Kadaba News

ಮಣಿಪಾಲ: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಭೂಪ ➤ ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಮಣಿಪಾಲ, ನ.11: ಮಣಿಪಾಲದಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಹಣ ಹಾಗೂ ದಾಖಲೆ ಪತ್ರಗಳನ್ನು ಪಡೆದು ವಂಚಿಸಿಕೊಂಡಿರುವ ಘಟನೆ ನಡೆದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಗಣೇಶ್ ನಾಯ್ಕ್ ಎಂದು ಗುರುತಿಸಲಾಗಿದೆ.     ಪ್ರಕರಣದಲ್ಲಿ ಆರೋಪಿತನು ತಾನು ಕೊಂಕಣ ರೈಲ್ವೆ ಇಲಾಖೆಯಲ್ಲಿ ಟಿ ಸಿ ಆಗಿರುವುದಾಗಿ ಹೇಳಿ  ಉದ್ಯೋಗ ಕೊಡುವುದಾಗಿ  ವ್ಯಕ್ತಿಯನ್ನು  ನಂಬಿಸಿ 20,000 ಹಣ ಹಾಗೂ ದಾಖಲೆ ಪತ್ರಗಳನ್ನು ತೆಗೆದುಕೊಂಡು ವಂಚಿಸಿದ್ದಾನೆ. ಅಲ್ಲದೇ ಮತ್ತೊಬ್ಬ ಯುವತಿಯಿಂದ ಹಣ ಪಡೆದು […]

ಮಣಿಪಾಲ: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಭೂಪ ➤ ಆರೋಪಿ ಪೊಲೀಸರ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ತೊಡಿಕಾನ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ತೊಡಿಕಾನ, ನ.11: ತೊಡಿಕಾನ ಗ್ರಾಮದ ಮುಪ್ಪಸೇರು ನಿವಾಸಿಯೊಬ್ಬರು ಮನೆ ಸಮೀಪದ ಹೊಳೆ ಬದಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಳೆದ ದಿನ ನಡೆದಿದೆ.     ನೇಣಿಗೆ ಶರಣಾದ ವ್ಯಕ್ತಿಯನ್ನು ಮುಪ್ಪಸೇರು ನಿವಾಸಿ ಧರ್ಮಪಾಲ (48) ಎಂದು ಗುರುತಿಸಲಾಗಿದೆ. ಇವರು ತೊಡಿಕಾನ ದೇವಾಲಯ ಬಳಿ ಮಿನಿ ಕ್ಯಾಂಟಿನ್ ಒಂದರಲ್ಲಿ ಕೆಲಸ ಮಾಡಿತ್ತಿದ್ದರು. ಇವರ ಆತ್ಮಹತ್ಯೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು ಹಾಗೂ ಸಹೋದರರನ್ನು ಅಗಲಿದ್ದಾರೆ.

ತೊಡಿಕಾನ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಹೆಚ್ಚುತ್ತಲೇಯಿದೆ ಕಾರು ಕಳವು ಪ್ರಕರಣ

(ನ್ಯೂಸ್ ಕಡಬ) newskadaba.com ಪುತ್ತೂರು, ನ.11: ಇತ್ತೀಚಿಗೆ ಪುತ್ತೂರಿನಲ್ಲಿ ಕಾರು ಕಳವು ಪ್ರಕರಣಗಕಳ್ಳರಗಳ ಹಾವಳಿ ಹೆಚ್ಚಾಗುತ್ತಿದ್ದು, ಕಳ್ಳರು ತಮ್ಮ ಕೈಚಲಕ ಮುಂದುವರಿಸುತ್ತಲೇ ಇದ್ದಾರೆ.  ಇದೀಗ ಕಳೆದ ದಿನದಂದು ಇನ್ನೊಂದು ಕಾರು ಕಳವು ಆಗಿರುವ ಘಟನೆ ಬೆಳಕಿಗೆ ಬಂದಿದೆ.     ಹೀಗೆ ಈ ವಾರದೊಳಗೆ ಮೂರು ಕಾರುಗಳನ್ನು ಕಳ್ಳರು ಕಳವುಗೈದಿದ್ದಾರೆ ಎಂದು ವರದಿಯಾಗಿದೆ.  

