injury

ವಾಹನ ಪಲ್ಟಿ ➤ ನಾಲ್ವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಸವಣೂರು, ಜ. 05. ಶವಸಂಸ್ಕಾರಕ್ಕೆ ತೆರಳುತ್ತಿದ್ದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡು ಪ್ರಾಣಾಪಾಯದಿಂದ ಪಾರಾದ ಘಟನೆ ಪಟ್ಟಣದ ಕಾರಡಗಿ ರಸ್ತೆಯ ತಿರುವಿನಲ್ಲಿ ಸಂಭವಿಸಿದೆ. ಗಂಭೀರ ಗಾಯಗೊಂಡವರನ್ನು ಚಾಲಕ ಮುಸ್ತಾಕ್ ಅಹಮದ್ ಚೀಲಪಟೇದ (27), ಲಾಲ್ ಸಾಬ್ ಬುಡ್ಡಿಮನಿ (62), ಮೆಹಬೂಸಾದ್ ಕುಂದಗೋಳ (52), ರಹಬ್ಬಾನಿ ಹವಾಲ್ದಾರ್ (52) ಎಂದು ಗುರುತಿಸಲಾಗಿದೆ. ಇವರು ಕುಂದಗೋಳ ತಾಲೂಕಿನ ಕಮಡೊಳ್ಳಿ ಸವಣೂರು ಮಾರ್ಗವಾಗಿ ಹಾವೇರಿ ತಾಲೂಕಿನ ಹಂದಿಗನೂರ ಗ್ರಾಮಕ್ಕೆ […]

ವಾಹನ ಪಲ್ಟಿ ➤ ನಾಲ್ವರಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಸಿಲಿಂಡರ್ ಸ್ಫೋಟ ➤ ಹಲವರಿಗೆ ಗಾಯ

 (ನ್ಯೂಸ್ ಕಡಬ) newskadaba.com ಮೈಸೂರು, ಜ.04. ಗ್ಯಾಸ್ ಸಿಲಿಂಡರರೊಂದು ಸ್ಫೋಟಗೊಂಡು ಪರಿಣಾಮ ಸುಮಾರು 10 ಮಂದಿಗೆ ಗಾಯವಾದ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಬುಧವಾರ ಮೈಸೂರಿನ ಬನ್ನಿಮಂಟಪದ ಅಗ್ನಿಶಾಮಕ ವಸತಿ ಗೃಹದಲ್ಲಿ ಈ ಘಟನೆ ನಡೆದಿದೆ. ವಸತಿಗೃಹದ ಮನೆಯೊಂದರಲ್ಲಿ ಗ್ಯಾಸ್ ಲೀಕೇಜ್‍ ಆಗಿದ್ದು, ಬೆಳಗ್ಗೆ ಎದ್ದು ಹಾಲು ಕಾಯಿಸಲು ಬೆಂಕಿ ಹಚ್ಚುವ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ ಎನ್ನಲಾಗಿದೆ. ಈ ವೇಳೆ ಅಕ್ಕಪಕ್ಕದ ಮನೆಯವರಿಗೂ ಬೆಂಕಿ ತಗುಲಿದೆ. ಈ ಘಟನೆಯಲ್ಲಿ ಒಂದೇ ಮನೆಯ ನಾಲ್ವರು ಹಾಗೂ ಅಕ್ಕಪಕ್ಕದ 6 ಮಂದಿಗೆ

