heart attack

ಹೃದಯಾಘಾತ- ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ನಿಧನ

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಆ. 23. ಮಲಯಾಳಂನಲ್ಲಿ ಸುಮಾರು 12 ವರ್ಷಗಳ ಕಾಲ ಕಲಾವಿದರಾಗಿ ನಟಿಸಿರುವ ನಿರ್ಮಲ್ ಬೆನ್ನಿ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅನೇಕರು ಸಂತಾಪ ಸೂಚಿಸಿದ್ದಾರೆ.   2012ರಲ್ಲಿ ನಿರ್ಮಲ್ ಚಿತ್ರರಂಗಕ್ಕೆ ಕಾಲಿಟ್ಟರು. ‘ಅಮೆನ್’ ಸಿನಿಮಾದಲ್ಲಿ ಕೊಚ್ಚನ್ ಹೆಸರಿನ ಪಾತ್ರಕ್ಕೆ ನಿರ್ಮಲ್ ಹೆಸರುವಾಸಿ. ನಿರ್ಮಲ್ ಕಲಾವಿದನಾಗಿ ನಟಿಸಿದ್ದಕ್ಕಿಂತ ಹೆಚ್ಚು ಯೂಟ್ಯೂಬ್ ವಿಡಿಯೋಗಳ ಮೂಲಕ ಗಮನ ಸೆಳೆದಿದ್ದರು. ಅವರಿಗೆ ಕೇವಲ 37 ವರ್ಷ ವಯಸ್ಸಾಗಿತ್ತು. ನಿರ್ಮಾಪಕ ಸಂಜಯ್ ಪಡಿಯೂರ್ ಸೋಶಿಯಲ್ ಮೀಡಿಯಾದಲ್ಲಿ […]

ಹೃದಯಾಘಾತ- ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ನಿಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ- ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba ಉಳ್ಳಾಲ. ಆ. 14. ರಿಕ್ಷಾ ಚಲಾಯಿಸುತ್ತಿದ್ದ ವೇಳೆಯೇ ಹೃದಯಾಘಾತವಾಗಿ ಚಾಲಕನೋರ್ವ ಮೃತಪಟ್ಟು ರಸ್ತೆಗೆಸೆಯಲ್ಪಟ್ಟಿದ್ದು, ಪರಿಣಾಮ ಚಾಲಕನಿಲ್ಲದೇ ಮುಂದೆ ಚಲಿಸಿದ ರಿಕ್ಷಾವು ಆಟೋ ಪಾರ್ಕಿಂಗ್ ನಲ್ಲಿದ್ದ ಮತ್ತೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದು ಮೂವರು ಅಪಾಯದಿಂದ ಪಾರಾದ ಘಟನೆ ಕೋಟೆಕಾರಿನಲ್ಲಿ ನಡೆದಿದೆ. ಮೃತರನ್ನು ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ ಎಂದು ಗುರುತಿಸಲಾಗಿದೆ. ಇವರು ಧರ್ಮನಗರದಿಂದ ತನ್ನ ರಿಕ್ಷಾದಲ್ಲಿ ಇಬ್ಬರು ಮಹಿಳೆಯರನ್ನು ಕೂರಿಸಿಕೊಂಡು ಕೋಟೆಕಾರು ಬೀರಿಗೆ ತೆರಳುತ್ತಿದ್ದ ವೇಳೆ ಕೋಟೆಕಾರು ಹೆದ್ದಾರಿ ಬಳಿ ಹೃದಯಾಘಾತವಾಗಿ ರಸ್ತೆಗೆಸೆಯಲ್ಪಟ್ಟಿದ್ದಾರೆ.

ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ- ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯಾಘಾತ- ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ

(ನ್ಯೂಸ್ ಕಡಬ) neskadaba.com ಬೆಂಗಳೂರು, ಫೆ. 25. ಹೃದಯಾಘಾತಕ್ಕೆ ಒಳಗಾಗಿದ್ದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಮೃತಪಟ್ಟ ಕುರಿತು ವರದಿಯಾಗಿದೆ. ಇಂದು ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧರಾಗಿರುವುದಾಗಿ ಎಂದು ತಿಳಿದು ಬಂದಿದೆ. ಯಾದಗಿರಿ ಜಿಲ್ಲೆಯ ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ(67) ಅವರು ನಾಲ್ಕು ಬಾರಿ ಶಾಸಕರಾಗಿದ್ದರು.

