jammu- kashmir

ಜಮ್ಮು & ಕಾಶ್ಮೀರದ ನಾಗ್ರೋಟಾದಲ್ಲಿ ಬಿಜೆಪಿಗೆ ಜಯ- ಒಡಿಶಾದ ನುವಾಪಾದದಲ್ಲಿ ಮುನ್ನಡೆ

(ನ್ಯೂಸ್‌ ಕಡಬ) newskadaba.com,  ನ.14:   ಆರು ರಾಜ್ಯಗಳು ಹಾಗೂ ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಸೇರಿ ಎಂಟು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶಗಳನ್ನು ಶುಕ್ರವಾರ ಭಾರತೀಯ ಚುನಾವಣಾ ಆಯೋಗ ಪ್ರಕಟಿಸಲಿದೆ. ನವೆಂಬರ್ 11 ರಂದು ಈ ಸ್ಥಾನಗಳಿಗೆ ಮತದಾನ ನಡೆದಿತ್ತು. ಬಿಹಾರ ವಿಧಾನಸಭಾ ಚುನಾವಣೆಯ ಜೊತೆಗೆ ಬೆಳಗ್ಗೆ 8 ಗಂಟೆಗೆ ಉಪಚುನಾವಣೆಗಳ ಎಣಿಕೆ ಪ್ರಾರಂಭವಾಯಿತು. ಉಪಚುನಾವಣೆ ನಡೆದ ಕ್ಷೇತ್ರಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಬುಡ್ಗಮ್ ಮತ್ತು ನಾಗ್ರೋಟಾ, ಮಿಜೋರಾಂನ ಡಂಪಾ, ರಾಜಸ್ಥಾನದ ಅಂತಾ, ಜಾರ್ಖಂಡ್‌ನ ಘಟ್ಶಿಲಾ, ತೆಲಂಗಾಣದ ಜುಬಿಲಿ […]

ಜಮ್ಮು & ಕಾಶ್ಮೀರದ ನಾಗ್ರೋಟಾದಲ್ಲಿ ಬಿಜೆಪಿಗೆ ಜಯ- ಒಡಿಶಾದ ನುವಾಪಾದದಲ್ಲಿ ಮುನ್ನಡೆ Read More »

ರಾಷ್ಟ್ರೀಯ ನ್ಯೂಸ್

ಜಮ್ಮು- ಕಾಶ್ಮೀರದಲ್ಲಿ ಭೂಕುಸಿತ- ರಿಯಾಸಿಯಲ್ಲಿ 7, ರಾಂಬನ್ನಲ್ಲಿ 4 ಮಂದಿ ಸಾವು

(ನ್ಯೂಸ್‌ ಕಡಬ) newskadaba.com, ಆಗಸ್ಟ್ 30: ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯಲ್ಲಿ ಶುಕ್ರವಾರ ಮೇಘಸ್ಫೋಟ ಉಂಟಾಗಿದೆ. ಭೂಕುಸಿತಗಳು ಮತ್ತು ಮೇಘಸ್ಫೋಟದ ನಂತರ ಕನಿಷ್ಠ 11 ಜನರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ರಿಯಾಸಿ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೂಕುಸಿತದಿಂದ ಮನೆ ಕುಸಿದು ಒಂದೇ ಕುಟುಂಬದ ಏಳು ಸದಸ್ಯರು ಸಾವನ್ನಪ್ಪಿದ್ದಾರೆ. ಶನಿವಾರ ಬೆಳಿಗ್ಗೆ ಕಚ್ಚಾ ಮನೆಯ ಅವಶೇಷಗಳಿಂದ ಐದು ಮಕ್ಕಳು ಸೇರಿದಂತೆ ಎಲ್ಲಾ ಏಳು ಸದಸ್ಯರ ಶವಗಳನ್ನು ಹೊರತೆಗೆಯಲಾಯಿತು.   ರಂಬನ್‌ನಲ್ಲಿ,

