Kadaba News

ನವೆಂಬರ್’ನಲ್ಲಿ ಕಾಲೇಜು ಪುನರಾರಂಭಕ್ಕೆ ಸರ್ಕಾರ ಸಿದ್ಧತೆ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 19: ನವೆಂಬರ್ ತಿಂಗಳಿನಲ್ಲಿ ಕಾಲೇಜು ಪುನರಾರಂಭಕ್ಕೆ ಯುಜಿಸಿ ಗ್ರೀನ್ ಸಿಗ್ನಲ್ ನೀಡಿದ್ದು ಸರ್ಕಾರದಿಂದಲೂ ಕಾಲೇಜು ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹಂತಹಂತವಾಗಿ ಕಾಲೇಜು ಪುನರಾರಂಭಿಸಲು ಸರ್ಕಾರ ಅನುಮತಿ ನೀಡಿದ್ದು ಇದರ ಬೆನ್ನಲ್ಲೇ ಯುಜಿಸಿ ನವೆಂಬರ್ ನಲ್ಲಿ ಕಾಲೇಜು ಆರಂಭಕ್ಕೆ ಸೂಚಿಸಿದೆ. ಕೇಂದ್ರ ಸರ್ಕಾರ ಅನ್ ಲಾಕ್ 5.0 ಮಾರ್ಗಸೂಚಿಯಲ್ಲಿ ಹಂತ ಹಂತವಾಗಿ ಶಾಲಾ-ಕಾಲೇಜುಗಳನ್ನು ಅಕ್ಟೋಬರ್ 15ರ ನಂತರ ಆರಂಭಿಸುವಂತೆ ಸೂಚಿಸಲಾಗಿತ್ತು. ಈ ಬಳಿಕ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ(ಯುಜಿಸಿ) ಕೂಡ ಹಂತ ಹಂತವಾಗಿ ಶಾಲಾ-ಕಾಲೇಜು […]

ನವೆಂಬರ್’ನಲ್ಲಿ ಕಾಲೇಜು ಪುನರಾರಂಭಕ್ಕೆ ಸರ್ಕಾರ ಸಿದ್ಧತೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮೈಸೂರು: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ಅ.19: ನಂಜನಗೂಡು-ಊಟಿ ಹೆದ್ದಾರಿಯ ಎಲಚಗೆರೆ ಗೇಟ್ ಬಳಿ ಬೆಳ್ಳಂಬೆಳಗ್ಗೆ ಬೈಕ್ ಹಾಗೂ ಬೊಲೆರೊ ವಾಹನದ ನಡುವೆ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.     ಮೃತರನ್ನು ನಂಜನಗೂಡಿನ ಕೂಡ್ಲಾಪುರ ಗ್ರಾಮದ ನಾಗರಾಜು(38), ಪುಟ್ಟಸ್ವಾಮಿ (56) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ನಂಜನಗೂಡು ಸಂಚಾರಿ ಠಾಣೆ ಪೊಲೀಸರು ಆಗಮಿಸಿ ಬೊಲೆರೊ ವಾಹನದ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.  

ಮೈಸೂರು: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ರೆಸ್ಟೋರೆಂಟ್‌ ನಲ್ಲಿ ಕಳವು ➤ ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಸುಳ್ಯ , ಅ.19: ಇತ್ತೀಚಿನ ದಿನಗಳಲ್ಲಿ ಸುಳ್ಯ ಪರಿಸರದಲ್ಲಿ ಸರಣಿ ಕಳ್ಳತನ ಪ್ರಕರಣಗಳು  ಹೆಚ್ಚುತ್ತಿದ್ದು, ಕಳೆದ ವಾರ ಸುಳ್ಯ ಜೂನಿಯರ್‌ ಕಾಲೇಜು ರಸ್ತೆಯಲ್ಲಿರುವ ಅಂಗಡಿ ಹಾಗೂ ಚೆನ್ನಕೇಶವ ದೇವಾಲಯದ ಬಳಿ ಇರುವ ಅಂಗಡಿಯಿಂದ ಕಳ್ಳತನವಾಗಿದ್ದು, ಸುಳ್ಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದೀಗ ಸುಳ್ಯ ಗಾಂಧಿನಗರ ಅಲ್‌ ಪಹಾಲ್‌ ಹಟ್‌ ರೆಸ್ಟೋರೆಂಟ್‌ ನಲ್ಲಿ ಅ.17 ರಂದು ಬೆಳಗಿನ ಜಾವ 3 ಗಂಟೆ ಸುಮಯದಲ್ಲಿ ಕಳ್ಳತನ ನಡೆದಿದ್ದು, ಕಳ್ಳತನ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.  

