Kadaba News

ಮಂಗಳೂರು: ಕಡಲಬ್ಬರ ಸಾಧ್ಯತೆ      ➤ ಸಮುದ್ರ ತೀರದ ನಿವಾಸಿಗಳಿಗೆ; ಮೀನುಗಾರರಿಗೆ ಎಚ್ಚರಿಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.16. ಕರಾವಳಿಯಲ್ಲಿ ಕಡಲಬ್ಬರ ಹೆಚ್ಚಾಗಲಿದೆ ಎಂದು ಕೇಂದ್ರ ಸಮುದ್ರ ಸ್ಥಿತಿ ಅಧ್ಯಯನ ಸಂಶೋಧನಾ ಕೇಂದ್ರ (ಐನ್ ಸಿಓಐಎಸ್)ಎಚ್ಚರಿಕೆ ನೀಡಿದೆ. ಕರ್ನಾಟಕ, ಕೇರಳ, ಲಕ್ಷದೀಪ, ತಮಿಳುನಾಡು, ಗೋವಾ, ಮಹಾರಾಷ್ಟ್ರ, ಸಮುದ್ರದಲ್ಲಿ ಕಡಲು ಅಬ್ಬರದಿಂದ ಕೂಡಿರುವ ಸಾಧ್ಯತೆ ಇದೆ .ಆದುದರಿಂದ ಮೀನುಗಾರರು ಮತ್ತು ಕಿನಾರೆಯ ಜನರು ಎಚ್ಚರಿಕೆ ವಹಿಸಬೇಕು ಎಂದು ಹೇಳಿದೆ.  

ಮಂಗಳೂರು: ಕಡಲಬ್ಬರ ಸಾಧ್ಯತೆ      ➤ ಸಮುದ್ರ ತೀರದ ನಿವಾಸಿಗಳಿಗೆ; ಮೀನುಗಾರರಿಗೆ ಎಚ್ಚರಿಕೆ Read More »

ಕರಾವಳಿ

ಸೇನೆಯ ನೂತನ ಉಪ ಮುಖ್ಯಸ್ಥರಾಗಿ ಸುಚೇಂದ್ರಕುಮಾರ್ ನೇಮಕ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.16. ಲೆಫ್ಟಿನೆಂಟ್​  ಜನರಲ್ ಎಂ.ವಿ.​ ಸುಚೇಂದ್ರ ಕುಮಾರ್ ಅವರನ್ನು ಭಾರತೀಯ ಸೇನೆಯ ನೂತನ ಉಪ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಇಲ್ಲಿವರೆಗೆ ಸೇನೆಯ ಉಪ ಮುಖ್ಯಸ್ಥರಾಗಿದ್ದ ಲೆಫ್ಟಿನೆಂಟ್ ಜನರಲ್​ ಬಿ.ಎಸ್​. ರಾಜು ಅವರನ್ನು ಸೇನೆಯ ನೈಋತ್ಯ ವಲಯದ ಕಮಾಂಡರ್​ ಆಗಿ ನಿಯೋಜನೆ ಮಾಡಲಾಗಿದೆ. ಸೇನೆಯ ನೈಋತ್ಯ ವಲಯದ ಕಮಾಂಡರ್ ಲೆಫ್ಟಿನೆಂಟ್​ ಜನರಲ್​ ಎ.ಎಸ್​.ಭಿಂದರ್​ ಅವರು ಫೆ. 28ರಂದು ನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಬಿ. ಎಸ್. ರಾಜು ನೇಮಕಗೊಂಡಿದ್ದಾರೆ.  

ಸೇನೆಯ ನೂತನ ಉಪ ಮುಖ್ಯಸ್ಥರಾಗಿ ಸುಚೇಂದ್ರಕುಮಾರ್ ನೇಮಕ Read More »

ರಾಷ್ಟ್ರೀಯ ನ್ಯೂಸ್

ಬಸ್‌ಗಳ ಮುಖಾಮುಖಿ ಅಪಘಾತ ➤ ಕನಿಷ್ಠ 15 ವಿದ್ಯಾರ್ಥಿಗಳು ಮೃತ್ಯು…!

