Highway

ಸಂಪೂರ್ಣ ಹದಗೆಟ್ಟ ರಾ.ಹೆ. 75 ► ಶೀಘ್ರ ಸರಿಪಡಿಸುವಂತೆ ಸಾರ್ವಜನಿಕ ಹಿತಾಸಕ್ತಿ ವೇದಿಕೆಯಿಂದ ಸಂಸದರಿಗೆ ಮನವಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.08. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ಪಾಣೆಮಂಗಳೂರಿನಿಂದ ಬೋಳಂಗಡಿಯ ನರಹರಿ ಪರ್ವತದವರೆಗೆ ಸಂಪೂರ್ಣ ಹದಗೆಟ್ಟ ಪರಿಣಾಮ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೀವ್ರ ಸಮಸ್ಯೆಯಾಗಿದ್ದು, ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ಪಾಣೆಮಂಗಳೂರು ಸಾರ್ವಜನಿಕ ಹಿತಾಸಕ್ತಿ ವೇದಿಕೆಯ ವತಿಯಿಂದ ದ.ಕ. ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ರವರಿಗೆ ಮಂಗಳವಾರದಂದು ಮನವಿ ಸಲ್ಲಿಸಲಾಯಿತು. ರಸ್ತೆಯ ಅಗಲೀಕರಣದ ಹಿನ್ನೆಲೆಯಲ್ಲಿ ರಸ್ತೆಯ ಬದಿಯಲ್ಲಿದ್ದ ಮರಗಳನ್ನು ಕಡಿದು ಹಾಕಲಾಗಿದ್ದರೂ, ಸಂಪೂರ್ಣವಾಗಿ ಇನ್ನೂ ತೆರವು ಮಾಡಿಲ್ಲ. ಅಲ್ಲದೇ, […]

ಸಂಪೂರ್ಣ ಹದಗೆಟ್ಟ ರಾ.ಹೆ. 75 ► ಶೀಘ್ರ ಸರಿಪಡಿಸುವಂತೆ ಸಾರ್ವಜನಿಕ ಹಿತಾಸಕ್ತಿ ವೇದಿಕೆಯಿಂದ ಸಂಸದರಿಗೆ ಮನವಿ Read More »

ಕರಾವಳಿ

ಮಾಣಿ: ಖಾಸಗಿ ಬಸ್ ಪಲ್ಟಿ ► ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.26. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ಖಾಸಗಿ ಬಸ್ಸೊಂದು ಪಟ್ಟಿಯಾದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಸುಗಮ ಸಂಸ್ಥೆಯ ಖಾಸಗಿ ಬಸ್ಸು ಬುಡೋಳಿ ಸಮೀಪ ನಿದ್ದೆಯ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಗೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಮಾಣಿ: ಖಾಸಗಿ ಬಸ್ ಪಲ್ಟಿ ► ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ

ಗುಂಡ್ಯ: ಬೈಕ್ – ಸ್ಕಾರ್ಪಿಯೋ ಢಿಕ್ಕಿ ► ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.22. ಬೈಕ್ ಮತ್ತು ಸ್ಕಾರ್ಪಿಯೊ ಕಾರು ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಚೆಕ್ ಪೊಸ್ಟ್ ಬಳಿ ಭಾನುವಾರದಂದು ನಡೆದಿದೆ. ಮೃತ ಸವಾರನನ್ನು ತುಮಕೂರು ನಿವಾಸಿ ನವೀನ್ ಕುಮಾರ್ ಎಂದು ಗುರುತಿಸಲಾಗಿದೆ. ನವೀನ್ ಕುಮಾರ್‌ರವರು ಧರ್ಮಸ್ಥಳದಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗುಂಡ್ಯ: ಬೈಕ್ – ಸ್ಕಾರ್ಪಿಯೋ ಢಿಕ್ಕಿ ► ಬೈಕ್ ಸವಾರ ಮೃತ್ಯು Read More »

ಕರಾವಳಿ

ಕಾರು – ಲಾರಿ ಮುಖಾಮುಖಿ ಢಿಕ್ಕಿ ► ನಾಲ್ವರು ಮೃತ್ಯು, 8 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಅ.21. ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟ ಘಟನೆ ಜಿಲ್ಲೆಯ ಹೊಸಪೇಟೆ ತಾಲೂಕಿನ ಪಿಕೆ ಹಳ್ಳಿ ಬಳಿ ನಡೆದಿದೆ. ಚಿತ್ರದುರ್ಗದ ಹಿರಿಯೂರಿನವರಾದ ಚಾಲಕ ಶ್ರೀನಿವಾಸ (46), ವೆಂಕಟಮ್ಮ (46), ನಳಿನಿ (30) ಹಾಗೂ ಮತ್ತೊಬ್ಬ ಮಹಿಳೆ ಮೃತ ದುರ್ದೈವಿಗಳು. ಘಟನೆಯಲ್ಲಿ 8 ಜನ ಗಾಯಗೊಂಡಿದ್ದು, ಅವರನ್ನ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯೂರು ತಾಲೂಕಿನಿಂದ ಹೊಸಪೇಟೆಯ ಸಂಬಂಧಿಕರೊಬ್ಬರ ಅಂತಿಮ ದರ್ಶನಕ್ಕಾಗಿ ಕಾರಿನಲ್ಲಿ ಒಟ್ಟು 12