ಪುತ್ತೂರು: ಹೆಚ್ಚುತ್ತಲೇಯಿದೆ ಕಾರು ಕಳವು ಪ್ರಕರಣ Read More »

ಕರಾವಳಿ

ಶ್ರೀನಗರ: ಶೋಫಿಯಾನ್‍ನಲ್ಲಿ ಎನ್ ಕೌಂಟರ್ ➤ ಇಬ್ಬರು ಉಗ್ರರ ಹತ್ಯೆ

(ನ್ಯೂಸ್ ಕಡಬ) newskadaba.com ಶ್ರೀನಗರ, ನ.10: ದಕ್ಷಿಣ ಕಾಶ್ಮೀರದ ಸೋಪಿಯಾನ್‌ ಜಿಲ್ಲೆಯ ಕುಟ್ಪೊರಾ ಪ್ರದೇಶದಲ್ಲಿ ಇಂದು ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಯು ಉಗ್ರರಿಬ್ಬರನ್ನು  ಹೊಡೆದುರುಳಿಸಿದ್ದಾರೆ. ಜಮ್ಮು-ಕಾಶ್ಮೀರದ ಪೊಲೀಸರು ನಿಖರ ಮಾಹಿತಿ ಮೇರೆಗೆ ಸೇನೆಯ 34-ರಾಷ್ಟ್ರೀಯ ರೈಫಲ್ಸ್‌ ಮತ್ತು ಇಂದು ಕುಟ್ಪೊರಾ ಪ್ರದೇಶದಲ್ಲಿ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.  ಈ ವೇಳೆ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಮೊದಲು ಗುಂಡು ಹಾರಿಸಿದರು. ಈ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಇವರು ಯಾವ ಸಂಘಟನೆಗೆ ಸೇರಿದವರು ಎಂಬುದರ ಬಗ್ಗೆ ಮಾಹಿತಿ ಲಭ್ಯವಿಲ್ಲ.

ಶ್ರೀನಗರ: ಶೋಫಿಯಾನ್‍ನಲ್ಲಿ ಎನ್ ಕೌಂಟರ್ ➤ ಇಬ್ಬರು ಉಗ್ರರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಆರ್‌.ಆರ್ ‌ನಗರದಲ್ಲಿ ಹ್ಯಾಟ್ರಿಕ್‌ ಸಾಧನೆಗೈದ ಮುನಿರತ್ನ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 10: ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಹ್ಯಾಟ್ರಿಕ್‌ ಸಾಧನೆ ಮಾಡಿದ್ದಾರೆ. ಎರಡು ಬಾರಿ ಕಾಂಗ್ರೆಸ್‌ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರನೇ ಬಾರಿ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ.     20ನೇ ಸುತ್ತು ಮುಕ್ತಾಯಗೊಂಡಿದ್ದು ಬಿಜೆಪಿಯ ಮುನಿರತ್ನ 1,03,139,  ಕಾಂಗ್ರೆಸ್‌ನ ಕುಸುಮಾ 58,258 ಜೆಡಿಎಸ್‌ ಕೇಶವಮೂರ್ತಿ 8,794, ನೋಟಾಗೆ 1,878 ಮತ ಬಿದ್ದಿದೆ. ಮುನಿರತ್ನ 42,045 ಮತಗಳಿಂದ ಮುನ್ನಡೆಯಲ್ಲಿದ್ದು ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.ಆರಂಭದಿಂದಲೂ ಮುನಿರತ್ನ ಮುನ್ನಡೆ ಸಾಧಿಸಿದ್ದರು.    

ಆರ್‌.ಆರ್ ‌ನಗರದಲ್ಲಿ ಹ್ಯಾಟ್ರಿಕ್‌ ಸಾಧನೆಗೈದ ಮುನಿರತ್ನ Read More »

ಕರಾವಳಿ

ಸಿಲಿಕಾನ್ ಸಿಟಿಯಲ್ಲಿ ಅಗ್ನಿ ದುರಂತ ➤ ವಾಹನಗಳು ಬೆಂಕಿಗೆ ಆಹುತಿ.!

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 10: ಸಿಲಿಕಾನ್ ಸಿಟಿಯಲ್ಲಿ ಬಹುದೊಡ್ಡ ಅಗ್ನಿ ಅವಘಡ ಸಂಭವಿಸಿದ್ದು, ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಗರದ ಹೊಸ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದ್ದು, ಎಷ್ಟೇ ಪ್ರಯತ್ನಿಸಿದರೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ. ಬೃಹತ್ ಪ್ರಮಾಣದಲ್ಲಿ ವ್ಯಾಪಿಸಿರುವುದರಿಂದ ಅಕ್ಕ ಪಕ್ಕದ ಮನೆಗಳಿಗೆ ಬೆಂಕಿ ಹೊತ್ತಿಕೊಳ್ಳುತ್ತಿದೆ. ಅಕ್ಕಪಕ್ಕದ ಮನೆಯವರನ್ನು ಸ್ಥಳಾಂತರಿಸಲು ಪೊಲೀಸರು ಮತ್ತು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಇಡೀ ರಸ್ತೆಯಲ್ಲಾ ಎಲ್ಲಿ ನೋಡಿದರೂ ಬೆಂಕಿಮಯವಗಿದ್ದು, ಸಂಪೂರ್ಣ ಹೊಗೆ ಆವರಿಸಿಕೊಂಡಿದೆ.ಫ್ಯಾಕ್ಟರಿ ಅಕ್ಕ ಪಕ್ಕ ನಿಲ್ಲಿಸಿದ್ದ