ಜಮ್ಮು- ಕಾಶ್ಮೀರದಲ್ಲಿ ಭೂಕುಸಿತ- ರಿಯಾಸಿಯಲ್ಲಿ 7, ರಾಂಬನ್ನಲ್ಲಿ 4 ಮಂದಿ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮ್ಮು ಕಾಶ್ಮೀರ: ಭೀಕರ ಮಳೆಯ ಪರಿಣಾಮ ಸಾವಿನ ಸಂಖ್ಯೆ 41 ಕ್ಕೆ ಏರಿಕೆ-ಕೇಂದ್ರದಿಂದ ನೆರವಿನ ಭರವಸೆ

(ನ್ಯೂಸ್‌ ಕಡಬ) newskadaba.com, ಆ.28: ಶ್ರೀನಗರ: ಭೀಕರ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರ ತತ್ತರಿಸಿ ಹೋಗಿದ್ದು, ಭೂ ಕುಸಿತ, ಪ್ರವಾಹ ಹಾಗೂ ಮಳೆಯಿಂದಾಗಿ ಸಂಭವಿಸಿದ ಅನಾಹುತದಿಂದ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಮಳೆಯಿಂದಾಗಿ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 36ಕ್ಕೆ ಏರಿದೆ. ಇದರ ಜೊತೆಗೆ ಮಳೆ ಸಂಬಂಧಿತ ಅವಘಡದಲ್ಲಿ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ರೆಸಾಯಿಯ ಅರ್ಧ್ ಕುವರಿಯಲ್ಲಿ ಆರು ಮಂದಿ ಮೃತಪಟ್ಟಿದ್ದು, ಅತಿಹೆಚ್ಚಿನ ಸಾವು ನೋವು ಇಲ್ಲಿ ಸಂಭವಿಸಿದೆ.

ಜಮ್ಮು ಕಾಶ್ಮೀರ: ಭೀಕರ ಮಳೆಯ ಪರಿಣಾಮ ಸಾವಿನ ಸಂಖ್ಯೆ 41 ಕ್ಕೆ ಏರಿಕೆ-ಕೇಂದ್ರದಿಂದ ನೆರವಿನ ಭರವಸೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವೈಷ್ಣೋದೇವಿ ಯಾತ್ರೆ ಮಾರ್ಗದಲ್ಲಿ ಭೂಕುಸಿತ: ಸಾವಿನ ಸಂಖ್ಯೆ 30ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com, ಆ.27:‌‌ ಜಮ್ಮು–ಕಾಶ್ಮೀರದ ವೈಷ್ಣೋದೇವಿ ಯಾತ್ರೆ ಮಾರ್ಗದಲ್ಲಿ ಸಂಭವಿಸಿದ್ದ ಭೂಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಅವಶೇಷಗಳಡಿ ಹತ್ತಾರು ಮಂದಿ ಸಿಲುಕಿದ್ದರು. ನಿರಂತರ ಮಳೆಯ ಪರಿಣಾಮ ಜಮ್ಮು–ಕಾಶ್ಮೀರದ ಇತರ ಪ್ರದೇಶಗಳಲ್ಲಿಯೂ ಹಾನಿ ಸಂಭವಿಸಿದೆ. ಸದ್ಯ ವೈಷ್ಣೋದೇವಿ ಯಾತ್ರೆ ಸ್ಥಗಿತಗೊಳಿಸಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಜಮ್ಮು–ಕಾಶ್ಮೀರದಲ್ಲಿ 22 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ಅವರು ತುರ್ತು ಸಭೆ ಕರೆದು, ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಆಹಾರ,

ವೈಷ್ಣೋದೇವಿ ಯಾತ್ರೆ ಮಾರ್ಗದಲ್ಲಿ ಭೂಕುಸಿತ: ಸಾವಿನ ಸಂಖ್ಯೆ 30ಕ್ಕೆ ಏರಿಕೆ Read More »

