injury

ಬಿಸಿ ಸಾಂಬಾರ್ ಬಿದ್ದು ಮೂವರು ಶಾಲಾ ಮಕ್ಕಳು ಅಸ್ವಸ್ಥ

(ನ್ಯೂಸ್  ಕಡಬ) newskadaba.com ಯಾದಗಿರಿ, ಡಿ. 30. ಮೈ ಮೇಲೆ ಬಿಸಿ ಸಾಂಬಾರ್ ಬಿದ್ದು ಮೂವರು ಮಕ್ಕಳು ಅಸ್ವಸ್ಥರಾದ ಘಟನೆ ಯಾದಗಿರಿಯ ಜಿಲ್ಲೆಯ ಸುರಪುರ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೊಮ್ಮನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ನೀಡುವ ಸಂದರ್ಭ  ಬಿಸಿ ಸಾಂಬಾರ್ ಮೈಮೇಲೆ ಬಿದ್ದಿದ್ದು, ತಕ್ಷಣವೇ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳು ಅಪಾಯದಿಂದ ಪಾರಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಶಾಲಾ ಸಿಬ್ಬಂದಿಗಳ ನಿರ್ಲಕ್ಷತನದಿಂದ ಈ ಘಟನೆ ನಡೆದಿದೆ ಎಂದು ಪೋಷಕರು […]

ಬಿಸಿ ಸಾಂಬಾರ್ ಬಿದ್ದು ಮೂವರು ಶಾಲಾ ಮಕ್ಕಳು ಅಸ್ವಸ್ಥ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಕೃಷಿ ಜಾಗಕ್ಕೆ ಪ್ರವೇಶಿಸಿ ಹಲ್ಲೆ ಆರೋಪ ➤ ಮಹಿಳೆ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 28. ಕೃಷಿ ಜಾಗಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವುದಾಗಿ ಆರೋಪಿಸಿ ಮಹಿಳೆಯೊಬ್ಬರು ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಆಶಾಎಂದು ಗುರುತಿಸಲಾಗಿದೆ. ಅರುಣ್ ಕುಮಾರ್ ರೈ ಮತ್ತು ಕೆಲಸಗಾರರಾದ ವಿನಯ್ ಮತ್ತು ಸುಂದರರವರು ಅಕ್ರಮವಾಗಿ ತಂತಿ ಬೀಲಿ ಹಾಕುತ್ತಿದ್ದು, ಈ ಕುರಿತು ಪ್ರಶ್ನಿಸಿದಾಗ ನನಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂಧಿಸಿ ಮಾನಭಂಗಕ್ಕೆ ಯತ್ನಿಸಿದ್ದಾರಲ್ಲದೆ ಕೊಲೆ ಬೆದರಿಕೆಯೊಡ್ಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಬಗ್ಗೆ

ಪುತ್ತೂರು: ಕೃಷಿ ಜಾಗಕ್ಕೆ ಪ್ರವೇಶಿಸಿ ಹಲ್ಲೆ ಆರೋಪ ➤ ಮಹಿಳೆ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಟಿಪ್ಪರ್ ಢಿಕ್ಕಿ ➤ ಗಂಭೀರ ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು..!

(ನ್ಯೂಸ್ ಕಡಬ) newskadaba.com ಸಾಗರ, ಡಿ. 28.  ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಗಾಯಗೊಂಡ ಮೂವರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಬುಧವಾರದಂದು ಶಿವಮೊಗ್ಗದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಶಿಕಾರಿಪುರ ತಾಲೂಕಿನ ಚಿಕ್ಕಕಲವತ್ತಿ ಗ್ರಾಮದ ಪ್ರತಿಮಾ (18) ಎಂದು ಗುರುತಿಸಲಾಗಿದೆ. ಬುಧವಾರದಂದು ಬೆಳಗ್ಗೆ ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಹೋಗುತ್ತಿದ್ದ ವೇಳೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರಿಗೆ ಸಣ್ಣ ಪುಟ್ಟ ಗಾಯವಾಗಿತ್ತು. ಹಾಗೂ ಮತ್ತೋರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿದ್ದವು. ತೀವ್ರವಾಗಿ

