fraud

ಮಂಗಳೂರು: ಹೂಡಿಕೆ ಆಮಿಷ ಒಡ್ಡಿ 20 ಲಕ್ಷ ರೂ. ವರ್ಗಾಯಿಸಿಕೊಂಡು ವಂಚನೆ

(ನ್ಯೂಸ್ ಕಡಬ) newskadaba.com ಅ.21 ಮಂಗಳೂರು: ಜೆ.ಪಿ. ಮಾರ್ಗನ್ ಕಂಪೆನಿಯ ಪ್ರತಿನಿಧಿ ಎಂದು ತನ್ನನ್ನು ಪರಿಚಯಿಸಿಕೊಂಡು ಭಾರತದಲ್ಲಿ ಹೊಸದಾಗಿ ಕಂಪೆನಿಯನ್ನು ಪ್ರಾರಂಭಿಸುತ್ತಿದ್ದು, ಹೂಡಿಕೆ ಮಾಡುವಂತೆ ಆಮಿಷ ಒಡ್ಡಿ 20 ಲಕ್ಷ ರೂ. ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಿಗೆ ಸೆ. 24ರಂದು ಅಪರಿಚಿತ ವ್ಯಕ್ತಿ ತಾನು ವಿಶ್ವನಾಥನ್ ಮುಖ್ಯ ಹೂಡಿಕೆದಾರ ಸ್ಟ್ರ್ಯಾಟಜಿಸ್ಟ್ ಎಂದು ಹೇಳಿಕೊಂಡು ಸಂಪರ್ಕ ಮಾಡಿದ್ದಾನೆ. ನಂತರ ನೀತಾ ಶರ್ಮಾ ಎಂಬಾಕೆ ಜೆ.ಪಿ. ಮಾರ್ಗನ್ ಎಂಬ ಕಂಪೆನಿಯ ಪ್ರತಿನಿಧಿ ಎಂದು […]

ಮಂಗಳೂರು: ಹೂಡಿಕೆ ಆಮಿಷ ಒಡ್ಡಿ 20 ಲಕ್ಷ ರೂ. ವರ್ಗಾಯಿಸಿಕೊಂಡು ವಂಚನೆ Read More »

ಕರಾವಳಿ

ಪೆಟ್ರೋಲ್ ಹಾಕಿಸಿ ಹಣ ಕೊಡದೇ ಪರಾರಿ- ದೂರು ದಾಖಲು

(ನ್ಯೂಸ್ ಕಡಬ) newskadaba.com ಅ. 14. ಪೆಟ್ರೋಲ್ ಹಾಕಿಸಿ ಹಣ ಕೊಡದೇ ಚಾಲಕ ಕಾರಿನೊಂದಿಗೆ ಪರಾರಿಯಾಗಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದ ಅನು ಪೆಟ್ರೋಲ್ ಬಂಕ್‌ಗೆ ಕಾರಿನಲ್ಲಿ ಬಂದ ವ್ಯಕ್ತಿಯೋರ್ವ, 4253.88ರೂ. ಮೊತ್ತದ ಪೆಟ್ರೋಲ್ ಹಾಕಿಸಿಕೊಂಡು ಬಳಿಕ ಹಣ ನೀಡದೆ ಕಾರನ್ನು ಚಲಾಯಿಸಿಕೊಂಡು ಹೋಗಿ ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೆಟ್ರೋಲ್ ಹಾಕಿಸಿ ಹಣ ಕೊಡದೇ ಪರಾರಿ- ದೂರು ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಕೆಲಸ ನೀಡುವುದಾಗಿ ಆಮಿಷ- ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಯುವಕನಿಗೆ ಬೆಸ್ಕಾಂನಲ್ಲಿ ಕೆಲಸ ನೀಡುವುದಾಗಿ ಭರವಸೆ ನೀಡಿ ಹಣ ಪಡೆದು ನಕಲಿ ನೇಮಕಾತಿ ಆದೇಶ ನೀಡಿದ್ದ ಆರು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಕುರಿತು ವರದಿಯಾಗಿದೆ. ಘಟನೆಗೆ ಸಂಬಂಧಿಸಿ ಲಿಖಿತ್ ಎಂಬಾತ ಪ್ರವೀಣ್, ವಿಘ್ನೇಶ್ ಹೆಗ್ಡೆ, ವೆಂಕಟೇಶ್, ಶಿವಾನಂದ್, ಶ್ರೀನಿವಾಸ್ ಮತ್ತು ರಾಜಾ ವಿರುದ್ಧ ದೂರು ದಾಖಲಿಸಿದ್ದಾರೆ. ವರದಿಯ ಪ್ರಕಾರ, ಲಿಖಿತ್ ಎಂಬಾತ ವಿಘ್ನೇಶ್ ಹೆಗ್ಡೆ ಎಂಬಾತನೊಂದಿಗೆ ಸ್ನೇಹ ಬೆಳೆಸಿದ್ದನು. ಬೆಸ್ಕಾಂ ಹಾಗೂ ಇತರ ವಿವಿಧ ಸರ್ಕಾರಿ

