international

ವಿಶ್ವದ ಎರಡನೆ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಮಾರ್ಕ್ ಝುಕರ್ ಬರ್ಗ್

(ನ್ಯೂಸ್ ಕಡಬ)newskadaba.com ಕ್ಯಾಲಿಫೋರ್ನಿಯ, ಅ.04.  ಮೆಟಾ ಪ್ಲಾಟ್ ಫಾರ್ಮ್ಸ್ ಇಂಕ್ ಷೇರು ಮೌಲ್ಯ ಏರುತ್ತಲೇ ಹೋಗುತ್ತಿರುವುದರಿಂದ ಅಮೆಝಾನ್ ಒಡೆಯ ಜೆಫ್ ಬೆಝೋಸ್ ರನ್ನು ಹಿಂದಿಕ್ಕಿರುವ ಮಾರ್ಕ್ ಝುಕರ್ ಬರ್ಗ್, ವಿಶ್ವದ ಎರಡನೆ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಬ್ಲೂಮ್ ಬರ್ಗ್ ಬಿಲಿಯನೇರ್ಸ್ ಸೂಚ್ಯಂಕದ ಪ್ರಕಾರ, ಮೆಟಾವರ್ಸ್ ನ ಷೇರು ಮೌಲ್ಯವು ಇತ್ತೀಚಿನ ತಿಂಗಳುಗಳಲ್ಲಿ ಏರಿಕೆ ಕಾಣುತ್ತಿರುವುದರಿಂದ, ಅದರ ಒಟ್ಟಾರೆ ಮೌಲ್ಯವು 206.2 ಬಿಲಿಯನ್ ಡಾಲರ್ ದಾಟಿದೆ. ಇದರಿಂದಾಗಿ, ಮಾರ್ಕ್ ಝುಕರ್ ಬರ್ಗ್ ಆಸ್ತಿ ಮೌಲ್ಯವು ಅಮೆಝಾನ್ ಇಂಕ್ […]

ವಿಶ್ವದ ಎರಡನೆ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಮಾರ್ಕ್ ಝುಕರ್ ಬರ್ಗ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಹೆಲೆನ್ ಚಂಡಮಾರುತಕ್ಕೆ 43 ಮಂದಿ ಬಲಿ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 28. ಆಗ್ನೇಯ ಅಮೇರಿಕಾ ಭಾಗದಲ್ಲಿ ಹೆಲೆನ್ ಚಂಡಮಾರುತ ಅಪ್ಪಳಿಸಿದ ಪರಿಣಾಮ ಕನಿಷ್ಠ 43 ಜನರು ಮೃತಪಟ್ಟಿದ್ದು ಅಪಾರ ಪ್ರಮಾಣದ ಹಾನಿಯಾಗಿರುವ ಘಟನೆ ವರದಿಯಾಗಿದೆ. ಪೋಲೀರಿಡಾಕ್ಕೆ ಹೆಲೆನ್ ಚಂಡಮಾರುತ ಅಪ್ಪಳಿಸುತ್ತಿದ್ದಂತೆ ನಾಟಕೀಯ ರೀತಿಯಲ್ಲಿ ಪ್ರವಾಹ ಉಂಟಾಗಿದ್ದು ಇದರಿಂದ ಜನರನ್ನು ರಕ್ಷಣೆ ಮಾಡಲು ರಕ್ಷಣಾ ತಂಡಗಳು ಹರಸಾಹಸ ನಡೆಸಿದ್ದಾರೆ. ಲಕ್ಷಾಂತರ ಜನರು ವಿದ್ಯುತ್ ಇಲ್ಲದೆ ಕತ್ತಲೆಯಲ್ಲಿ ಕಾಲ ಕಳೆಯುವಂತಾಗಿದೆ  

ಹೆಲೆನ್ ಚಂಡಮಾರುತಕ್ಕೆ 43 ಮಂದಿ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಲೆಬನಾನ್‍ಗೆ ಪ್ರಯಾಣಿಸದಂತೆ ನಾಗರಿಕರಿಗೆ ಭಾರತ ರಾಯಭಾರ ಕಚೇರಿ ಸೂಚನೆ