ಟಿಪ್ಪರ್ ಢಿಕ್ಕಿ ➤ ಗಂಭೀರ ಗಾಯಗೊಂಡಿದ್ದ ಕಾಲೇಜು ವಿದ್ಯಾರ್ಥಿನಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನ ಎದೆ ಸೀಳಿ ಹೊರಬಂದ ರಾಡ್ ➤ ಯುವಕ ಗಂಭೀರ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಡಿ. 28. ಕಾರ್ಮಿಕನೋರ್ವನ ಎದೆ ಸೀಳಿ ಕಬ್ಬಿಣದ ರಾಡ್ ಹೊರ ಬಂದ ಪರಿಣಾಮ ಕಾರ್ಮಿಕ ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ಜಿಲ್ಲೆಯ ಹೊಸೂರು ಸರ್ಕಲ್ ಬಳಿ ವರದಿಯಾಗಿದೆ. ಗಾಯಾಳುವನ್ನು ಕೋಲ್ಕತ್ತಾ ಮೂಲದ ಅಬ್ದುಲ್ ಗಫರ್ ಎಂಬ ಗುರುತಿಸಲಾಗಿದೆ. ನಗರದ ಹೊಸೂರು ಸರ್ಕಲ್ ಬಳಿ ಫ್ಲೈ ಓವರ್ ಕೆಲಸ ಮಾಡುವಾಗ ಮೇಲಿಂದ ಕಬ್ಬಿಣದ ರಾಡ್ ಗಫರ್ ​ನ ಬಲಗಡೆಯ ಎದೆ ಭಾಗಕ್ಕೆ ಬಿದ್ದು, ಎದೆ ಸೀಳಿ ಹೊರ ಹೋಗಿದೆ ಎಂದು ತಿಳಿದು ಬಂದಿದೆ.

ಯುವಕನ ಎದೆ ಸೀಳಿ ಹೊರಬಂದ ರಾಡ್ ➤ ಯುವಕ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಯಾಂಪಸ್ ನಲ್ಲಿ ಚಿರತೆ ದಾಳಿ ➤ ಅರಣ್ಯಾಧಿಕಾರಿಗಳು ಸೇರಿ 15 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಗುವಹಾಟಿ , ಡಿ 27 :  ಚಿರತೆಯೊಂದು ದಾಳಿಮಾಡಿ ಪರಿಣಾಮ ಮೂವರು ಅರಣ್ಯಾಧಿಕಾರಿಗಳು, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ 15 ಮಂದಿ ಗಾಯಗೊಂಡಿರುವ ಘಟನೆ ಅಸ್ಸಾಂ ರಾಜ್ಯದ ಜೋರ್ಹಟ್‌ ಎಂಬಲ್ಲಿ ವರದಿಯಾಗಿದೆ. ಅರಣ್ಯಾಧಿಕಾರಿಗಳು ಸೆರೆಹಿಡಿದಿರುವ ವೀಡಿಯೋವೊಂದರಲ್ಲಿ ಚಿರತೆ ಕ್ಯಾಂಪಸ್‌ನ ತಡೆಬೇಲಿಯನ್ನು ಹಾರಿ ಒಳಬರುತ್ತಿರುವುದು ಹಾಗೂ ಅಲ್ಲಿ ಸಾಗುತ್ತಿರುವ ಕಾರೊಂದರ ಮೇಲೆ ದಾಳಿ ನಡೆಸಿರುವುದು ಕ್ಯಾಮರದಲ್ಲಿ ಸೆರೆಯಾಗಿದೆ. ಇನ್ನು ರೈನ್‌ಫಾರೆಸ್ಟ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ ಜೋರ್ಹಟ್‌ ನಗರದ ಹೊರವಲಯದಲ್ಲಿದ್ದು ಸುತ್ತಲೂ ಅರಣ್ಯ ಪ್ರದೇಶವಿರುವುದರಿಂದ ಚಿರತೆ ಅಲ್ಲಿಂದ