(ನ್ಯೂಸ್ ಕಡಬ) newskadaba.com ನೋನಿ, ಡಿ.21 ಶಾಲಾ ವಿದ್ಯಾರ್ಥಿಗಳನ್ನು ಅಧ್ಯಯನ ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಬಸ್‌ಗಳು ಅಪಘಾತಕ್ಕೀಡಾಗಿ ಕನಿಷ್ಠ 15 ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಮಣಿಪುರದಲ್ಲಿ ಬುಧವಾರ ನಡೆದಿದೆ. ಲಾಂಗ್ಸಾಯ್ ಟುಬುಂಗ್ ಗ್ರಾಮದ ಬಳಿ ಬಿಷ್ಣುಪುರ್ – ಖೌಪುಮ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಯರಿಪೋಕ್‌ನ ತಂಬಲ್ನು ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಎರಡು ಬಸ್‌ಗಳ ಅಧ್ಯಯನ ಪ್ರವಾಸಕ್ಕೆ ತೆರಳುತ್ತಿದ್ದವು. ಘಟನೆಯಲ್ಲಿ ಕನಿಷ್ಠ 15 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆದರೆ ಸಾವಿನ ನಿಖರ ಸಂಖ್ಯೆ

ಬಸ್‌ಗಳ ಮುಖಾಮುಖಿ ಅಪಘಾತ ➤ ಕನಿಷ್ಠ 15 ವಿದ್ಯಾರ್ಥಿಗಳು ಮೃತ್ಯು…! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಕೇರಳದಲ್ಲಿ ಹಕ್ಕಿ ಜ್ವರದ ಭೀತಿ ➤ ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ!

(ನ್ಯೂಸ್ ಕಡಬ) newskadaba.com ಕೇರಳ, ಡಿ. 21. ಕೇರಳ ರಾಜ್ಯದಲ್ಲಿ ಮತ್ತೆ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಜನರಲ್ಲಿ ಅನಾರೋಗ್ಯದ ಆತಂಕ ಮನೆ ಮಾಡಿದೆ. ಕೇರಳದ ಕೋಟಯಂ ಜಿಲ್ಲೆಯ ಎರಡು ಗ್ರಾಮಗಳ ನಿವಾಸಿಗಳಲ್ಲಿ ಹಕ್ಕಿ ಜ್ವರ ಕಂಡು ಬಂದಿದ್ದು, ಪ್ರಕರಣಗಳಲ್ಲಿ ದಿಢೀರ್ ಏರಿಕೆ ಕಂಡು ಬಂದಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.   ಈ ರೋಗ ವ್ಯಾಪಕವಾಗಿ ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಗ್ರಾಮಗಳ ವ್ಯಾಪ್ತಿಯಲ್ಲಿ ನೂರಾರು ಕೋಳಿಗಳ ಮಾರಣಹೋಮ ಮಾಡಲಾಗಿದೆ. ಈ ಕುರಿತು ಯಾವುದೇ ಆತಂಕ ಬೇಡ. ಹಕ್ಕಿ

ಕೇರಳದಲ್ಲಿ ಹಕ್ಕಿ ಜ್ವರದ ಭೀತಿ ➤ ಆರೋಗ್ಯ ಇಲಾಖೆಯಿಂದ ಮುನ್ನೆಚ್ಚರಿಕೆ! Read More »

ರಾಷ್ಟ್ರೀಯ ನ್ಯೂಸ್

ಪಾಟ್ನಾ ಕಳ್ಳ ಬಟ್ಟಿ ದುರಂತ ➤ ಐವರು ಮೃತ್ಯು

(ನ್ಯೂಸ್‌ ಕಡಬ) newskadaba.com ಬಿಹಾರ, ಡಿ. 17. ಬಿಹಾರದ ಸಿವಾನ್ ಜಿಲ್ಲೆಯಲ್ಲಿ ವಿಷಪೂರಿತ ಮದ್ಯ ಸೇವಿಸಿ ಐದು ಮಂದಿ ಮೃತಪಟ್ಟ ಘಟನೆ ನಡೆದಿದೆ. ಮೃತರೆಲ್ಲರು ಭಗವಾನ್ ಪುರ ಹಾತ್ ಪೊಲೀಸ್ ಠಾಣೆ ವ್ಯಾಪ್ತಿಯ ಬ್ರಹ್ಮಸ್ಥಾನ ಮತ್ತು ಸೊಂಧನಿ ಗ್ರಾಮದವರು ಎಂದು ತಿಳಿದು ಬಂದಿದೆ. ಈ ಅವಘಡದಲ್ಲಿ ಐವರು ಮೃತಪಟ್ಟಿದ್ದು, ಶಿವಕುಮಾರ್ (25) ಮತ್ತು ದೀಪಕ್ (15) ಚಿಕ್ಕಿತ್ಸೆ ಪಡೆಯುತ್ತಿದ್ದಾರೆ. ಎರಡು ರಾಸಾಯನಿಕ ಬಾಟಲಿಗಳನ್ನು ವಶಪಡಿಸಿಕೊಂಡು ಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ಪಾಟ್ನಾ ಕಳ್ಳ ಬಟ್ಟಿ ದುರಂತ ➤ ಐವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೇತುವೆಯಿಂದ ಕೆಳಕ್ಕೆ ಉರುಳಿದ ಕಾರು ➤ಮೂವರು ಮೃತ್ಯು

