gas

ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ – ಎಲ್ ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಇಳಿಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 01. ಇಂದಿನಿಂದ ವಾಣಿಜ್ಯ ಬಳಕೆಯ 19 ಕೆಜಿ ಎಲ್​ಪಿಜಿ ಸಿಲಿಂಡರ್​​ ಬೆಲೆಯು ದೇಶದ ಕೆಲವು ನಗರಗಳಲ್ಲಿ ಕಡಿಮೆಯಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಗ್ರಾಹಕರಿಗೆ ಹೊಸ ವರ್ಷಕ್ಕೆ ಸಂತಸದ ಸುದ್ದಿಯನ್ನು ನೀಡಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 1,755.50 ರೂ. ಆಗಿದ್ದು, ಈ ಮೊದಲು ಈ ದರ 1,757 ರೂ. ಇತ್ತು. ಚೆನ್ನೈನಲ್ಲಿ, ಎಲ್‌ಪಿಜಿ ಬೆಲೆಯನ್ನು 4.50 ರೂ ಕಡಿತಗೊಳಿಸಲಾಗಿದ್ದು, 19 ಕೆಜಿ ಸಿಲಿಂಡರ್ ಬೆಲೆ […]

ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ – ಎಲ್ ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಇಳಿಕೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ದೇಶದ ಜನತೆಗೆ ಬಹಿರಂಗ ಪತ್ರ ಬರೆದ ರಾಹುಲ್ ಗಾಂಧಿ…!! ➤ 500 ರೂ.ಗೆ ಗ್ಯಾಸ್ ಸಿಲಿಂಡರ್, ತೈಲ ಬೆಲೆ ಇಳಿಕೆ‌, ಹಲವು ವಿಚಾರಗಳು ಪತ್ರದಲ್ಲಿ ಉಲ್ಲೇಖ..

(ನ್ಯೂಸ್ ಕಡಬ) newskadaba.com   ಹೊಸದಿಲ್ಲಿ, ಜ.14. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೇಶದ ಜನತೆಗೆ ಪತ್ರವನ್ನು ಬರೆದಿದ್ದು, ಅಗ್ಗವಾದ ಪೆಟ್ರೋಲ್ ಮತ್ತು ಡೀಸೆಲ್, 500 ರೂ.ಗೆ ಗ್ಯಾಸ್ ಸಿಲಿಂಡರ್, ಉದ್ಯೋಗ ಮತ್ತು ಸೌಹಾರ್ದತೆಯ ಸ್ಥಾಪನೆಯ ಭರವಸೆಯನ್ನು ನೀಡಿದ್ದಾರೆ ಎಂದು ವರದಿಯಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷದ ಬೃಹತ್ ಪ್ರಚಾರ ಕಾರ್ಯಕ್ರಮ ಭಾರತ್ ಜೋಡೋ ಯಾತ್ರೆಯ ಕೊನೆಯ ಘಟ್ಟದಲ್ಲಿ ದೇಶದ ಜನತೆಗೆ ಪತ್ರ ಬರೆದಿದ್ದಾರೆ. ಜನವರಿ 26 ರಿಂದ ರಾಹುಲ್ ಗಾಂಧಿಯವರ ಪತ್ರವನ್ನು ಪ್ರತಿ ಮನೆಗೆ ತಲುಪಿಸುವುದಾಗಿ

ದೇಶದ ಜನತೆಗೆ ಬಹಿರಂಗ ಪತ್ರ ಬರೆದ ರಾಹುಲ್ ಗಾಂಧಿ…!! ➤ 500 ರೂ.ಗೆ ಗ್ಯಾಸ್ ಸಿಲಿಂಡರ್, ತೈಲ ಬೆಲೆ ಇಳಿಕೆ‌, ಹಲವು ವಿಚಾರಗಳು ಪತ್ರದಲ್ಲಿ ಉಲ್ಲೇಖ.. Read More »

ರಾಷ್ಟ್ರೀಯ ನ್ಯೂಸ್

ಇನ್ನು ಮುಂದೆ ವಾಟ್ಸಾಪ್ ಮೂಲಕ ಗ್ಯಾಸ್ ಬುಕ್ ಮಾಡಿ ➤ ಹೇಗೆಂದು ತಿಳಿಯಬೇಕೆ..?

