Kadaba News

ರಾಜ್ಯದಲ್ಲಿ ಡಿಸೆಂಬರ್ 2ನೇ ವಾರದಲ್ಲಿ ಶಾಲೆ ಆರಂಭ.!

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 03: ಕೋವಿಡ್ 19 ಕಾರಣದಿಂದಾಗಿ ಕಳೆದ ಏಳು -ಎಂಟು ತಿಂಗಳಿನಿಂದ ಶಾಲಾ ಕಾಲೇಜು ತೆರೆದಿಲ್ಲ. ಇದೀಗಾ ಕೊರೋನಾ ಕೊಂಚ ಮಟ್ಟಿಗೆ ಇಳಿಮುಖದತ್ತ ಮುಖ ಮಾಡಿದೆ. ಆದ್ದರಿಂದ ಮತ್ತೆ ಶಾಲಾ ಕಾಲೇಜು ಓಪನ್ ಮಾಡಲು ಮಹತ್ವದ ಸಭೆ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ವಾರಾಂತ್ಯದಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ನವೆಂಬರ್ 17ರಂದು ಪದವಿ ಕಾಲೇಜುಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ. ಶಾಲಾ ಕಾಲೇಜುಗಳ ಆರಂಭದ ಕುರಿತಾಗಿ ಚರ್ಚಿಸಲು […]

ರಾಜ್ಯದಲ್ಲಿ ಡಿಸೆಂಬರ್ 2ನೇ ವಾರದಲ್ಲಿ ಶಾಲೆ ಆರಂಭ.! Read More »

ಕರಾವಳಿ

ದುಷ್ಕರ್ಮಿಗಳಿಂದ ಗ್ರಾಮ ಪಂಚಾಯತ್ ಸದಸ್ಯನ ಹತ್ಯೆ

(ನ್ಯೂಸ್ ಕಡಬ) newskadaba.com ಕಲಬುರಗಿ ನ. 03: ದುಷ್ಕರ್ಮಿಗಳ ತಂಡವೊಂದು ಗ್ರಾಮ ಪಂಚಾಯತ್ ಸದಸ್ಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.     ಬಳಿಕ ಆರರೋಪಿಗಳು ಪರಾರಿಯಾಗಿದ್ದಾರೆ. ಕೊಲೆಯಾದವರನ್ನು ಕಲಬುರಗಿಯ ಆಳಂದ ತಾಲೂಕಿನ ಗ್ರಾಮ ಪಂಚಾಯತ್ ಸದಸ್ಯನಾಗಿದ್ದ ಶಿವಲಿಂಗಪ್ಪ ಭೂ ಶೆಟ್ಟಿ(53) ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತಿಳಿಸಿದ್ದಾರೆ. ಇನ್ನು ಈ ಕೃತ್ಯಕ್ಕೆ ನಿಖರ ಕಾರಣ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಈ

ದುಷ್ಕರ್ಮಿಗಳಿಂದ ಗ್ರಾಮ ಪಂಚಾಯತ್ ಸದಸ್ಯನ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಶ್ಯಾಮರಾವ್ ವಿಧಿವಶ

(ನ್ಯೂಸ್ ಕಡಬ) newskadaba.com ಬಿಸಿರೋಡ್ ನ. 03: ಬಿಸಿರೋಡ್ ಮೂಲದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ ಶ್ಯಾಮರಾವ್ (97) ರವರು ಮಂಗಳವಾರ ಬೆಳ್ಳಿಗೆ ಶಿವಮೊಗ್ಗದ ಮೆಟ್ರೋ ಆಸ್ಪತ್ತೆಯಲ್ಲಿ ವಿಧಿವಶರಾಗಿದ್ದಾರೆ. ಕೆಲವು ಸಮಯಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶಿವಮೊಗ್ಗದಲ್ಲಿ ಇರುವ ಮಗನ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. 1946ರ ನಂತರ ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇನ್ನು 1946ರಲ್ಲಿ ಬಂಧಿತರಗಿ ಶಿವಮೊಗ್ಗದ ಜೈಲಿನಲ್ಲಿ 2 ತಿಂಗಳ ಕಾಲ ಜೈಲು ಶಿಕ್ಷೆಗೆ ಒಳಗಾದರು .ಸ್ವಾತಂತ್ರ್ಯ ಸಿಕ್ಕ ನಂತರವೂ ತಮ್ಮ ಸೇವಾ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಶ್ಯಾಮರಾವ್ ವಿಧಿವಶ Read More »