(ನ್ಯೂಸ್ ಕಡಬ) newskadaba.com  ಬರ್ಲಿನ್, ಸೆ. 26. ಇಸ್ರೇಲ್‌ ಸೇನೆಯಿಂದ ವೈಮಾನಿಕ ದಾಳಿ ಮತ್ತು ಪೇಜರ್‌ಗಳ ಸ್ಫೋಟದ ನಂತರ ಲೆಬನಾನ್‍ನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮುಂದಿನ ಸೂಚನೆ ಬರುವವರೆಗೂ ಲೆಬನಾನ್‍ಗೆ ಪ್ರಯಾಣಿಸದಂತೆ ಬೈರುತ್‍ನಲ್ಲಿರುವ ಭಾರತದ ರಾಯಭಾರ ಕಚೇರಿ ತನ್ನ ನಾಗರಿಕರಿಗೆ ಸೂಚನೆ ನೀಡಿದೆ. ಲೆಬನಾನ್‍ನಲ್ಲಿ ನೆಲೆಸಿರುವ ಭಾರತೀಯ ಪ್ರಜೆಗಳಿಗೆ ಆದಷ್ಟು ಬೇಗ ದೇಶವನ್ನು ತೊರೆಯುವಂತೆ ಸಲಹೆ ನೀಡಲಾಗಿದೆ. ಕಾರಣಾಂತರಗಳಿಂದ ಲೆಬನಾನ್‍ನಲ್ಲೇ ಉಳಿದ ಜನ ತೀವ್ರ ಎಚ್ಚರಿಕೆಯಿಂದ ಹಾಗೂ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಸೂಚಿಸಲಾಗಿದೆ.  

ಲೆಬನಾನ್‍ಗೆ ಪ್ರಯಾಣಿಸದಂತೆ ನಾಗರಿಕರಿಗೆ ಭಾರತ ರಾಯಭಾರ ಕಚೇರಿ ಸೂಚನೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕ್ಯಾಲಿಫೋರ್ನಿಯಾದ ಬ್ಯಾಪ್ಸ್ ಶ್ರೀ ಸ್ವಾಮಿನಾರಾಯಣ ಮಂದಿರ ಧ್ವಂಸಗೊಳಿಸಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com  ಕ್ಯಾಲಿಫೋರ್ನಿಯಾ, ಸೆ. 26. ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೊದಲ್ಲಿರುವ ಬ್ಯಾಪ್ಸ್ ಶ್ರೀ ಸ್ವಾಮಿನಾರಾಯಣ ಮಂದಿರವನ್ನು ಸೆಪ್ಟೆಂಬರ್ 25 ರ ರಾತ್ರಿ ಹಿಂದೂ ವಿರೋಧಿ ಸಂದೇಶಗಳೊಂದಿಗೆ ಧ್ವಂಸಗೊಳಿಸಲಾಯಿತು. ನ್ಯೂಯಾರ್ಕ್‌ನ ಮೆಲ್‌ವಿಲ್ಲೆಯಲ್ಲಿರುವ ಬ್ಯಾಪ್ಸ್ ಮಂದಿರದಲ್ಲಿ ಇದೇ ರೀತಿಯ ಘಟನೆ ನಡೆದ ಹತ್ತು ದಿನಗಳ ನಂತರ ಈ ಅಪವಿತ್ರ ಕೃತ್ಯವು ಸಂಭವಿಸಿದೆ. ನ್ಯೂಯಾರ್ಕ್​​ನಲ್ಲಿ ಸ್ವಾಮಿ ನಾರಾಯಣ ದೇವಾಲಯದ ಮೇಲೆ ನಡೆದ ದಾಳಿಯೂ ಕೂಡ ಕ್ಯಾಲಿಫೋರ್ನಿಯಾ ಹಾಗೂ ಕೆನಡಾದಲ್ಲಿ ನಡೆದ ಮಾದರಿಯಲ್ಲಿಯೇ ನಡೆದಿದೆ. ಇದರ ಹಿಂದೆ ಖಲಿಸ್ತಾನಿ ಉಗ್ರರ ಕೈವಾಡವಿರುವ ಸಾಧ್ಯತೆ

