Highway

ಹೆದ್ದಾರಿ ಭೂಸ್ವಾಧೀನ – ಜುಲೈ 30 ರಂದು ಪರಿಹಾರ ಪಾವತಿ

(ನ್ಯೂಸ್ ಕಡಬ) newskadaba.com, ಜು. 29. ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಸಾಣೂರು – ಬಿಕರ್ನಕಟ್ಟೆ ವಿಭಾಗದ ರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನಿನ ಮಾಲೀಕರಿಗೆ ಪರಿಹಾರ ಪಾವತಿ ಹಾಗೂ ಕ್ಲೈಮ್‍ಗಳನ್ನು ಪಡೆಯುವ ಅದಾಲತ್ ಕಾರ್ಯಕ್ರಮ ಜುಲೈ 30 ರಂದು ಬೆಳಿಗ್ಗೆ 10.30 ಗಂಟೆಗೆ ಗುರುಪುರ ಗ್ರಾಮ ಪಂಚಾಯತ್  ಸಭಾಭವನದಲ್ಲಿ ನಡೆಯಲಿದೆ. ತೆಂಕ ಎಡಪದವು, ಬಡಗ ಎಡಪದವು, ಬಡಗ ಉಳಿಪಾಡಿ, ತೆಂಕ ಉಳಿಪಾಡಿ, ಮೂಡುಪೆರಾರ, ಮೂಳೂರು, ಅಡ್ಡೂರು, ತಿರುವೈಲು, ಕುಡುಪು ಗ್ರಾಮಗಳ ಜಮೀನಿನ ಮಾಲೀಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ […]

ಹೆದ್ದಾರಿ ಭೂಸ್ವಾಧೀನ – ಜುಲೈ 30 ರಂದು ಪರಿಹಾರ ಪಾವತಿ Read More »

ಕರಾವಳಿ, ಕರ್ನಾಟಕ

ಚಿನ್ನ, ಬೆಳ್ಳಿ ದರದಲ್ಲಿ ಐತಿಹಾಸಿಕ ಏರಿಕೆ ➤ ಗಗನಕ್ಕೇರಿದ ಆಭರಣಗಳ ದರ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.28:  ಬೆಳ್ಳಿ ಬೆಲೆಯಲ್ಲಿ ಸತತ ಏರಿಕೆ ಕಾಣುತ್ತಲೇ ಇದೆ. ಕೆಜಿ ಬೆಳ್ಳಿಗೆ ಒಂದೇ ದಿನ 3490 ರೂಪಾಯಿ ಏರಿಕೆ ಕಂಡಿದ್ದು, ಬೆಳ್ಳಿ ದರ 64,700 ರೂಪಾಯಿ ಆಗಿದೆ. ಚಿನ್ನ ಖರೀದಿ ಮಾಡಬೇಕು ಎಂದು ಪ್ಲಾನ್​ ಹಾಕಿಕೊಂಡವರು ಕಂಗಾಲಾಗಿದ್ದಾರೆ.ಚಿನ್ನದ ದರ ದಿನದಿಂದ ದಿನಕ್ಕೆ ಹೆಚ್ಚುತ್ತಲೆ ಇದೆ. ಹೀಗಾಗಿ, ಬೇರೆ ದಾರಿ ಕಾಣದೆ, ಚಿನ್ನದ ಖರೀದಿಗೆ ಜನರು ಮುಂದಾಗುತ್ತಿಲ್ಲ.       ಲಾಕ್​ಡೌನ್​ ಪೂರ್ಣಗೊಳ್ಳುತ್ತಿದ್ದಂತೆ ಚಿನ್ನದ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರೀ

ಚಿನ್ನ, ಬೆಳ್ಳಿ ದರದಲ್ಲಿ ಐತಿಹಾಸಿಕ ಏರಿಕೆ ➤ ಗಗನಕ್ಕೇರಿದ ಆಭರಣಗಳ ದರ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.06. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 40 ದಿನದ ಪುಟ್ಟ ಕಂದಮ್ಮನನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಐಸಿಯು ಆಂಬ್ಯುಲೆನ್ಸ್ ನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ರವಾನಿಸಲಾಯಿತು. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಮಗುವನ್ನು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬ್ಯುಲೆನ್ಸಿನಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ ನಲ್ಲಿ ರಸ್ತೆ ಮಾರ್ಗವಾಗಿ ಕರೆದೊಯ್ಯಲಾಯಿತು. ಮಂಗಳೂರಿನಿಂದ ಹೊರಟ ಆಂಬ್ಯುಲೆನ್ಸ್ ಬಿಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ, ಹಾಸನ,

ಝೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ತಲುಪಿದ ಹೃದ್ರೋಗಿ ಪುಟ್ಟ ಮಗು ➤ ನಿಗದಿತ ಸಮಯದಲ್ಲಿ ಆಸ್ಪತ್ರೆಗೆ ತಲುಪಿಸಿದ ಅಂಬ್ಯಲೆನ್ಸ್ ಚಾಲಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಡ್ಯಾರ್: ಭೀಕರ ಸರಣಿ ಅಪಘಾತ ► ಓರ್ವ ಮೃತ್ಯು, ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.27. ಎರಡು ಕಾರುಗಳು, ಬೈಕ್ ಹಾಗೂ ಆಟೋ ರಿಕ್ಷಾ ನಡುವೆ ನಡೆದ ಸರಣಿ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ನಗರದ ಹೊರವಲಯದ ಅಡ್ಯಾರಿನಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ. ಮೃತ ಯುವಕನನ್ನು ಇಲೆಕ್ಟ್ರೀಷಿಯನ್ ವೃತ್ತಿಯಲ್ಲಿದ್ದ ಫಾರೂಕ್(26) ಎಂದು ಗುರುತಿಸಲಾಗಿದೆ. ಬಿ.ಸಿ.ರೋಡ್ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ವಾಹನಗಳು ಏಕಮುಖ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ಕಣ್ಣೂರು ಮಸೀದಿ ಬಳಿ ತಲುಪಿದಾಗ ಹನೀಫ್ ಎಂಬವರು ಚಲಾಯಿಸುತ್ತಿದ್ದ ಕಾರು ಉಳಿದ ವಾಹನಗಳಿಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ.

ಅಡ್ಯಾರ್: ಭೀಕರ ಸರಣಿ ಅಪಘಾತ ► ಓರ್ವ ಮೃತ್ಯು, ಮೂವರಿಗೆ ಗಾಯ Read More »

ಕರಾವಳಿ

ಬುಡೋಳಿ: ಆ್ಯಕ್ಟಿವಾ – ಲಾರಿ ಢಿಕ್ಕಿ ► ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ.07. ಮರಳು ಸಾಗಾಟದ ಲಾರಿ ಹಾಗೂ ಹೋಂಡಾ ಆ್ಯಕ್ಟಿವಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಗುರುವಾರದಂದು ನಡೆದಿದೆ. ಉಪ್ಪಿನಂಗಡಿ ಕಡೆಗೆ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಮತ್ತು ಮಂಗಳೂರು ಕಡೆಗೆ ತೆರಳುತ್ತಿದ್ದ ಆ್ಯಕ್ಟಿವಾ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಆ್ಯಕ್ಟಿವಾ ಸವಾರ ಬೆಳ್ತಂಗಡಿ ನಿವಾಸಿ ಗಂಭೀರ ಗಾಯಗೊಂಡಿದ್ದು, ಗಾಯಾಳುವನ್ನು ಮಾಣಿಯ 108 ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ಆಸ್ಪತ್ರೆಗೆ

ಬುಡೋಳಿ: ಆ್ಯಕ್ಟಿವಾ – ಲಾರಿ ಢಿಕ್ಕಿ ► ಸವಾರ ಗಂಭೀರ Read More »

ಕರಾವಳಿ

ಬುಡೋಳಿ: ಬೈಕ್-ಜುಪಿಟರ್ ಢಿಕ್ಕಿ ► ಸವಾರರಿಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ.01. ಬೈಕ್ ಮತ್ತು ಟಿವಿಎಸ್ ಜುಪಿಟರ್ ಮಧ್ಯೆ ಢಿಕ್ಕಿ ಸಂಭವಿಸಿ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪ ಶುಕ್ರವಾರ ರಾತ್ರಿ ನಡೆದಿದೆ. ಗಾಯಗೊಂಡ ಬೈಕ್ ಸವಾರನನ್ನು ಉಪ್ಪಿನಂಗಡಿ ನಿವಾಸಿ ಮುಸ್ತಫಾ ಮತ್ತು ಜುಪಿಟರ್ ಸವಾರ ಗಡಿಯಾರ ನಿವಾಸಿ ಝುಬೈರ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬುಡೋಳಿ: ಬೈಕ್-ಜುಪಿಟರ್ ಢಿಕ್ಕಿ ► ಸವಾರರಿಬ್ಬರು ಗಂಭೀರ Read More »

ಕರಾವಳಿ

ಮಂಗಳೂರು: ಪೊಲೀಸ್ ಬಸ್ – ಲಾರಿ‌ ಢಿಕ್ಕಿ ► ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.01. ಪೊಲೀಸ್ ಬಸ್ ಹಾಗೂ ಮೀನು ಸಾಗಾಟ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರದಂದು ನಗರದ ಪಂಪುವೆಲ್ ಬಳಿ ನಡೆದಿದೆ. ತೊಕ್ಕೊಟ್ಟಿನಿಂದ ಮಂಗಳೂರು ಕಡೆ ಬರುತ್ತಿದ್ದ ಪೊಲೀಸ್ ಬಸ್ ಹಾಗೂ ಮಂಗಳೂರಿನಿಂದ ಕೇರಳ ಕಡೆ ತೆರಳುತ್ತಿದ್ದ ಮೀನಿನ ಲಾರಿಗಳು ಮುಖಾಮುಖಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಲಾರಿ ಹಾಗೂ ಪೊಲೀಸ್ ಬಸ್ ಚಾಲಕ ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ

ಮಂಗಳೂರು: ಪೊಲೀಸ್ ಬಸ್ – ಲಾರಿ‌ ಢಿಕ್ಕಿ ► ನಾಲ್ವರು ಗಂಭೀರ Read More »

ಕರಾವಳಿ

ಕಲ್ಲಡ್ಕ: ಮೂರು ಕಾರುಗಳ ನಡುವೆ ಸರಣಿ ಅಪಘಾತ ► ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.26. ಸ್ವಿಫ್ಟ್, ಇಂಡಿಕಾ ಮತ್ತು ವ್ಯಾಗನಾರ್ ಕಾರುಗಳ ನಡುವೆ ಸರಣಿ ಅಪಘಾತವಾಗಿ ಇಬ್ಬರು ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ನರಹರಿ ಪರ್ವತದ ಬಳಿ ಭಾನುವಾರ ಸಂಜೆ ನಡೆದಿದೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಮತ್ತು ಮಾಣಿ ಕಡೆಗೆ ತೆರಳುತ್ತಿದ್ದ ಇಂಡಿಕಾ ಕಾರು ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಇದೇ ವೇಳೆ ಇಂಡಿಕಾ ಕಾರಿನ ಹಿಂದಿನಿಂದ ಬರುತ್ತಿದ್ದ ವ್ಯಾಗನಾರ್ ಕಾರಿನ ಚಾಲಕ ಏಕಾಏಕಿ ಬ್ರೇಕ್

ಕಲ್ಲಡ್ಕ: ಮೂರು ಕಾರುಗಳ ನಡುವೆ ಸರಣಿ ಅಪಘಾತ ► ಇಬ್ಬರಿಗೆ ಗಾಯ Read More »

ಕರಾವಳಿ

ಕೆಮ್ಮಾರ: ಭೀಕರ ಅಪಘಾತಕ್ಕೆ ಇಬ್ಬರು ಬಲಿ, ಮೂವರು ಗಂಭೀರ ► ಸೇತುವೆಯ ತಡೆಗೋಡೆಗೆ ಗುದ್ದಿದ ಜೀಪ್

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.23. ಜೀಪೊಂದು ಸೇತುವೆಯ ತಡೆಗೋಡೆಗೆ ಢಿಕ್ಕಿ ಹೊಡೆದು ಉಂಟಾದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೆಮ್ಮಾರ ಎಂಬಲ್ಲಿ ಗುರುವಾರ ತಡ ರಾತ್ರಿ ನಡೆದಿದೆ. ಮೃತರನ್ನು ಕಾಣಿಯೂರಿನ ಕಟ್ಟತ್ತಾರು ನಿವಾಸಿಗಳಾದ ಶಿವಪ್ಪ ಮತ್ತು ಸುಶೀಲಾ ಎಂದು ಗುರುತಿಸಲಾಗಿದೆ. ಇವರು ತಮ್ಮದೇ ಜೀಪಿನಲ್ಲಿ ಉಪ್ಪಿನಂಗಡಿಯಿಂದ ಕಾಣಿಯೂರಿಗೆ ಆಲಂಕಾರು ಶಾಂತಿಮೊಗರು ಮೂಲಕ ತೆರಳುತ್ತಿರುವಾಗ ಜೀಪು ಚಾಲಕನ ನಿಯಂತ್ರಣ ತಪ್ಪಿ ಕೆಮ್ಮಾರ

ಕೆಮ್ಮಾರ: ಭೀಕರ ಅಪಘಾತಕ್ಕೆ ಇಬ್ಬರು ಬಲಿ, ಮೂವರು ಗಂಭೀರ ► ಸೇತುವೆಯ ತಡೆಗೋಡೆಗೆ ಗುದ್ದಿದ ಜೀಪ್ Read More »

ಕರಾವಳಿ

ಇಚಿಲಂಪಾಡಿ: ಬೈಕ್ ಢಿಕ್ಕಿ ► ಪಾದಚಾರಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ನ.13. ಬೈಕ್ ಢಿಕ್ಕಿ ಹೊಡೆದು ಪಾದಚಾರಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಎಂಬಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮೃತ ಮಹಿಳೆಯನ್ನು ಬೇರಿಕೆ ಕೊಪ್ಪ ನಿವಾಸಿ ಹೊನ್ನಮ್ಮ(59) ಎಂದು ಗುರುತಿಸಲಾಗಿದೆ. ಇವರು ತನ್ನ ಮನೆಯಿಂದ ನಡೆದುಕೊಂಡು ರಸ್ತೆ ಬದಿಯಲ್ಲಿ ತೆರಳುತ್ತಿದ್ದಾಗ ಬೈಕ್ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಇಚಿಲಂಪಾಡಿ: ಬೈಕ್ ಢಿಕ್ಕಿ ► ಪಾದಚಾರಿ ಮಹಿಳೆ ಮೃತ್ಯು Read More »

ಕರಾವಳಿ
Scroll to Top