Kadaba News

ಆನ್‍ಲೈನ್ ತರಗತಿ ವೇಳೆ ಮಗಳಿಗೆ ಪೆನ್ಸಿಲ್‍ನಿಂದ ಇರಿದು ಹಲ್ಲೆ ➤ ತಾಯಿಯ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಮುಂಬೈ ಅ. 24: ಆನ್‍ಲೈನ್ ತರಗತಿ ವೇಳೆ ಸರಿಯಾಗಿ ಗಮನ ಹರಿಸಿಲ್ಲ, ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿಲ್ಲ ಎಂದು ಕೋಪಗೊಂಡ ತಾಯಿ ತನ್ನ ಮಗಳಿಗೆ ಪೆನ್ಸಿಲ್‍ನಿಂದ ಇರಿದು ಹಲ್ಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಪೆನ್ಸಿಲ್‍ನಿಂದ ತನ್ನ 12 ವರ್ಷದ ಮಗಳ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಸ್ಯಾಂಟಾಕ್ರಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆನ್‍ಲೈನ್ ತರಗತಿ ವೇಳೆ ಗಮನಹರಿಸಿಲ್ಲ ಹಾಗೂ ಶಿಕ್ಷಕರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿಲ್ಲ ಎಂಬ ಉದ್ದೇಶದಿಂದ ತಾಯಿ ಮಗಳ […]

ಆನ್‍ಲೈನ್ ತರಗತಿ ವೇಳೆ ಮಗಳಿಗೆ ಪೆನ್ಸಿಲ್‍ನಿಂದ ಇರಿದು ಹಲ್ಲೆ ➤ ತಾಯಿಯ ವಿರುದ್ಧ ಪ್ರಕರಣ ದಾಖಲು Read More »

ರಾಷ್ಟ್ರೀಯ ನ್ಯೂಸ್

ಭಟ್ಕಳ ದೇವಸ್ಥಾನದಲ್ಲಿ ಕಳವು ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಭಟ್ಕಳ ಅ. 24: ಭಟ್ಕಳದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಯಲ್ಲಾಪುರ ಇಡಗುಂದಿಯ ಸತೀಶ ರಾಮಚಂದ್ರ ಭಟ್ಟ ಎಂದು ತಿಳಿದು ಬಂದಿದೆ.   ಇನ್ನು ಈತ ದೇವಸ್ಥಾನದ ಗರ್ಭಗುಡಿಯಲ್ಲಿದ್ದ ಚಿನ್ನಾಭರಣ ಕಳವು ಮಾಡಿರುವುದಾಗಿ ದೂರುದಾಖಲಾಗಿತ್ತು. ಈ ಹಿನ್ನಲೆಯಲ್ಲಿ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಭಟ್ಕಳ ದೇವಸ್ಥಾನದಲ್ಲಿ ಕಳವು ಪ್ರಕರಣ ➤ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳದಲ್ಲಿ ರೌಡಿ ಶೀಟರ್ ಹತ್ಯೆ ಪ್ರಕರಣ ➤ ಗುಂಡ್ಯದಲ್ಲಿ ಗುಂಡು ಹಾರಿಸಿ ಆರೋಪಿಯ ಅರೇಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 24: ರೌಡಿ ಶೀಟರ್ ಉಮರ್ ಫಾರೂಕ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಇಂದು (ಶನಿವಾರ) ಬೆಳ್ಳಂಬೆಳಗ್ಗೆ ಗುಂಡ್ಯದಲ್ಲಿ ಪೊಲೀಸರು ಗುಂಡು ಹಾರಿಸಿ ಬಂಧಿಸಲಾಗಿದ್ದು, ಘಟನೆಯಿಂದ ಬಂಧಿತ ಆರೋಪಿ ಮತ್ತು ಎಸ್ಸೈ ಒಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮೂಲತಃ ಕಲ್ಲಡ್ಕ ನಿವಾಸಿ ಪ್ರಸಕ್ತ ನಂದಾವರದಲ್ಲಿ ವಾಸವಿರುವ ಖಲೀಲ್ ಬಂಧಿತ ಆರೋಪಿ. ಕಾರ್ಯಾಚರಣೆ ವೇಳೆ ಬಂಟ್ವಾಳ ಗ್ರಾಮಾಂತರ ಎಸ್ಸೈ ಪ್ರಸನ್ನ ಅವರು ಗಾಯಗೊಂಡಿದ್ದಾರೆ. ಶುಕ್ರವಾರ ಸಂಜೆ ಮೆಲ್ಕಾರ್ ಸಮೀಪದ ಬೋಗೋಡಿ ಎಂಬಲ್ಲಿ ಕಲ್ಲಡ್ಕ ನಿವಾಸಿ ರೌಡಿ

