heavy rain

ಪೆರ್ನೆಮ್ ಸುರಂಗದ ಗೋಡೆ ಕುಸಿತ➤ಕೊಂಕನ್ ರೈಲ್ವೆ ಸಂಚಾರ ಸ್ಥಗಿತ

(ನ್ಯೂಸ್ ಕಡಬ) newskadaba.com ಮಂಗಳೂರು: ಆ.07., ಭಾರಿ ಮಳೆಯಿಂದಾಗಿ ಗೋವಾದ ಪೆರ್ನೆಮ್‌ನಲ್ಲಿ ಸುರಂಗ ಗೋಡೆಯ ಒಂದು ಭಾಗ ಕುಸಿದ ಪರಿಣಾಮ ಈ ಮಾರ್ಗದಲ್ಲಿ ಸಂಚರಿಸುವ ಕೊಂಕಣ್ ರೈಲ್ವೆ ಎಲ್ಲಾ ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಉತ್ತರ ಗೋವಾ ಜಿಲ್ಲೆಯ ಪೆರ್ನೆಮ್‌ನಲ್ಲಿ ಸುರಂಗದೊಳಗಿನ ಗೋಡೆಯ ಐದು ಮೀಟರ್ ಭಾಗ ಗುರುವಾರ ಮುಂಜಾನೆ 2.50 ರ ಸುಮಾರಿಗೆ ಕುಸಿದಿದೆ.  ಇದೀಗ ರೈಲ್ವೆ ಹಳಿ ಮೇಲೆ ಸುರಿದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ. ಕುಸಿದ ಗೋಡೆಯ ದುರಸ್ಥಿ ಪ್ರಗತಿಯಲ್ಲಿದೆ. ಮುಂದಿನ ಸೂಚನೆ ತನಕ […]

ಪೆರ್ನೆಮ್ ಸುರಂಗದ ಗೋಡೆ ಕುಸಿತ➤ಕೊಂಕನ್ ರೈಲ್ವೆ ಸಂಚಾರ ಸ್ಥಗಿತ Read More »

ರಾಷ್ಟ್ರೀಯ ನ್ಯೂಸ್

ವರುಣನ ಅಬ್ಬರಕ್ಕೆ ತತ್ತರಿಸಿದ ಬೆಂಗಳೂರು ► ಜನಜೀವನ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.27. ಸಿಲಿಕಾನ್‌ ಸಿಟಿ ಬೆಂಗಳೂರು ನಗರದಲ್ಲಿ ಮತ್ತೆ ಮಳೆ ಆರ್ಭಟಿಸಿದ್ದು, ಇಡೀ ರಾತ್ರಿ ಧಾರಾಕಾರ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿದೆ. ನಾಯಂಡನಹಳ್ಳಿ, ಚಂದ್ರಾಲೇಔಟ್‌‌, ಶಿವಾಜಿ ನಗರ, ಜಯನಗರ, ಜೆ ಪಿ ನಗರ, ಸೇರಿದಂತೆ ವಿವಿಧೆಡೆ  ಮಳೆ ನೀರು ಮನೆಗಳಿಗೆ ನುಗ್ಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಲವೆಡೆ ಅಪಾರ್ಟ್‌ಮೆಂಟ್‌ಗಳು  ಜಲಾವೃತಗೊಂಡಿವೆ. ರಸ್ತೆ ಮೇಲೆ ನೀರು ಹರಿಯುವುದರಿಂದಾಗಿ ವಾಹನ ಸಂಚಾರ ಬಂದ್ ಆಗಿದೆ. ಬಯ್ಯಪ್ಪನಹಳ್ಳಿಯ ಮೆಟ್ರೋ ನಿಲ್ದಾಣಕ್ಕೂ ನೀರು ನುಗ್ಗಿದ್ದು, ಪ್ಯಾಸೇಜ್‍ನಲ್ಲೆಲ್ಲಾ ನೀರು ನಿಂತಿದೆ. ಜನರು ಮೆಟ್ರೋ

ವರುಣನ ಅಬ್ಬರಕ್ಕೆ ತತ್ತರಿಸಿದ ಬೆಂಗಳೂರು ► ಜನಜೀವನ ಅಸ್ತವ್ಯಸ್ತ Read More »