ಸಿಲಿಕಾನ್ ಸಿಟಿಯಲ್ಲಿ ಅಗ್ನಿ ದುರಂತ ➤ ವಾಹನಗಳು ಬೆಂಕಿಗೆ ಆಹುತಿ.! Read More »

ಕರ್ನಾಟಕ

ಕಾರ್ಕಳ: ಕಂಠಸಿರಿಯಲ್ಲಿ ಕೊರಗಜ್ಜನ ಹಾಡು ಹಾಡಿ ಸೂಪರ್ ಹಿಟ್ ಆದ ಪುಟ್ಟ ಬಾಲಕ

(ನ್ಯೂಸ್ ಕಡಬ) newskadaba.com ಕಾರ್ಕಳ, ನ.10: ಕೊರಗಜ್ಜ ದೈವವನ್ನು ಸ್ತುತಿಸುವ ಕಂಠಸಿರಿಯಲ್ಲಿ ಹಾಡು ಹಾಡಿ ಸೂಪರ್ ಹಿಟ್ ಎಂದು ಹೆಸರು ಗಳಿಸಿದ ಕಾರ್ಕಳ ಹಿರ್ಗಾನದ ಬಾಲಕ ಕಾರ್ತಿಕ್ ರವರ ಹಾಡು ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಈ ಪುಟ್ಟ ಬಾಲಕನಿಗೆ ಜಾರಿಕಟ್ಟೆ ಶ್ರೀ ಕೊರಗಜ್ಜ ಕೊರಗ ಪಂಜುರ್ಲಿ ದೈವಸ್ಥಾನದ ವತಿಯಿಂದ ಶ್ರೀ ಕ್ಷೇತ್ರದಲ್ಲಿ ಸನ್ಮಾನ ಕಾರ್ಯಕ್ರಮವು ನಡೆಯಿತು.     ಈತನ ಹಾಡಿನ ವೆಬ್ ಸೈಟ್ ನ್ನು ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಯವರು ಬಿಡುಗಡೆಗೊಳಿಸಿದರು.

ಕಾರ್ಕಳ: ಕಂಠಸಿರಿಯಲ್ಲಿ ಕೊರಗಜ್ಜನ ಹಾಡು ಹಾಡಿ ಸೂಪರ್ ಹಿಟ್ ಆದ ಪುಟ್ಟ ಬಾಲಕ Read More »

ಕರಾವಳಿ

ಕಡಬ, ಪುತ್ತೂರು ತಾಲೂಕಿನಲ್ಲಿ ಇಂದು 25 ಮಂದಿಯಲ್ಲಿ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಕಡಬ, ನ.10: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಆರೋಗ್ಯ ಇಲಾಖೆಯ ವರದಿಯಂತೆ ಇಂದು 25 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ.     ಕಡಬ ತಾಲೂಕಿನ ಕೌಕ್ರಾಡಿಯಲ್ಲಿ 58 ವರ್ಷದ ಮಹಿಳೆ, 53 ವರ್ಷದ ವ್ಯಕ್ತಿ, 16 ವರ್ಷದ ಬಾಲಕಿ, 35 ವರ್ಷದ ಮಹಿಳೆ, ಕಡಬದ 37 ವರ್ಷದ ವ್ಯಕ್ತಿ, ಸವಣೂರಿನ 30 ವರ್ಷದ ಮಹಿಳೆ, 31 ವರ್ಷದ ವ್ಯಕ್ತಿ, 45 ವರ್ಷದ ವ್ಯಕ್ತಿ, 18 ವರ್ಷದ ಯುವಕ, ಕೊಯಿಲದ 16 ವರ್ಷದ ಬಾಲಕನಲ್ಲಿ

ಕಡಬ, ಪುತ್ತೂರು ತಾಲೂಕಿನಲ್ಲಿ ಇಂದು 25 ಮಂದಿಯಲ್ಲಿ ಕೋವಿಡ್ ದೃಢ Read More »

