Kadaba News

ಹೆತ್ತವರ ಕಣ್ಣೆದುರಲ್ಲೇ ನದಿಗೆ ಜಿಗಿದು ಯುವತಿ ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com ವಿಜಯಪುರ ಅ. 26: ಯುವತಿಯೊಬ್ಬಳು ಹೆತ್ತವರ ಕಣ್ಣೆದ್ದುರಲ್ಲೇ ಭೀಮಾ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವಿಜಯಪುರದಲ್ಲಿ ಭಾನುವಾರ (ಅ.25) ನಡೆದಿದೆ. ಐಶ್ವರ್ಯ ಶ್ರೀಪಾಲ ಕಬ್ಬಿನ (20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಧಾರವಾಡದ ನವಲಗುಂದ ಪಟ್ಟಣದ ನಿವಾಸಿ. ಕುಟುಂಬಸ್ಥರೊಂದಿಗೆ ಗಾಣಗಾಪುರ ದತ್ತಾತ್ರೆಯ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಘಟನೆ ಸಂಭವಿಸಿದೆ. ಮಾರ್ಗ ಮಧ್ಯೆ ವಿಜಯಪುರದ ಆಲಮೇಲ ಮತ್ತು ಕಲಬುರಗಿ ಜಿಲ್ಲೆಯ  ಅಫಜಲಪುರ ತಾಲೂಕು ನಡುವೆ ಭೀಮಾನದಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಸೇತುವೆ ಬಳಿ ವಾಹನ […]

ಹೆತ್ತವರ ಕಣ್ಣೆದುರಲ್ಲೇ ನದಿಗೆ ಜಿಗಿದು ಯುವತಿ ಆತ್ಮಹತ್ಯೆ! Read More »

ಕರ್ನಾಟಕ

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಬೆಳಗಾವಿ, ಅ. 26. ಗುಂಪು ಕಟ್ಟಿಕೊಂಡು ಯುವಕನ ಮೇಲೆ ದಾಳಿ ನಡೆಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ  ಗ್ಯಾಂಗ್ ವಾಡಿ ರಸ್ತೆಯಲ್ಲಿ ಕಳೆದ ದಿನ ರಾತ್ರಿ ನಡೆದಿದೆ. ಮೃತನನ್ನು ಅಜಂ ನಗರದ ನಿವಾಸಿ ಶಹಬಾಜ್ (24) ಎಂದು ಗುರುತಿಸಲಾಗಿದೆ.     ಮೃತ ವ್ಯಕ್ತಿ ರೌಡಿಶೀಟರ್ ಎಂಬುದಾಗಿ ತಿಳಿದುಬಂದಿದೆ. ಕೊಲೆಗೆ ನಿಖರ ಕಾರಣ ಏನು ಎಂದು ತಿಳಿದುಬಂದಿಲ್ಲ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮುಂಬೈ: RBI ಗವರ್ನರ್ ಶಕ್ತಿಕಾಂತ್ ದಾಸ್ ಗೂ ಕೊರೊನಾ ಪಾಸಿಟಿವ್…!

(ನ್ಯೂಸ್ ಕಡಬ) newskadaba.com ಮುಂಬೈ, ಅ.27: ಭಾರತೀಯ ರಿಸರ್ವ್ ಬ್ಯಾಂಕ್ (RBI) ಗೌರ್ನರ್ ಶಕ್ತಿಕಾಂತ್ ದಾಸ್ (63) ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.   ನನಗೆ ಸೋಂಕು ರೋಗದ ಯಾವುದೇ ಲಕ್ಷಣಗಳು ಇಲ್ಲದಿದ್ದರೂ, ನನಗೆ ಕೊರೊನಾ ದೃಢಪಟ್ಟಿದೆ. ನಾನು ಪ್ರತ್ಯೇಕವಾಗಿದ್ದುಕೊಂಡೇ RBI ಕೆಲಸ-ಕಾರ್ಯಗಳನ್ನು ನಿರ್ವಹಿಸುತ್ತಿದ್ದೇನೆ ಎಂದು ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ನಾನೀಗ ಕ್ವಾರಂಟೈನ್‍ನಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿದ್ದಾರೆ. ನಾನು ವಿಡಿಯೋ