ಕಾರು – ಲಾರಿ ಮುಖಾಮುಖಿ ಢಿಕ್ಕಿ ► ನಾಲ್ವರು ಮೃತ್ಯು, 8 ಮಂದಿಗೆ ಗಾಯ Read More »

ಕರ್ನಾಟಕ

ಬೈಕಿಗೆ ಢಿಕ್ಕಿ ಹೊಡೆದು ಬಸ್ ನಿಲ್ದಾಣಕ್ಕೆ ಅಪ್ಪಳಿಸಿದ ಸ್ಕಾರ್ಪಿಯೋ ► ಐವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.20. ಬೈಕಿಗೆ ಢಿಕ್ಕಿ ಹೊಡೆದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿನ ಬಸ್ ತಂಗುದಾಣಕ್ಕೆ ಅಪ್ಪಳಿಸಿದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಗರದ ಹೊರವಲಯದ ನೆಲಮಂಗಲ ಸಮೀಪದ ಬೈಚಾಪುರ ಗ್ರಾಮದ ಬಳಿ ನಡೆದಿದೆ. ನೆಲಮಂಗಲ – ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಬೈಕಿಗೆ ಅತೀ ವೇಗವಾಗಿ ಹೋಗುತ್ತಿದ್ದ ಸ್ಕಾರ್ಪಿಯೋ ಕಾರು ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ದೀಪಾವಳಿ ಹಬ್ಬಕ್ಕೆಂದು ಊರಿಗೆ ಹೊರಟಿದ್ದ ತುಮಕೂರು ಜಿಲ್ಲೆಯ ತುರುವೇಕರೆ ತಾಲೂಕಿನ ಮುತ್ತುಗದಹಳ್ಳಿ

ಬೈಕಿಗೆ ಢಿಕ್ಕಿ ಹೊಡೆದು ಬಸ್ ನಿಲ್ದಾಣಕ್ಕೆ ಅಪ್ಪಳಿಸಿದ ಸ್ಕಾರ್ಪಿಯೋ ► ಐವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು ► ಪತ್ರಕರ್ತ ಸೇರಿದಂತೆ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ಅ.15. ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಪತ್ರಕರ್ತ ಸೇರಿದಂತೆ ಇಬ್ಬರು ಮೃತಪಟ್ಟ ಘಟನೆ ಭಾನುವಾರ ಸಂಜೆ ತಿ.ನರಸೀಪುರ ಸಮೀಪದ ತಲಕಾಡು ಎಂಬಲ್ಲಿ ನಡೆದಿದೆ. ಮೃತರನ್ನು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯ, ವಿಜಯವಾಣಿ ಪತ್ರಿಕೆಯ ಉಪ ಸಂಪಾದಕ ಎಂ.ಜಿ. ರಾಜೇಶ್ ಹಾಗೂ ಸಂಬಂಧಿ ಮಹಿಮಾ ಎಂದು ಗುರುತಿಸಲಾಗಿದೆ. ಇವರು ತನ್ನ ಕುಟುಂಬ ಸದಸ್ಯರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು ► ಪತ್ರಕರ್ತ ಸೇರಿದಂತೆ ಇಬ್ಬರು ಮೃತ್ಯು Read More »

ಕರ್ನಾಟಕ

ಗೋಳಿತೊಟ್ಟು: ಸೈಡ್ ಕೊಡುವ ವಿಚಾರದಲ್ಲಿ ಲಾರಿ ಚಾಲಕನಿಗೆ ಹಲ್ಲೆ ► 11 ಬೈಕ್ ಗಳ ಸಹಿತ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.29. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತೊಟ್ಟು ಎಂಬಲ್ಲಿ ಸೈಡ್ ಕೊಡುವ ವಿಚಾರದಲ್ಲಿ ಗುಂಪೊಂದು ಲಾರಿ ಚಾಲಕನಿಗೆ ಹಲ್ಲೆಗೆ ಯತ್ನಿಸಿದ್ದು, ಉಪ್ಪಿನಂಗಡಿ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ‌. ರಸ್ತೆ ಬಿಟ್ಟು ಸೈಡ್ ಕೊಡಲಿಲ್ಲ ಎಂಬ ಕಾರಣಕ್ಕೆ ಲಾರಿ ಚಾಲಕನನ್ನು ಬೆನ್ನಟ್ಟಿದ್ದು, ಹಲ್ಲೆಗೆ ಯತ್ನಿಸಲಾಗಿದೆ. ವಿಷಯ ತಿಳಿದ ಗಸ್ತು ನಿರತರಾಗಿದ್ದ ಉಪ್ಪಿನಂಗಡಿ ಠಾಣಾ ಸಬ್ ಇನ್ಸ್‌ಪೆಕ್ಟರ್ ನಂದಕುಮಾರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ

ಗೋಳಿತೊಟ್ಟು: ಸೈಡ್ ಕೊಡುವ ವಿಚಾರದಲ್ಲಿ ಲಾರಿ ಚಾಲಕನಿಗೆ ಹಲ್ಲೆ ► 11 ಬೈಕ್ ಗಳ ಸಹಿತ ಆರೋಪಿಗಳ ಬಂಧನ Read More »

ಕರಾವಳಿ

ನೆಲ್ಯಾಡಿ: ಕಂಟೈನರ್ ಲಾರಿ – ಅಶೋಕ್ ಲೈಲ್ಯಾಂಡ್ ದೋಸ್ತ್ ಢಿಕ್ಕಿ ► ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.09. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ವಳಾಲು ಎಂಬಲ್ಲಿ ಕಂಟೈನರ್ ಲಾರಿ ಮತ್ತು ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದ ನಡುವೆ ಢಿಕ್ಕಿ ಹೊಡೆದು ಓರ್ವ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ. ಮೃತರನ್ನು ಅಶೋಕ್ ಲೇಲ್ಯಾಂಡ್ ದೋಸ್ತ್ ಚಾಲಕ ಮೆಲ್ಕಾರ್ ನಿವಾಸಿ ನವಾಝ್ ಎಂದು ಗುರುತಿಸಲಾಗಿದೆ. ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದ ನವಾಝ್ ಬೇಕರಿ ತಿಂಡಿ ಲೈನ್ ಸೇಲ್ ಮಾಡುತ್ತಿದ್ದರು. ಮೃತದೇಹವನ್ನು ಪುತ್ತೂರು ಆಸ್ಪತ್ರೆಯಲ್ಲಿ ಇಡಲಾಗಿದೆ.

ನೆಲ್ಯಾಡಿ: ಕಂಟೈನರ್ ಲಾರಿ – ಅಶೋಕ್ ಲೈಲ್ಯಾಂಡ್ ದೋಸ್ತ್ ಢಿಕ್ಕಿ ► ಓರ್ವ ಮೃತ್ಯು Read More »

ಕರಾವಳಿ

ಆಲಂಕಾರು: ಪಿಕಪ್ ಢಿಕ್ಕಿ – ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಸೆ.09. ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಎಂಬಲ್ಲಿ ಪಿಕಪ್‌ ವಾಹನವೊಂದು ಮಗುವೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಗು ಆಸ್ಪತ್ರೆಗೆ ಸಾಗಿಸುವ ಹಾದಿ‌ ಮಧ್ಯೆ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ. ಮೃತ ಮಗುವನ್ನು ನೆಕ್ಕರೆ ನಿವಾಸಿ ಆ ಸಮಯದಲ್ಲಿ ಮಗುವಿಗೆ ಮಹಮ್ಮದ್ ಹನೀಫ್ ಎಂಬವರ ಪುತ್ರಿ ಶೈಮಾ(6) ಎಂದು ಗುರುತಿಸಲಾಗಿದೆ. ಆಲಂಕಾರು ಸಮೀಪದ ನೆಕ್ಕರೆ ಎಂಬಲ್ಲಿ ತನ್ನ ರಸ್ತೆ ಬದಿಯ ಮನೆಯಿಂದ ಹಠಾತ್ ರಸ್ತೆಗೆ ಬಂದ ಮಗುವಿಗೆ ಕುಂತೂರು

ಆಲಂಕಾರು: ಪಿಕಪ್ ಢಿಕ್ಕಿ – ಮಗು ಮೃತ್ಯು Read More »

ಕರಾವಳಿ

ಉಪ್ಪಿನಂಗಡಿ: ಸಿನಿಮೀಯ ಶೈಲಿಯಲ್ಲಿ ಹಾರಿದ ಕಾರು ► ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.08. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ 34ನೇ ನೆಕ್ಕಿಲಾಡಿ ಸಮೀಪ ಮಾರುತಿ ಎಸ್ ಕ್ರಾಸ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸಿನಿಮೀಯ ಶೈಲಿಯಲ್ಲಿ ಮುಖ್ಯ ರಸ್ತೆಯಿಂದ ಕೆಳಗಿನ ರಸ್ತೆಗೆ ಇಳಿದ ದೃಶ್ಯ ಗುರುವಾರ ಸಂಜೆ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಚಾಲಕ ಸೇರಿ ಇಬ್ಬರು ಪ್ರಯಾಣಿಸುತ್ತಿದ್ದರು. ಚಾಲಕ ಸೀಟ್ ಬೆಲ್ಟ್ ಧರಿಸಿದ್ದ ಕಾರಣದಿಂದ ಕಾರನ್ನು ಹತೋಟಿಗೆ ತರಲು ಸಾಧ್ಯವಾಯಿತೆನ್ನಲಾಗಿದೆ. ಕಾರು ಕೆಳಗಿನ ರಸ್ತೆಗೆ ಬಂದು ನಿಲ್ಲುವ

ಉಪ್ಪಿನಂಗಡಿ: ಸಿನಿಮೀಯ ಶೈಲಿಯಲ್ಲಿ ಹಾರಿದ ಕಾರು ► ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ದೃಶ್ಯ Read More »

ಕರಾವಳಿ
Scroll to Top