Kadaba News

ಮುಂದುವರಿದ ಮಳೆಯ ಅಬ್ಬರ ➤ ಆಂಧ್ರಪ್ರದೇಶ,ತೆಲಂಗಾಣದಲ್ಲಿ ಜನಜೀವನ ಅಸ್ಥವ್ಯಸ್ಥ

(ನ್ಯೂಸ್ ಕಡಬ) newskadaba.com ಹೈದರಾಬಾದ್ ಅ. 14: ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯ ತತ್ತರಿಸಿ ಹೋಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಎರಡು ರಾಜ್ಯಗಳಲ್ಲಿನ ತಗ್ಗು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಹಲವಾರು ವಸ್ತುಗಳನ್ನು ಕೊಚ್ಚಿಕೊಂಡು ಹೋಗಿರುವುದಾಗಿ ವರದಿ ತಿಳಿಸಿದೆ. ತೆಲಂಗಾಣದಲ್ಲಿ ಮಳೆಗೆ ಸಂಬಂಧಿಸಿದಂತೆ ಸಂಭವಿಸಿದ ಘಟನೆಯಲ್ಲಿ ಈವರೆಗೆ 18 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿರುವುದಾಗಿ ವರದಿ ವಿವರಿಸಿದೆ. ಆಂಧ್ರಪ್ರದೇಶದಲ್ಲಿ ನಾಲ್ವರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದುವರಿದ ಮಳೆಯ ಅಬ್ಬರ ➤ ಆಂಧ್ರಪ್ರದೇಶ,ತೆಲಂಗಾಣದಲ್ಲಿ ಜನಜೀವನ ಅಸ್ಥವ್ಯಸ್ಥ Read More »

ರಾಷ್ಟ್ರೀಯ ನ್ಯೂಸ್

ವಾಯು ಸೇನೆಯ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ ➤ ಒಟ್ಟು 15 ಮಂದಿ ಮೃತ್ಯು.!

(ನ್ಯೂಸ್ ಕಡಬ) newskadaba.com ಕಾಬೂಲ್ ಅ. 14: ಅಫ್ಘಾನಿಸ್ಥಾನದ ವಾಯು ಸೇನೆಯ ಎರಡು ಹೆಲಿಕಾಪ್ಟರ್ ಗಳ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 15 ಜನರು ಮೃತಪಟ್ಟಿದ್ದಾರೆ. ಮಂಗಳವಾರ ರಾತ್ರಿ ದಕ್ಷಿಣ ಹೆಲ್‍ಮಂದ್ ವ್ಯಾಪ್ತಿಯ ನವಾ ಜಿಲ್ಲೆಯಲ್ಲಿ ಅಫ್ಘಾನ್ ವಾಯುಸೇನೆ ಎರಡು ಹೆಲಿಕಾಪ್ಟರ್ ಗಳ ನಡುವೆ ಡಿಕ್ಕಿಯಾಗಿದೆ. ಒಂದು ಹೆಲಿಕಾಪ್ಟರ್ ನಲ್ಲಿ ಕಮಾಂಡೋಗಳನ್ನು ಒಂದು ಸ್ಥಳಕ್ಕೆ ಕರೆದೊಯ್ಯಲಾಗುತ್ತಿತ್ತು. ಮತ್ತೊಂದರಲ್ಲಿ ಗಾಯಾಳುಗಳನ್ನು ಸಾಗಿಸಲಾಗುತ್ತಿತ್ತು. ಈ ವೇಳೆ ಅಪಘಾತ ನಡೆದಿದ್ದು, ಸ್ಥಳದಲ್ಲಿಯೇ ಎಂಟು ಜನ ಮೃತ ಪಟ್ಟಿದ್ದಾರೆ ಎಂದು ವರದಿಯಾಗಿದೆ.

ವಾಯು ಸೇನೆಯ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ ➤ ಒಟ್ಟು 15 ಮಂದಿ ಮೃತ್ಯು.! Read More »

ರಾಷ್ಟ್ರೀಯ ನ್ಯೂಸ್

ಅಣ್ಣನನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ತಮ್ಮ.!!

(ನ್ಯೂಸ್ ಕಡಬ) newskadaba.com ಹಾವೇರಿ ಅ. 14: ತಮ್ಮನೇ ಅಣ್ಣನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹಲ್ಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಬುಡಪನಹಳ್ಳಿ ಗ್ರಾಮದಲ್ಲಿ ನಡೆದಿದೆ.   ನಾಗರಾಜ ಗೊರವರ(22) ಹತ್ಯೆಯಾದ ಅಣ್ಣ. ಈತನನ್ನು ತಮ್ಮ ದಿಳ್ಳೆಪ್ಪ ಗೊರವರ (20) ಕೊಲೆ ಮಾಡಿದ್ದಾನೆ. ನಾಗರಾಜ ದಿನನಿತ್ಯ ಕುಡಿದು ಬಂದು ತಂದೆ-ತಾಯಿ ಜೊತೆ ಜಗಳವಾಡ್ತಿದ್ದ. ಹೆತ್ತವರಿಗೆ ನೀಡ್ತಿದ್ದ ಅಣ್ಣನ ಕಿರಿಕಿರಿಯಿಂದ ಬೇಸತ್ತು ಕೊಡಲಿಯಿಂದ ಕೊಚ್ಚಿ ತಮ್ಮ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಅಣ್ಣನ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಣ್ಣನನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ತಮ್ಮ.!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅ. 14ರಿಂದ ಅ.18ರ ಮಧ್ಯರಾತ್ರಿಯವರೆಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧ

(ನ್ಯೂಸ್ ಕಡಬ) newskadaba.com ಮೈಸೂರು, ಅ.14: ವಿಶ್ವವಿಖ್ಯಾತ ಮೈಸೂರು ದಸರಾಗೆ ಸಿದ್ಧತೆ ಜೋರಾಗಿ ನಡೆಯುತ್ತಿದ್ದು, ಅ. 17ರಿಂದ ಮೈಸೂರಿನಲ್ಲಿ ದಸರಾ ಉತ್ಸವದ ಕಳೆ ತುಂಬಲಿದೆ. ಈಗಾಗಲೇ ಅಂಬಾರಿ ಹೊರುವ ಗಜಪಡೆಗೆ ಎಲ್ಲ ರೀತಿಯ ಸಿದ್ಧತೆ ನಡೆಸಲಾಗುತ್ತಿದೆ.     ದಸರಾ ಉತ್ಸವದಲ್ಲಿ ಚಾಮುಂಡಿ ಬೆಟ್ಟದಲ್ಲೂ ಸಾಕಷ್ಟು ಸಾಂಪ್ರದಾಯಿಕ ಪೂಜೆಗಳು ನಡೆಯುವುದರಿಂದ ಇಂದು ಮಧ್ಯರಾತ್ರಿಯಿಂದ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಅ. 14ರ ಮಧ್ಯರಾತ್ರಿಯಿಂದ ಅ.18ರ ಮಧ್ಯರಾತ್ರಿಯವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ

ಅ. 14ರಿಂದ ಅ.18ರ ಮಧ್ಯರಾತ್ರಿಯವರೆಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧ Read More »

ಕರ್ನಾಟಕ

ಮಂಗಳೂರು: ಮಹಿಳೆಯೋರ್ವರ ಹತ್ಯೆ ಪ್ರಕರಣ ➤ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಬಂಟ್ವಾಳ , ಅ.14: ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಬೆಳ್ಳೇರಿ ಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದು, ವಿಚಾರಣೆಯ ಸಂದರ್ಭ ಬಂಧಿತ ಆರೋಪಿ ಚಿನ್ನಾಭರಣ ದೋಚಲು ಬಂದು ಅತ್ಯಾಚಾರ ಗೈದು ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.     ಬಂಧಿತ ಆರೋಪಿಯನ್ನು ಸಕಲೇಶಪುರದ ನಿವಾಸಿ ಪಾತೂರು ಬಾಡಿಗೆ ಮನೆಯಲ್ಲಿ ವಾಸವಾಗಿರುವ ಮಹಮ್ಮದ್‌ ಅಶ್ರಫ್‌ (28) ಎಂದು ಗುರುತಿಸಲಾಗಿದೆ. ಕುಸುಮಾ ಅವರ ನಿವಾಸದ ಎದುರು ವಾಸಿಸುವ ಗಿರೀಶ್ ಅವರ

ಮಂಗಳೂರು: ಮಹಿಳೆಯೋರ್ವರ ಹತ್ಯೆ ಪ್ರಕರಣ ➤ ಆರೋಪಿ ಖಾಕಿ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ ➤ ವಾಹನ ಸಹಿತ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.14: ರಾಷ್ಟೀಯ ಹೆದ್ದಾರಿ 75 ರಲ್ಲಿ ಮಠ ಎಂಬಲ್ಲಿ ನದಿ ಬದಿಯಲ್ಲಿದ್ದ ಜಾಗದಿಂದ ಅಕ್ರಮವಾಗಿ ಮರಗಳನ್ನು ಕಡಿದು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.     ಉಪ್ಪಿನಂಗಡಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆಗೆ ಒಳಪಡಿಸಿದಾಗ ಯಾವುದೇ ದಾಖಲೆ ಪತ್ರವಿಲ್ಲದೆ ಮರಗಳನ್ನು ಕಡಿದು ಹಾಕಿ ದಿಮ್ಮಿಗಳನ್ನಾಗಿ ಮಾಡಿ ಸಾಗಾಟ ಮಾಡುತ್ತಿದ್ದು, ಲಾರಿ ಚಾಲಕ ಅಬೂಬಕ್ಕರ್‌ ಎಂಬಾತನನ್ನು ವಶಕ್ಕೆ ತೆಗೆದುಕೊಂಡು ವಾಹನವನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.  

ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ ➤ ವಾಹನ ಸಹಿತ ಆರೋಪಿ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ಳಂಬೆಳಗ್ಗೆ ಕಾವೂರು ಮಾರುಕಟ್ಟೆಗೆ ಮಹಾನಗರ ಮೇಯರ್ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.14: ಇಂದು ಬೆಳ್ಳಂಬೆಳಗ್ಗೆ ಮಂಗಳೂರು ಮಹಾನಗರ ಪಾಲಿಕೆ ಮೇಯರ್‌ ದಿವಾಕರ್ ಪಾಂಡೇಶ್ವರ್ ಅವರು ಕಾವೂರು ಮಾರುಕಟ್ಟೆಗೆ ದಾಳಿ ನಡೆಸಿದ್ದಾರೆ.     ಕಾವೂರಿನಲ್ಲಿ ಬೀದಿ ಬದಿಯಲ್ಲಿ ವ್ಯಾಪಾರ ನಡೆಸದಂತೆ ಹಲವು ಬಾರಿ ಮಂಗಳೂರು ಮಹಾನಗರ ಪಾಲಿಕೆಯು ಬೀದಿ ಬದಿ ವ್ಯಾಪಾರಸ್ಥರಿಗೆ ಸೂಚನೆ ನೀಡಿದ್ದು, ವ್ಯಾಪಾರಸ್ಥರು ವ್ಯಾಪಾರ ನಡೆಸುತ್ತಲ್ಲೇ ಇದ್ದರು. ಮಹಾನಗರ ಪಾಲಿಕೆಯು ಈ ಹಿಂದೆ ