Kadaba News

ಖ್ಯಾತ ಗಾಯಕಿ ಅನನ್ಯಾ ಭಟ್ ಅವರ ತಂದೆ ಅರೇಸ್ಟ್

(ನ್ಯೂಸ್ ಕಡಬ) newskadaba.com ಮೈಸೂರು ಅ. 28: ಕೊಲೆ ಪ್ರಕರಣದಲ್ಲಿ ಖ್ಯಾತ ಗಾಯಕಿ ಅನನ್ಯಾ ಭಟ್ ಅವರ ತಂದೆ ವಿಶ್ವನಾಥ್ ಭಟ್ ಅವರನ್ನು ಬಂಧಿಸಲಾಗಿದೆ. ನಿವೃತ್ತ ಪ್ರೊಫೆಸರ್ ಪರಶಿವಮೂರ್ತಿ ಅವರನ್ನು ಕೊಲೆ ಮಾಡಿಸಿದ್ದ ಆರೋಪದಲ್ಲಿ ವಿಶ್ವನಾಥ್ ಭಟ್ ಈಗ ಪೊಲೀಸರ ಅತಿಥಿಯಾಗಿದ್ದಾರೆ.   ಪರಶಿವಮೂರ್ತಿ ಅವರ ಕೊಲೆಗೆ ವಿಶ್ವನಾಥ್ ಭಟ್ 7 ಲಕ್ಷ ರೂ.ಗೆ ಸುಪಾರಿ ನೀಡಿದ್ದರು ಎಂಬುದು ವಿಚಾರಣೆ ವೇಲೆ ಬಯಲಾಗಿತ್ತು. ಹೀಗಾಗಿ, ಮೈಸೂರು ಪೊಲೀಸರು ವಿಶ್ವನಾಥ್ ಭಟ್ ಅವರನ್ನು ಬಂಧಿಸಿದ್ದಾರೆ.ನಿವೃತ್ತ ಪ್ರೊಫೆಸರ್ ಪರಿಶಿವ ಮೂರ್ತಿ ಅವರ […]

ಖ್ಯಾತ ಗಾಯಕಿ ಅನನ್ಯಾ ಭಟ್ ಅವರ ತಂದೆ ಅರೇಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನ್ಯಕೋಮಿನ ಯುವತಿಯರನ್ನು ಕರೆದೊಯ್ದ ಟ್ಯಾಕ್ಸಿ ಚಾಲಕನ ಮೇಲೆ ಹಲ್ಲೆ!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 28: ಕೊಟ್ಟಿಗೆ ಹಾರದ ಟ್ಯಾಕ್ಸಿ ಚಾಲಕ ಮಹಮ್ಮದ್ ದಿಸಾನ್ ಎಂಬುವರು ಚಾರ್ಮಾಡಿ ಗ್ರಾಮದ ಹಳ್ಳ ಸೇತುವೆ ಎಂಬಲ್ಲಿ ತನ್ನ ವಾಹನದಲ್ಲಿ ಉಜಿರೆಯಿಂದ ಕೊಟ್ಟಿಗೆ ಹಾರಕ್ಕೆ ಪ್ರಯಾಣಿಕರನ್ನು ,ಯುವತಿಯರನ್ನು ಕಳೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಕಾರು ಹಾಗೂ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕೈಯಲ್ಲಿ ಮಾರಕ ಆಯುಧಗಳನ್ನು ಹಿಡಿದು ವಾಹನಕ್ಕೆ ಅಡ್ಡಗಟ್ಟಿದ್ದಾರೆ. ವಾಹನ ಮುಂದೆ ಹೋಗದಂತೆ ಅವ್ಯಾಚ ಶಬ್ದಗಳಿಂದ ನಿಂದಿಸಿ, ಕೊಲ್ಲುವ ಬೆದರಿಕೆ ಹಾಕಿದ್ದಾರೆ, ಜತೆಗೆ ರಾಡ್, ಹೆಲ್ಮೆಟ್ ನಿಂದ ಹೊಡೆದು, ತುಳಿದು ಹಲ್ಲೆ

ಅನ್ಯಕೋಮಿನ ಯುವತಿಯರನ್ನು ಕರೆದೊಯ್ದ ಟ್ಯಾಕ್ಸಿ ಚಾಲಕನ ಮೇಲೆ ಹಲ್ಲೆ! Read More »

ಕರಾವಳಿ, ಕ್ರೈಮ್ ನ್ಯೂಸ್

ಚಕ್ರಬಡ್ಡಿ ಹಣ ನ. 5ರೊಳಗೆ ಸಾಲಗಾರರ ಖಾತೆಗೆ ವಾಪಸ್‍..!