ಸುಳ್ಯ: ರೆಸ್ಟೋರೆಂಟ್‌ ನಲ್ಲಿ ಕಳವು ➤ ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸವಾರನ ಅಜಾಗರೂಕತೆಯಿಂದ ಸ್ಕೂಟರ್ ಪಲ್ಟಿ ➤ ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು  ಅ. 19: ಸ್ಕೂಟರ್ ಸವಾರನ ಅಜಾಗರೂಕತೆಯಿಂದ ಒಮ್ಮೆಲೇ ಬ್ರೇಕ್ ಹಾಕಿದ ಪರಿಣಾಮ ಸ್ಕೂಟರ್  ಹತೋಟಿ ತಪ್ಪಿ ಸ್ಕಿಡ್ ಆಗಿ ಸ್ಕೂಟರ್ ಸವಾರರಿಬ್ಬರಿಗೂ ಗಾಯಗಳಾದ ಘಟನೆ ಶವಿವಾರದಂದು ಪುತ್ತೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಹಿತೇಶ್ ಎಂಬಾತ ತನ್ನ ಸ್ಕೂಟರ್ ನಲ್ಲಿ ಶ್ರೀ ಚೇತನ್ ಎಂಬಾತನನ್ನು ಕುಳ್ಳಿರಿಸಿಕೊಂಡು ಮಾಡತ್ತಾರು-ಕಲ್ಲೇಗ ಸಾರ್ವಜನಿಕ ರಸ್ತೆಯಲ್ಲಿ ಶೇವಿರೆ ಕಡೆಯಿಂದ ನೆಹರೂನಗರ ಕಡೆಗೆ ಚಲಾಯಿಸಿಕೊಂಡು ಹೋಗಿದ್ದಾರೆ, ಬಳಿಕ ಕಬಕ ಗ್ರಾಮದ ಕಲ್ಲೇಗ ಎಂಬಲ್ಲಿ ತಿರುವು ರಸ್ತೆಯಲ್ಲಿ ಅಜಾಗರೂಕತೆ ಮತ್ತು

ಸವಾರನ ಅಜಾಗರೂಕತೆಯಿಂದ ಸ್ಕೂಟರ್ ಪಲ್ಟಿ ➤ ಸವಾರರಿಬ್ಬರಿಗೆ ಗಾಯ Read More »

ಕರಾವಳಿ, ಕರ್ನಾಟಕ

ಸರಕಾರದಿಂದ ಈದ್ ಮಿಲಾದ್ ಕುರಿತು ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 19: ಕೋವಿಡ್ ಅಟ್ಟಹಾಸದ ಹಿನ್ನೆಲೆಯಲ್ಲಿ ಈದ್ ಮಿಲಾದ್ ಆಚರಣೆಗೆ ಸರಕಾರ ಮಾರ್ಗಸೂಚಿ ರಿಲೀಸ್ ಮಾಡಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಈ ಕುರಿತು ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಈದ್ ಮಿಲಾದ್ ಹಬ್ಬವನ್ನು ಸರಳವಾಗಿ ಆಚರಿಸಬೇಕು ಎಂದು ತಿಳಿಸಿದ್ದಾರೆ.   ಈದ್ ಮಿಲಾದ್ ಸಾಮೂಹಿಕ ಮೆರವಣಿಗೆಗೆ ನಿಷೇಧ ಹೇರಲಾಗಿದೆ. ಪ್ರವಚನ, ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ನಿಷೇಧ ವಿಧಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಧ್ವನಿವರ್ಧಕ ಬಳಸುವಂತಿಲ್ಲ. ಮಸೀದಿಗಳಲ್ಲಿ ಕೋವಿಡ್ ನಿಯಮ ಪಾಲನೆ ಕಡ್ಡಾಯ ಎಂಬುದಾಗಿ ಮಾರ್ಗಸೂಚಿಯಲ್ಲಿ ತಿಳಿಸಿದೆ. ನಿಮಯಗಳನ್ನು

ಸರಕಾರದಿಂದ ಈದ್ ಮಿಲಾದ್ ಕುರಿತು ಮಾರ್ಗಸೂಚಿ ಪ್ರಕಟ Read More »