ಕ್ಯಾಲಿಫೋರ್ನಿಯಾದ ಬ್ಯಾಪ್ಸ್ ಶ್ರೀ ಸ್ವಾಮಿನಾರಾಯಣ ಮಂದಿರ ಧ್ವಂಸಗೊಳಿಸಿದ ಕಿಡಿಗೇಡಿಗಳು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಪಾಕಿಸ್ತಾನಿ ಭಿಕ್ಷುಕರು ದೇಶಕ್ಕೆ ಪ್ರವೇಶಿಸದಂತೆ ಸೌದಿ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ರಿಯಾದ್, ಸೆ. 25. ಧಾರ್ಮಿಕ ಯಾತ್ರೆಯ ನೆಪದಲ್ಲಿ ದೇಶಕ್ಕೆ ಆಗಮಿಸುತ್ತಿರುವ ಪಾಕಿಸ್ತಾನಿ ಭಿಕ್ಷುಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೌದಿ ಅರೇಬಿಯಾ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ ಎನ್ನಲಾಗಿದೆ. ಸೌದಿ ಹಜ್ ಸಚಿವಾಲಯವು ಪಾಕಿಸ್ತಾನದ ಧಾರ್ಮಿಕ ವ್ಯವಹಾರಗಳ ಸಚಿವಾಲಯಕ್ಕೆ ಎಚ್ಚರಿಕೆ ನೀಡಿದೆ, “ಪಾಕಿಸ್ತಾನಿ ಭಿಕ್ಷುಕರು ಉಮ್ರಾ ವೀಸಾಗಳ ಅಡಿಯಲ್ಲಿ ರಾಜ್ಯವನ್ನು ಪ್ರವೇಶಿಸುವುದನ್ನು ತಡೆಯಲು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ” ಎಂದು ಪತ್ರಿಕೆ ಹೇಳಿದೆ.  

ಪಾಕಿಸ್ತಾನಿ ಭಿಕ್ಷುಕರು ದೇಶಕ್ಕೆ ಪ್ರವೇಶಿಸದಂತೆ ಸೌದಿ ಎಚ್ಚರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ನ್ಯೂಯಾರ್ಕ್‌ನಲ್ಲಿ ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ ಭೇಟಿಯಾದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 24. ವಿಶ್ವಸಂಸ್ಥೆಯ ಶೃಂಗಸಭೆ ಹಿನ್ನೆಲೆ ಅಮೆರಿಕಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನ್ಯೂಯಾರ್ಕ್‌ನಲ್ಲಿ ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನ ಭೇಟಿಯಾಗಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಇದು ಮೋದಿ-ಝಲೆನ್ಸ್ಕಿ ನಡುವಿನ 3ನೇ ಭೇಟಿಯಾಗಿದ್ದು, ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷವನ್ನು ಆದಷ್ಟು ಬೇಗನೇ ಇತ್ಯರ್ಥಗೊಳಿಸಲು, ಪ್ರದೇಶದಲ್ಲಿ ಶಾಂತಿ ನೆಲೆಸಲು ಮತ್ತು ಸ್ಥಿರತೆ ಕಾಪಾಡಲು ಮಾಡುತ್ತಿರುವ ಭಾರತದ ಪ್ರಯತ್ನಗಳನ್ನು ಝಲೆನ್ಸ್ಕಿ ಶ್ಲಾಘಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದುಕೊಂಡಿರುವ

ನ್ಯೂಯಾರ್ಕ್‌ನಲ್ಲಿ ಉಕ್ರೇನ್‌ ಅಧ್ಯಕ್ಷ ಝೆಲೆನ್ಸ್ಕಿ ಭೇಟಿಯಾದ ಪ್ರಧಾನಿ ಮೋದಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಬಾಹ್ಯಾಕಾಶದಿಂದ ಮತ ಚಲಾಯಿಸಲಿರುವ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 14. ನಾಸಾದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಲ್ಲಿದ್ದುಕೊಂಡೆ ಅಮೆರಿಕದ ಅಧ್ಯಕ್ಷಿಯ ಚುನಾವಣೆಗೆ ಮತ ಚಲಾವಣೆ ಮಾಡಲಿದ್ದಾರೆ ಎನ್ನಲಾಗಿದೆ. ನಾಸಾದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಸ್ಟಾರ್‌ ಲೈನರ್‌ ತಾಂತ್ರಿಕ ಸಮಸ್ಯೆಗಳಿಂದ ಬಾಹ್ಯಾಕಾಶದಲ್ಲೇ ಉಳಿದುಕೊಂಡಿದ್ದು, ಭೂಮಿಗೆ ವಾಪಾಸ್ಸು ಬರಲು 2025ರ ಫೆಬ್ರವರಿವರೆಗೆ ಕಾಯಬೇಕಾಗುತ್ತದೆ. ಅಮೆರಿಕದಲ್ಲಿ ನವೆಂಬರ್‌ ನಲ್ಲಿ ಚುನಾವಣೆ ನಡೆಯಲಿದೆ. ಚುನಾವಣೆಯಲ್ಲಿ ಬಾಹ್ಯಾಕಾಶದಿಂದಲೇ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಮತಚಲಾಯಿಸಲಿದ್ದಾರೆ.  

ಬಾಹ್ಯಾಕಾಶದಿಂದ ಮತ ಚಲಾಯಿಸಲಿರುವ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ನೇಪಾಳದ ಹೂಡಿಕೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸುಶೀಲ್ ಗ್ಯಾವಾಲಿ ನೇಮಕ

(ನ್ಯೂಸ್ ಕಡಬ) newskadaba.com ಕಠ್ಮಂಡು, ಸೆ. 13.  ನೇಪಾಳದ ಹೂಡಿಕೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಒ) ಸುಶೀಲ್ ಗ್ಯಾವಾಲಿ ಅವರನ್ನು ಸರ್ಕಾರ ನೇಮಿಸಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಗ್ಯಾವಲಿ ಅವರನ್ನು ಸಿಇಒ ಆಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ. ಪ್ರಧಾನಿ ಕೆಪಿ ಶರ್ಮಾ ಒಲಿ ನೇಪಾಳದ ಹೂಡಿಕೆ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರೆ, ಹಣಕಾಸು ಸಚಿವ ಬಿಷ್ಣು ಪೌಡೆಲ್ ಉಪಾಧ್ಯಕ್ಷ ಸ್ಥಾನವನ್ನು ಹೊಂದಿದ್ದಾರೆ. ಶಿಫಾರಸ್ಸು ಸಮಿತಿಯು ಆಯ್ಕೆ ಮಾಡಿದ 5 ಅಭ್ಯರ್ಥಿಗಳ ಪೈಕಿ

ನೇಪಾಳದ ಹೂಡಿಕೆ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಸುಶೀಲ್ ಗ್ಯಾವಾಲಿ ನೇಮಕ Read More »