ಸರ್ಕಾರಿ ಕೆಲಸ ನೀಡುವುದಾಗಿ ಆಮಿಷ- ದೂರು Read More »

ಕರ್ನಾಟಕ

ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ 72 ಲಕ್ಷ ರೂ. ವಂಚನೆ, ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಆ. 21. ಫೈನಾನ್ಸ್ ನಲ್ಲಿ ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸಿ, ಒಟ್ಟು 75 ಲಕ್ಷರೂ.ಗಳನ್ನು ವಂಚಿಸಿದ ಘಟನೆಯೊಂದು ಬ್ರಹ್ಮಾವರದಿಂದ ತಡವಾಗಿ ಬೆಳಕಿಗೆ ಬಂದಿದೆ.   ಸುವಾಸಿನಿ ಹಾಗೂ ಆತನ ಸಹೋದರ ವಾದಿರಾಜ ಎಂಬವರು ನಡೂರಿನ ನಿತ್ಯಾನಂದ ಎಂಬವರಿಗೆ 35 ಲಕ್ಷ ರೂ.ಸೇರಿದಂತೆ ಹಲವರಿಗೆ ಒಟ್ಟು 75 ಲಕ್ಷ ರೂ.ವಂಚಿಸಿದ ಆರೋಪಿಗಳು. ಆರೋಪಿಗಳು ಮಣಿಪಾಲದ ಸಿಟಿಕಾರ್ಪ್ ಫೈನಾನ್ಸ್ ಎಂಬ ಹಣಕಾಸು ಸಂಸ್ಥೆಯಿಂದ ಹರಾಜಿನ ಮೂಲಕ ಪಡೆದ ಚಿನ್ನವನ್ನು ಕಡಿಮೆ

ಹರಾಜಿಗೆ ಬಂದ ಚಿನ್ನವನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ 72 ಲಕ್ಷ ರೂ. ವಂಚನೆ, ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

‘49 ರೂಪಾಯಿಗೆ 48 ಮೊಟ್ಟೆ’; ಮೊಬೈಲ್ ಸಂದೇಶಕ್ಕೆ 49 ಸಾವಿರ ರೂ. ಕಳೆದುಕೊಂಡ ಮಹಿಳೆ

(ನ್ಯೂಸ್ ಕಡಬ) neskadaba.com ಬೆಂಗಳೂರು, ಫೆ. 26. ‘49 ರೂಪಾಯಿಗೆ 48 ಮೊಟ್ಟೆ ಸಿಗಲಿದೆ’ ಎಂದು ಎಂಬ ಮೊಬೈಲ್ ಸಂದೇಶದ ಲಿಂಕ್ ಒತ್ತಿ ಗ್ರಾಹಕರೊಬ್ಬರು 48,199 ರೂ. ಕಳೆದುಕೊಂಡಿರುವ ಘಟನೆ ಇಲ್ಲಿನ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ವಸಂತನಗರದ ನಿವಾಸಿ ಮಹಿಳೆಯೊಬ್ಬರಿಗೆ ಫೆ. 17ರಂದು ಇ-ಮೇಲ್‍ ಮೂಲಕ ಆನ್‍ ಲೈನ್ ಶಾಪಿಂಗ್ ಕಂಪೆನಿಯೊಂದರಿಂದ ಸಂದೇಶ ಬಂದಿತ್ತು. ಇದನ್ನು ನೋಡಿದ ಮಹಿಳೆ 48 ಮೊಟ್ಟೆಗಳಿಗೆ ಕೇವಲ 49 ರೂಪಾಯಿ ಆಫರ್ ಇರುವುದನ್ನು ಕಂಡು ಬುಕ್ ಮಾಡಲು

