hassan

ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಹಾಸನ, ಆ. 28. ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬೇಲೂರು ತಾಲ್ಲೂಕಿನ, ಜೆ.ಸುರಪುರ ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಲ್ಲಿಕಾರ್ಜುನ (58) ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನರವರು ಆ. 13 ರಂದು ಬೈಕಿನಲ್ಲಿ ಜಮೀನಿಗೆ ತೆರಳುತ್ತಿದ್ದ ವೇಳೆ ಕಾಡಾನೆಯೊಂದು ಅವರ ಮೇಲೆ ದಾಳಿ ಮಾಡಿ ಸೊಂಡಿಲಿನಿಂದ ಎಸೆದು, ತುಳಿದು ಗಾಯಗೊಳಿಸಿತ್ತು. ಇದರಿಂದಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಲ್ಲಿಕಾರ್ಜುನ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿ ಮೃತ್ಯು..! Read More »

ಕರ್ನಾಟಕ

ಬಾಲಕಿಯ ಅತ್ಯಾಚಾರ ಆರೋಪ- ವೃದ್ಧನ ಬಂಧನ

(ನ್ಯೂಸ್ ಕಡಬ) newskadaba.com ಸಕಲೇಶಪುರ, ಸೆ. 17. ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ವೃದ್ಧನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ ಆರೋಪಿಯನ್ನು ಮೀಸೆ ಮಂಜಯ್ಯ (73) ಎಂದು ಗುರುತಿಸಲಾಗಿದೆ. ಈತನನ್ನು ಸಕಲೇಶಪುರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮಗಳಿಗಾದ ಅನ್ಯಾಯದಿಂದ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯ ತಾಯಿಯು ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯ ಅತ್ಯಾಚಾರ ಆರೋಪ- ವೃದ್ಧನ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನೋವಾ ಕಾರು ಮತ್ತು ಲಾರಿ ನಡುವೆ ಅಪಘಾತ ! ➤ ನಾಲ್ವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಹಾಸನ, ಜು.22. ಟಿಪ್ಪರ್ ವಾಹನ ಢಿಕ್ಕಿಯಾಗಿ ಇನೋವಾ ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ನಡೆದಿದೆ. ಕುಪ್ಪಳ್ಳಿ ಗ್ರಾಮದ ಚೇತನ್, ಗುಡ್ಡೇನಹಳ್ಳಿ ಗ್ರಾಮದ ಅಶೋಕ್, ತಟ್ಟೆಕೆರೆ ಗ್ರಾಮದ ಪುರುಷೋತ್ತಮ ಹಾಗೂ ಆಲೂರು ತಾಲ್ಲೂಕಿನ ಚಿಗಳೂರು ಗ್ರಾಮದ ದಿನೇಶ್ ಮೃತರು ಎಂದು ಗುರುತಿಸಲಾಗಿದೆ. ಸದ್ಯ ಮೃತದೇಹಗಳನ್ನು ಆಲೂರಿನ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ. ಇನೋವಾ ಕಾರಿನಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದಾಗ

ಇನೋವಾ ಕಾರು ಮತ್ತು ಲಾರಿ ನಡುವೆ ಅಪಘಾತ ! ➤ ನಾಲ್ವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಸನ: ಹಾಡಹಗಲೇ ರೌಡಿಶೀಟರ್ ನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಹಾಸನ, ಜು. 04. ಹಾಡಹಗಲೇ ರೌಡಿಶೀಟರ್ ಓರ್ವನನ್ನು ರಸ್ತೆಯಲ್ಲಿ ಅಟ್ಟಾಡಿಸಿ ಕೊಲೆ ಮಾಡಿರುವ ಘಟನೆ ಚನ್ನರಾಯಪಟ್ಟಣದ ಧನಲಕ್ಷ್ಮಿ ಚಿತ್ರ ಮಂದಿರದ ಎದುರು ಮಂಗಳವಾರದಂದು ಸಂಜೆ ವರದಿಯಾಗಿದೆ. ಹತ್ಯೆಗೀಡಾದವರನ್ನು ಮಾಸ್ತಿಗೌಡ ಅಲಿಯಾಸ್ ಕೃಷ್ಣ (30) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು, ಕೃಷ್ಣನನ್ನು ಬೆನ್ನಟ್ಟಿ, ಆತ ಓಡಲು ಪ್ರಾರಂಭಿಸುತ್ತಿದ್ದಂತೆಯೇ ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ ಎಂದು ಹೇಳಲಾಗಿದೆ. ಘಟನೆಯಿಂದ ಕೃಷ್ಣನ ತಲೆ ಸೇರಿದಂತೆ ದೇಹದ ವಿವಿಧ ಭಾಗಳಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ

ಹಾಸನ: ಹಾಡಹಗಲೇ ರೌಡಿಶೀಟರ್ ನ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮದ್ಯಪಾನ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಹಾಸನ, ಜೂ. 15. ಮದ್ಯಪಾನ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಬೆತ್ತಲೆ ನೃತ್ಯ ಮಾಡುತ್ತಿದ್ದ ಆರೋಪದಡಿ ಮೂವರು ಯುವಕರನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಒಪ್ಪಿಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಬಂಧಿತನನ್ನು ದಯ, ರಂಜಿತ್ ಹಾಗೂ ಆನಂದ್ ಎಂದು ಗುರುತಿಸಲಾಗಿದೆ. ಮೂವರು ಯುವಕರು ಸ್ನೇಹಿತರಾಗಿದ್ದು, ಮದ್ಯ ಸೇವಿಸಿ ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡುತ್ತಿದ್ದ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಮೂವರು ಯುವಕರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ

ಮದ್ಯಪಾನ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತನೆ ➤ ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಫೇಸ್ ಬುಕ್ ನಲ್ಲಿ ಪರಿಚಯ; 8 ತಿಂಗಳಿಗೆ ಕೊಲೆಯಾದ ಯುವತಿ ➤ ಪ್ರಿಯಕರ ನಾಪತ್ತೆ !

(ನ್ಯೂಸ್ ಕಡಬ)newskadaba.com ಹಾಸನ, ಜ.28. ಫೇಸ್ ಬುಕ್ ನಲ್ಲಿ ಪರಿಚಯವಾದ ಯುವಕನೊಂದಿಗೆ ಲೀವ್ ಇನ್ ರಿಲೇಷನ್ ಶಿಪ್ ನಲ್ಲಿ ಇದ್ದ ಯುವತಿ 8 ತಿಂಗಳಿಗೆ ಹೆಣವಾದ ಘಟನೆ ಹಾಸನ ಹೊರವಲಯದ ಗುಡ್ಡೇನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ವಿಜಯನಗರ ನಿವಾಸಿ ಸಿರಿಸ್ (22) ಕೊಲೆಯಾದ ಯುವತಿ ಎಂದು ತಿಳಿದುಬಂದಿದೆ. ಫೇಸ್ ಬುಕ್ ನಲ್ಲಿ ಪರಿಚಯವಾದ ಆದರ್ಶ್ ಮತ್ತು ಸಿರಿಸ್ ಗುಡ್ಡೇನಹಳ್ಳಿಯಲ್ಲಿ ಮಾಲೀಕರಿಗೆ ಮದುವೆಯಾಗಿದೆ ಎಂದು ಹೇಳಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇಬ್ಬರು ಒಂದೇ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದರು.

ಫೇಸ್ ಬುಕ್ ನಲ್ಲಿ ಪರಿಚಯ; 8 ತಿಂಗಳಿಗೆ ಕೊಲೆಯಾದ ಯುವತಿ ➤ ಪ್ರಿಯಕರ ನಾಪತ್ತೆ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರ್ತವ್ಯ ಲೋಪ ಹಿನ್ನೆಲೆ..! ➤ ವಲಯಾರಣ್ಯಧಿಕಾರಿ ಶಿಲ್ಪಾ ಎಸ್.ಎಲ್ ಅಮಾನತು 

(ನ್ಯೂಸ್ ಕಡಬ) newskadaba.com ಹಾಸನ, ಜ. 12. ಕರ್ತವ್ಯ ಲೋಪವೆಸಗಿದ ಕಾರಣಕ್ಕೆ ಸಕಲೇಶಪುರ ವಲಯಾರಣ್ಯಧಿಕಾರಿ ಶಿಲ್ಪಾ ಎಸ್.ಎಲ್ ರವರನ್ನು ಅಮಾನತು ಮಾಡಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜ್ ಕಿಶೋರ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಸಿಬ್ಬಂದಿಯನ್ನು ನಿಯಂತ್ರಿಸುವಲ್ಲಿ, ಅರಣ್ಯ ಅಪರಾಧ ಪ್ರಕರಣಗಳ ತನಿಖೆ ನಡೆಸುವಲ್ಲಿ ವಿಫಲವಾಗಿರುವುದು, ಅವರಿಗೆ ನೀಡಿದ ಭೌತಿಕ ಹಾಗೂ ಆರ್ಥಿಕ ಪ್ರಗತಿಯನ್ನು ಸಾಧಿಸುವಲ್ಲಿ ವಿಫಲತೆ ಎಂದು ಅಮಾನತು ಆದೇಶದಲ್ಲಿ ಉಲ್ಲೇಖಿಸಲಾಗಿದೆ.  

ಕರ್ತವ್ಯ ಲೋಪ ಹಿನ್ನೆಲೆ..! ➤ ವಲಯಾರಣ್ಯಧಿಕಾರಿ ಶಿಲ್ಪಾ ಎಸ್.ಎಲ್ ಅಮಾನತು  Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಳೆದ ವರ್ಷ ಅಣ್ಣ ಮೃತಪಟ್ಟ ದಿನವೇ ಈ ವರ್ಷ ತಮ್ಮ ಮೃತ್ಯು..!