ಅಂತರ್ರಾಷ್ಟ್ರೀಯ ನ್ಯೂಸ್

ಸೆ. 21ರಂದು ಅಮೆರಿಕದಲ್ಲಿ ಕ್ವಾಡ್ ಶೃಂಗಸಭೆ – ಪ್ರಧಾನಿ ಮೋದಿ ಭಾಗಿ 

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 13.  ಅಮೆರಿಕದ ಅಧ್ಯಕ್ಷ ಜೋ ಬೈಡನ್​ ಸೆಪ್ಟೆಂಬರ್ 21 ರಂದು ಡೆಲವೇರ್‌ ನಲ್ಲಿ ನಾಲ್ಕನೇ ವ್ಯಕ್ತಿಗತ ಕ್ವಾಡ್ ನಾಯಕರ ಶೃಂಗಸಭೆಯನ್ನು ಆಯೋಜಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬೈಡನ್​-ಹ್ಯಾರಿಸ್ ಆಡಳಿತವು 2021 ರಲ್ಲಿ, ಶ್ವೇತಭವನದಲ್ಲಿ ಕ್ವಾಡ್ ನಾಯಕರ ಸಮ್ಮೇಳನವನ್ನು ನಡೆಸಲಾಯಿತು. ಅಂದಿನಿಂದ ಪ್ರತಿ ವರ್ಷ ಈ ಸಮ್ಮೇಳನ ನಡೆಯುತ್ತಿದೆ. ಕ್ವಾಡ್ ಶೃಂಗಸಭೆಯಲ್ಲಿ ಹಿಂದೂ ಮಹಾಸಾಗರ-ಪೆಸಿಫಿಕ್ ಪ್ರದೇಶ, ಮಿಲಿಟರಿ, ಆರೋಗ್ಯ, ನೈಸರ್ಗಿಕ ವಿಕೋಪ, ಸಾಗರ ಭದ್ರತೆ, ಗುಣಮಟ್ಟದ ಮೂಲಸೌಕರ್ಯ, ತಂತ್ರಜ್ಞಾನ

ಸೆ. 21ರಂದು ಅಮೆರಿಕದಲ್ಲಿ ಕ್ವಾಡ್ ಶೃಂಗಸಭೆ – ಪ್ರಧಾನಿ ಮೋದಿ ಭಾಗಿ  Read More »

ಅಂತರ್ರಾಷ್ಟ್ರೀಯ ನ್ಯೂಸ್

ಅಜಾನ್- ನಮಾಜ್ ವೇಳೆ ಪ್ರಾರ್ಥನಾ ಕೇಂದ್ರಗಳ ಮೈಕ್ ಬಂದ್ ಮಾಡುವಂತೆ ಬಾಂಗ್ಲಾ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಢಾಕಾ, ಸೆ. 12.  ಅಜಾನ್ ಮತ್ತು ನಮಾಜ್ ವೇಳೆ ಎಲ್ಲಾ ಮಂದಿರ ಹಾಗೂ ಪ್ರಾರ್ಥನಾ ಕೇಂದ್ರಗಳ ಮೈಕ್ ಬಂದ್ ಮಾಡುವಂತೆ ಬಾಂಗ್ಲಾದೇಶದ ಸರ್ಕಾರ ಸೂಚಿಸಿದೆ. ನಮಾಜ್ ಹಾಗೂ ಆಜಾನ್‍ಗೂ 5 ನಿಮಿಷ ಮೊದಲೇ ಮಂದಿರಗಳ ಮೈಕ್ ಬಂದ್ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ. ಬಾಂಗ್ಲಾದೇಶದಲ್ಲಿ ಹೊಸದಾಗಿ ರಚನೆಯಾಗಿರುವ ಮಧ್ಯಂತರ ಸರ್ಕಾರ ಹಿಂದೂ ಸಮುದಾಯಕ್ಕೆತಾತ್ಕಾಲಿಕವಾಗಿ ದುರ್ಗಾ ಪೂಜೆ ಸಂಬಂಧಿತ ಚಟುವಟಿಕೆಗಳು, ವಿಶೇಷ ಸಂಗೀತ ಕಾರ್ಯಕ್ರಮವನ್ನು ನಮಾಜ್ ಹಾಗೂ ಆಜಾನ್ ವೇಳೆ ನಿಲ್ಲಿಸುವಂತೆ ಸೂಚಿಸಿದೆ. ದೇಶದಲ್ಲಿ ವಾರ್ಷಿಕ

ಅಜಾನ್- ನಮಾಜ್ ವೇಳೆ ಪ್ರಾರ್ಥನಾ ಕೇಂದ್ರಗಳ ಮೈಕ್ ಬಂದ್ ಮಾಡುವಂತೆ ಬಾಂಗ್ಲಾ ಸರ್ಕಾರ ಆದೇಶ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top