ರಾಷ್ಟ್ರೀಯ ನ್ಯೂಸ್

ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಮೇಘಸ್ಪೋಟ; ಪ್ರವಾಹಕ್ಕೆ ಸಿಲುಕಿ ನಾಲ್ವರು ಸಾವು, ಮನೆಗಳಿಗೆ ಹಾನಿ

(ನ್ಯೂಸ್‌ ಕಡಬ) newskadaba.com, ಆ.26 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಮಂಗಳವಾರ ಭಾರೀ ಮೇಘಸ್ಪೋಟ ಸಂಭವಿಸಿದೆ. ಮೇಘಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಕಥುವಾ ಮತ್ತು ಕಿಶ್ತ್ವಾರ್‌ನಲ್ಲಿ ಈ ಹಿಂದೆ ಸಂಭವಿಸಿದ್ದ ರೀತಿಯಲ್ಲಿಯೇ ದೋಡಾ ಜಿಲ್ಲೆಯಲ್ಲಿ ಮೇಘಸ್ಪೋಟ ಸಂಭವಿಸಿದೆ. ಹಠಾತ್, ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿ 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಳು ಸೇರಿದಂತೆ ಜಮ್ಮು ಪ್ರದೇಶದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು

ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಮೇಘಸ್ಪೋಟ; ಪ್ರವಾಹಕ್ಕೆ ಸಿಲುಕಿ ನಾಲ್ವರು ಸಾವು, ಮನೆಗಳಿಗೆ ಹಾನಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಆರ್‌ಪಿಎಫ್‌ ವಾಹನ ಅಪಘಾತ: 3 ಸೈನಿಕರು ಸಾವು

(ನ್ಯೂಸ್‌ ಕಡಬ) newskadaba.com, ಆ.07: ಕೇಂದ್ರ ಮೀಸಲು ಪಡೆ ಸಿಬ್ಬಂದಿಗಳಿದ್ದ ವಾಹನ ಕಂದಕಕ್ಕೆ ಉರುಳಿ ಬಿದ್ದು, ಮೂವರು ಸೈನಿಕರು ಸಾವನ್ನಪ್ಪಿ, 15 ಮಂದಿ ಗಾಯಗೊಂಡಿರುವ ಘಟನೆ ಜಮ್ಮು–ಕಾಶ್ಮೀರದ ಉಧಂಪುರ್ ಜಿಲ್ಲೆಯ ‌ ನಲ್ಹಾದಲ್ಲಿ ನಡೆದಿದೆ. 23 ಮಂದಿ ಸಿಆರ್‌ಪಿಎಫ್‌ ಯೋಧರು ಬಸಂತ್‌ಘರ್‌ನಿಂದ ಮರಳುತ್ತಿದ್ದರು. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪಿದರೆ, ಗಂಭೀರ ಗಾಯಗೊಂಡ ಮತ್ತೋರ್ವ ಯೋಧ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್‌ ಅವರು ಉಧಂಪುರ್‌ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದು, ಗಾಯಗೊಂಡ ಯೋಧರಿಗೆ

ಸಿಆರ್‌ಪಿಎಫ್‌ ವಾಹನ ಅಪಘಾತ: 3 ಸೈನಿಕರು ಸಾವು Read More »

ರಾಷ್ಟ್ರೀಯ ನ್ಯೂಸ್

ಜಮ್ಮುಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

(ನ್ಯೂಸ್‌ ಕಡಬ) newskadaba.com, ಆ.05: ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮತ್ತು ಇತರ ಹಲವಾರು ರಾಜ್ಯಗಳ ಮಾಜಿ ರಾಜ್ಯಪಾಲ ಮತ್ತು ಹಿರಿಯ ರಾಜಕಾರಣಿ ಸತ್ಯಪಾಲ್ ಮಲಿಕ್ ನಿಧನರಾಗಿದ್ದಾರೆ.   ಅವರಿಗೆ 79 ವರ್ಷ ವಯಸ್ಸಾಗಿತ್ತು. ಮಲಿಕ್ ಮೂತ್ರಪಿಂಡ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದರು ಮತ್ತು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಜಮ್ಮುಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮ್ಮು ಕಾಶ್ಮೀರ ಭೂಕುಸಿತ – ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌, ಪುತ್ರ ಸಾವು