ಕ್ಯಾಂಪಸ್ ನಲ್ಲಿ ಚಿರತೆ ದಾಳಿ ➤ ಅರಣ್ಯಾಧಿಕಾರಿಗಳು ಸೇರಿ 15 ಮಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಸ್ಕೂಟರಿಗೆ ಢಿಕ್ಕಿ ಹೊಡೆದು ಪರಾರಿಯಾಗಲೆತ್ನಿಸಿದ ಕಾರು ಚಾಲಕ ವಶಕ್ಕೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 24. ವಿದೇಶಿ ವಿದ್ಯಾರ್ಥಿಗಳಿದ್ದ ಸ್ಕೂಟರ್ ಗೆ ಢಿಕ್ಕಿ ಹೊಡೆದು ಕಾರಿನಲ್ಲಿ ಪರಾರಿಯಾಗಲೆತ್ನಿಸಿದ ಚಾಲಕನನ್ನು ತಡೆದ ಸ್ಥಳೀಯರು, ಪೊಲೀಸರಿಗೆ ಒಪ್ಪಿಸಿದ ಘಟನೆ ತಲಪಾಡಿ ದೇವಿನಗರ ಎಂಬಲ್ಲಿ ವರದಿಯಾಗಿದೆ. ಬಂಧಿತರನ್ನು ಕೇರಳದ ಅಹಮ್ಮದ್ ಮುಬಾರಿಷ್ ಎ.ಕೆ ಎಂದು ಗುರುತಿಸಲಾಗಿದೆ. ಗಾಯಾಗೊಂಡವರನ್ನು ಸವಾರ ಸೆಟಿದ್ ಬಾಷಾಂಗ್(30) ಹಾಗೂ ಸಹ ಸವಾರ ಅಲಿ ಸಾಗರ್(30) ಎಂದು ಗುರುತಿಸಲಾಗಿದೆ. ಅಹಮ್ಮದ್ ಮುಬಾರಿಷ್ ಕಾರಿನಲ್ಲಿ ಮಂಗಳೂರಿನಿಂದ ಕೇರಳದ ಕಡೆಗೆ ಅತಿ ವೇಗದಿಂದ ಧಾವಿಸಿ ರಾ.ಹೆ. 66 ರ ಕೋಟೆಕಾರು

ಉಳ್ಳಾಲ: ಸ್ಕೂಟರಿಗೆ ಢಿಕ್ಕಿ ಹೊಡೆದು ಪರಾರಿಯಾಗಲೆತ್ನಿಸಿದ ಕಾರು ಚಾಲಕ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಅಪಘಾತ ➤ ಎಂಟು ಮಂದಿ ಮೃತ್ಯು.!

(ನ್ಯೂಸ್ ಕಡಬ) newskadaba.com ತಮಿಳುನಾಡು, ಡಿ. 24. ಶಬರಿಮಲೆಯಿಂದ ವಾಪಸಾಗುತ್ತಿದ್ದ ಭಕ್ತರ ಕಾರೊಂದು ಕಮರಿಗೆ ಉರುಳಿದ ಪರಿಣಾಮ ಕನಿಷ್ಠ ಎಂಟು ಪ್ರಯಾಣಿಕರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಥೇಣಿ ಜಿಲ್ಲೆಯಲ್ಲಿ ವರದಿಯಾಗಿದೆ. ಮೃತರಲ್ಲಿ ಅಪ್ರಾಪ್ತ ಬಾಲಕ ಸೇರಿದ್ದು, ಜಿಲ್ಲೆಯ ಆಂಡಿಪಟ್ಟಿ ನಿವಾಸಿಗಳು. ಇವರೆಲ್ಲರೂ ಶಬರಿಮಲೆಗೆ ಹೋಗಿ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ. ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಡ್ಡಗಾಡು ಮಾರ್ಗದ ತಿರುವಿನಲ್ಲಿ ವಾಹನ ಚಲಾಯಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಏಳು ಜನರು

ಕಾರು ಅಪಘಾತ ➤ ಎಂಟು ಮಂದಿ ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅರುಣಾಚಲ ಪ್ರದೇಶ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ ➤ ಪೈಲಟ್ ಮೃತ್ಯು..!