(ನ್ಯೂಸ್ ಕಡಬ) newskadaba.com  ಹಾಸನ, ಜ.12. ಬೈಕ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಹಾಸನದ ಬೇಲೂರು ತಾಲ್ಲೂಕಿನ ನೆಟ್ಟೆಕೆರೆ ಗ್ರಾಮದಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ದಿಲೀಪ್ (21) ಎಂದು ಗುರುತಿಸಲಾಗಿದೆ. ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಅಚ್ಚರಿ ಎಂದರೆ ದಿಲೀಪ್ ಅಣ್ಣ ಶ್ರೀಧರ್  2022ರ  ಜನವರಿ 9 ರಂದು ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಘಟನೆ ನಡೆದ ಒಂದು ವರ್ಷದ ಬಳಿಕ ಅದೇ ದಿನಾಂಕದಂದು ದಿಲೀಪ್ ಮೃತಪಟ್ಟಿದ್ದಾರೆ

ಕಳೆದ ವರ್ಷ ಅಣ್ಣ ಮೃತಪಟ್ಟ ದಿನವೇ ಈ ವರ್ಷ ತಮ್ಮ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಯಲ್ಲಿದ್ದ ಡಬಲ್ ಸಿಲಿಂಡರ್ ಸ್ಫೋಟ..! ➤  ಮೂವರು ಪ್ರಾಣಾಪಾಯದಿಂದ ಪಾರು  

(ನ್ಯೂಸ್ ಕಡಬ) newskadaba.com  ಹಾಸನ, ಜ.11. ಮನೆಯ ಒಳಗೆ ಮತ್ತು ಹೊರಗೆ ಇದ್ದ ಎರಡು ಅಡುಗೆ ಗ್ಯಾಸ್ ಸಿಲಿಂಡರ್ ಗಳು ಸ್ಫೋಟಗೊಂಡು ಮೂವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹಾಸನದಲ್ಲಿ ವರದಿಯಾಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ತಡರಾತ್ರಿ ಈ ದುರ್ಘಟನೆ ನಡೆದಿದ್ದು, ವಾಸದ ಮನೆಯ ಹೊರಗೆ ಮತ್ತು ಒಳಗೆ ಇದ್ದ ಎರಡು ಗ್ಯಾಸ್‌ ಸಿಲಿಂಡರ್‌ಗಳು ಕೆಲವೇ ನಿಮಿಷಗಳ ಅಂತರದಲ್ಲಿ ಸ್ಫೋಟಗೊಂಡು ಮನೆ ಸಂಪೂರ್ಣ ಜಖಂಗೊಂಡಿದೆ. ಮನೆಯಲ್ಲಿ ಮೂವರು ವಾಸವಾಗಿದ್ದು ಅದೃಷ್ಟವಶಾತ್‌ ಕೂದಲೆಳೆ

ಮನೆಯಲ್ಲಿದ್ದ ಡಬಲ್ ಸಿಲಿಂಡರ್ ಸ್ಫೋಟ..! ➤  ಮೂವರು ಪ್ರಾಣಾಪಾಯದಿಂದ ಪಾರು   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನೆ ಸೆರೆಹಿಡಿಯಲು ತೋಡಿದ್ದ ಕಂದಕಕ್ಕೆ ಬಿದ್ದ ಮರಿಯಾನೆ..!

(ನ್ಯೂಸ್  ಕಡಬ) newskadaba.com ಹಾಸನ, ಜ. 02.  ಜನರಿಗೆ ನಿರಂತರವಾಗಿ ಕಾಟ ನೀಡುತ್ತಿದ್ದ ಮರಿಕಾಡಾನೆಯೊಂದು ಜನರೇ ತೋಡಿದ್ದ ಕಂದಕಕ್ಕೆ ಬಿದ್ದ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಹೊಸಕೊಪ್ಪಲು ಎಂಬಲ್ಲಿ ವರದಿಯಾಗಿದೆ. ಕಾಡಾನೆಗಳ ಉಪಟಳದಿಂದ ರೋಸಿ ಹೋಗಿದ್ದ ಜನರು ಶಾಶ್ವತ ಪರಿಹಾರಕ್ಕೆ ಒತ್ತಾಯಿಸುತ್ತಲೇ ಇದ್ದರು. ಆದರೆ ಸರ್ಕಾರ ಶಾಶ್ವತ ಪರಿಹಾರ ಕಂಡುಹಿಡಿಯದೆ ಇದ್ದುದರಿಂದ ಗ್ರಾಮಸ್ಥರು ಒಟ್ಟಾಗಿ ಆನೆಯ ಸೆರೆಹಿಡಿಯಲು ದೊಡ್ಡ ಕಂದಕ ತೋಡಿದ್ದರು. ಸದ್ಯ ಇದೀಗ ಗ್ರಾಮಸ್ಥರು ತೋಡಿದ್ದ ಕಂದಕಕ್ಕೆ ಮರಿಯಾನೆಯೊಂದು ಬಿದ್ದಿದ್ದು,  ಸುದ್ದಿ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ

ಆನೆ ಸೆರೆಹಿಡಿಯಲು ತೋಡಿದ್ದ ಕಂದಕಕ್ಕೆ ಬಿದ್ದ ಮರಿಯಾನೆ..! Read More »

ಕರ್ನಾಟಕ
Scroll to Top