ಮುಂಬೈ: RBI ಗವರ್ನರ್ ಶಕ್ತಿಕಾಂತ್ ದಾಸ್ ಗೂ ಕೊರೊನಾ ಪಾಸಿಟಿವ್…! Read More »

ಕರಾವಳಿ

ಕಡಬ: ಜನಪ್ರಿಯ ಆಮ್ಲೆಟ್ ಅಂಗಡಿ ಮಾಲಕ ನಿಧನ

(ನ್ಯೂಸ್ ಕಡಬ) newskadaba.com ಕಡಬ ಅ. 26: ಕಡಬದ ಜನಪ್ರಿಯ ಆಮ್ಲೆಟ್ ಅಂಗಡಿ ಮಾಲಕರಾಗಿದ್ದ ಅಬ್ದುಲ್ ಖಾದರ್ ರವರು ಕಳೆದ ರಾತ್ರಿ 11:20 ರ ಸುಮಾರಿಗೆ ತಮ್ಮ ಸ್ವಗೃಹದಲ್ಲಿ ಹೃದಯಾಘಾತಕ್ಕೆ ನಿಧನರಾಗಿದ್ದಾರೆ. ಕಡಬ ಪೇಟೆಯಲ್ಲಿ ಹಲವಾರು ವರುಷಗಳಿಂದ ಮೊಬೈಲ್ ಕ್ಯಾಂಟೀನ್ ತೆರೆದು ಆಮ್ಲೇಟ್ ಖಾದ್ರಿಚ್ಚ ಎಂದೇ ಜನಪ್ರಿಯರಾಗಿದ್ದ ಇವರು ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಕಡಬ: ಜನಪ್ರಿಯ ಆಮ್ಲೆಟ್ ಅಂಗಡಿ ಮಾಲಕ ನಿಧನ Read More »

ಕರಾವಳಿ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ನವದೆಹಲಿ ಅ. 26: ಆದಾಯದ ಕೊರತೆ ಎದುರಿಸುತ್ತಿರುವ ಜನರಿಗೆ ಕೇಂದ್ರ ಸರ್ಕಾರ ಚಿಕ್ಕ ರಿಲೀಫ್ ನೀಡಿದ್ದು ದೀಪಾವಳಿ ಕೊಡುಗೆ ಎಂಬಂತೆ ಚಕ್ರಬಡ್ಡಿ ಮನ್ನಾ ಆದೇಶ ಹೊರಡಿಸಿದೆ. ಒಟ್ಟು 6,500 ಕೋಟಿ ರೂಪಾಯಿ ಮೌಲ್ಯದ ಚಕ್ರಬಡ್ಡಿ ಮನ್ನಾ ಘೋಷಿಸಿದ್ದು,2 ಕೋಟಿವರೆಗಿನ ಸಾಲಕ್ಕೆ ಈ ಮನ್ನಾ ಅನ್ವಯವಾಗಲಿದೆ. ಇದರಿಂದ ಕೇಂದ್ರ ಸರ್ಕಾರದ ಬೊಕ್ಕಸಕ್ಕೆ 6,500ಕೋಟಿ ರೂಪಾಯಿ ಹೊರೆಯಾಗಲಿದೆ. ಕೊರೋನಾ ಲಾಖ್ ಡೌನ್ ಅವಧಿಯ ಮಾರ್ಚ್ 1 ರಿಂದ ಅಗಸ್ಟ್ 31ರ ವರೆಗಿನ ಸಾಲದ ಕಂತು ಮರುಪಾವತಿ ಮುಂದೂಡಿಗೆ

6,500 ಕೋಟಿ ಚಕ್ರಬಡ್ಡಿ ಮನ್ನಾ ಘೋಷಿಸಿದ ಕೇಂದ್ರ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

