hebri

ಹೆಬ್ರಿ: ಕತ್ತಿಯಿಂದ ಕಡಿದು ಗಂಡನನ್ನು ಕೊಲೆ ಮಾಡಿದ ಹೆಂಡತಿ

(ನ್ಯೂಸ್ ಕಡಬ) newskadaba.com ಮೇ.01 ಉಡುಪಿ: ಮದ್ಯಪಾನ ಮಾಡಿಕೊಂಡು ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಪತಿಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಹೆಬ್ರಿ ನಿವಾಸಿ ಗಣಪತಿ ಎಂದು ಗುರುತಿಸಲಾಗಿದೆ. ಆರೋಪಿ ಪತ್ನಿ ಜಯಂತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಗಣಪತಿಗೆ ಮದ್ಯಪಾನ ಮಾಡುವ ಅಭ್ಯಾಸವಿದ್ದು ಪ್ರತಿದಿನ ಕುಡಿದು ಬಂದು ಪತ್ನಿಯೊಂದಿಗೆ ಜಗಳವಾಡುತ್ತಿದ್ದು, ಬುಧವಾರ ಮಧ್ಯಾಹ್ನ ಕೂಡ ಗಣಪತಿ ಅತನ ಹೆಂಡತಿ ಜಯಂತಿಯೊಂದಿಗೆ ಕುಡಿಯಲು ಹಣ ಕೇಳಿದ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದು […]

ಹೆಬ್ರಿ: ಕತ್ತಿಯಿಂದ ಕಡಿದು ಗಂಡನನ್ನು ಕೊಲೆ ಮಾಡಿದ ಹೆಂಡತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು..!   ➤  ಅದೃಷ್ಟವಶಾತ್ ಅಪಾಯದಿಂದ ಪಾರು    

(ನ್ಯೂಸ್ ಕಡಬ)newskadaba.com  ಹೆಬ್ರಿ, ಜ.11. ಮಣಿಪಾಲದಿಂದ ಹರಿಹರ ಕಡೆಗೆ ಹೋಗುತ್ತಿದ್ದ ಓಮ್ನಿ ಹೆಬ್ರಿಯ ಎಸ್‌ಆರ್ ಶಾಲೆಯ ಬಳಿಯ ಹೊಂಡಕ್ಕೆ ಬಿದ್ದಿರುವ ಘಟನೆ ವರದಿಯಾಗಿದೆ. ರಸ್ತೆಗೆ ಬಂದ ಹಸುವನ್ನು ತಪ್ಪಿಸಲು ಯತ್ನಿಸಿದ ಓಮ್ನಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ. ಇನ್ನು ಮಣಿಪಾಲದ ಆಸ್ಪತ್ರೆಗೆ ಭೇಟಿ ನೀಡಿ ಹರಿಹರಕ್ಕೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.      

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು..!   ➤  ಅದೃಷ್ಟವಶಾತ್ ಅಪಾಯದಿಂದ ಪಾರು     Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹುಲಿ ಚರ್ಮ ಹಾಗೂ ಉಗುರು ಸಾಗಿಸುತ್ತಿದ್ದ ಐವರ ಬಂಧನ

(ನ್ಯೂಸ್ ಕಡಬ) newskadaba.com ಹೆಬ್ರಿ, ಎ. 07. ಹುಲಿಯ ಚರ್ಮ ಹಾಗೂ ಉಗುರು ಸಾಗಿಸುತ್ತಿದ್ದ ಐವರು ಆರೋಪಿಗಳನ್ನು ಸೋಮೇಶ್ವರ ಚೆಕ್ ಪೋಸ್ಟ್‌ ಬಳಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಹುಬ್ಬಳ್ಳಿಯಿಂದ ಮಂಗಳೂರಿನ ಕಡೆ ಬೈಕ್‍ ಗಳಲ್ಲಿ ಹುಲಿಯ ಎರಡು ಚರ್ಮ ಮತ್ತು ಉಗುರುಗಳನ್ನು ಸಾಗಿಸುತ್ತಿದ್ದ ವೇಳೆ ಚೆಕ್‍ಪೋಸ್ಟ್‌ನಲ್ಲಿ ತಪಾಸಣೆ ನಡೆಸುತ್ತಿದ್ದ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ ಹುಲಿಯ ಉಗುರು, ಚರ್ಮ ಅಲ್ಲದೇ ಬೈಕ್ ಮತ್ತು ಮೊಬೈಲ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಚರ್ಮ ಮತ್ತು ಉಗುರುಗಳನ್ನು ಪರೀಕ್ಷೆಗಾಗಿ ಫೋರೆನ್ಸಿಕ್ ಪ್ರಯೋಗಾಯಲಕ್ಕೆ ಕಳುಹಿಸಲಾಗಿದೆ. ಆರೋಪಿಗಳ ವಿಚಾರಣೆ

ಹುಲಿ ಚರ್ಮ ಹಾಗೂ ಉಗುರು ಸಾಗಿಸುತ್ತಿದ್ದ ಐವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top