‘49 ರೂಪಾಯಿಗೆ 48 ಮೊಟ್ಟೆ’; ಮೊಬೈಲ್ ಸಂದೇಶಕ್ಕೆ 49 ಸಾವಿರ ರೂ. ಕಳೆದುಕೊಂಡ ಮಹಿಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸ್ಟಾಕ್ ಟ್ರೇಡಿಂಗ್ ಹೂಡಿಕೆ ನೆಪದಲ್ಲಿ 18.53 ಲಕ್ಷ ರೂ. ವಂಚನೆ ಆರೋಪ – ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಫೇಸ್ ಬುಕ್‌ ನಲ್ಲಿ ಕಾಣಿಸಿಕೊಂಡ ಜಾಹೀರಾತು ನೋಡಿ ಹಣ ಹೂಡಿಕೆ ಮಾಡಿದ ವ್ಯಕ್ತಿಯೋರ್ವರು 18.53 ಲಕ್ಷ ರೂ. ವಂಚನೆಗೊಳಗಾದ ಘಟನೆ ವರದಿಯಾಗಿದೆ. ವಿಜಯ ಕುಮಾರ್ ಎಂಬವರು ಫೇಸ್‌ ಬುಕ್‌ ನಲ್ಲಿ ಸ್ಟಾಕ್ ಟ್ರೇಡಿಂಗ್ ಬಗೆಗಿನ ಜಾಹೀರಾತು ನೋಡಿ ಅದರಲ್ಲಿದ್ದ ಲಿಂಕ್‌ ಮೂಲಕ ವಾಟ್ಸಾಪ್ ಗ್ರೂಪ್‌ನಲ್ಲಿ ಸೇರ್ಪಡೆಯಾಗಿದ್ದರು ಎಂದೆನ್ನಲಾಗಿದೆ. ಗ್ರೂಪ್‌ ನಲ್ಲಿ ಚೀಫ್ ಅಡ್ಮಿನ್ ಅಗಿದ್ದ ಅಮಿತ್ ಶಾ ಎಂಬಾತ ಪ್ರತಿ ದಿನ ಆನ್‌ ಲೈನ್ ವೀಡಿಯೋ ಕ್ಲಾಸ್ ಮೂಲಕ

ಸ್ಟಾಕ್ ಟ್ರೇಡಿಂಗ್ ಹೂಡಿಕೆ ನೆಪದಲ್ಲಿ 18.53 ಲಕ್ಷ ರೂ. ವಂಚನೆ ಆರೋಪ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಗ್ರಾಹಕರ ಸೋಗಿನಲ್ಲಿ ಬಂದು 1.98ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚನೆ

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 20. ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದ ಮಹಿಳೆಯರು ನಕಲಿ ಚಿನ್ನಾಭರಣ ಕೊಟ್ಟು ಲಕ್ಷಾಂತರ ರೂ. ಮೌಲ್ಯದ ಅಸಲಿ ಚಿನ್ನಾಭರಣ ಪಡೆದುಕೊಂಡು ಹೋಗಿ ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಕನಕದಾಸ ರಸ್ತೆಯಲ್ಲಿರುವ ನಿತ್ಯಾನಂದ ಎಂಬವರ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಅಂದಾಜು 35ರಿಂದ 45ವರ್ಷ ಪ್ರಾಯದ ಮೂವರು ಬುರ್ಖಧಾರಿ ಮಹಿಳೆಯರು, 15,800 ಗ್ರಾಂ. ತೂಕದ ಒಂದು ಚಿನ್ನದ ಚೈನ್ ಮತ್ತು 10.150 ಗ್ರಾಂ ತೂಕದ ಚಿನ್ನದ ಬ್ರಾಸ್ಲೆಟ್ ಖರೀದಿಸಿ, ಇದಕ್ಕೆ