ವಿಜಯದಶಮಿಗೆ ಶುಭ ಕೋರಿದ ಸಿಎಂ ಯಡಿಯೂರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 26: ಕೊರೋನಾ ಸೋಂಕಿನ ಭಯದ ನಡುವೆಯೇ ರಾಜ್ಯಾದ್ಯಂತ ದಸರಾ ಹಬ್ಬ ಆಚರಿಸಲಾಗುತ್ತಿದೆ. ವಿಜಯ ದಶಮಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಶುಭಾಶಯ ಕೋರಿದ್ದಾರೆ. “ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಹಬ್ಬದ ಹಾರ್ದಿಕ ಶುಭ ಕಾಮನೆಗಳು, ಅಧರ್ಮದ ವಿರುದ್ಧ ಧರ್ಮದ ಸಂಕೇತವೇ ವಿಜಯದಶಮಿ, ಈ ಕೋವಿಡ್ ಮಹಾಮಾರಿ ವಿರುದ್ಧ ನಮಗೆ ನಾಡದೇವತೆ ಚಾಮುಂಡೇಶ್ವರಿ ಗೆಲುವನ್ನು ಅನುಗ್ರಹಿಸಲಿ ಎಂದು ಪ್ರಾರ್ಥಿಸೋಣ” ಎಂದು ಟ್ವೀಟ್ ಮಾಡಿದ್ದಾರೆ.  

ವಿಜಯದಶಮಿಗೆ ಶುಭ ಕೋರಿದ ಸಿಎಂ ಯಡಿಯೂರಪ್ಪ Read More »

ಕರಾವಳಿ, ಕರ್ನಾಟಕ

ಮೈಸೂರು ಅರಮನೆಯಲ್ಲಿ ವಿಜಯದಶಮಿ ಆಚರಣೆ ಆರಂಭ

(ನ್ಯೂಸ್ ಕಡಬ) newskadaba.com ಮೈಸೂರು ಅ. 26: ದಸರಾ ಹಿನ್ನೆಲೆಯಲ್ಲಿ ಮೈಸೂರಿನ ಅರಮನೆಯಲ್ಲಿ ಸರಳ ವಿಜಯದಶಮಿ ಆಚರಣೆಗಳು ಆರಂಭಗೊಂಡಿದ್ದು, ಇಂದು ರಾಜವಂಶಸ್ಥರಿಂದ ಉತ್ತರ ಪೂಜೆ ನೆರವೇರಲಿದೆ. ಬೆಳಗ್ಗೆ 9.30ಕ್ಕೆ ಪಟ್ಟದ ಆನೆ, ಕುದುರೆ, ಒಂಟೆ, ಹಸುಗಳು ಆನೆ ಬಾಗಿಲಿಗೆ ಆಗಮಿಸಲಿದ್ದು, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್​ ಅವರು ವಿಜಯಯಾತ್ರೆ ಹೊರಡಲಿದ್ದಾರೆ. ಬೆಳಗ್ಗೆ 9.45ಕ್ಕೆ ಖಾಸ ಆಯುಧಗಳಿಗೆ ಉತ್ತರ ಪೂಜೆ ನಡೆಯಲಿದ್ದು, ನಂತರ ಅವುಗಳನ್ನು ಬೆಳ್ಳಿ ರಥದಲ್ಲಿ ಭುವನೇಶ್ವರಿ ದೇವಾಲಯಕ್ಕೆ ರವಾನಿಸಲಾಗುವುದು. ಭುವನೇಶ್ವರಿ ದೇವಾಲಯದಲ್ಲಿ ಯದುವೀರ ಅವರು ಬನ್ನಿಪೂಜೆ ನೆರವೇರಿಸಲಿದ್ದಾರೆ.

ಮೈಸೂರು ಅರಮನೆಯಲ್ಲಿ ವಿಜಯದಶಮಿ ಆಚರಣೆ ಆರಂಭ Read More »

ಕರ್ನಾಟಕ

ಪುತ್ತೂರು :ಕಾರು ಹಾಗೂ ಓಮ್ನಿ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com ಪುತ್ತೂರು ಅ. 25: ಇಂದು ಪುತ್ತೂರಿನ ಸಮೀಪದ ಭಕ್ತಕೋಡಿಯಲ್ಲಿ ಕಾರು ಹಾಗೂ ಓಮ್ನಿ ಮಧ್ಯೆ ಅಪಘಾತ ಸಂಭವಿಸಿದೆ. ಪರಿಣಾಮ ಚಾಲಕನಿಗೆ ಗಾಯವಾಗಿದೆ. ಪುತ್ತೂರು ಸಿಟಿಯ ದರ್ಬೆ- ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಭಕ್ತಕೋಡಿ ಎಂಬಲ್ಲಿ ಕಾರು ಹಾಗೂ ಓಮ್ನಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓಮ್ನಿ ಚಾಲಕನಿಗೆ ಗಂಭೀರಾ ಗಾಯವಾಗಿದೆ. ಅಪಘಾತದ ವೇಗಕ್ಕೆ ಓಮ್ನಿ ನಿಯಾ ಮುಂಬಾಗ ಜಖಂಗೊಂಡಿದೆ. ಇನ್ನು ಗಾಯಾಗೊಂಡ ಚಾಲಕನ್ನು ಚಿಕ್ಸಿತೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಪುತ್ತೂರು :ಕಾರು ಹಾಗೂ ಓಮ್ನಿ ನಡುವೆ ಅಪಘಾತ Read More »