ಸಿಲಿಂಡರ್ ಸ್ಫೋಟ ➤ ಹಲವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಬೈಕ್ ಢಿಕ್ಕಿ ಬಾಲಕಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 04.  ರಸ್ತೆ ಬದಿ ನಿಂತಿದ್ದ ಶಾಲಾ ಬಾಲಕಿಯೋರ್ವಳಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಾಯಗೊಂಡ ಘಟನೆ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ವರದಿಯಾಗಿದೆ. ಗಾಯಗೊಂಡ ಬಾಲಕಿಯನ್ನು ವಿಟ್ಲ ಒಕ್ಕೆತ್ತೂರು ನಿವಾಸಿ ಬಶೀರ್ ಅವರ ಪುತ್ರಿ ಫಾತಿಮತ್ ನಿದಾ ಎಂದು ಗುರುತಿಸಲಾಗಿದೆ. ಈಕೆ ವಿಟ್ಲ ಸರಕಾರಿ ವೀರ ಶಾಲೆಯ 5ನೇ ತರಗತಿ ಓದುತ್ತಿದ್ದಲು ಎನ್ನಲಾಗಿದೆ. ಶಾಲೆ ಹೋಗಲು ಒಕ್ಕೆತ್ತೂರಿನಲ್ಲಿ ಆಟೋ ರಿಕ್ಷಾಕ್ಕೆ ಕಾಯುತ್ತಿದ್ದಾಗ ವಿಟ್ಲ ಕಡೆಯಿಂದ ಬಂದ ಬೈಕ್ ಢಿಕ್ಕಿ ಹೊಡೆದಿದೆ

ವಿಟ್ಲ: ಬೈಕ್ ಢಿಕ್ಕಿ ಬಾಲಕಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಢಿಕ್ಕಿ ➤ ಕೋಮಾಗೆ ಜಾರಿದ ಓರ್ವ ವಿದ್ಯಾರ್ಥಿ

 (ನ್ಯೂಸ್ ಕಡಬ) newskadaba.com ನವದೆಹಲಿ, ಜ.04. ಅತಿ ವೇಗವಾಗಿ ಬಂದ ಕಾರು ಮೂವರು ಬಿ.ಟೆಕ್ ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳ ಪೈಕಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇನ್ನೊರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾದ ಘಟನೆ ಗ್ರೇಟರ್ ನೋಯ್ಡಾದ ಏರಡನೇ ಏರಿಯಾದಲ್ಲಿ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ಸ್ವೀಟಿ ಕುಮಾರಿ ಎಂದು ಗುರುತಿಸಲಾಗಿದೆ. ಆಕೆಯ ತಲೆಯ ಮತ್ತು ಕಾಲುಗಳಿಗೆ ಜೋರಾಗಿ  ಪೆಟ್ಟು ಬಿದ್ದಿದ್ದು, ಕೋಮಾಗೆ ಜಾರಿದ್ದಾಳೆ.ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ

ಕಾರು ಢಿಕ್ಕಿ ➤ ಕೋಮಾಗೆ ಜಾರಿದ ಓರ್ವ ವಿದ್ಯಾರ್ಥಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅನಿಲ ಸೋರಿಕೆ ➤ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com .   ಹುಬ್ಬಳ್ಳಿ, ಜ. 03:  ಅಡುಗೆ ಅನಿಲ ಸೋರಿಕೆಯಿಂದಾಗಿ ಅಗ್ನಿ ಅಪಘಡ ಸಂಭವಿಸಿದ  ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಹುಬ್ಬಳ್ಳಿ ಜಿಲ್ಲೆಯ ವೀರಾಪೂರ ಓಣಿಯ ಶ್ರೀ ಗಣಪತಿ ಈಶ್ವರ ದೇವಸ್ಥಾನದಲ್ಲಿ ಸಂಭವಿಸಿದೆ. ಈ ಘಟನೆಯಿಂದ ದೇವಸ್ಥಾನದ ಅರ್ಚಕ, ಮಗು ಹಾಗೂ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮಗು ಹಾಗೂ ಇಬ್ಬರು ಮಹಿಳೆಯರು ದೇವರ ದರ್ಶನಕ್ಕೆ ಆಗಮಿಸಿದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಬೆಂಡಿಗೇರಿ ಠಾಣೆಯ ಪೊಲೀಸರು

