಾರೆ ಎಂದು ಐಎಎನ್ಎಸ್ ವರದಿ ಮಾಡಿದೆ. ನಾಗಮಂಗಲಂ ಬಳಿಯ ಉದ್ದನಪಲ್ಲಿಯಲ್ಲಿರುವ

ಬೆಂಕಿ ಅವಘಡ: ಹೊಸೂರಿನ ಟಾಟಾ ಎಲೆಕ್ರ್ಟಾನಿಕ್ಸ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಅವಘಡ- 30ಕ್ಕೂ ಅಧಿಕವಾಹನಗಳು ಬೆಂಕಿಗಾಹುತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 23. ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ 30 ರಿಂದ 40 ವಾಹನಗಳು ಬೆಂಕಿಗಾಹುತಿಯಾಗಿರುವ ಘಟನೆ ನಾಯಂಡಹಳ್ಳಿ ಸಮೀಪದ ನಡೆದಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಸಿಕೊಂಡಿರುವುದಾಗಿ ಶಂಕಿಸಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ ಅವಘಡ- 30ಕ್ಕೂ ಅಧಿಕವಾಹನಗಳು ಬೆಂಕಿಗಾಹುತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಗರಬತ್ತಿ ತಯಾರಿಕಾ ಪ್ರದೇಶಕ್ಕೆ ಬೆಂಕಿ ತಗುಲಿ ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 14. ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ ಹಲವರು ಪ್ರಾಣ ಕಳೆದುಕೊಂಡ ಘಟನೆ ಮಾಸುವ ಬೆನ್ನಲ್ಲೇ ನಗರದಲ್ಲಿ ಇನ್ನೆರಡು ಅಗ್ನಿ ಅವಘಡಗಳು ಸಂಭವಿಸಿದ್ದು, ಓರ್ವ ವ್ಯಕ್ತಿ ಗಾಯಗೊಂಡ ಕುರಿತು ಪೈಪ್​ಲೈನ್ ರಸ್ತೆಯ ಚೋಳರಪಾಳ್ಯದ ಅಗರಬತ್ತಿ ಕಾರ್ಖಾನೆಯಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಉಂಟಾಗಿದ್ದು, ಅಗ್ನಿ ಶಾಮಕದಳದ ಸಿಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿವೆ. ಗಾಯಗೊಂಡವರನ್ನು ರವಿಕುಮಾರ್ ಎಂದು ಗುರುತಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಗರಬತ್ತಿ ತಯಾರಿಕಾ ಪ್ರದೇಶಕ್ಕೆ ಬೆಂಕಿ ತಗುಲಿ ಅಪಾರ ನಷ್ಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಕಿ ಆಕಸ್ಮಿಕ- ಇಲೆಕ್ಟ್ರಾನಿಕ್ ಅಂಗಡಿ ಸುಟ್ಟು ಕರಕಲು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 20. ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಇಲೆಕ್ಟ್ರಾನಿಕ್ ಅಂಗಡಿಯೊಂದು ಬಾಗಶ: ಬೆಂಕಿಗಾಹುತಿಯಾದ ಘಟನೆ ಬಂಟ್ವಾಳ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ. ಬಂಟ್ವಾಳ ಪೇಟೆಯ ಬಡ್ಡಕಟ್ಟೆಯಲ್ಲಿರುವ ಪುರಸಭಾ ವಾಣಿಜ್ಯ ಮಳಿಗೆಯೊಂದರಲ್ಲಿ ಈ ಅಗ್ನಿ ಅನಹುತ ಸಂಭವಿಸಿದ್ದು, ಹಲವು ಸೊತ್ತುಗಳು ಸುಟ್ಟುಹೋಗಿವೆ ಎಂದು ಹೇಳಲಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬಂದಿ ಸ್ಥಳೀಯರೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಂಗಡಿಯಲ್ಲಿದ್ದ ಸುಮಾರು ‌ಲಕ್ಷಾಂತರ ರೂ. ಬೆಲೆಬಾಳುವ ಟಿ.ವಿ ಸಹಿತ ಅನೇಕ ಗೃಹೋಪಯೋಗಿ ಉಪಕರಣಗಳು ಸುಟ್ಟು ಹೋಗಿದೆ ಎಂದು ಹೇಳಲಾಗಿದೆ.

ಬೆಂಕಿ ಆಕಸ್ಮಿಕ- ಇಲೆಕ್ಟ್ರಾನಿಕ್ ಅಂಗಡಿ ಸುಟ್ಟು ಕರಕಲು Read More »

ಕರಾವಳಿ, ಕ್ರೈಮ್ ನ್ಯೂಸ್

ಉದ್ಯಾನ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ನಿಲ್ಲಿಸಿದ್ದ ಉದ್ಯಾನ್ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಶನಿವಾರದಂದು ಬೆಳಗ್ಗೆ ಸಂಭವಿಸಿದೆ. ಮುಂಬೈಯಿಂದ ಬಂದಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲು ಇಂದು ಬೆಳಗ್ಗೆ 6 ಗಂಟೆಗೆ ಕೆಎಸ್ಆರ್ ರೈಲು ನಿಲ್ದಾಣಕ್ಕೆ ಆಗಮಿಸಿದ್ದು, ಪ್ಲಾಟ್ ಫಾರ್ಮ್ 4ರಲ್ಲಿ ನಿಂತಿತ್ತು. 7:30ರ ಸುಮಾರಿಗೆ ತಾಂತ್ರಿಕ ಸಮಸ್ಯೆಯಿಂದಾಗಿ ರೈಲ್ವೇ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಬೆಂಕಿ ರೈಲಿನ ಎರಡು ಕೋಚ್

ಉದ್ಯಾನ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top