jammu- kashmir

ಜಮ್ಮು ಮತ್ತು ಕಾಶ್ಮೀರದ 48 ಪ್ರಮುಖ ಪ್ರವಾಸಿ ತಾಣಗಳು ತಾತ್ಕಾಲಿಕ ಬಂದ್

(ನ್ಯೂಸ್ ಕಡಬ) newskadaba.com ಎ. 29:  ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಕೇಂದ್ರಾಡಳಿತ ಪ್ರದೇಶದ 87 ಪ್ರವಾಸಿ ತಾಣಗಳ ಪೈಕಿ 48 ಪ್ರವಾಸಿ ತಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲು ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ನಡೆದ ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ತೀವ್ರಗೊಂಡ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಯೂಸ್ಮಾರ್ಗ್, ತೌಸಿಮೈದನ್, ದೂದ್ಪತ್ರಿ, ಬಂಗುಸ್, ಕರಿವಾನ್ ಡೈವರ್ ಚಂಡಿಗಮ್, ಅಹರ್ಬಲ್, ಕೌಸರ್ನಾಗ್, ವುಲರ್/ವಾಟ್ಲಾಬ್, ರಾಮ್ಪೋರಾ ಬಂಗುಸ್ ವ್ಯಾಲಿ, ರಾಜ್ಪೋರಾ ಮತ್ತು ಚೀರ್‌ಹಾರ್ ಮುಚ್ಚಲು […]

ಜಮ್ಮು ಮತ್ತು ಕಾಶ್ಮೀರದ 48 ಪ್ರಮುಖ ಪ್ರವಾಸಿ ತಾಣಗಳು ತಾತ್ಕಾಲಿಕ ಬಂದ್ Read More »

ಬ್ರೇಕಿಂಗ್ ನ್ಯೂಸ್

ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆಗಳಿಂದ ಎನ್ಕೌಂಟರ್ – ಐವರು ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com ಡಿ. 19 ಮುಂಬೈ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್ ನಡೆದಿದ್ದು ಐವರು ಉಗ್ರರ ಹತ್ಯೆಯಾಗಿದೆ ಎಂದು ವರದಿಯಾಗಿದೆ. ಕುಲ್ಗಾಮ್ ಜಿಲ್ಲೆಯಲ್ಲಿ ಗುರುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್​ಕೌಂಟರ್​ನಲ್ಲಿ ಯೋಧರು ಐವರು ಉಗ್ರರನ್ನು ಸದೆಬಡಿದಿದ್ದಾರೆ ಎಂದು ಹೇಳಿದ್ದಾರೆ. ಬುಧವಾರ ರಾತ್ರಿ ಜಿಲ್ಲೆಯ ಬೇಹಿಬಾಗ್ ಪ್ರದೇಶದ ಕಡದರ್‌ನಲ್ಲಿ ಶಂಕಿತ ಭಯೋತ್ಪಾದಕರು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ

ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆಗಳಿಂದ ಎನ್ಕೌಂಟರ್ – ಐವರು ಉಗ್ರರ ಹತ್ಯೆ Read More »

ಕರಾವಳಿ

ಗುಡ್ಡ ಕುಸಿದು ಬೆಳಗಾವಿ ಮೂಲದ ಯೋಧ ಮೃತ್ಯು

(ನ್ಯೂಸ್ ಕಡಬ) newskadaba.com ಡಿ. 18ಜಮ್ಮು & ಕಾಶ್ಮೀರ್:  ಜಮ್ಮು-ಕಾಶ್ಮೀರದ ಲಡಾಖ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಯೋಧರೊಬ್ಬರು ಗುಡ್ಡ ಕುಸಿತದಿಂದ  ಡಿ. 14ರಂದು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಇರಣಟ್ಟಿ ಗ್ರಾಮದ ಮಹೇಶ್ ಅವರು ಗುಡ್ಡ ಕುಸಿದು ಸಾವನ್ನಪ್ಪಿದ್ದಾರೆ. ಸೇನಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದ್ದರು. ಸೈನಿಕ ಮಹೇಶ್ ಅವರ ಪಾರ್ಥಿವ ಶರೀರ ಡಿಸೆಂಬರ್ 17ರಂದು ಸಂಜೆ ಇರಣಟ್ಟಿ ಗ್ರಾಮಕ್ಕೆ ಆಗಮಿಸಿತು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಗೌರವ ಸಮರ್ಪಿಸಿದರು.