ಅನಿಲ ಸೋರಿಕೆ ➤ ನಾಲ್ವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟೊ ಪಲ್ಟಿ ➤ ಓರ್ವ ಮಹಿಳೆ ಮೃತ್ಯು ಹಾಗೂ ಆರು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.comಕೊಪ್ಪಳ, ಜ.03. ಆಟೊವೊಂದು ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟ ಹಾಗೂ ಆರು ಮಂದಿ ಗಾಯಗೊಂಡ ಘಟನೆ ಕೊಪ್ಪಳ ಸಮೀಪದ ಒಜೋನಹಳ್ಳಿ ಕ್ರಾಸ್ ಬಳಿ ವರದಿಯಾಗಿದೆ. ಮೃತಪಟ್ಟವರನ್ನು ಅನ್ನಪೂರ್ಣಮ್ಮ (38) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಸಮೀಪದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗೌಂಡಿ ಕೆಲಸ ಮಾಡುವ ಕಾರ್ಮಿಕರ ಆಟೊದಲ್ಲಿ ತೆರಳುವಾಗ ಪ್ರಾಣಿಯೊಂದು ಅಡ್ಡ ಬಂದಿದ್ದರಿಂದ ಪಲ್ಟಿಯಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಆಟೊ ಪಲ್ಟಿ ➤ ಓರ್ವ ಮಹಿಳೆ ಮೃತ್ಯು ಹಾಗೂ ಆರು ಮಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಾಂಬ್ ಸ್ಫೋಟ ➤ ನಾಲ್ವರು ಮೃತ್ಯು, ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಜಮ್ಮು- ಕಾಶ್ಮೀರ, ಜ. 02. ಬಾಂಬ್ ಸ್ಫೋಟಗೊಂಡ ಪರಿಣಾಮ ಕನಿಷ್ಠ ನಾಲ್ವರು ನಾಗರಿಕರು ಮೃತಪಟ್ಟ ಹಲವರು ಗಾಯಗೊಂಡ ಘಟನೆ ಜಮ್ಮು ಕಾಶ್ಮೀರದ ರಜೌರಿ ಜಿಲ್ಲೆಯ ಹಳ್ಳಿಯಲ್ಲಿ ವರದಿಯಾಗಿದೆ. ಮೃತಪಟ್ಟಿರುವವರನ್ನು ಸತೀಶ್ ಕುಮಾರ್ (45), ದೀಪಕ್ ಕುಮಾರ್ (23), ಪ್ರೀತಮ್ ಲಾಲ್ (57) ಮತ್ತು ಶಿಶುಪಾಲ್ (32) ಹಾಗೂ ಗಾಯಗೊಂಡವರನ್ನು ಪವನ್ ಕುಮಾರ್ (38), ರೋಹಿತ್ ಪಂಡಿತ್ (27), ಸರೋಜ್ ಬಾಲಾ (35), ರಿದಮ್ ಶರ್ಮಾ (17) ಮತ್ತು ಪವನ್ ಕುಮಾರ್ (32) ಎಂದು