ಹೃದಯಾಘಾತ- ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೃದಯಾಘಾತ- ಭೂಮಾಪಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 14. ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರವಾನಗಿ ಹೊಂದಿದ ಭೂಮಾಪಕರಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾಗಿರುವ ಕುರಿತು ಬೆಳ್ತಂಗಡಿಯಿಂದ ವರದಿಯಾಗಿದೆ. ಮೃತಪಟ್ಟವರನ್ನು ವಿಶ್ವನಾಥ ರಾವ್ (45) ಎಂದು ಗರುತಿಸಲಾಗಿದೆ. ಮೂಲತಃ ಹಾಸನ ಜಿಲ್ಲೆಯ ಬೇಲೂರಿನವರಾದ ವಿಶ್ವನಾಥ ರಾವ್ ಅವರು, ಉಜಿರೆಯಲ್ಲಿ ವಾಸವಾಗಿದ್ದು, ಪರವಾನಗಿ ಹೊಂದಿದ ಭೂಮಾಪಕರಾಗಿ ಕಳೆದ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ರಕ್ತದೊತ್ತಡ ಏರುಪೇರಾದ ಹಿನ್ನೆಲೆ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಬಂಟ್ವಾಳದಲ್ಲಿ ಹೃದಯಾಘಾತವಾಗಿದ್ದು, ಅವರನ್ನು

ಹೃದಯಾಘಾತ- ಭೂಮಾಪಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ನೋಯ್ಡಾ, ಜ. 10. ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಯುವಕರು ಮೃತಪಡುತ್ತಿರುವ ವರದಿಗಳು ಹೆಚ್ಚೆಚ್ಚು ಕೇಳಿ ಬರುತ್ತಿದೆ. ಅದೇ ರೀತಿ ಕ್ರಿಕೆಟ್ ಮ್ಯಾಚ್ ಆಡುತ್ತಿದ್ದ ವ್ಯಕ್ತಿಯೊಬ್ಬ ಹಠಾತ್ ಹೃದಯಾಘಾತವಾಗಿ ಕುಸಿದುಬಿದ್ದು, ಮೃತಪಟ್ಟ ಘಟನೆ ನೋಯ್ಡಾದ ಥಾನಾ ಎಕ್ಸ್ ಪ್ರೆಸ್ ವೇ ಪ್ರದೇಶದ ಸೆಕ್ಟರ್ -135 ರಲ್ಲಿ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿ ಕ್ರಿಕೆಟ್ ಆಡುತ್ತಿದ್ದ ವೇಳೆ ರನ್‌ ತೆಗೆಯಲೆಂದು ಓಡುತ್ತಿದ್ದ ವೇಳೆ ಹಠಾತ್ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಆಟಗಾರರು ತಕ್ಷಣವೇ

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಮಂಗಳೂರು: ಕರ್ತವ್ಯ ನಿರತ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 04. ಕರ್ತವ್ಯದಲ್ಲಿದ್ದಾಗಲೇ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹೆಡ್ ಕಾನ್ಸ್​ಟೇಬಲ್ ಓರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ವಿಜಯಪುರದ ಸೋಮನಗೌಡ ಚೌಧರಿ (32) ಎಂದು ಗುರುತಿಸಲಾಗದೆ. 2016ರ ಬ್ಯಾಚ್‌ನ ಸೋಮನಗೌಡ ಚೌಧರಿ ಅವರು, ಮಂಗಳೂರು ಸಿಎಆ‌ರ್ ಕಾನ್ಸ್​ಟೇಬಲ್ ಆಗಿ ವೃತ್ತಿಗೆ ಸೇರ್ಪಡೆಗೊಂಡಿದ್ದರು. ಬಳಿಕ ಹೆಡ್‌ ಕಾನ್ಸ್​ಟೇಬಲ್ ಆಗಿ ಬಡ್ತಿ ಪಡೆದು, ಸದ್ಯ ನಗರದ ಕಮಿಷನರೇಟ್ ವ್ಯಾಪ್ತಿಯ ಕಂಟ್ರೋಲ್ ರೂಂ ಇನ್ಸ್​ಪೆಕ್ಟರ್‌ ನ ವಾಹನ ಚಾಲಕನಾಗಿ ಕರ್ತವ್ಯದಲ್ಲಿದ್ದರು. ಮಂಗಳವಾರದಂದು