ಗುಡ್ಡ ಕುಸಿದು ಬೆಳಗಾವಿ ಮೂಲದ ಯೋಧ ಮೃತ್ಯು Read More »

ಕರ್ನಾಟಕ

ಜಮ್ಮು ಕಾಶ್ಮೀರ: ಯೋಧರೋರ್ವರು ಸರ್ವಿಸ್ ರೈಫಲ್ ನಿಂದ ಗುಂಡು ಹಾರಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಡಿ. 12 ಹೊಸದಿಲ್ಲಿ: ಸೇನಾ ಸಿಬ್ಬಂದಿಯೋರ್ವರು  ಜಮ್ಮು- ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಸರ್ವಿಸ್ ರೈಫಲ್‌ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ  ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಜಕೋಟೆ ಪ್ರದೇಶದ ಅಂಜನವಾಲಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸೇನಾ ಸಿಬ್ಬಂದಿ ಇಂದೇಶ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡವರು. ಆತ್ಮಹತ್ಯೆಯ ನಿಖರ ಕಾರಣಗಳು ತಿಳಿದು ಬಂದಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರ: ಯೋಧರೋರ್ವರು ಸರ್ವಿಸ್ ರೈಫಲ್ ನಿಂದ ಗುಂಡು ಹಾರಿಸಿ ಆತ್ಮಹತ್ಯೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮ್ಮು: ಭದ್ರತಾ ಪಡೆಗಳಿಂದ 3 ಭಯೋತ್ಪಾದಕರ ಹತ್ಯೆ

(ನ್ಯೂಸ್ ಕಡಬ)newskadaba.com, ಅ. 29 ಜಮ್ಮು: ಜಮ್ಮು ಕಾಶ್ಮೀರದ ಅಖ್ನೂರ್ ಸೆಕ್ಟರ್ನ ಹಳ್ಳಿಯೊಂದರ ಸಮೀಪ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಇದರಿಂದಾಗಿ ಗಡಿ ನಿಯಂತ್ರಣ ರೇಖೆ ಬಳಿ ಕಳೆದ 27 ಗಂಟೆಗಳ ಅವಧಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ ಗಡಿ ನಿಯಂತ್ರಣ ರೇಖೆ ಬಳಿ ಸಾಗುತ್ತಿದ್ದ ಬೆಂಗಾವಲು ಪಡೆಯ ಸೇನಾ ಆಂಬ್ಯುಲೆನ್ಸ್ ಗೆ ಗುಂಡು ಹಾರಿಸಿದ ಮೂವರು ಭಯೋತ್ಪಾದಕರಲ್ಲಿ ಓರ್ವ

ಜಮ್ಮು: ಭದ್ರತಾ ಪಡೆಗಳಿಂದ 3 ಭಯೋತ್ಪಾದಕರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಜಮ್ಮು ಕಾಶ್ಮೀರ: ನೂತನ ಮುಖ್ಯಮಂತ್ರಿಯಾಗಿ ಓಮರ್ ಅಬ್ದುಲ್ಲಾ

(ನ್ಯೂಸ್ ಕಡಬ)newskadaba.com, ಅ. 08.ಶ್ರೀನಗರ:  ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್‌ ಅಬ್ದುಲ್ಲಾ ಆಯ್ಕೆ ಆಗಿದ್ದಾರೆ. ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌, ಕಾಂಗ್ರೆಸ್‌ ಮೈತ್ರಿಕೂಟ ಜಯಗಳಿಸಿದ ಬೆನ್ನಲ್ಲೇ ಕಾಶ್ಮೀರದ ಮಾಜಿ ಸಿಎಂ ಫಾರೂಖ್‌ ಅಬ್ದುಲ್ಲಾ ಅವರು ಒಮರ್‌ ಅಬ್ದುಲ್ಲಾ ಅವರನ್ನು ಮುಂದಿನ ಸಿಎಂ ಎಂದು ಘೋಷಣೆ ಮಾಡಿದ್ದಾರೆ. ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷನಾಗಿರುವ ಒಮರ್ ಅಬ್ದುಲ್ಲಾ ಬುದ್ಗಾಮ್ ಮತ್ತು ಗಂದರ್ಬಾಲ್ ಕ್ಷೇತ್ರಗಳಿಂದ ಸ್ಪರ್ಧಿಸಿ ಗೆದ್ದಿದ್ದಾರೆ. ಅಬ್ದುಲ್ಲಾ ಕುಟುಂಬಕ್ಕೆ ಮೂರು ತಲೆಮಾರುಗಳಿಂದ ಗಂದೇರ್ಬಾಲ್ ಕ್ಷೇತ್ರ ಭದ್ರಕೋಟೆಯಾಗಿದೆ.