ಕರಾವಳಿ

ಪಂಜ: ಮೂಲಭೂತ ಸಮಸ್ಯೆಯ ಬಗ್ಗೆ ಪ್ರಧಾನಮಂತ್ರಿಗೆ ಸಿ.ಡಿ ಕಳುಹಿಸಿದ ಹೋರಾಟ ಸಮಿತಿ

(ನ್ಯೂಸ್ ಕಡಬ) newskadaba.com ಪಂಜ, ನ.10: ಮೂಲಭೂತ ಸಮಸ್ಯೆಯ ಬಗ್ಗೆ ವಿವರಿಸಿ ಕಮಿಲ ಮೊಗ್ರ ಬಳ್ಳಕ್ಕದ ನಾಗರಿಕ ಹೋರಾಟ ಕ್ರಿಯಾ ಸಮಿತಿ ಸದಸ್ಯರಿಂದ ಸಿ.ಡಿ ತಯಾರಿಸಲಾಗಿತ್ತು.   ಮೊಗ್ರ ಹೊಳೆಗೆ ಸೇತುವೆ ರಚನೆಯ ಬೇಡಿಕೆ ಹಲವಾರು ವರ್ಷಗಳಿಂದ ಇದ್ದರೂ ಇದುವರೆಗೂ ಈಡೇರಿಕೆಯಾಗಿಲ್ಲ. ಹೀಗಾಗಿ ಸಮಸ್ಯೆಯಗುತ್ತಿದೆ. ಅಲ್ಲದೇ ಗುತ್ತಿಗಾರು-ಕಮಿಲ-ಬಲ್ಪ ರಸ್ತೆ ಅವ್ಯವಸ್ಥೆಯಿಂದ ಕೂಡಿದೆ. ಇಡೀ ರಸ್ತೆ ಡಾಮರೀಕರಣ ಕಂಡಿಲ್ಲ. ಈಗ ಕಮಿಲ ಹಾಗೂ ಕಮಿಲ- ಬಲ್ಪ ರಸ್ತೆ ತೀರಾ ಹೊಂಡಗುಂಡಿಗಳಿಂದ ಕೂಡಿದ್ದು, ವಾಹನ ಓಡಾಡಲು ತೀರಾ ಸಂಕಷ್ಟವಾಗಿದೆ. ಬಳ್ಪದಿಂದ ಗುತ್ತಿಗೆದಾರರು

ಪಂಜ: ಮೂಲಭೂತ ಸಮಸ್ಯೆಯ ಬಗ್ಗೆ ಪ್ರಧಾನಮಂತ್ರಿಗೆ ಸಿ.ಡಿ ಕಳುಹಿಸಿದ ಹೋರಾಟ ಸಮಿತಿ Read More »

ಕರಾವಳಿ

ಲ್ಯಾಪ್‍ಟಾಪ್ ಇಲ್ಲದೇ ಬಡ ವಿದ್ಯಾರ್ಥಿನಿಯ ಪರದಾಟ ➤ ಆನ್‍ಲೈನ್ ಕ್ಲಾಸ್ ತಪ್ಪಿದ್ದಕ್ಕೆ ನೊಂದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಹೈದರಾಬಾದ್ ನ. 10: ಓದಿಲ್ಲದೇ ನಾನು ಬದುಕಲಾರೆ, ಅಪ್ಪ-ಅಮ್ಮ ಕ್ಷಮಿಸಿ ಎಂದು ಡೆತ್ ನೋಟ್ ಬರೆದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಧ್‍ನಗರದಲ್ಲಿ ನಡೆದಿದೆ.ಆತ್ಮಹತ್ಯೆಗೆ ಮುನ್ನ ಐಶ್ವರ್ಯಾ ಡೆತ್ ನೋಟ್ ಬರೆದು, ತನ್ನ ಈ ನಿರ್ಧಾರಕ್ಕೆ ಬಡತನವೇ ಕಾರಣ ಎಂಬುದನ್ನ ಪರೋಕ್ಷವಾಗಿ ಹೇಳಿದ್ದಾಳೆ. ನನ್ನ ಸಾವಿಗೆ ಯಾರು ಕಾರಣರಲ್ಲ. ನನ್ನಿಂದಾಗಿ ಕುಟುಂಬ ಆರ್ಥಿಕ ಸಂಕಷ್ಟದಲ್ಲಿದೆ. ಇನ್ನು ನಾನು ಓದದೇ ಬದುಕಲಾರೆ. ಈ ಸಮಸ್ಯೆಗೆ ಆತ್ಮಹತ್ಯೆಯೇ ಪರಿಹಾರ ಎಂದು ಅನ್ನಿಸುತ್ತಿದೆ. ನಾನು

ಲ್ಯಾಪ್‍ಟಾಪ್ ಇಲ್ಲದೇ ಬಡ ವಿದ್ಯಾರ್ಥಿನಿಯ ಪರದಾಟ ➤ ಆನ್‍ಲೈನ್ ಕ್ಲಾಸ್ ತಪ್ಪಿದ್ದಕ್ಕೆ ನೊಂದು ಆತ್ಮಹತ್ಯೆ Read More »

ಕರಾವಳಿ
Scroll to Top