Kadaba News

ʼಕಾರ್ಗಿಲ್ ವಿಜಯ್ ದಿವಸʼಕ್ಕೆ ಇಂದು 26ನೇ ವರ್ಷ

(ನ್ಯೂಸ್‌ ಕಡಬ)newskadaba.com ಜು.26: ಪ್ರತಿವರ್ಷ ಜುಲೈ 26ನ್ನು ಕಾರ್ಗಿಲ್‌ ವಿಜಯ್‌ ದಿವಸ್‌ ಎಂದು ಆಚರಿಸಲಾಗುತ್ತದೆ. ಸತತ ಮೂರು ತಿಂಗಳ ಸಮರದ ಬಳಿಕ ಭಾರತೀಯ ಸೇನೆ ಪಾಕಿಸ್ತಾನವನ್ನು ಸೆದೆಬಡಿದು, 1999 ರಲ್ಲಿ ಈ ದಿನದಂದು, ಭಾರತೀಯ ಸೇನೆಯು ಆಪರೇಷನ್ ವಿಜಯ್‌ನ ಯಶಸ್ಸನ್ನು ಘೋಷಿಸಿತು. ಪಾಕಿಸ್ತಾನಿ ಒಳನುಸುಳುಕೋರರು ಮತ್ತು ಸೈನಿಕರು ಕಾರ್ಗಿಲ್‌ನ ಎತ್ತರದ ಪರ್ವತ ಶಿಖರಗಳನ್ನು ಅಕ್ರಮವಾಗಿ ಆಕ್ರಮಿಸಿಕೊಂಡಾಗ ಪ್ರಾರಂಭವಾದ ಈ ಯುದ್ಧವು ಭಾರತೀಯ ಸೇನೆಯ ದೃಢ ಸಂಕಲ್ಪ ಮತ್ತು ಅಸಾಧಾರಣ ಧೈರ್ಯಕ್ಕೆ ಸಾಕ್ಷಿಯಾಯಿತು. 1998-99ರ ಚಳಿಗಾಲದಲ್ಲಿ ಕಾರ್ಗಿಲ್‌ನ ಕಣಿವೆಗಳಲ್ಲಿ […]

ʼಕಾರ್ಗಿಲ್ ವಿಜಯ್ ದಿವಸʼಕ್ಕೆ ಇಂದು 26ನೇ ವರ್ಷ Read More »

ರಾಷ್ಟ್ರೀಯ ನ್ಯೂಸ್, ವಿಶೇಷ ಲೇಖನಗಳು

ರೇಣುಕಾಸ್ವಾಮಿ ಪರ ಧ್ವನಿಯೆತ್ತಿದ ರಮ್ಯಾ..!

(ನ್ಯೂಸ್‌ ಕಡಬ)newskadaba.com ಜು.25: ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ. ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ ಎಂದು ರಮ್ಯಾ ಇನ್‌ಸ್ಟಾದಲ್ಲಿ ಸ್ಟೇಟಸ್‌ ಹಾಕಿದ್ದಾರೆ. ರಮ್ಯಾ ಬರೆದುಕೊಂಡಿರುವ ಪೋಸ್ಟ್ ಬಗ್ಗೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ಹಿಂದೆ ದರ್ಶನ್ ಬಂಧನವಾದಾಗ ನಟಿ ರಮ್ಯಾ ಜಾಲತಾಣದಲ್ಲಿ ಪೋಸ್ಟ್ ಮೂಲಕ ಪ್ರತಿಕ್ರಿಯೆ ನೀಡಿದ್ದರು. ಇದೀಗ ಸುಪ್ರೀಂ ಕೋರ್ಟ್‌ ನಡೆದ ವಿಚಾರಣೆಯ ಬಗ್ಗೆಯ ಪೋಸ್ಟ್‌ ಹಾಕಿದ್ದಾರೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್, ಪವಿತ್ರ ಸೇರಿ 17

ರೇಣುಕಾಸ್ವಾಮಿ ಪರ ಧ್ವನಿಯೆತ್ತಿದ ರಮ್ಯಾ..! Read More »

