jagadish shetter

ರಾಹುಲ್‌ ಆರೋಪದಲ್ಲಿ ಹುರುಳಿಲ್ಲ: ಜಗದೀಶ್‌ ಶೆಟ್ಟರ್

(ನ್ಯೂಸ್‌ ಕಡಬ) newskadaba.com, ಆ.08: ಲೋಕಸಭಾ ಚುನಾವಣೆಯ ವೇಳೆ ಮತಗಳ್ಳತನ ನಡೆದಿದೆ ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಬಿಜೆಪಿ ಸಂಸದ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.‌ ದೆಹಲಿಯಲ್ಲಿ ಮಾತನಾಡಿದ ಅವರು, ಮತಗಳ್ಳತನದ ಬಗ್ಗೆ ಈಗ ಆರೋಪ ಮಾಡುತ್ತಿದ್ದಾರೆ. ಒಂದು ವರ್ಷದ ಹಿಂದೆ ಏಕೆ ಮಾಡಿಲ್ಲ. ಈ ವಿಚಾರವಾಗಿ ನಿಮ್ಮ ಬೆಂಗಳೂರು ಸೆಂಟ್ರಲ್‌ನ ಕಾಂಗ್ರೆಸ್‌ ಅಭ್ಯರ್ಥಿ ಏಕೆ ಪ್ರಶ್ನೆ ಮಾಡಿಲ್ಲ. ಈ ಬಗ್ಗೆ ಇಲ್ಲಿವರೆಗೆ ಏಕೆ ದೂರು ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. […]

ರಾಹುಲ್‌ ಆರೋಪದಲ್ಲಿ ಹುರುಳಿಲ್ಲ: ಜಗದೀಶ್‌ ಶೆಟ್ಟರ್ Read More »

ರಾಷ್ಟ್ರೀಯ ನ್ಯೂಸ್

ವಿಧಾನಪರಿಷತ್ ಉಪಚುನಾವಣೆ ➤ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20. ರಾಜ್ಯ ವಿಧಾನಸಭೆ ಸದಸ್ಯರಿಂದ ವಿಧಾನಪರಿಷತ್ ನ ಖಾಲಿ ಇರುವ ಮೂರು ಸ್ಥಾನಗಳಿಗೆ ಜೂ. 30ರಂದು ನಡೆಯಲಿರುವ ಚುನಾವಣೆಗೆ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದು ನಾಮಪತ್ರ ಸಲ್ಲಿಸಿದರು. ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಹಾಗೂ ಸಚಿವ ಎಂ.ಬಿ.ಪಾಟೀಲ್ ಉಪಸ್ಥಿತರಿದ್ದರು.

ವಿಧಾನಪರಿಷತ್ ಉಪಚುನಾವಣೆ ➤ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಕೆ Read More »

ಕರ್ನಾಟಕ
Scroll to Top