ಕರಾವಳಿ

ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿದ ಕಾರು ➤ ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಕಾರವಾರ  ನ. 03: ಕಾರವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ನಾಲೆಗೆ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಇಂದು ಮುಂಜಾನೆ ಸಂಭವಿಸಿದೆ.   ಮೃತರನ್ನು ಚಿಕ್ಕಮಗಳೂರು ಮೂಲದ ಕಿರಣ್ (28) ಹಾಗೂ ರಾಕೇಶ(28) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾದಿಂದ ಗೋವಾಕ್ಕೆ ತೆರಳುವಾಗ ಲಂಡನ್ ಬ್ರಿಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ನಾಲಾಕ್ಕೆ ಕಾರು ಬಿದ್ದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.  

ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿದ ಕಾರು ➤ ಇಬ್ಬರ ದುರ್ಮರಣ Read More »

ಕರ್ನಾಟಕ

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಸೆಕೆಂಡ್ ಹ್ಯಾಂಡ್ ಬೈಕ್‌ನೊಂದಿಗೆ ಎಸ್ಕೇಪ್

(ನ್ಯೂಸ್ ಕಡಬ) newskadaba.com ಮಣಿಪಾಲ ನ. 03: ಸೆಕೆಂಡ್ ಹ್ಯಾಂಡ್ ಶಾಪ್ ನಿಂದ ವ್ಯಕ್ತಿಯೊಬ್ಬ ಟೆಸ್ಟ್ ರೈಡ್ ಗಾಗಿ ತೆಗೆದುಕೊಂಡು ಹೋದ ಬೈಕ್‍ನೊಂದಿಗೆ ಪರಾರಿಯಾಗಿರುವ ಘಟನೆ ಮಣಿಪಾಲದ ಲಕ್ಷ್ಮಿಂದ್ರ ನಗರದಲ್ಲಿರುವ ನ್ಯೂ ಮಣಿಪಾಲ್ ಬಜಾರ್ ಬೈಕ್ ಶಾಪ್‍ನಲ್ಲಿ ನಡೆದಿದೆ. ಹೆರ್ಗ ತ್ರಿಶಂಕು ನಗರದ ಪ್ರಶಾಂತ್ ಕುಮಾರ್ ಎಂಬುವರು ವಾಹನ ಸೇಲ್ ಮತ್ತು ಖರೀದಿ ವ್ಯವಹಾರವನ್ನು ಮಾಡಿಕೊಂಡಿದ್ದ ನ್ಯೂ ಮಣಿಪಾಲ್ ಬಜಾರ್ ಶಾಪ್ ಗೆ ಅ.31 ರಂದು ಮಧ್ಯಾಹ್ನ ವೇಳೆ ಗಣೇಶ್ ಉದ್ಯಾವರ ಎಂಬ ಹೆಸರು ಹೇಳಿಕೊಂಡು ಬಂದ ವ್ಯಕ್ತಿ,

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಸೆಕೆಂಡ್ ಹ್ಯಾಂಡ್ ಬೈಕ್‌ನೊಂದಿಗೆ ಎಸ್ಕೇಪ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬದಲ್ಲಿ ಟಿವಿಎಸ್ ಮೊಪೆಡ್- ಹೋಂಡಾ ಆ್ಯಕ್ಟಿವಾ ನಡುವೆ ಅಪಘಾತ ➤ ಟಿವಿಎಸ್ ಸಹ ಸವಾರೆಗೆ ಗಂಭೀರಾ ಗಾಯ