ಕರ್ನಾಟಕ

ದರ್ಶನ್‌ ಅರ್ಜಿ ವಿಚಾರಣೆ ಮುಂದೂಡಿಕೆ; ಗುರುವಾರ ಜಾಮೀನು ಭವಿಷ್ಯ

(ನ್ಯೂಸ್‌ ಕಡಬ) newskadaba.com ಜು. 22: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಮುಂದೂಡಿದೆ. ಗುರುವಾರ ದರ್ಶನ್‌ ಜಾಮೀನು ಭವಿಷ್ಯ ನಿರ್ಧಾರ ಆಗಲಿದೆ.   ನಟ ದರ್ಶನ್ ಪರ ಇಂದು ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಲಿಲ್ಲ. ಅವರು ಗೈರಾದ ಕಾರಣ ನಟನ ಪರ ಸಿದ್ಧಾರ್ಥ್ ದವೆ ವಾದ ಮಂಡಿಸಲಿದ್ದಾರೆ. ಹೀಗಾಗಿ, ಗುರುವಾರಕ್ಕೆ ವಿಚಾರಣೆ ಮುಂದೂಡಿಕೆಯಾಗಿದೆ.   ಕಪಿಲ್ ಸಿಬಲ್ ಗೈರು ಹಿನ್ನೆಲೆ ವಾದ ಮಂಡನೆಗೆ ಕಾಲಾವಕಾಶ ಕೋರಲಾಗಿದೆ.

ದರ್ಶನ್‌ ಅರ್ಜಿ ವಿಚಾರಣೆ ಮುಂದೂಡಿಕೆ; ಗುರುವಾರ ಜಾಮೀನು ಭವಿಷ್ಯ Read More »

ಸಿನಿಮಾ

ಕೆಎಂ ಬಾರ್ಸಿಲೋನಾ ವಿಎ ಎಂಬ ಹಡಗಿನಲ್ಲಿ ಏಕಾಏಕಿ ಬೆಂಕಿ; ಐವರು ಮೃತ್ಯು..!

(ನ್ಯೂಸ್‌ ಕಡಬ) newskadaba.com ಜು. 21: ಟೈಟಾನಿಕ್​ ಸಿನಿಮಾ ಮಾದರಿಯ ದುರಂತವೊಂದು ಇಂಡೋನೇಷಿಯಾದಲ್ಲಿ ನಡೆದಿದೆ. 280 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಹಗಡು ಬೆಂಕಿಗಾಹುತಿ ಆಗಿದೆ. ಇದರಿಂದ ಜೀವ ಉಳಿಸಿಕೊಳ್ಳಲು ಜನರು ಸಮುದ್ರಕ್ಕೆ ಹಾರಿದ್ದು, ಸದ್ಯ ಐವರು ಜೀವಬಿಟ್ಟಿದ್ದಾರೆ ಎಂದು ವರದಿಯಾಗಿದೆ. ಉತ್ತರ ಸುಲಾವೇಸಿಯಲ್ಲಿ 280 ಪ್ರಯಾಣಿಕರಿದ್ದ ಕೆಎಂ ಬಾರ್ಸಿಲೋನಾ 5 ಎಂಬ ಹಡಗು, ಅಗ್ನಿ ಅವಘಡಕ್ಕೆ ತುತ್ತಾಗಿದೆ. ಬೆಂಕಿ ಕಾಣಿಸಿದ ಹಿನ್ನಲೆ ಹಡಗಿನ ಡೆಕ್‌ಗಳಲ್ಲಿ ದಟ್ಟವಾದ ಕಪ್ಪು ಹೊಗೆ ಕಾಣಿಸಿಕೊಂಡಿದ್ದು, ನೋಡ ನೋಡ್ತಿದ್ದಂತೆ ಡಕ್​ನ ಮುಂಭಾಗದಲ್ಲಿ ಬೆಂಕಿಯು

ಕೆಎಂ ಬಾರ್ಸಿಲೋನಾ ವಿಎ ಎಂಬ ಹಡಗಿನಲ್ಲಿ ಏಕಾಏಕಿ ಬೆಂಕಿ; ಐವರು ಮೃತ್ಯು..! Read More »

ರಾಷ್ಟ್ರೀಯ ನ್ಯೂಸ್

ಅತಿಹೆಚ್ಚು ನೀರು ಕುಡಿಯೋದರಿಂದ ಯಾವ ಸಮಸ್ಯೆಗಳು ಬರುತ್ತೆ ಗೊತ್ತಾ?