ಮಂಗಳೂರು: ಕರ್ತವ್ಯ ನಿರತ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ನಿಧನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಹೃದಯಾಘಾತ- ಎಎಸ್ಐ ವಿಧಿವಶ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 24. ಹೃದಯಘಾತದಿಂದ ಪೊಲೀಸ್‌ ಅಧಿಕಾರಿಯೋರ್ವರು ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮೃತ ಅಧಿಕಾರಿಯನ್ನು ಕಳಸ ಠಾಣೆಯ ಎಎಸ್‌ಐ ಜಿ.ಕೆ ಮುರಳೀಧರ್ ಎಂದು ಗುರುತಿಸಲಾಗಿದೆ. ಜಿ.ಕೆ ಮುರಳೀಧರ್ ಅವರು ಕರ್ತವ್ಯ ಮುಗಿಸಿ ಮನೆಯಲ್ಲಿದ್ದು, ಬೆಳಗ್ಗಿನ ಜಾವ ಎದೆನೋವು ಕಾಣಿಸಿಕೊಂಡಿದೆ. ಕುಟುಂಬಸ್ಥರು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕಳಸದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಜಿ.ಕೆ ಮುರಳೀಧರ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಹೃದಯಾಘಾತ- ಎಎಸ್ಐ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರ್ತವ್ಯದ ವೇಳೆ ಹೃದಯಾಘಾತ – ಮಂಗಳೂರು ಗುಪ್ತಚರ ಇಲಾಖಾ ಸಿಬ್ಬಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 16. ಕರ್ತವ್ಯದಲ್ಲಿರುವಾಗಲೇ ಗುಪ್ತಚರ ಇಲಾಖಾ ಸಿಬ್ಬಂದಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಉರ್ವ ಗುಪ್ತಚರ ಇಲಾಖಾ ಕಚೇರಿಯಲ್ಲಿ ಶನಿವಾರದಂದು ನಡೆದಿದೆ. ಮೃತರನ್ನು ಉರ್ವ ಮಾರಿಗುಡಿ ನಿವಾಸಿ ರಾಜೇಶ್ ಬಿ.ಯು(45) ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನದ ವೇಳೆ ಗುಪ್ತಚರ ಇಲಾಖಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜೇಶ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ರೆಸ್ಟ್ ರೂಮಿಗೆ ತೆರಳಿ ವಿಶ್ರಾಂತಿ ಪಡೆಯುತ್ತಿದ್ದಂತೆ ಕುಸಿದುಬಿದ್ದಿದ್ದಾರೆ ಎನ್ನಲಾಗಿದೆ. 1993 ನೇ ಬ್ಯಾಚ್ ನವರಾಗಿರುವ ರಾಜೇಶ್, ಸುರತ್ಕಲ್ ಹಾಗೂ ಪಣಂಬೂರು

ಕರ್ತವ್ಯದ ವೇಳೆ ಹೃದಯಾಘಾತ – ಮಂಗಳೂರು ಗುಪ್ತಚರ ಇಲಾಖಾ ಸಿಬ್ಬಂದಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯಾಘಾತ- ಯುವನಟ ವಿಧಿವಶ

(ನ್ಯೂಸ್ ಕಡಬ) newskadaba.com ಮಂಡ್ಯ, ಆ. 18. ಹೃದಯಾಘಾತದಿಂದಾಗಿ 24 ವರ್ಷ ಯುವ ನಟನೋರ್ವ ನಿಧನರಾದ ಘಟನೆ ಮಂಡ್ಯದಿಂದ ವರದಿಯಾಗಿದೆ. ಮೃತ ನಟನನ್ನು ಪವನ್ ಎಂದು ಗುರುತಿಸಲಾಗಿದೆ. ಮೂಲತಃ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹರಿಹರಪುರ ಗ್ರಾಮದವರಾದ ಇವರು, ಪ್ರಸ್ತುತ ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ನೆಲೆಸಿದ್ದರು.

ಹೃದಯಾಘಾತ- ಯುವನಟ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೃದಯಾಘಾತ- ನೇಪಾಳ ಪ್ರಧಾನಿಗೆ ಪತ್ನಿವಿಯೋಗ

(ನ್ಯೂಸ್ ಕಡಬ) newskadaba.com ನೇಪಾಳ, ಜು. 12. ನೇಪಾಳದ ಪ್ರಧಾನಿ ಪುಷ್ಪ ಕಮಲ್‌ ದಹಾಲ್‌ ಅವರ ಪತ್ನಿ ಸೀತಾ ದಹಾಲ್‌ (69) ಹೃದಯಾಘಾತದಿಂದ ನಿಧನರಾಗಿದ್ದಾರೆ. ವರದಿಗಳ ಪ್ರಕಾರ, ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸೀತಾ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಕಠ್ಮಂಡುವಿನಲ್ಲಿ ನಾರ್ವಿಕ್ ಇಂಟರ್ನ್ಯಾಷನಲ್ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೃದಯಾಘಾತ- ನೇಪಾಳ ಪ್ರಧಾನಿಗೆ ಪತ್ನಿವಿಯೋಗ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top