ಇಚಿಲಂಪಾಡಿ: ರೇಬೀಸ್ ವೈರಾಣುವಿಗೆ ತುತ್ತಾಗಿ ಯುವಕ ಮೃತ್ಯು ► ಅಂತಿಮ ದರ್ಶನಕ್ಕೆ ತೆರಳಿದ್ದ ಗ್ರಾಮಸ್ಥರಲ್ಲಿ ವೈರಾಣು ಹರಡುವ ಆತಂಕ ► ಆ್ಯಂಟಿ ರೇಬೀಸ್ ಇಂಜೆಕ್ಷನ್ ಚುಚ್ಚಿಸಿಕೊಂಡ ಇನ್ನೂರಕ್ಕೂ ಮಿಕ್ಕಿದ ಜನ
(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.03. ಇಲ್ಲಿನ ಇಚಿಲಂಪಾಡಿ ಗ್ರಾಮದ ಕಾಯರ್ತಡ್ಕ ಎಂಬಲ್ಲಿ ಕಳೆದ ಆರು ದಿನಗಳ ಹಿಂದೆ ಮೃತಪಟ್ಟ ಯುವಕನ ಅಂತಿಮ ದರ್ಶನದಲ್ಲಿ ಭಾಗವಹಿಸಿದ್ದ ನೂರಾರು ಮಂದಿ ಇದೀಗ ಆತಂಕಗೊಂಡಿದ್ದು, ಆಂಟಿ ರೇಬಿಸ್ ಇಂಜೆಕ್ಷನ್ ಚುಚ್ಚಿಸಿಕೊಳ್ಳುತ್ತಿದ್ದಾರೆ. ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿ ಉದ್ಯೋಗದ ನಿರೀಕ್ಷೆಯಲ್ಲಿದ್ದ ಇಚ್ಲಂಪಾಡಿಯ ಕಾಯರ್ತಡ್ಕ ನಿವಾಸಿ ಆನಂದ ಪೂಜಾರಿ ಎಂಬವರ ಪುತ್ರ ಆಶಿತ್ ಪೂಜಾರಿ(24) ಹಠಾತ್ ಅನಾರೋಗ್ಯಕ್ಕೀಡಾಗಿ ಆಗಸ್ಟ್ 28 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಆಶಿತ್ […]