(ನ್ಯೂಸ್‌ ಕಡಬ) newskadaba.com ಜು. 21: ನಮ್ಮ ದೇಹದಲ್ಲಿ ಅರ್ಧಕ್ಕಿಂತ ಹೆಚ್ಚು ನೀರು ಇರುತ್ತದೆ. ಹೆಚ್ಚು ನೀರು ಕುಡಿಯುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ನೀರು ಕುಡಿದರೆ ಸೌಂದರ್ಯ, ಆರೋಗ್ಯ ಹಾಗೂ ಫಿಟ್ ನೆಸ್ ಹೆಚ್ಚುತ್ತದೆ ಎನ್ನುವ ನಂಬಿಕೆಯಿಂದ ಕೆಲವು ಜನರು ಹೆಚ್ಚು ನೀರು ಕುಡಿಯುತ್ತಾರೆ. ಹೆಚ್ಚು ನೀರು ಕುಡಿಯುವುದು ಒಳ್ಳೆಯದು. ಆದರೆ, ಅದನ್ನು ಮಿತವಾಗಿ ನೀರು ಕುಡಿಯುವ ಅಭ್ಯಾಸವನ್ನು ಇಟ್ಟುಕೊಳ್ಳಬೇಕೆಂದು ವೈದ್ಯಕೀಯ ತಜ್ಞರು ಸಲಹೆ ನೀಡುತ್ತಾರೆ. ಅತಿ ಹೆಚ್ಚು ನೀರು ಕುಡಿಯುವುದರಿಂದ ಆರೋಗ್ಯದ ಸಮಸ್ಯೆಗಳು ಉದ್ಭವಿಸುತ್ತವೆ.  

ಅತಿಹೆಚ್ಚು ನೀರು ಕುಡಿಯೋದರಿಂದ ಯಾವ ಸಮಸ್ಯೆಗಳು ಬರುತ್ತೆ ಗೊತ್ತಾ? Read More »

ಲೈಫ್‍ಸ್ಟೈಲ್

ತೆಂಕುತಿಟ್ಟು ಯಕ್ಷಗಾನದ ಮೇರುಪ್ರತಿಭೆ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ನಿಧನ

(ನ್ಯೂಸ್‌ ಕಡಬ) newskadaba.com ಜು. 20: ಖ್ಯಾತ ತೆಂಕುತಿಟ್ಟು ಯಕ್ಷಗಾನ ಕಲಾವಿದ ಹಾಗೂ ಹಿರಿಯ ಬಣ್ಣ ವೇಷ ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ (60) ಅವರು ಭಾನುವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.   ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಸಮೀಪದ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆಯ ಮಂಚಕಲ್ ನಿವಾಸಿಯಾಗಿದ್ದ ಸದಾಶಿವ ಶೆಟ್ಟಿಗಾರ್, ತೆಂಕುತಿಟ್ಟು ಯಕ್ಷಗಾನ ರಂಗದಲ್ಲಿ ಬಣ್ಣದ ವೇಷದ ಮೂಲಕ ತಮ್ಮದೇ ಆದ ಮಾತುಗಾರಿಕೆಯಿಂದ ಗಮನ

ತೆಂಕುತಿಟ್ಟು ಯಕ್ಷಗಾನದ ಮೇರುಪ್ರತಿಭೆ ಸಿದ್ಧಕಟ್ಟೆ ಸದಾಶಿವ ಶೆಟ್ಟಿಗಾರ್ ನಿಧನ Read More »

ಕರಾವಳಿ

ಬಹು ಪತಿತ್ವ’ ಸಂಪ್ರದಾಯ ಉಳಿಸಲು ಒಂದೇ ಹುಡುಗಿಯ ವಿವಾಹವಾದ ಸಹೋದರರು!

(ನ್ಯೂಸ್‌ ಕಡಬ) newskadaba.com ಜು. 20:  ಹಿಮಾಚಲ ಪ್ರದೇಶದ ಶಿಲ್ಲೈ ಗ್ರಾಮದಲ್ಲಿ ಒಂದೇ ಯುವತಿಯನ್ನು ಇಬ್ಬರು ಸಹೋದರರು ಮದುವೆಯಾಗಿದ್ದು, ಬಹುಪತಿತ್ವದ ಪುರಾತನ ಸಾಂಪ್ರದಾಯಿಕ ಆಚರಣೆಗೆ ನೂರಾರು ಜನ ಸಾಕ್ಷಿಯಾದರು.   ಹಿಮಾಚಲ ಪ್ರದೇಶದ ಬುಡಕಟ್ಟು ಸಮುದಾಯಗಳಲ್ಲಿ ಒಂದಾದ ಹಟ್ಟಿ ಸಮುದಾಯದ ಶತಮಾನಗಳಷ್ಟು ಹಳೆಯ ಬಹು ಪತಿತ್ವ ಸಂಪ್ರದಾಯವನ್ನು ಉಳಿಸಲು ಮುಂದಾಗಿರುವ ಸಹೋದರರಿಬ್ಬರು, ಒಂದೇ ಹುಡುಗಿಯನ್ನು ಮದುವೆಯಾಗಿದ್ದಾರೆ.   ಹಟ್ಟಿ ಬುಡಕಟ್ಟು ಜನರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಹಿಮಾಚಲ ಪ್ರದೇಶದ ಶಿಲೈ ಗ್ರಾಮದಲ್ಲಿ ಈ ವಿವಾಹವು ನೆರವೇರಿದ್ದು, ಸಹೋದರಾದ

