Heartattack

ಹೃದಯಾಘಾತದಿಂದ ಸರ್ಕಾರಿ ವೈದ್ಯ, ಗ್ರಾ.ಪಂ ಅಧ್ಯಕ್ಷ ಸಾವು !

(ನ್ಯೂಸ್‌ ಕಡಬ) newskadaba.com ಜು.01: ಕಳೆದ ಒಂದೇ ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ 19 ಮಂದಿ ಹೃದಯಾಘಾತದಿಂದ ಸಾವನ್ನಪ್ಪಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಈಗ ಶಿವಮೊಗ್ಗದಲ್ಲಿ ಸರ್ಕಾರಿ ವೈದ್ಯ ಹಾಗೂ ತುಮಕೂರಿನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗದ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಿರಿಯ ವೈದ್ಯಾಧಿಕಾರಿಯಾಗಿದ್ದ ಡಾ.ಸಂದೀಪ್ ಅವರು ಸೋಮವಾರ ಹೃದಯಾಘಾತದಿಂದ ಸಾವನ್ನಪ್ಪಿದರು. ಶುಕ್ರವಾರ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳಿದ ನಂತರ ಇವರಿಗೆ ರಾತ್ರಿ ಎದೆನೋವು ಕಾಣಿಸಿಕೊಂಡಿದೆ. […]

ಹೃದಯಾಘಾತದಿಂದ ಸರ್ಕಾರಿ ವೈದ್ಯ, ಗ್ರಾ.ಪಂ ಅಧ್ಯಕ್ಷ ಸಾವು ! Read More »

ಕರ್ನಾಟಕ

‘ಪಂಕಜಾ..’ ಹಾಡಿಗೆ ಕುಣಿದಿದ್ದ ಶೆಫಾಲಿ ಜರಿವಾಲ ಹೃದಯಘಾತದಿಂದ ಸಾವು

(ನ್ಯೂಸ್‌ ಕಡಬ) newskadaba.com ಜೂ.28: ಪುನೀತ್ ರಾಜ್​ಕುಮಾರ್ ಜೊತೆ ‘ನಾ ಬೋರ್ಡು ಇರದ ಬಸ್ಸನು..’ ಹಾಡಿಗೆ ಮಸ್ತ್ ಆಗಿ ಕುಣಿದಿದ್ದ ನಟಿ ಶೆಫಾಲಿ ಜರಿವಾಲಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 42 ವರ್ಷ ವಯಸ್ಸಾಗಿತ್ತು. ಮುಂಬೈನ ಅಂಧೇರಿ ಲೋಖಂಡ್‌ವಾಲಾ ಪ್ರದೇಶದಲ್ಲಿ ವಾಸಿಸುತ್ತಿದ್ದ ನಟಿ ಶೆಫಾಲಿ ಜೂನ್ 27ರ ಬೆಳಿಗ್ಗೆ 11 ಗಂಟೆ ಸುಮಾರಿಗೆ ತೀವ್ರ ಅಸ್ವಸ್ಥರಾದರು. ಅವರಿಗೆ ಎದೆನೋವು ಕಾಣಿಸಿಕೊಂಡಿತು. ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ. ಆಗಲೇ ಅವರು ನಿಧನ

‘ಪಂಕಜಾ..’ ಹಾಡಿಗೆ ಕುಣಿದಿದ್ದ ಶೆಫಾಲಿ ಜರಿವಾಲ ಹೃದಯಘಾತದಿಂದ ಸಾವು Read More »