ಕರಾವಳಿ

ಕಾರ್ಕಳ : ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ವೃದ್ದೆ

(ನ್ಯೂಸ್ ಕಡಬ) newskadaba.com ಕಾರ್ಕಳ ಅ. 19: ಕಾರ್ಕಳ ಚಿಕ್ಕಲ್ ಬೆಟ್ಟು ಎಂಬಲ್ಲಿ ಇಂದು ಮುಂಜಾನೆ ಸುಮಾರು 78 ವರುಷದ ವೃದ್ದೆಯೋರ್ವರು ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.   ಘಟನೆ ಕಾರ್ಕಳದ ಹಿರ್ಗಾನ್ ಗ್ರಾಮದ ಚಿಕ್ಕಲ್ ಬೆಟ್ಟು ಎಂಬಲ್ಲಿ ನಡೆದಿದೆ.  ವೃದ್ದೆ ಸುಲೋಚನಾ ಎಂಬುವರು ಮನೆ ಸಮೀಪದ ತೋಟದಲ್ಲಿ ಮುಂಜಾನೆ ಸೀಮೆ ಎಣ್ಣೆ ಹಾಗೂ ಡೀಸೆಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಕಾರ್ಕಳ : ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾದ ವೃದ್ದೆ Read More »

ಕರಾವಳಿ, ಕರ್ನಾಟಕ

ಉಸಿರಾಟ ಸಮಸ್ಯೆ: ಶಾಸಕ ಎಸ್.ಎ.ರಾಮದಾಸ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 19: ಉಸಿರಾಟದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಬಿಜೆಪಿ ಶಾಸಕ ಎಸ್‌.ಎ.ರಾಮದಾಸ್‌ ಅವರು ನಗರದ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮುಂಜಾನೆ ಉಸಿರಾಟದಲ್ಲಿ ತೀವ್ರ ಸಮಸ್ಯೆ ಕಾಣಿಸಿಕೊಂಡು ಅಸ್ವಸ್ಥರಾಗಿದ್ದ ಶಾಸಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಶಾಸಕ ರಾಮ್ ದಾಸ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.. ಕಳೆದ ಎರಡು ದಿನಗಳಿಂದ ಶಾಸಕ ರಾಮದಾಸ್ ದಸರಾ ಸಮಾರಂಭದಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.  

ಉಸಿರಾಟ ಸಮಸ್ಯೆ: ಶಾಸಕ ಎಸ್.ಎ.ರಾಮದಾಸ್ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ

ಕಸ ಹಾಕೋ ಕಿರಾತಕರಿಗೆ ಸ್ಪೆಷಲ್ ಬ್ಯಾನರ್ ರೆಡಿ ➤ ಬ್ಯಾನರ್ ನಲ್ಲಿ ಏನಿದೆ ಗೊತ್ತೇ.?!

(ನ್ಯೂಸ್ ಕಡಬ) newskadaba.com ಉಡುಪಿ ಅ. 19: ಪರಿಸರ ಸ್ವಚ್ಛತೆ ಬಗ್ಗೆ ಸರ್ಕಾರ ಎಷ್ಟೇ ಮುಂಜಾಗ್ರತೆ ಕ್ರಮಗಳನ್ನು ಜಾರಿಗೆ ತಂದರೂ ಕೆಲವೊಂದು ಪ್ರದೇಶದ ಜನರು ಇದನ್ನ ಕ್ಯಾರೆ ಅನ್ನುತ್ತಿಲ್ಲ. ಅವಿದ್ಯಾವಂತರಿಗಿಂತ ವಿದ್ಯಾವಂತರೇ ಕೀಳಾಗಿ ವರ್ತಿಸುತ್ತಾರೆ.ಅದರಂತೆ ,ಉಡುಪಿಯ ಹಿರಿಯಡ್ಕದ ಪ್ರದೇಶವೊಂದರಲ್ಲಿ ಜನ ಸಿಕ್ಕಾಪಟ್ಟೆ ಕಸ ಎಸೆದು ಹೋಗುತ್ತಿದ್ದರು. ಇದರಿಂದ ಇಡೀ ಪರಿಸರ ಗಬ್ಬು ನಾರುತ್ತಿತ್ತು, ಮಾತ್ರವಲ್ಲದೆ ಸಾಂಕ್ರಾಮಿಕ ರೋಗದ ಭೀತಿಯೂ ಶುರುವಾಗಿತ್ತು.ಹೀಗಾಗಿ ಆತ್ರಾಡಿ ಗ್ರಾಮಸ್ಥರೆಲ್ಲಾ ಸೇರಿ ‘ ಇಲ್ಲಿ ದಯವಿಟ್ಟು ಕಸ ಹಾಕಬೇಡಿ ‘ ಎಂದು ಕೋರಿಕೆಯ ಬ್ಯಾನರ್ ಅಳವಡಿಸಿದ್ದರು.