(ನ್ಯೂಸ್‌ ಕಡಬ) newskadaba.com ತುಮಕೂರು , ಡಿ. 15 ತುಮಕೂರು ಕಳ್ಳಂಬೆಳ್ಳಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೇತುವೆಯಿಂದ ಕಾರು ಕೆಳಗೆ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು, ಇನ್ನೊಬ್ಬರು ಅಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಸಾವನಪ್ಪಿದ್ದಾರೆ. ಇನ್ನು ಮೃತರೆಲ್ಲರೂ ಬೆಂಗಳೂರಿನವರು ಎಂದು ತಿಳಿದು ಬಂದಿದ್ದು, ಕಾರಿನ ಚಾಲಕ ಸೇರಿ ಐವರು ರಾಯಚೂರಿನ ಸಿಂಧನೂರು ತಾಲೂಕಿನಲ್ಲಿ ಸ್ನೇಹಿತನ ಮದುವೆ ಮುಗಿಸಿಕೊಂಡು ಬೆಂಗಳೂರಿಗೆ ವಾಪಸಾಗುತ್ತಿದ್ರು. ಅತೀ ವೇಗದಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಬಿಡ್ಜ್ ಮೇಲಿಂದ ಕೆಳಗೆ ಬಿದ್ದು ಈ

ಸೇತುವೆಯಿಂದ ಕೆಳಕ್ಕೆ ಉರುಳಿದ ಕಾರು ➤ಮೂವರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ ಸುಟ್ಟ ಸ್ಥಿತಿಯಲ್ಲಿ ಸಿಕ್ಕ ಮಹಿಳೆಯ ದೇಹದ ಗುರುತು ಪತ್ತೆ

(ನ್ಯೂಸ್‌ ಕಡಬ) newskadaba.com ಬೆಳ್ತಂಗಡಿ, ಡಿ. 14  ನಡ ಗ್ರಾ.ಪಂ. ವ್ಯಾಪ್ತಿಯ ಸೊರಕೆ ಸಮೀಪ ರಬ್ಬರ್ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಡಿ.12 ರಂದು ಪತ್ತೆಯಾಗಿತ್ತು, ಆದರೆ ದೇಹದ ಗುರುತು ಪತ್ತೆಯಾಗಿರಲಿಲ್ಲ,  ಪ್ರಾದೇಶಿಕ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞ ವೈದ್ಯರು ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ ಮೃತದೇಹ ಮಹಿಳೆದ್ದೇ ಎಂದು ತಜ್ಞರು ಖಚಿತ ಪಡಿಸಿದ್ದಾರೆ. ಸುಮಾರು 30ರಿಂದ 40 ವರ್ಷದ ಮಹಿಳೆಯ ಮೃತದೇಹ ಎಂದು ತಿಳಿದು ಬಂದಿದ್ದು, ಶವ ಸಿಕ್ಕ ಸ್ಥಳದಲ್ಲಿ ಕಾಲು ಉಂಗುರ, ಬಳೆಗಳು ಪತ್ತೆಯಾಗಿವೆ. ಮಹಿಳೆಯ ದೇಹ

ಬೆಳ್ತಂಗಡಿ ಸುಟ್ಟ ಸ್ಥಿತಿಯಲ್ಲಿ ಸಿಕ್ಕ ಮಹಿಳೆಯ ದೇಹದ ಗುರುತು ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರತ ಒಲಿಂಪಿಕ್ ಸಂಸ್ಥೆಯ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ

(ನ್ಯೂಸ್‌ ಕಡಬ) newskadaba.com ದೆಹಲಿ, ಡಿ. 13.  ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿಟಿ ಉಷಾ ಅವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ.   ಸುಪ್ರೀಂ ಕೋರ್ಟ್ ನಿಂದ ನೇಮಕಗೊಂಡ ನಿವೃತ್ತ ಎಸ್‌ಸಿ ನ್ಯಾಯಾಧೀಶ ಎಲ್. ನಾಗೇಶ್ವರ ರಾವ್ ಅವರ ಮೇಲ್ವಿಚಾರಣೆಯಲ್ಲಿ ನಡೆದ ಚುನಾವಣೆಯಲ್ಲಿ ಪಿ.ಟಿ ಉಷಾ ಅವರನ್ನು ಅವಿರೋಧವಾಗಿ ಅಯ್ಕೆ ಮಾಡಲಾಗಿದೆ.

ಭಾರತ ಒಲಿಂಪಿಕ್ ಸಂಸ್ಥೆಯ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪಿ.ಟಿ ಉಷಾ ಆಯ್ಕೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಟಿ ಜಾಕ್ಲಿನ್ ಫರ್ನಾಂಡಿಸ್ ವಿರುದ್ಧ ಮಾನನಷ್ಷ ಮೊಕದ್ದಮೆ

(ನ್ಯೂಸ್‌ ಕಡಬ) newskadaba.com ದೆಹಲಿ, ಡಿ. 13.  ಸುಖೇಶ್ ಚಂದ್ರಶೇಖರ್ ಒಳಗೊಂಡ ಮನಿ ಲಾಂಡರಿಂಗ್ ನಲ್ಲಿ 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತನ್ನ ಹೆಸರನ್ನು ಬಲವಂತವಾಗಿ ಬಳಕೆ ಮಾಡಲಾಗಿದೆ ಎಂದು ಬಾಲಿವುಡ್ ನಟಿ ನೋರಾ ಫತೇಹಿ ಅವರು ನಟಿ ಜಾಕ್ಲಿನ್ ಫರ್ನಾಂಡಿಸ್ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ.   ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ನಟಿ ನೋರಾ ಫತೇಹಿ, ನಟಿ ಜಾಕ್ಲಿನ್ ಫರ್ನಾಂಡಿಸ್ ಸೇರಿದಂತೆ ಹಲವು ಮಾಧ್ಯಮ ಕಂಪೆನಿಗಳ ವಿರುದ್ಧ ಕೂಡಾ

ನಟಿ ಜಾಕ್ಲಿನ್ ಫರ್ನಾಂಡಿಸ್ ವಿರುದ್ಧ ಮಾನನಷ್ಷ ಮೊಕದ್ದಮೆ Read More »

ರಾಷ್ಟ್ರೀಯ ನ್ಯೂಸ್, ಸಿನಿಮಾ

ಬೆಂಗಳೂರು: ಬಸ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಮೃತ್ಯು

(ನ್ಯೂಸ್‌ ಕಡಬ) newskadaba.com ಬೆಂಗಳೂರು ಡಿ.13.  ಬಿಎಂಟಿಸಿ ಬಸ್‌ಗೆ ಸಿಲುಕಿ ಬೈಕ್ ಸವಾರ ಮೃತಪಟ್ಟ ಘಟನೆ ಪೀಣ್ಯಾದ 14ನೇ ಕ್ರಾಸ್‌ನಲ್ಲಿ ನಡೆದಿದೆ. ಮೃತರನ್ನು ದೀಪಕ್ ಎಂದು ಗುರುತಿಸಲಾಗಿದೆ. ಇಲ್ಲಿನ ಎಸ್.ಎಸ್.ಫ್ಯಾಬ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಇವರು, ಕೆಲಸ ಮುಗಿಸಿ ವಾಪಸ್ ಮನೆಗೆ ತೆರಳುವಾಗ ಬಸ್ ನ್ನು ಓವರ್‌ಟೇಕ್ ಮಾಡುವ ರಭಸದಲ್ಲಿ ಬಸ್‌ನ ಹಿಂಬದಿ ಚಕ್ರಕ್ಕೆ ಸಿಲುಕಿ  ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.  

ಬೆಂಗಳೂರು: ಬಸ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top