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 28. ಕೊರೊನಾನಿಂದಾಗಿ ವಿವಿಧ ಸಾಲ ಪಡೆದವರಿಗೆ ವಿಧಿಸಲಾಗಿದ್ದ ಚಕ್ರಬಡ್ಡಿಯನ್ನು ನ.5 ರೊಳಗೆ ಅವರ ಖಾತೆಗಳಿಗೆ ವಾಪಸ್ ನೀಡುವಂತೆ ಕೇಂದ್ರ ಸರ್ಕಾರ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಸೂಚನೆ ನೀಡಿದೆ.     ಎರಡು ಕೋಟಿ ರೂ.ವರೆಗಿನ ಸಾಲ ಪಡೆದವರಿಗೆ ಈ ಸೌಲಭ್ಯ ಲಭಿಸಲಿದೆ. ಈ ಸಂಬಂಧ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ ಪ್ರಮಾಣಪತ್ರ ಸಲ್ಲಿಸಿದ್ದು, ಬ್ಯಾಂಕುಗಳು, ಸಹಕಾರಿ ಸಂಸ್ಥೆಗಳು, ಖಾಸಗಿ ಹಣಕಾಸು ಸಂಸ್ಥೆಗಳು, ವಸತಿ ಸಾಲ ನೀಡಿಕೆ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದ್ದು,

ಚಕ್ರಬಡ್ಡಿ ಹಣ ನ. 5ರೊಳಗೆ ಸಾಲಗಾರರ ಖಾತೆಗೆ ವಾಪಸ್‍..! Read More »

ರಾಷ್ಟ್ರೀಯ ನ್ಯೂಸ್

ವ್ಯಕ್ತಿಯ ಕೊಲೆಗೈದು, ಡಿಕ್ಕಿಯಲ್ಲಿಟ್ಟು ಕಾರು ಸಮೇತ ಸುಟ್ರು.!?

(ನ್ಯೂಸ್ ಕಡಬ) newskadaba.com ಹಾಸನ ಅ. 28: ಕಾರಿನ ಡಿಕ್ಕಿಯಲ್ಲಿ ಸುಟ್ಟು ಕರಕಲಾದ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಎಂ.ಹೊನ್ನೇನಹಳ್ಳಿ ಬಳಿ ನಡೆದಿದೆ. ಕಾರಿನ ಡಿಕ್ಕಿಯಲ್ಲಿ ಮೃತದೇಹ ಇಟ್ಟು ನಂತರ ಕಾರಿಗೆ ಬೆಂಕಿ ಹಾಕಲಾಗಿದೆ. ಕಾರು ಸಂಪೂರ್ಣ ಸುಟ್ಟು ಹೋಗಿದೆ. ಮೃತದೇಹ ಗುರುತು ಸಿಗದಷ್ಟು ಸುಟ್ಟು ಕರಕಲಾಗಿದೆ.ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ನಂತರ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿ ಇಟ್ಟು, ಕಾರಿಗೆ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯಾಗಿರುವವರ ಬಗ್ಗೆ ಯಾವುದೇ ಮಾಹಿತಿ

ವ್ಯಕ್ತಿಯ ಕೊಲೆಗೈದು, ಡಿಕ್ಕಿಯಲ್ಲಿಟ್ಟು ಕಾರು ಸಮೇತ ಸುಟ್ರು.!? Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ :ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದತನ ಅರೇಸ್ಟ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 28: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಅರೆಸ್ಟ್ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ನಡೆದಿದೆ. ನಾವೂರಿನ ನಿವಾಸಿ ಜನಾರ್ದನ ಪೂಜಾರಿ(42) ಎಂಬಾತ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅ.22 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಪುಸಲಾಯಿಸಿ ಕೆರದುಕೊಂಡು ಹೋಗಿ ಕುವೆಟ್ಟು ಗ್ರಾಮದ ಮದ್ದಡ್ಕ ಬಳಿಯ ಸ್ನೇಹಿತನ ರೂಮಿನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಅಪ್ರಾಪ್ತೆ ಈ ವಿಚಾರವನ್ನು ಅ.26 ರಂದು ಮನೆಯವರಿಗೆ ತಿಳಿಸಿದ್ದಾಳೆ. ತಕ್ಷಣವೇ