ಕರಾವಳಿ

ಉಡುಪಿಯಲ್ಲಿ ಯುವತಿ ಅನುಮಾನಾಸ್ಪದ ಸಾವು ➤ ಆಸ್ಪತ್ರೆಗೆ ದಾಖಲಿಸಿದ ಯುವಕ ಎಸ್ಕೇಪ್

(ನ್ಯೂಸ್ ಕಡಬ) newskadaba.com ಉಡುಪಿ ಅ. 25: ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಯುವತಿಯನ್ನು ಉಡುಪಿ ತಾಲೂಕು ಕುಕ್ಕೆಹಳ್ಳಿ ನಿವಾಸಿ ರಕ್ಷಿತಾ ನಾಯಕ್ ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಪ್ರಶಾಂತ್ ಕುಂದರ್ ಎಂಬಾತ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರಕ್ಷಿತಾಳನ್ನು ಆಟೋದಲ್ಲಿ ಕರೆದುಕೊಂಡು ಬಂದು ಉಡುಪಿಯ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಿದ್ದಾನೆ. ವೈದ್ಯರು ಯುವತಿ ಮೃತಪಟ್ಟಿದ್ದಾಳೆ ಎಂದು ಘೋಷಿಸಿದ ಕೂಡಲೇ ಯುವಕ, ಯುವತಿಯ ಮನೆಯವರಿಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾನೆ. ಕೆಲವೇ ಕ್ಷಣಗಳಲ್ಲಿ ಯುವಕ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಉಡುಪಿ

ಉಡುಪಿಯಲ್ಲಿ ಯುವತಿ ಅನುಮಾನಾಸ್ಪದ ಸಾವು ➤ ಆಸ್ಪತ್ರೆಗೆ ದಾಖಲಿಸಿದ ಯುವಕ ಎಸ್ಕೇಪ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲಕ್ಕೆ ಬಡಿದು ಅಣ್ಣನಿಂದಲೇ ತಂಗಿಯ ಬರ್ಬರ ಹತ್ಯೆ.!

(ನ್ಯೂಸ್ ಕಡಬ) newskadaba.com  ರಾಜಸ್ಥಾನ ಅ. 25: ತಾನು ಪ್ರೀತಿ ಮಾಡಿದಾತನನ್ನು ಮದುವೆಯಾಗುತ್ತೇನೆ ಎಂದ ಸಹೋದರಿಯನ್ನು ಸಹೋದರನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಆರೋಪಿ ಸಹೋದರನನ್ನು ಪವನ್(24) ಎಂದು ಗುರುತಿಸಲಾಗಿದೆ. ಅಣ್ಣ-ತಂಗಿ ಇಬ್ಬರೂ ರಾಜಸ್ಥಾನದ ಅಲ್ವಾರ್ ಪಟ್ಟಣದ ಭಿವಾಡಿ ನಿವಾಸಿಗಳಾಗಿದ್ದಾರೆ. ಈ ಘಟನೆ ಶುಕ್ರವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಆರೋಪಿ ಏರ್ ಕಂಡೀಷನರ್ ರಿಪೇರಿ ಮಾಡುವ ಅಂಗಡಿ ಹೊಂದಿದ್ದನು. ಯುವತಿಯ ಪ್ರಿಯತಮ ವಿಷ್ಣು ಅದೇ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಆರೋಪಿ ಪವನ್ ತನ್ನ ತಂಗಿಯ ತಲೆಯನ್ನು

ನೆಲಕ್ಕೆ ಬಡಿದು ಅಣ್ಣನಿಂದಲೇ ತಂಗಿಯ ಬರ್ಬರ ಹತ್ಯೆ.! Read More »

ಕ್ರೈಮ್ ನ್ಯೂಸ್
Scroll to Top