ಕರ್ನಾಟಕ

ಮಂಗಳೂರು: ಧಾರಾಕಾರ ಮಳೆಯಿಂದಾಗಿ ತತ್ತರಿಸಿದ ಕರಾವಳಿ ► ರಸ್ತೆಯಲ್ಲಿ ಸಂಚರಿಸಲಾಗದೆ ಪರದಾಡುತ್ತಿರುವ ವಾಹನ ಸವಾರರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.16. ವಿಪರೀತ ಮಳೆಯಿಂದಾಗಿ ರಾಜ್ಯ ರಾಜಧಾನಿಯು ತತ್ತರಗೊಂಡು ಇದೀಗ ಸಹಜ ಸ್ಥಿತಿಗೆ ಮರಳುತ್ತಿರುವುದರ ಮಧ್ಯೆ ಧಾರಾಕಾರ ಮಳೆಯಿಂದಾಗಿ ಕರಾವಳಿಯ ತಗ್ಗುಪ್ರದೇಶಗಳು ಜಲಾವೃತಗೊಂಡಿದ್ದು, ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಶುಕ್ರವಾರ ರಾತ್ರಿಯಿಂದ ನಿರಂತರವಾಗಿ ದಕ್ಷಿಣ ಕನ್ನಡ ಜಿಯೋ ಪುತ್ತೂರು, ಬೆಳ್ತಂಗಡಿ, ಸುಳ್ಯ ಪರಿಸರದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಬಹುತೇಕ ರಸ್ತೆಗಳು ಜಲಾವೃತಗೊಂಡಿದೆ. ವಾಹನ ಸವಾರರು ಪರದಾಡುವಂತಾಗಿದೆ. ಕೆಲವು ಅಂಗಡಿಯೊಳಗಡೆ ನೀರು ನುಗ್ಗಿರುವುದಾಗಿ ವರದಿಯಾಗಿದೆ.

ಮಂಗಳೂರು: ಧಾರಾಕಾರ ಮಳೆಯಿಂದಾಗಿ ತತ್ತರಿಸಿದ ಕರಾವಳಿ ► ರಸ್ತೆಯಲ್ಲಿ ಸಂಚರಿಸಲಾಗದೆ ಪರದಾಡುತ್ತಿರುವ ವಾಹನ ಸವಾರರು Read More »

ಕರಾವಳಿ

ಕರ್ನಾಟಕ ಸೇರಿ 12 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ ► ಪ್ರವಾಹದಿಂದ ತತ್ತರಿಸಿರುವ ಉತ್ತರ ಭಾರತದ ಜನತೆಗೆ ಮತ್ತೊಂದು ಆಘಾತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.30. ಭೀಕರ ಮಳೆಯಿಂದಾಗಿ ತತ್ತರಿಸಿರುವ ಮುಂಬೈ ಜನತೆ ನೆರೆಯ ಆಘಾತದಿಂದ ಹೊರಬರುವ ಮುನ್ನವೇ ಮತ್ತೊಂದು ಆಘಾತಕ್ಕೆ ಸಿದ್ಧವಾಗಬೇಕಾಗಿದೆ. ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ದೇಶದ 12 ರಾಜ್ಯಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈಗಾಗಲೆ ಆಸ್ಸಾಂ, ಬಿಹಾರ ರಾಜ್ಯಗಳು ಪ್ರವಾಹಕ್ಕೀಡಾಗಿದ್ದು, ಮಂಗಳವಾರದ ಮಳೆಗೆ ಮಹಾರಾಷ್ಟ್ರದಲ್ಲೂ ನೆರೆ ನೀರಿನಿಂದ ಜನತೆ ತತ್ತರಿಸಿದ್ದಾರೆ. ಪರಿಸ್ಥಿತಿ ಹೀಗಿದ್ದು 12 ರಾಜ್ಯಗಳಲ್ಲಿ ಮುಂದಿನ ಮೂರು ದಿನಗಳಲ್ಲಿ ವಿಪರೀತ ಮಳೆಯಾಗಲಿದ್ದು, 14 ನದಿಗಳು

ಕರ್ನಾಟಕ ಸೇರಿ 12 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ ► ಪ್ರವಾಹದಿಂದ ತತ್ತರಿಸಿರುವ ಉತ್ತರ ಭಾರತದ ಜನತೆಗೆ ಮತ್ತೊಂದು ಆಘಾತ Read More »

ರಾಷ್ಟ್ರೀಯ ನ್ಯೂಸ್

ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆ: ಹವಾಮಾನ ಇಲಾಖೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.15. ಈ ಬಾರಿ ಉತ್ತಮ ಮಳೆಯ ನಿರೀಕ್ಷೆ ಹುಟ್ಟಿಸಿದ್ದ ಮುಂಗಾರು ಮಳೆಯು ಮೊದಲ ತಿಂಗಳು ಕೊಂಚ ನಿರಾಸೆ ಉಂಟು ಮಾಡಿತ್ತಾದರೂ ಜುಲೈ 17 ರ ನಂತರ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಒಡಿಸ್ಸಾ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿರುವುದರಿಂದ ಉತ್ತಮ ಮಳೆಯನ್ನು ನಿರೀಕ್ಷಿಸಲಾಗಿದ್ದು, ಜುಲೈ 17 ರಿಂದ ನಾಲ್ಕು ದಿನಗಳ ಕಾಲ ಉತ್ತಮ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಕರಾವಳಿ

ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆ: ಹವಾಮಾನ ಇಲಾಖೆ Read More »

ಕರ್ನಾಟಕ
Scroll to Top