ಜಮ್ಮು ಕಾಶ್ಮೀರ: ನೂತನ ಮುಖ್ಯಮಂತ್ರಿಯಾಗಿ ಓಮರ್ ಅಬ್ದುಲ್ಲಾ Read More »

ಬ್ರೇಕಿಂಗ್ ನ್ಯೂಸ್

ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರ ಎನ್ ಕೌಂಟರ್

(ನ್ಯೂಸ್ ಕಡಬ)newskadaba.com  ಜಮ್ಮು, ಜ.17. ಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತ್ಯೆರಾಗಿದ್ದಾರೆ.  ಹತ್ಯೆಗೀಡಾದ ಉಗ್ರರನ್ನು ಅರ್ಬಾಸ್ ಮಿರ್ ಮತ್ತು ಶಾಹಿದ್ ಶೇಖ್ ಎಂದು ಗುರುತಿಸಲಾಗಿದ್ದು ಇವರು ಪುಲ್ವಾಮದವರಾಗಿದ್ದು ಭಯೋತ್ಪಾದಕ ಸಂಘಟನೆ ಎಲ್ ಇಟಿ ಜೊತೆ ಸಂಪರ್ಕ ಹೊಂದಿದವರಾಗಿದ್ದಾರೆ. ಇತ್ತೀಚೆಗೆ ಎನ್ ಕೌಂಟರ್ ನಲ್ಲಿ ಇಬ್ಬರೂ ತಪ್ಪಿಸಿಕೊಂಡಿದ್ದರು. ಬುದ್ಗಾಮದಲ್ಲಿ ಸೇನೆಯ ಯೋಧರು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಶಂಕಿತ ವಾಹನವನ್ನು ನಿಲ್ಲಿಸಿದರು. ಬಳಿಕ ಗುಂಡಿನ ಚಕಮಕಿ ನಡೆಯಿತು. ಈ ಬಾರಿ

ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರ ಎನ್ ಕೌಂಟರ್ Read More »

ರಾಷ್ಟ್ರೀಯ ನ್ಯೂಸ್

ಉಗ್ರರ ದಾಳಿ ➤ 50 ಜನರ ಬಂಧನ, ತೀವ್ರ ವಿಚಾರಣೆ..! 

(ನ್ಯೂಸ್ ಕಡಬ)newskadaba.com  ಜಮ್ಮು ಕಾಶ್ಮೀರ, ಜ.09. ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ದಾಂಗ್ರಿ ಹಳ್ಳಿಯಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆದ ದಾಳಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಸುಮಾರು 50 ಜನರನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಉಗ್ರರ ದಾಳಿಯಲ್ಲಿ ಏಳು ಮಂದಿ ಮೃತಪಟ್ಟು,  14 ಮಂದಿ ಗಾಯಗೊಂಡಿದ್ದರು. ಈ ದಾಳಿ ನಡೆದ ಸ್ಥಳೀಯ ಸ್ವಯಂ ಸೇವಕರನ್ನೊಳಗೊಂಡ ಹಳ್ಳಿಯ ರಕ್ಷಣಾ ಗಾರ್ಡ್ ನ್ನು ಆಡಳಿತ ಬಲಗೊಳಿಸಿತ್ತು. ಸಂಭಾವ್ಯ  ಒಳನುಸುಳುವಿಕೆ ಮಾರ್ಗಗಳ ಮೇಲೆ ಹದ್ದಿನ ಕಣ್ಣು ಇಡಲಾಗಿತ್ತು ಎಂದು ಅಧಿಕಾರಿಗಳು

ಉಗ್ರರ ದಾಳಿ ➤ 50 ಜನರ ಬಂಧನ, ತೀವ್ರ ವಿಚಾರಣೆ..!  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮ್ಮು-ಕಾಶ್ಮೀರದಲ್ಲಿ ಉಗ್ರರು ಹಾಗೂ ಭದ್ರತಾಪಡೆಯ ನಡುವೆ ಗುಂಡಿನ ಚಕಮಕಿ ➤ ಇಬ್ಬರು ಉಗ್ರರು ಹತ

(ನ್ಯೂಸ್ ಕಡಬ) newskadaba.com ಶ್ರೀನಗರ, ಡಿ. 28. ಜಮ್ಮು ಕಾಶ್ಮೀರದ ಸಿದ್ರಾ ಪ್ರದೇಶದಲ್ಲಿ ನಡೆದ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾದ ಬಗ್ಗೆ ಬುಧವಾರದಂದು ವರದಿಯಾಗಿದೆ. ಇಂದು ಮುಂಜಾನೆ ಟ್ರಕ್‌ ವೊಂದು ಸಂಚರಿಸುತ್ತಿದ್ದ ವೇಳೆ ಸಂಶಯ ಬಂದ ಹಿನ್ನೆಲೆ ಪೊಲೀಸರು ಟ್ರಕ್‌ ನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರೊಳಗೆ ಉಗ್ರರು ಅಡಗಿರುವುದು ಪತ್ತೆಯಾಗಿದೆ. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ತತ್‌ ಕ್ಷಣ ಕಾರ್ಯಪ್ರವೃತ್ತರಾದ ಭದ್ರತಾ ಪಡೆ

ಜಮ್ಮು-ಕಾಶ್ಮೀರದಲ್ಲಿ ಉಗ್ರರು ಹಾಗೂ ಭದ್ರತಾಪಡೆಯ ನಡುವೆ ಗುಂಡಿನ ಚಕಮಕಿ ➤ ಇಬ್ಬರು ಉಗ್ರರು ಹತ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top