(ನ್ಯೂಸ್ ಕಡಬ) newskadaba.com ಅರುಣಾಚಲ ಪ್ರದೇಶ, ಡಿ 23 : ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಕ್ಕೀಡಾಗಿ ಓರ್ವ ಪೈಲಟ್ ಮೃತ್ಯುಗೊಂಡ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ. ಮೃತಪಟ್ಟವರನ್ನು ಪೈಲಟ್ ಲೆಪ್ಟಿನೆಂಟ್ ಕರ್ನಲ್ ಸೌರಬ್ ಯಾದವ್ ಎಂದು ಗುರುತಿಸಲಾಗಿದೆ. ತವಾಂಗ್ ಬಳಿ   ಹಾರಾಟ ನಡೆಸುತ್ತಿದ್ದ ಹೆಲಿಕಾಪ್ಟರ್ ಪತನವಾಗಿದ್ದು, ಅದರಲ್ಲಿದ್ದ ಇಬ್ಬರು ಪ್ರಯಾಣಿಕರನ್ನು ಸ್ಥಳೀಯ ಮಿಲಿಟರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ, ತೀವ್ರವಾಗಿ ಗಾಯಗೊಂಡಿದ್ದ ಪೈಲಟ್ ಲೆಪ್ಟಿನೆಂಟ್ ಕರ್ನಲ್ ಸೌರಬ್ ಯಾದವ್ ಚಿಕಿತ್ಸೆ ವೇಳೆಯಲ್ಲಿ ಮೃತಪಟ್ಟಿರುವುದಾಗಿ ಭಾರತೀಯ

ಅರುಣಾಚಲ ಪ್ರದೇಶ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ ➤ ಪೈಲಟ್ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಾವಂಜೆ ಸೇತುವೆಯಲ್ಲಿ ಸರಣಿ ಅಪಘಾತ ; ಮಹಿಳೆಗೆ ಗಾಯ

(ನ್ಯೂಸ್ ಕಡಬ) newskadaba.com ಹಳೆಯಂಗಡಿ , ಡಿ 23 : ಆಟೋರಿಕ್ಷಾ, ಬಸ್ ಹಾಗೂ ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ 66 ರ ಪಾವಂಜೆ ಸೇತುವೆಯಲ್ಲಿ ವರದಿಯಾಗಿದೆ. ಗಾಯಗೊಂಡವರನ್ನು ಮಂಗಳೂರಿ ನಿವಾಸಿ ಸರಸ್ವತಿ ಎಂದು ಗುರುತಿಸಲಾಗಿದೆ. ಸರಸ್ವತಿ ತಮ್ಮ ಪತಿಯೊಂದಿಗೆ ಬಪ್ಪನಾಡು ದೇವಸ್ಥಾನಕ್ಕೆ ರಿಕ್ಷಾದಲ್ಲಿ ಆಗಮಿಸುತ್ತಿದ್ದಾಗ ರಿಕ್ಷಾಗೆ ಉಡುಪಿಯತ್ತ ತೆರಳುತ್ತಿದ್ದ ಮುಂಬೈ ಬಸ್ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಅದರ ಹಿಂದೆ ಇದ್ದ ಲಾರಿಯು ಮುಂಬೈ ಬಸ್ಸಿಗೆ

ಪಾವಂಜೆ ಸೇತುವೆಯಲ್ಲಿ ಸರಣಿ ಅಪಘಾತ ; ಮಹಿಳೆಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ : ಶಬರಿಮಲೆ ಯಾತ್ರಿಕರ ಬಸ್ ಬ್ರೇಕ್ ಫೇಲ್ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ , ಡಿ 23  : ಬಳ್ಳಾರಿಯಿಂದ  ಶಬರಿಮಲೆಗೆ ಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಎಂಬಲ್ಲಿ ಬ್ರೇಕ್ ಫೇಲ್ ಆಗಿ ಬಸ್ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ  ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಗಾಯಾಳುಗಳನ್ನು ಕೂಡ್ಲಗಿ ತಾಲೂಕಿ ಚಿಕ್ಕಜೋಗೆ ಹಳ್ಳಿಯ ಶಶಿ, ಜಲಧರ ರಘು, ಬಸವರಾಜ್, ಲೋಕ ಎಂದು ಗುರುತಿಸಲಾಗಿದೆ. ವಾಹನ ನಗ್ಗಿದ ಸ್ಥಳದಲ್ಲಿ ಕಂದಕ ಹಾಗೂ ವಿದ್ಯುತ್ ಕಂಬವಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ

ಬೆಳ್ತಂಗಡಿ : ಶಬರಿಮಲೆ ಯಾತ್ರಿಕರ ಬಸ್ ಬ್ರೇಕ್ ಫೇಲ್ ➤ ಹಲವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top