ಬೆಳ್ತಂಗಡಿ :ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದತನ ಅರೇಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರ್ಕಳ :ವಾಹನದ ಟಯರ್ ಸಿಡಿದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ ಅ. 28: ಕಾರ್ಕಳದಲ್ಲಿ ಕ್ವಾಲೀಸ್ ವಾಹನದ ಟಯರ್ ಸಿಡಿದು ಯುವಕ ಸಾವನ್ಬಪ್ಪಿದ ಘಟನೆ ಕುತ್ಲೂರು ಸಮೀಪದ ಕುಕ್ಕೆಜೆಯಲ್ಲಿ ನಡೆದಿದೆ. ಕೋಲಾರದ ನಸಾಪುರದ ರಾಕೇಶ್(24) ಮೃತ ದುರ್ದೈವಿ.   ಕಳೆದ ದಿನ ಕೋಲಾರದ ನರ್ಸಾಪುರದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕ್ವಾಲೀಸ್ ವಾಹನದ ಟಯರ್ ಸಿಡಿದು ವಾಹನ ಪಲ್ಟಿಯಾಗಿದೆ. ಘಟನೆಯಲ್ಲಿ ಕ್ವಾಲೀಸ್ ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿತ್ತು, ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಲ್ಲಿ ರಾಕೇಶ್ ಎಂಬುವರು ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.    

ಕಾರ್ಕಳ :ವಾಹನದ ಟಯರ್ ಸಿಡಿದು ಯುವಕ ಮೃತ್ಯು Read More »

ಕರಾವಳಿ

ಉಪ್ಪಿನಂಗಡಿ: ಅಡಿಕೆ ವ್ಯಾಪಾರಿಗೆ ಚೂರಿ ಇರಿದು 4 ಲಕ್ಷ ರೂ. ದರೋಡೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 28: ವ್ಯಾಪಾರ ಮುಗಿಸಿ ಮನೆಗೆ ತೆರಳುತ್ತಿದ್ದ ಅಡಿಕೆ ವ್ಯಾಪಾರಿಯೋರ್ವರ ಮೇಲೆ ಚೂರಿಯಿಂದ ತಿವಿದು 4 ಲಕ್ಷ ರೂ.ಗೂ ಅಧಿಕ ಹಣವನ್ನು ದರೋಡೆಗೈದ ಘಟನೆ ಮಂಗಳವಾರ ಪೆರ್ನೆ ಸಮೀಪದ ಪದೆಬರಿಯಲ್ಲಿ ನಡೆದಿದೆ. ಪದೆಬರಿ ನಿವಾಸಿ ದೀಪಕ್‌ ಶೆಟ್ಟಿ (49) ಅವರು ಪೆರ್ನೆಯಲ್ಲಿ ಅಡಿಕೆ ವ್ಯಾಪಾರಿಯಾಗಿದ್ದು, ಮಂಗಳವಾರ ಅಡಿಕೆ ಮಾರಾಟದ ಹಣದೊಂದಿಗೆ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ದರೋಡೆ ನಡೆದಿದೆ. ಚೂರಿಯಿಂದ ತಿವಿಯಲ್ಪಟ್ಟ ದೀಪಕ್‌ ಶೆಟ್ಟಿ ತಲೆ, ಹೊಟ್ಟೆಗೆ ಏಟು ತಗಲಿದ್ದು, ಚಿಂತಾಜನಕ

ಉಪ್ಪಿನಂಗಡಿ: ಅಡಿಕೆ ವ್ಯಾಪಾರಿಗೆ ಚೂರಿ ಇರಿದು 4 ಲಕ್ಷ ರೂ. ದರೋಡೆ Read More »

ಕರಾವಳಿ, ಕ್ರೈಮ್ ನ್ಯೂಸ್

ತೊಕ್ಕೊಟ್ಟುವಿನಲ್ಲಿ ಭೀಕರ ಅಪಘಾತ ಪ್ರಕರಣ➤ ನವದಂಪತಿ ಮೃತ್ಯು

(ನ್ಯೂಸ್ ಕಡಬ) newskadaba.com ತೊಕ್ಕೊಟ್ಟು ಅ. 28: ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಟ್ರಕ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ನವ ದಂಪತಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮಂಗಳೂರಿನ ಬಜಾಲು ನಿವಾಸಿಗಳಾದ ರಯಾನ್ ಫೆರ್ನಾಂಡೀಸ್, ಹಾಗೂ ಪತ್ನಿ ಪ್ರಿಯಾ ಫೆರ್ನಾಂಡೀಸ್ ಸಾವನ್ನಪ್ಪಿದ ದುರ್ದೈವಿಗಳು. ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಉದ್ಯೋಗಿಗಳಾಗಿರುವ ಈ ಇಬ್ಬರು ದಂಪತಿ ಉಳ್ಳಾಲದ ಬಂಗೇರಲೇನ್ ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.     ಕೆಲಸ ಮುಗಿಸಿ ಉಳ್ಳಾಲದ ಮನೆಗೆ ಮರಳುತ್ತಿದ್ದಾಗ ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಬಂದ ಟ್ರಕ್ ಬೈಕಿಗೆ ಡಿಕ್ಕಿ