(ನ್ಯೂಸ್ ಕಡಬ) newskadaba.com ಕಡಬ ನ. 02: ಟಿವಿಎಸ್ ಮೊಪೆಡ್ ಹಾಗೂ ಹೋಂಡಾ ಆ್ಯಕ್ಟಿವಾ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಕಡಬ ಜಂಕ್ಷನ್ ನಲ್ಲಿ ಸೋಮವಾರ ಸಂಜೆ ನಡೆದಿದೆ.   ಪಂಜ ಕಡೆಗೆ ತೆರಳುತ್ತಿದ್ದ ಆ್ಯಕ್ಟಿವಾ ಹಾಗೂ ಹೊಸ್ಮಠ ಕಡೆಗೆ ತೆರಳುತ್ತಿದ್ದ ಟಿವೊಎಸ್ ಎಕ್ಸೆಲ್ ನಡುವೆ ಢಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಟಿವಿಎಸ್ ಎಕ್ಸೆಲ್ ನಲ್ಲಿದ್ದ ಸಹ ಸವಾರೆ ನೆಲಕ್ಕೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.    

ಕಡಬದಲ್ಲಿ ಟಿವಿಎಸ್ ಮೊಪೆಡ್- ಹೋಂಡಾ ಆ್ಯಕ್ಟಿವಾ ನಡುವೆ ಅಪಘಾತ ➤ ಟಿವಿಎಸ್ ಸಹ ಸವಾರೆಗೆ ಗಂಭೀರಾ ಗಾಯ Read More »

ಕರಾವಳಿ

ಪುತ್ತೂರು: ಭೀಕರ ರಸ್ತೆ ಅಪಘಾತ ➤ 9 ವರ್ಷದ ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ನ. 02. ಇಂದು ದರ್ಬೆ ಬೈಪಾಸ್‍ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಕ್ಕಳು ಮತ್ತು ಓರ್ವ ಮಹಿಳೆ ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಘಟನೆ ನಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಒಂಬತ್ತು ವರ್ಷದ ಮಗು ಮೃತಪಟ್ಟಿದೆ. ಮೃತಪಟ್ಟ ಮಗುವನ್ನು ಸ್ವಾತಿ(9 ವ.) ಎಂದು ಗುರುತಿಸಲಾಗಿದೆ.       ಮಂಗಳೂರಿನಿಂದ ಜಾಲ್ಸೂರಿಗೆ ಚಲಿಸಿತ್ತಿದ್ದ ಸ್ವಿಫ್ಟ್ ಕಾರು ದರ್ಬೆ ಬೈಪಾಸಿನ ರಸ್ತೆ ಬದಿಯಲ್ಲಿ ಸಂಚರಿಸುತ್ತಿದ್ದ ಪಾದಚಾರಿಗಳಿಗೆ ಢಿಕ್ಕಿ ಹೊಡೆದಿರುವ

ಪುತ್ತೂರು: ಭೀಕರ ರಸ್ತೆ ಅಪಘಾತ ➤ 9 ವರ್ಷದ ಬಾಲಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಅಟೋದಲ್ಲಿ ತೆರಳಿ ಮಾದರಿಯಾದ ಬಂಟ್ವಾಳ ಶಾಸಕರು…!