ಬಂಟ್ವಾಳದಲ್ಲಿ ರೌಡಿ ಶೀಟರ್ ಹತ್ಯೆ ಪ್ರಕರಣ ➤ ಗುಂಡ್ಯದಲ್ಲಿ ಗುಂಡು ಹಾರಿಸಿ ಆರೋಪಿಯ ಅರೇಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ➤ ಜಿಲ್ಲಾಧಿಕಾರಿ ಡಾ. ಸಜಿತ್‌ ಬಾಬು ಆದೇಶ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.23: ಕೊರೋನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಜಾರಿಗೆ ತರಲಾಗಿದ್ದ ನಿಷೇಧಾಜ್ಞೆಯನ್ನು ಅ. 31 ರ ತನಕ ವಿಸ್ತರಿಸಿ ಜಿಲ್ಲಾಧಿಕಾರಿ ಡಾ. ಸಜಿತ್‌ ಬಾಬು ಆದೇಶ ಹೊರಡಿಸಿದ್ದಾರೆ.     ಸೋಂಕು ನಿಯಂತ್ರಣದ ದೃಷ್ಟಿಯಿಂದ ಅ. 3 ರಿಂದ ಸೆಕ್ಷನ್‌ 144 ರಂತೆ ನಿಷೇಧಾಜ್ಞೆಯನ್ನು ಕೇರಳದಲ್ಲಿ ಜಾರಿಗೆ ತರಲಾಗಿತ್ತು. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಹಂತಹಂತವಾಗಿ ನಿಷೇಧಾಜ್ಞೆ ತರಲಾಯಿತ್ತು. ಮಂಜೇಶ್ವರ, ಬದಿಯಡ್ಕ, ಕುಂಬಳೆ, ವಿದ್ಯಾನಗರ ಕಾಸರಗೋಡು, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ,

ಕಾಸರಗೋಡು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ➤ ಜಿಲ್ಲಾಧಿಕಾರಿ ಡಾ. ಸಜಿತ್‌ ಬಾಬು ಆದೇಶ Read More »

ಕರ್ನಾಟಕ

ಪೆರುವಾಜೆ : ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

(ನ್ಯೂಸ್ ಕಡಬ) newskadaba.com ಪೆರುವಾಜೆ ಅ. 23: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಅ.16 ರಂದು ನವರಾತ್ರಿ ಉತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪ್ರಾರಂಭಗೊಂಡಿದ್ದು, ಅ.24 ರವರೆಗೆ ನಡೆಯಲಿದೆ.   ಪ್ರತೀ ದಿನ ಸಂಜೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯುತ್ತಿದೆ. ರಾತ್ರಿ ಶ್ರೀ ಕ್ಷೇತ್ರದ ರಂಗಪೂಜೆ ನಂತರ ಭಕ್ತಾದಿಗಳ ಸಾಮೂಹಿಕ ರಂಗಪೂಜೆ, ಮಹಾಪೂಜೆ ನಡೆದ ಬಳಿಕ ಅನ್ನಸಂತರ್ಪಣೆ ನಡೆಯುತ್ತಿದೆ. ಅ. 25 ರಂದು ವಿಜಯ ದಶಮಿ ಕಾರ್ಯಕ್ರಮ ನಡೆಯಲಿದೆ. ಮಕ್ಕಳಿಗೆ ಅಕ್ಷರಾಭ್ಯಾಸ ನಡೆಯಲಿದೆ ಎಂದು ದೇವಸ್ಥಾನದ