ತೊಕ್ಕೊಟ್ಟುವಿನಲ್ಲಿ ಭೀಕರ ಅಪಘಾತ ಪ್ರಕರಣ➤ ನವದಂಪತಿ ಮೃತ್ಯು Read More »

ಕರಾವಳಿ, ಕರ್ನಾಟಕ

ಸವಣೂರು: ಓಮ್ನಿಮತ್ತು ಸ್ವಿಫ್ಟ್ ಕಾರುಗಳ ಮಧ್ಯೆ ಅಪಘಾತ ➤ ಓಮ್ನಿ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಸವಣೂರು, ಅ. 27. ಅ.25ರಂದು ಪುತ್ತೂರು- ಕಾಣಿಯೂರು ರಸ್ತೆಯ ಭಕ್ತಕೋಡಿ ಎಂಬಲ್ಲಿ ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡ ಓಮ್ನಿ ಚಾಲಕ ಇಂದು ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯನ್ನು ಬೆಳ್ಳಾರೆ ಸಮೀಪದ ಪಡ್ಪಿನಂಗಡಿಯ ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದೆ.     ಪುತ್ತೂರು ಕಡೆಯಿಂದ ಸವಣೂರು ಕಡೆಗೆ ಹೋಗುತ್ತಿದ್ದ ಓಮ್ನಿ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಸ್ವಿಫ್ಟ್ ಕಾರೊಂದು ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಓಮ್ನಿ ಮತ್ತು ಸ್ವಿಫ್ಟ್ ಎರಡೂ ಕಾರು  ಜಖಂಗೊಂಡಿದ್ದು, ಢಿಕ್ಕಿಯ

ಸವಣೂರು: ಓಮ್ನಿಮತ್ತು ಸ್ವಿಫ್ಟ್ ಕಾರುಗಳ ಮಧ್ಯೆ ಅಪಘಾತ ➤ ಓಮ್ನಿ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಡ್ಯ: ರಾಷ್ಟ್ರ ಪಕ್ಷಿ ನವಿಲು ಸಾವು ➤ ಗಂಟೆಗಳು ಕಳೆದರೂ ಸ್ಥಳಕ್ಕಾಗಮಿಸದ ಅರಣ್ಯ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಮಂಡ್ಯ, ಅ. 27. ಜಿಲ್ಲೆಯ ಮದ್ದೂರು ತಾಲೂಕಿನ ಕೆರಮೇಲದೊಡ್ಡಿ ಗ್ರಾಮದಲ್ಲಿ ಇಂದು ನವಿಲು ಅನುಮಾನಾಸ್ಪದವಾಗಿ ಮೃತಪಟ್ಟಿದೆ.  ಅದರಂತೆ ಮಳವಳ್ಳಿ ತಾಲೂಕು ಮುತ್ತತ್ತಿ ಅರಣ್ಯ ಪ್ರದೇಶದಲ್ಲಿ ಕರಡಿ ಗುಂಡಿಗೆ ಬಿದ್ದು ಸಾವನ್ನಪ್ಪಿದೆ.     ಆದರೆ ಈ ಎರಡು ಪ್ರಕರಣದಲ್ಲಿ ಮಾಹಿತಿ ನೀಡಿದರೂ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ತಕ್ಷಣ ಆಗಮಿಸದ ಕಾರಣ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವಿಲು ಅನಾರೋಗ್ಯದಿಂದ ಮೃತಪಟ್ಟಿದೆ ಎಂದು ಶಂಕಿಸಲಾಗಿದೆ. ಇತ್ತ ಕರಡಿಗೆ ವಯಸ್ಸಾಗಿತ್ತು. ಈ ಹಿನ್ನೆಲೆಯಲ್ಲಿ 12 ಅಡಿ ಆಳದ

ಮಂಡ್ಯ: ರಾಷ್ಟ್ರ ಪಕ್ಷಿ ನವಿಲು ಸಾವು ➤ ಗಂಟೆಗಳು ಕಳೆದರೂ ಸ್ಥಳಕ್ಕಾಗಮಿಸದ ಅರಣ್ಯ ಅಧಿಕಾರಿಗಳು Read More »

ಕರ್ನಾಟಕ
Scroll to Top