ಬಹು ಪತಿತ್ವ’ ಸಂಪ್ರದಾಯ ಉಳಿಸಲು ಒಂದೇ ಹುಡುಗಿಯ ವಿವಾಹವಾದ ಸಹೋದರರು! Read More »

ಕರಾವಳಿ

20 ವರ್ಷ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ರಾಜಕುಮಾರ ‘ಸ್ಲೀಪಿಂಗ್ ಪ್ರಿನ್ಸ್’ ನಿಧನ

(ನ್ಯೂಸ್‌ ಕಡಬ) newskadaba.com ಜು. 20: 20 ವರ್ಷಗಳ ಕಾಲ ಕೋಮಾದಲ್ಲಿದ್ದ ಸ್ಲೀಪಿಂಗ್ ಪ್ರಿನ್ಸ್ ಎಂದೇ ಹೆಸರಾಗಿದ್ದ ಸೌದಿ ಅರೇಬಿಯಾದ ರಾಜಕುಮಾರ ಅಲ್ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ಅಲ್ ಸೌದ್ ನಿಧನರಾಗಿದ್ದಾರೆ.   ಶನಿವಾರ ಅವರು ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಭಾನುವಾರ ರಿಯಾದ್‌ನಲ್ಲಿ ನಡೆಯಲಿದೆ ಎಂದು ಅವರ ತಂದೆ ಪ್ರಿನ್ಸ್ ಖಾಲೀದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ತಿಳಿಸಿದ್ದಾರೆ. ರಾಜಕುಮಾರ ತಲಾಲ್ 36 ವರ್ಷ ವಯಸ್ಸಿನವರಾಗಿದ್ದರು. ಎಲ್ಲ ರೀತಿಯ ವೈದ್ಯಕೀಯ ಚಿಕಿತ್ಸೆಗಳ ಹೊರತಾಗಿಯೂ

20 ವರ್ಷ ಕೋಮಾದಲ್ಲಿದ್ದ ಸೌದಿ ಅರೇಬಿಯಾದ ರಾಜಕುಮಾರ ‘ಸ್ಲೀಪಿಂಗ್ ಪ್ರಿನ್ಸ್’ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 05. ಯುವಕನೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಸುಲ್ಕೆರಿ ಯಲ್ಲಿ ಸಂಭವಿಸಿದೆ.   ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಸುಲ್ಕೆರಿ ಗ್ರಾಮದ ಮುಡಿಪಿರೆ ನಿವಾಸಿ ಕಿಶೋರ್ (25) ಎಂದು ಗುರುತಿಸಲಾಗಿದೆ.   ಅವರು ಗಾರೆ ಕೆಲಸ ಮತ್ತು ಮದ್ದು ಸಿಂಪಡಿಸುವ ಕೆಲಸ ಮಾಡಿಕೊಂಡಿದ್ದು, ಮನೆಗೆ ಬಾರದೇ ಇದ್ದಾಗ ಸ್ಥಳೀಯರು ಸೇರಿ ಹುಡುಕಲು ಪ್ರಾರಂಭಿಸಿದಾಗ ರಾತ್ರಿ ಸುಮಾರು 11 ಗಂಟೆಗೆ ನೇಣು ಬಿಗಿದುಕೊಂಡ ರೀತಿಯಲ್ಲಿ ಕಿಶೋ‌ರ್ ಅವರ ಮೃತದೇಹ

ಬೆಳ್ತಂಗಡಿ: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ

((ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜು. 05. ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಬಸ್ ಮತ್ತು ಪುತ್ತೂರಿನಿಂದ ಉಪ್ಪಿನಂಗಡಿ ಮುಖ್ಯ ರಸ್ತೆಗೆ ಬರುತ್ತಿದ್ದ ಲಾರಿ ನಡುವೆ ನೆಕ್ಕಿಲಾಡಿಯಲ್ಲಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆ ಸಂಭವಿಸಿದ ಪರಿಣಾಮ ವಾಹನಗಳಿಗೆ ಹಾನಿಯಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಉಪ್ಪಿನಂಗಡಿ: ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top