ಸೈಕಲ್ ಗೆ ಕಾರು ಢಿಕ್ಕಿ- ಮಾಜಿ ಯೋಧ ಮೃತ್ಯು..!

(ನ್ಯೂಸ್ ಕಡಬ) newskadaba.com ಜೂ. 11. ಸೈಕಲ್‌ಗೆ ಕಾರು ಢಿಕ್ಕಿ ಹೊಡೆದು ಮಾಜಿ ಯೋಧರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಲಿಂಗಸುಗೂರು ಮಾರ್ಗದ ರಾಜ್ಯ ಹೆದ್ದಾರಿಯ ಹಳ್ಳದ ಬಸವೇಶ್ವರ ದೇವಸ್ಥಾನದ ಎದುರು ನಡೆದಿದೆ. ಮೃತ ಮಾಜಿ ಯೋಧರನ್ನು ಶ್ರೀನಿವಾಸ (57) ಎಂದು ಗುರುತಿಸಲಾಗಿದೆ. ಶ್ರೀನಿವಾಸ್‌ ಅವರು ಅಸ್ಕಿಹಾಳದಿಂದ ಸೈಕಲ್ ನಲ್ಲಿ ಕೆಲಸಕ್ಕೆ ಹೋಗುವ ವೇಳೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾರು ಚಾಲಕ ಪರಾರಿಯಾಗಿದ್ದು, ಈ ಕುರಿತು ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸೈಕಲ್ ಗೆ ಕಾರು ಢಿಕ್ಕಿ- ಮಾಜಿ ಯೋಧ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್