ಗ್ರಾಹಕರ ಸೋಗಿನಲ್ಲಿ ಬಂದು 1.98ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಾರೆ: ಉದ್ಯೋಗದ ಆಮಿಷ- 13 ಲಕ್ಷ ರೂ.ವಂಚನೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 13. ವಿಮಾನಯಾನ ಸಂಸ್ಥೆಯೊಂದರಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿಯೋರ್ವ 13 ಲಕ್ಷ ರೂ. ವಂಚಿಸಿದ ಕುರಿತು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ ‘ದೂರುದಾರ ವ್ಯಕ್ತಿಗೆ ಜುಲೈ 15ರಂದು ಅಪರಿಚಿತ ವ್ಯಕ್ತಿಯೋರ್ವ ಕರೆಮಾಡಿ, ವಿಮಾನಯಾನ ಸಂಸ್ಥೆಯಿಂದ ಕರೆ ಮಾಡಿರುವುದಾಗಿ ಹೇಳಿ, ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿ ಇದ್ದು, ಹೆಚ್ಚಿನ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳು ಇರಲಿವೆ ಎಂದು ತಿಳಿಸಿದ್ದರು. ಉದ್ಯೋಗವನ್ನು ಕೊಡಿಸುವುದಾಗಿ ನಂಬಿಸಿದ ಅಪರಿಚಿತ, ಹಂತ ಹಂತವಾಗಿ

ಬೆಳ್ಳಾರೆ: ಉದ್ಯೋಗದ ಆಮಿಷ- 13 ಲಕ್ಷ ರೂ.ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ವ್ಯಾಪಾರಿಗೆ 75 ಲಕ್ಷ ರೂ. ವಂಚನೆ- ದೂರು ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 01. ಕೃಷಿ ಉತ್ಪನ್ನಗಳ ವ್ಯಾಪಾರಿಯೊಬ್ಬರಿಗೆ ವ್ಯಕ್ತಯೋರ್ವ 75 ಲಕ್ಷ ರೂ. ವಂಚಿಸಿರುವ ಘಟನೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ. ವಂಚನೆಗೊಳಗಾದವರನ್ನು ಅಬ್ದುಲ್ ರಹಿಮಾನ್ ಬಾವಾ ಎನ್ನಲಾಗಿದೆ. ಇವರು ಮಹಾರಾಷ್ಟ್ರದ ಸೋಲಾಪುರದ ಸಿದ್ದೇಶ್ವರ ಟ್ರೇಡರ್ಸ್ ನ ಕುಂಡಲಿಕ್ ಜುಂಬಾರ್ ಖಂಡಾಗಲೆ ಎಂಬವರು ತನ್ನ ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸಿಕೊಂಡು ವಂಚಿಸಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. 2021ರ ಜನವರಿಯಲ್ಲಿ ದೂರುದಾರರಿಗೆ ಮಂಗಳೂರು ಮತ್ತು ಚೆನ್ನೈನಲ್ಲಿ ವ್ಯವಹಾರ ಹೊಂದಿರುವ

ವ್ಯಾಪಾರಿಗೆ 75 ಲಕ್ಷ ರೂ. ವಂಚನೆ- ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಆನ್‌ಲೈನ್ ನಲ್ಲಿ ಹಣ ಹೂಡಿಕೆ ಮಾಡಿಸಿ ವಂಚನೆ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 25. ಆನ್‌ಲೈನ್ ಮೂಲಕ ಹಣ ಹೂಡಿಕೆ ಮಾಡಿಸಿ ಬಳಿಕ ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರ ವಾಟ್ಸಪ್‌ಗೆ ಕಂಪೆನಿಯೊಂದರ ಹೆಸರಿನಲ್ಲಿ ಮೆಸೇಜ್ ಬಂದಿದ್ದು, ಅದರಲ್ಲಿ ಪಾರ್ಟ್ ಟೈಮ್ ಟಾಸ್ಕ್‌ ಗಳನ್ನು ಪ್ರತಿದಿನ ಮಾಡಿದರೆ ಶೇ. 30ರಷ್ಟು ಲಾಭ ಗಳಿಸಬಹುದು ಎಂದು ತಿಳಿಸಲಾಗಿತ್ತು. ಬಳಿಕ ಟೆಲಿಗ್ರಾಂ ಆಯಪ್‌ನಲ್ಲಿರುವ ವ್ಯಕ್ತಿಯ ಮೂಲಕ ಕಾಶ್ಮೀರ್ 2233 ಎಂಬ ವ್ಯಕ್ತಿಯನ್ನು ಪರಿಚಯಿಸಿ ಮಾರ್ಕೆಟಿಂಗ್ ಕಂಪೆನಿಯ ಗುಂಪಿನಲ್ಲಿ ಸೇರಿಸಿ ಆಮಿಷವೊಡ್ಡಲಾಗಿತ್ತು. ಇದನ್ನು ಇದನ್ನು

ಆನ್‌ಲೈನ್ ನಲ್ಲಿ ಹಣ ಹೂಡಿಕೆ ಮಾಡಿಸಿ ವಂಚನೆ- ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top