ಪೆರುವಾಜೆ : ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ Read More »

ಕರಾವಳಿ

ಕಡಬ: ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರ ಖಂಡಿಸಿ ಬ್ಲಾಕ್ ಕಾಂಗ್ರೇಸ್‌‌ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಅ.23: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಇತ್ತೀಚೆಗೆ ನಡೆದ ದಲಿತ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಬರ್ಬರ ಹತ್ಯೆಯನ್ನು ಖಂಡಿಸಿ ಅ.23 ರಂದು ಕಾಂಗ್ರೇಸ್‌ ಸಮಿತಿ ಹಾಗೂ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಕಡಬ ತಾಲೂಕು ಕಛೇರಿಯೆದುರು ಪ್ರತಿಭಟನೆ ನಡೆಯಿತು.     ಕಡಬ ಬ್ಲಾಕ್‌ ಕಾಂಗ್ರೇಸ್‌ ಅಧ್ಯಕ್ಷ ಗಣೇಶ್‌ ಕೈಕುರೆಯವರು ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರದ ನೀತಿಯನ್ನು ಖಂಡಿಸಿದರು. ಕಡಬ ಜಿಲ್ಲಾ ಪಂಚಾಯತ್‌

ಕಡಬ: ಹತ್ರಾಸ್ ನಲ್ಲಿ ಸಾಮೂಹಿಕ ಅತ್ಯಾಚಾರ ಖಂಡಿಸಿ ಬ್ಲಾಕ್ ಕಾಂಗ್ರೇಸ್‌‌ ವತಿಯಿಂದ ಪ್ರತಿಭಟನೆ Read More »

ಕರಾವಳಿ

ಪ್ರಸಿದ್ದ ಕ್ರಿಕೆಟಿಗ “ಕಪಿಲ್ ದೇವ್ “ಗೆ ಹೃದಯಾಘಾತ

(ನ್ಯೂಸ್ ಕಡಬ) newskadaba.com ನವದೆಹಲಿ ಅ. 23:  ಪ್ರಸಿದ್ದ ಕ್ರಿಕೆಟಿಗೆ, ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.   ಭಾರತಕ್ಕೆ ಮೊಟ್ಟ ಮೊದಲ ಕ್ರಿಕೆಟ್ ವಿಶ್ವಕಪ್ ಗೆದ್ದು ಕೊಟ್ಟ ಕಪಿಲ್ ದೇವ್ ನವದೆಹಲಿಯ ಆಸ್ಪತ್ರೆಯಲ್ಲಿ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆ. 61 ವರ್ಷದ ಕಪಿಲ್ ದೇವ್ ಅವರನ್ನು ಹೊಸದಿಲ್ಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.  

ಪ್ರಸಿದ್ದ ಕ್ರಿಕೆಟಿಗ “ಕಪಿಲ್ ದೇವ್ “ಗೆ ಹೃದಯಾಘಾತ Read More »

ರಾಷ್ಟ್ರೀಯ ನ್ಯೂಸ್

ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದ ನಟ ಧನ್ವೀರ್

(ನ್ಯೂಸ್ ಕಡಬ) newskadaba.com ಮೈಸೂರು ಅ. 23: ಯುವನಟ ಧನ್ವೀರ್ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬಂಡೀಪುರದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧವೇರಿದ್ದರೂ ಕೂಡ ಈ ನಿಯಮವನ್ನು ಉಲ್ಲಂಘಿಸಿ ಕಳೆದ ರಾತ್ರಿ ಧನ್ವೀರ್ ಸಫಾರಿ ಮಾಡಿರುವುದರಿಂದ ಅವರ ಮೇಲೆ ಸಾರ್ವಜನಿಕರ ಕೆಂಡಮಂಡಲವಾಗಿದ್ದಾರೆ.ಸರ್ಕಾರ ಮಾಡುವ ನಿಯಮಗಳು ಕೇವಲ ಜನಸಾಮಾನ್ಯರಿಗೆ ಮಾತ್ರ ಅನ್ವಯವಾಗುತ್ತವೆಯೇ ಸೆಲಬ್ರೆಟಿಗಳಿಗೆ ಈ ನಿಯಮಗಳು ಅನ್ವಯವಾಗುವುದಿಲ್ಲವೇ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ. ನಟ ಧನ್ವೀರ್ ರಾತ್ರಿ ಬಂಡೀಪುರದ ಅಭಯರಾಣ್ಯದಲ್ಲಿ ಸಫಾರಿ ನಡೆಸಿದ ನಂತರ ತಮ್ಮ ಸಾಮಾಜಿಕ ಜಾಲಗಳಲ್ಲಿ ತಾನು ನೋಡಿದ ಹುಲಿ ಹಾಗೂ

ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದ ನಟ ಧನ್ವೀರ್ Read More »

ಕರ್ನಾಟಕ

ಬೆಂಗಳೂರಿನಲ್ಲಿ ರಸ್ತೆಗಿಳಿದ ಎಲೆಕ್ಟ್ರಿಕ್ ಬಸ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 23: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ದೇಶಿಯ ನಿರ್ಮಿತ ಓಲೆಕ್ಟ್ರಾ ಎಲೆಕ್ಟ್ರಿಕ್ ಬಸ್ ಪರೀಕ್ಷಾರ್ಥ ಸಂಚಾರಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಗುರುವಾರ ಚಾಲನೆ ನೀಡಿದರು. ಬಿಎಂಟಿಸಿಯ ಕೇಂದ್ರ ಕಚೇರಿ ಆವರಣದಲ್ಲಿ ಈ ಬಸ್‍ಗೆ ಚಾಲನೆ ನೀಡಿದ ನಂತರ ವಿಧಾನಸೌಧದವರೆಗೂ ಅದೇ ಬಸ್‍ನಲ್ಲಿ ಪ್ರಯಾಣಿಸಿದರು. ವಿಧಾನಸೌಧದ ಆವರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ಎಲೆಕ್ಟ್ರಿಕ್ ಬಸ್‍ನ್ನು ವೀಕ್ಷಣೆ ಮಾಡಿ ನಂತರ ಉಪಮುಖ್ಯಮಂತ್ರಿಯವರಿಂದ ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮಣ್ ಸವದಿ, ಬಿಎಂಟಿಸಿಗೆ 300

ಬೆಂಗಳೂರಿನಲ್ಲಿ ರಸ್ತೆಗಿಳಿದ ಎಲೆಕ್ಟ್ರಿಕ್ ಬಸ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಉಡುಪಿ : ನಾಲ್ವರು ಅಂತರರಾಜ್ಯ ಕಳ್ಳರ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಅ. 23: ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆದು ಚಿನ್ನಾಭರಣ, ನಗದು ದೋಚಿ ಪರಾರಿಯಾಗುತ್ತಿದ್ದ ಇರಾನಿ ಗ್ಯಾಂಗ್‌ನ ನಾಲ್ವರು ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ.ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ಆರೋಪಿಗಳು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಡುಪಿ ಡಿಸಿಐಬಿ ಇನ್‌ಸ್ಪೆಕ್ಟರ್ ಡಿ.ಆರ್. ಮಂಜಪ್ಪ ನೇತೃತ್ವದ ತಂಡ ದಾಳಿ ನಡೆಸಿ ಅಂತರರಾಜ್ಯ ಕಳ್ಳರನ್ನು ಬಂಧಿಸಿದೆ. ಮಹಾರಾಷ್ಟ್ರದ ಅಹಮದ್ ನಗರ ಜಿಲ್ಲೆಯ ಇರಾನಿ ಮೊಹಲ್ಲಾದ ಜಾಕೀರ್ ಹುಸೇನ್‌, ಶ್ರೀರಾಮಪುರದ ಕಂಬರ್, ಸಂಜಯ್ ನಗರದ ಅಕ್ಷಯ್ ಗೋಸಾವಿ, ಸೈನಿಕ್‌

ಉಡುಪಿ : ನಾಲ್ವರು ಅಂತರರಾಜ್ಯ ಕಳ್ಳರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top