ಬಾಂಬ್ ಸ್ಫೋಟ ➤ ನಾಲ್ವರು ಮೃತ್ಯು, ಹಲವರಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರ್ಕಳ: ಶಾಲಾ ಪ್ರವಾಸದ ಬಸ್ ಪಲ್ಟಿ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 02. ಶಾಲಾ ಮಕ್ಕಳ ಪ್ರವಾಸದ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಮೂವರು ಶಿಕ್ಷಕಿಯರು ಮತ್ತು ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ- ಕಾರ್ಕಳ ರಾಜ್ಯ ಹೆದ್ದಾರಿಯ ನಲ್ಲೂರು ಸಮೀಪದ ಪಾಜೆಗುಡ್ಡೆ ತಿರುವಿನಲ್ಲಿ ವರದಿಯಾಗಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬಸವೇಶ್ವರ ಪ್ರೌಢ ಶಾಲೆಗೆ ಸೇರಿದ ಮಕ್ಕಳು ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆಂದು ಧರ್ಮಸ್ಥಳದಿಂದ ಮಂಗಳೂರಿಗೆ ತೆರಳುತಿದ್ದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಕಾರ್ಕಳ: ಶಾಲಾ ಪ್ರವಾಸದ ಬಸ್ ಪಲ್ಟಿ ➤ ಹಲವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಗೆ ಬಸ್ ಢಿಕ್ಕಿ ➤ ಬಾಲಕಿ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾರವಾರ, ಡಿ. 31. ದ್ವಿಚಕ್ರ ವಾಹನಕ್ಕೆ ಸೀಬರ್ಡ್ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಹಾಗೂ ಬಾಲಕಿ ತಂದೆಗೆ ಗಂಭೀರ ಗಾಯಗೊಂಡ ಘಟನೆ ಕಾರವಾರದ ಬಿಣಗಾದಲ್ಲಿ ವರದಿಯಾಗಿದೆ. ಮೃತ ಬಾಲಕಿಯನ್ನು ಲವಿಟಾ ಜಾರ್ಜ್ ಫೆರ್ನಾಂಡೀಸ್ (13) ಹಾಗೂ ಗಾಯಗೊಂಡ ತಂದೆಯನ್ನು ಜಾರ್ಜ್ ಫೆರ್ನಾಂಡೀಸ್‌ (41) ಎಂದು ಗುರುತಿಸಲಾಗಿದೆ. ಬಟ್ಟೆ ಖರೀದಿಸುವ ಉದ್ದೇಶದಿಂದ ತಂದೆ- ಮಗಳು ಕಾರವಾರಕ್ಕೆ ಬರುತ್ತಿದ್ದ ವೇಳೆ‌ ಬೆಂಗಳೂರಿನಿಂದ ಕಾರವಾರಕ್ಕೆ ಬರುತ್ತಿದ್ದ ಬಸ್, ಆ್ಯಕ್ಟಿವಾದ ಹಿಂಬದಿಗೆ ಢಿಕ್ಕಿ ಹೊಡೆದ

ಬೈಕ್ ಗೆ ಬಸ್ ಢಿಕ್ಕಿ ➤ ಬಾಲಕಿ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಾಜಿ ಶಾಸಕ ಕಲ್ಲಪ್ಪ ಮಗೆಣ್ಣನವರ ಕಾರು ಅಪಘಾತ ➤ 6 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಚಿಕ್ಕೋಡಿ, ಡಿ. 31. ಮಾಜಿ ಶಾಸಕ, ಜೆಡಿಎಸ್ ಮುಖಂಡ ಕಲ್ಲಪ್ಪ ಮಗೆಣ್ಣ ಪ್ರಯಾಣಿಸುತ್ತಿದ್ದ ಕಾರೊಂದು ಬೆಳಗಾವಿಯ ಅಥಣಿ ಪಟ್ಟಣದ ಹೊರವಲಯದಲ್ಲಿ ಅಪಘಾತಕ್ಕೀಡಾದ ಪರಿಣಾಮ 6 ಮಂದಿ ಗಾಯಗೊಂಡ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ವಿಜಯಪುರದಿಂದ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮಕ್ಕೆ ಮಾಜಿ ಶಾಸಕರು ಸೇರಿದಂತೆ 6 ಜನರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿಯ ಟೈಯರ್ ಬ್ಲಾಸ್ಟ್ ಆಗಿ ಕಾರಿನ ಮೇಲೆ ಟೈಯರ್ ಬಿದ್ದ ಪರಿಣಾಮ, ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿದೆ

ಮಾಜಿ ಶಾಸಕ ಕಲ್ಲಪ್ಪ ಮಗೆಣ್ಣನವರ ಕಾರು ಅಪಘಾತ ➤ 6 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top