ಕಸ ಹಾಕೋ ಕಿರಾತಕರಿಗೆ ಸ್ಪೆಷಲ್ ಬ್ಯಾನರ್ ರೆಡಿ ➤ ಬ್ಯಾನರ್ ನಲ್ಲಿ ಏನಿದೆ ಗೊತ್ತೇ.?! Read More »

ಕರಾವಳಿ, ಕರ್ನಾಟಕ

ಕಾಪು ಬೀಚ್ ನಲ್ಲಿ ಬೆಂಗಳೂರಿನಿಂದ ಬಂದ ಯುವಕರು ನೀರುಪಾಲು

(ನ್ಯೂಸ್ ಕಡಬ) newskadaba.com ಕಾಪು ಅ. 19: ಕಾಪು ಬೀಚ್ ನಲ್ಲಿ ಬೆಂಗಳೂರಿನಿಂದ ಬಂದ ಐವರು ಯುವಕರ ತಂಡದಲ್ಲಿ ಇಬ್ಬರು ಯುವಕರು ನಿರುಪಾಲಾದ ಘಟನೆ ರವಿವಾರ ಸಂಜೆ ನಡೆದಿದೆ. ಕಾರ್ತಿಕ್ ಮತ್ತು ರೂಪೇಶ್ ಎಂಬವರು ನೀರು ಪಾಲಾಗಿದ್ದು, ರೂಪೇಶ್ ಎಂಬಾತನ ಶವ ಮೇಲಕ್ಕೆತ್ತಲಾಗಿದೆ. ಬೆಂಗಳೂರಿನಿಂದ ಬಂದ 5 ಮಂದಿ ಯುವಕರ ತಂಡ ರವಿವಾರ ಸಂಜೆ ಕಾಪು ಬೀಚ್ ನಲ್ಲಿ ಆಟವಾಡುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ‌. ನೀರು ಪಾಲಾಗುತ್ತಿದ್ದ ರೂಪೇಶ್ ನನ್ನು ಬೀಚ್ ನಿರ್ವಾಹಕ ಪ್ರಶಾಂತ್ ಕರ್ಕೇರ, ವಿನೀತ್,

ಕಾಪು ಬೀಚ್ ನಲ್ಲಿ ಬೆಂಗಳೂರಿನಿಂದ ಬಂದ ಯುವಕರು ನೀರುಪಾಲು Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ರಸ್ತೆ ಕಾಂಕ್ರೀಟಿಕರಣಕ್ಕೆ ಮಾಜಿ ಸಚಿವ ರಮಾನಾಥ ರೈ ಗಳಿಂದ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಬಂಟ್ವಾಳ , ಅ.18: ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮದ್ವ ದಿಂದ ಮಧ್ವ ಗುತ್ತು ಎಂಬಲ್ಲಿಗೆ ರಸ್ತೆ ಕಾಂಕ್ರೀಟಿಕರಣಕ್ಕೆ 1 ಲಕ್ಷ ವೆಚ್ಚದ ರಸ್ತೆಯ ಕಾಮಗಾರಿಯನ್ನು ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ ರಮನಾಥ ರೈ ಯವರು ಇಂದು ನೆರೆವೇರಿಸಿದರು.     ತಾಲೂಕು ಪಂಚಾಯತ್ ಅನುದಾನದಿಂದ ತಾಲೂಕ್ ಪಂಚಾಯತ್ ಸದಸ್ಯರಾದ ಶ್ರೀಮತಿ ಧನಲಕ್ಷ್ಮಿ ಬಂಗೇರ ರವರ ಅನುದಾನದಿಂದ 1 ಲಕ್ಷ ವೆಚ್ಚದ ರಸ್ತೆಯ ಕಾಮಗಾರಿಯ ಶಿಲಾನ್ಯಾಸವನ್ನು ನೆರೆವೇರಿಸಿದರು.

ಬಂಟ್ವಾಳ: ರಸ್ತೆ ಕಾಂಕ್ರೀಟಿಕರಣಕ್ಕೆ ಮಾಜಿ ಸಚಿವ ರಮಾನಾಥ ರೈ ಗಳಿಂದ ಶಿಲಾನ್ಯಾಸ Read More »

ಕರಾವಳಿ
Scroll to Top