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 02. ಯಾವಾಗಲೂ ಕಾರುಗಳಲ್ಲೇ ಓಡಾಟ ಮಾಡುತ್ತಿರುವ ಜನ ನಾಯಕರನ್ನ ಜನ ಪ್ರತಿನಿಧಿಗಳನ್ನು ನಾವೇಲ್ಲ ಕಂಡಿದ್ದೇವೆ. ಆದರೆ ಬಂಟ್ವಾಳ ಕ್ಷೇತ್ರದ ಶಾಸಕರಾದ ರಾಜೇಶ್ ನಾಯಕ್ ರವರು ಈ ಬಾರಿ ಆಟೋದಲ್ಲಿ ತೆರಳಿ ಅಭಿವೃದ್ಧಿ ಕಾರ್ಯಗಳಿಗೆ ಶಿಲನ್ಯಾಸ ಮಾಡುವ ಮೂಲಕ ತಾನು ಜನ ಸಾಮಾನ್ಯ ಶಾಸಕ ಎಂದು ತೋರಿಸಿಕೊಟ್ಟಿದ್ದಾರೆ.     ಕಡೇಶಿವಾಲಯ ಗ್ರಾಮದಲ್ಲಿ ಕುಟುಂಬ ಮಿಲನ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದ ಬಳಿಕ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮಕ್ಕೆ ತೆರಳುವ ಸಂದರ್ಭದಲ್ಲಿ ಶಾಸಕರ

ಅಟೋದಲ್ಲಿ ತೆರಳಿ ಮಾದರಿಯಾದ ಬಂಟ್ವಾಳ ಶಾಸಕರು…! Read More »

ಕರಾವಳಿ

ಸೋಮೇಶ್ವರ ಕಡಲ ತೀರದಲ್ಲಿ ಸ್ವಚ್ಚತಾ ಅಭಿಯಾನ

(ನ್ಯೂಸ್ ಕಡಬ) newskadaba.com ಸೋಮೇಶ್ವರ ನ. 02: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆ ಕಾರ್ಯಕರ್ತರಿಮದ ಸೋಮೇಶ್ವರ ಕಡಲ ತೀರದಲ್ಲಿ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಚೀಫ್ ವಾರ್ಡನ್ ಡಾ| ಮುರಲೀಮೋಹನ್ ಚೂಂತಾರು ಅವರ ನೇತೈತ್ವದಲ್ಲಿ ನಡೆಸಲಾಯಿತು.     ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆ ಕಾರ್ಯಕರ್ತರಿಮದ

ಸೋಮೇಶ್ವರ ಕಡಲ ತೀರದಲ್ಲಿ ಸ್ವಚ್ಚತಾ ಅಭಿಯಾನ Read More »

ಕರಾವಳಿ, ಕರ್ನಾಟಕ

ಒಡಿಯೂರು ಸಂಘದ ಸದಸ್ಯರಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಮೊಗ್ರ ನ. 02: ಒಡಿಯೂರು ಸಂಘದ ಸದಸ್ಯರು ಭಾನುವಾರದಂದು ರಸ್ತೆಇಕ್ಕೆಲಗಳಲ್ಲಿ ಸ್ವಚ್ಚಗೊಳಿಸುವ ಮೂಲಕ ಶ್ರಮದಾನ ಮಾಡಿದ್ದಾರೆ.   ಮೊಗ್ರ ಒಡಿಯೂರು ಸಂಘದವರಿಂಧ ರಸ್ತೆ ಬದಿ ಸ್ವಚ್ಚತಾ ಕಾರ್ಯ ಮಾಡುವ ಮೂಲಕ ಶ್ರಮದಾನ ಮಾಡಿದ್ದಾರೆ. ಇನ್ನು, 30ಕ್ಕೂ ಅಧಿಕ ಸದಸ್ಯರು ಸೇರಿ ಈ ಶ್ರಮದಾನ ನಡೆಸಿದರು.ಬಳ್ಪದ ಎಡೋನಿಯಿಂದ ಮೊಗ್ರ ಶಾಲೆಯವರೆಗೆ ರಸ್ತೆಬದಿಯನ್ನು ಸ್ವಚ್ಚ ಮಾಡಲಾಯಿತು.  

ಒಡಿಯೂರು ಸಂಘದ ಸದಸ್ಯರಿಂದ ಶ್ರಮದಾನ Read More »

ಕರಾವಳಿ
Scroll to Top