(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.27., ದೇಶದ ಎರಡನೇ ಅತಿದೊಡ್ಡ ತೈಲ ಮಾರುಕಟ್ಟೆ ಕಂಪನಿ ಭಾರತ್ ಪೆಟ್ರೋಲಿಯಂ (BPCL) ಅನಿಲ ಗ್ರಾಹಕರಿಗೆ ಹೊಸ ಸೌಲಭ್ಯವನ್ನು ಪ್ರಾರಂಭಿಸಿದ್ದು, ದೇಶಾದ್ಯಂತ ಇನ್ನು ಮುಂದೆ ವಾಟ್ಸಾಪ್‌ನಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ. ಭಾರತ್ ಪೆಟ್ರೋಲಿಯಂ ದೇಶಾದ್ಯಂತ 71 ದಶಲಕ್ಷಕ್ಕೂ ಹೆಚ್ಚು ಅನಿಲ ಗ್ರಾಹಕರನ್ನು ಹೊಂದಿದೆ. ಭಾರತ್ ಗ್ಯಾಸ್ ಪ್ರಕಾರ ಎಲ್‌ಪಿಜಿ ಗ್ರಾಹಕರು ತಮ್ಮ ಗ್ಯಾಸ್ ಸಿಲಿಂಡರ್‌ಗಳನ್ನು ವಾಟ್ಸಾಪ್ ಸಂಖ್ಯೆ 180022434 ನಲ್ಲಿ ಬುಕ್ ಮಾಡಬಹುದು. ನೀವು ಮಾಡಬೇಕಾದ ಪ್ರಮುಖ ವಿಚಾರ ನೆನಪಿನಲ್ಲಿಡಿ, ಗ್ಯಾಸ್

ಇನ್ನು ಮುಂದೆ ವಾಟ್ಸಾಪ್ ಮೂಲಕ ಗ್ಯಾಸ್ ಬುಕ್ ಮಾಡಿ ➤ ಹೇಗೆಂದು ತಿಳಿಯಬೇಕೆ..? Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟ ► ಇಬ್ಬರು ಗಂಭೀರ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಮಂಗಳೂರು, ಎ.20. ವೆಲ್ಡಿಂಗ್ ಸೆಂಟರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ‌ಗ್ಯಾಸ್ ಸಿಲಿಂಡರೊಂದು ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ನಗರದ ಹೊರವಲಯದ ತೊಕ್ಕೊಟ್ಟು ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಗಂಭೀರ ಗಾಯಗೊಂಡ ಕಾರ್ಮಿಕರನ್ನು ಸ್ಥಳೀಯ ನಿವಾಸಿಗಳಾದ ನವೀನ್ ಆಚಾರಿ(30) ಹಾಗೂ ಲತೀಶ್ (55) ಎಂದು ಗುರುತಿಸಲಾಗಿದೆ. ಸಹ ಕಾರ್ಮಿಕ ಅರ್ಫಾಣ್ (22) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ‌. ಇವರು ಗುರುವಾರ ಸಂಜೆ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ

ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಫೋಟ ► ಇಬ್ಬರು ಗಂಭೀರ Read More »

ಕರಾವಳಿ

ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ ► ತಗಡಿನ ಮನೆ ಜಖಂ

(ನ್ಯೂಸ್ ಕಡಬ) newskadaba.com ವಿಜಯಪುರ, ನ.2. ಮನೆಯೊಳಗೆ ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ ಗೊಂಡ ಘಟನೆ ಸಿಂದಗಿ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ನಡೆದಿದೆ. ಘಟನೆಯಿಂದಾಗಿ ತಗಡು ಶೀಟಿನ ಮನೆ ಸಂಪೂರ್ಣವಾಗಿ ಜಖಂ ಗೊಂಡಿದೆ. ಮನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಮನೆ ಹೊರಗೆ ಓಡಿದ ವೃದ್ದ ಮಹಿಳೆ, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದಾಗಿ ಮನೆಯಲ್ಲಿದ್ದ ಧವಸ ಧಾನ್ಯ, ಬಟ್ಟೆ, ಗೃಹೊಪಯೋಗಿ ವಸ್ತುಗಳು ಸಂಪೂರ್ಣವಾಗಿ ಸುಟ್ಟು ನಾಶವಾಗಿದೆ. ಘಟನೆ ಕುರಿತು ದೇವರ ಹಿಪ್ಪರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ ► ತಗಡಿನ ಮನೆ ಜಖಂ Read More »

ಕರ್ನಾಟಕ
Scroll to Top