ಸಿನಿಮಾ
Death, deadbody, Waterfall

ಹೃದಯಾಘಾತ- ಎಎಸ್ಐ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಣಿಗಲ್, ಆ. 21. ಅನಾರೋಗ್ಯದಿಂದ ಬಳಲುತ್ತಿದ್ದ ಎಎಸ್ಐ ಶಿವಕುಮಾರ್ ಅವರು ಹೃದಯಾಘಾತದಿಂದಾಗಿ ಮೃತಪಟ್ಟ ಕುರಿತು ಬುಧವಾರದಂದು ವರದಿಯಾಗಿದೆ.   ಕುಣಿಗಲ್ ತಾಲೂಕಿನ ಕೊತ್ತಗೆರೆ ಗ್ರಾಮದ ಎಎಸ್ಐ ಶಿವಕುಮಾರ್ ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ 4-5 ದಿನಗಳಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಹೃದಯಾಘಾತ- ಎಎಸ್ಐ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ವೇಳೆ ಹೃದಯಾಘಾತ; ಕಾಂಗ್ರೆಸ್ ಕಾರ್ಯಕರ್ತ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19.  ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ನಡೆಸುವಂತೆ ಹೇಳಿರುವ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಸುದ್ದಿಗೋಷ್ಠಿ ನಡೆಸುತ್ತಿರುವ ವೇಳೆಯಲ್ಲಿ ಹೃದಯಾಘಾತವುಂಟಾಗಿ ಕಾಂಗ್ರೆಸ್ ಕಾರ್ಯಕರ್ತರೋರ್ವರು ಮೃತಪಟ್ಟ ಘಟನೆ ನಡೆದಿದೆ.   ಮೃತರನ್ನು ಪಿ.ಕೆ.ರವಿಚಂದ್ರನ್ ಎಂದು ಗುರುತಿಸಲಾಗಿದೆ. ಸೋಮವಾರದಂದು ನಗರದ ಪ್ರೆಸ್‌ಕ್ಲಬ್‌ನಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಮತ್ತು ದಲಿತ ಅಲ್ಪಸಂಖ್ಯಾತರ ಸಂಘ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವೇಳೆ ರವಿಚಂದ್ರನ್ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ

ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ವೇಳೆ ಹೃದಯಾಘಾತ; ಕಾಂಗ್ರೆಸ್ ಕಾರ್ಯಕರ್ತ ಮೃತ್ಯು Read More »

ಕರ್ನಾಟಕ

ಮಂಗಳೂರು: ಹೃದಯಾಘಾತ- ಯೋಧ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 01. ರಜೆಯಲ್ಲಿ ಊರಿಗೆ ಬಂದಿದ್ದ ಬಿಎಸ್‌ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ಕುಲಶೇಖರ ಉಮಿಕಾನ ನಿವಾಸಿ, ಬಿಎಸ್‌ಎಫ್ ಯೋಧ ಹರೀಶ್ ಕುಮಾರ್ (43) ಎಂದು ಗುರುತಿಸಲಾಗಿದೆ. ಕಳೆದ 21 ವರ್ಷಗಳಿಂದ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು, ರಜೆಯ ಮೇಲೆ ಊರಿಗೆ ಬಂದಿದ್ದರು. ಶನಿವಾರದಂದು ಇವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಜ.1ರಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳೂರು: ಹೃದಯಾಘಾತ- ಯೋಧ ನಿಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹೈಕೋರ್ಟ್ ವಕೀಲ ಅಬ್ದುಲ್ ಫಾರೂಕ್ ಹೃದಯಾಘಾತದಿಂದ ಮೃತ್ಯು                    

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 16. ಹೈಕೋರ್ಟ್ ವಕೀಲ ಹಾಗೂ ಮೂಲತಃ ಮೂಡಬಿದಿರೆ ನಿವಾಸಿ ಅಬ್ದುಲ್ ಫಾರೂಕ್(49) ಹೃದಯಾಘಾತದಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಾಧೀಶ ಅಬ್ದುಲ್ ನಝೀರ್ ಅವರ ಕಿರಿಯ ಸಹೋದರ ಆಗಿರುವ ಅಬ್ದುಲ್ ಫಾರೂಕ್ ಅವರ ಮೃತದೇಹ ಬೆಳುವಾಯಿಗೆ ತರಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಸ್ವಲ್ಪ ಸಮಯ ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿದ್ದ ಅವರು ಈಗ ಹೈಕೋರ್ಟ್ ವಕೀಲರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು ಎನ್ನಲಾಗಿದೆ.  

ಹೈಕೋರ್ಟ್ ವಕೀಲ ಅಬ್ದುಲ್ ಫಾರೂಕ್ ಹೃದಯಾಘಾತದಿಂದ ಮೃತ್ಯು                     Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top