(ನ್ಯೂಸ್ ಕಡಬ) newdkadaba.com, ಆ. 02 ಶ್ರೀನಗರ: ಭಾರೀ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಪ್ರದೇಶದಲ್ಲಿ ಭೂಕುಸಿತ ಉಂಟಾಗಿ, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ ಹಾಗೂ ಅವರ ಪುತ್ರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ ರಾಜಿಂದರ್ ಸಿಂಗ್ ರಾಣಾ ಹಾಗೂ ಅವರ ಪುತ್ರ ಮೃತಪಟ್ಟಿದ್ದಾರೆ. ಅವರ ಪತ್ನಿ ಹಾಗೂ ಇನ್ನಿಬ್ಬರು ಮಕ್ಕಳು ಗಾಯಗೊಂಡಿದ್ದಾರೆ. ಶುಕ್ರವಾರ ಕುಟುಂಬ ಸಮೇತರಾಗಿ ಧರ್ಮರಿಯಿಂದ ಪಟ್ಟಿಯನ್‌ಗೆ ಕಾರಿನಲ್ಲಿ ಪ್ರಯಾಣಿಸುತ್ತಿರುವಾಗ ಈ ಅವಘಡ ಸಂಭವಿಸಿದೆ.

ಜಮ್ಮು ಕಾಶ್ಮೀರ ಭೂಕುಸಿತ – ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌, ಪುತ್ರ ಸಾವು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮ್ಮು ಕಾಶ್ಮೀರ: ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಓರ್ವ ಉಗ್ರ ಬಲಿ

(ನ್ಯೂಸ್ ಕಡಬ) newdkadaba.com, ಆ. 02: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಆಪರೇಷನ್ ಅಖಾಲ್’ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಹತ್ಯೆಗೀಡಾಗಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಗುಪ್ತಚರ ಮಾಹಿತಿ ಪಡೆದ ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ ‘ಆಪರೇಷನ್ ಅಖಾಲ್’ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿತು. ಅರಣ್ಯ ಪ್ರದೇಶ ಸುತ್ತುವರಿದು ಶೋಧ ಆರಂಭಿಸಿದ

ಜಮ್ಮು ಕಾಶ್ಮೀರ: ಭದ್ರತಾ ಪಡೆಗಳ ಎನ್ ಕೌಂಟರ್ ಗೆ ಓರ್ವ ಉಗ್ರ ಬಲಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಮತ್ತಿಬ್ಬರು ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com, ಜು. 30.  ಏಪ್ರಿಲ್‌ 22 ರ ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಕೊಂದ ಕೆಲವು ದಿನಗಳ ನಂತರ, ಇಂದು ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಭಯೋತ್ಪಾದಕರು ಲಷ್ಕರ್‌-ಎ-ತೈಬಾ ಭಯೋತ್ಪಾದಕ ಸಂಘಟನೆಗೆ ಸೇರಿದವರು ಎಂದು ತಿಳಿದುಬಂದಿದೆ.ಇಂದು ಬೆಳಿಗ್ಗೆ, ಸೇನೆಯ ವೈಟ್‌ ನೈಟ್‌ ಕಾರ್ಪ್ಸ್ ನಲ್ಲಿ ಪೋಸ್ಟ್‌ನಲ್ಲಿ ಪೂಂಚ್‌ ಸೆಕ್ಟರ್‌ನಲ್ಲಿ ಇಬ್ಬರು ವ್ಯಕ್ತಿಗಳ ಅನುಮಾನಾಸ್ಪದ ಚಲನವಲನವನ್ನು ಗಮನಿಸಿರುವುದಾಗಿ ತಿಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಮತ್ತಿಬ್ಬರು ಉಗ್ರರ ಹತ್ಯೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top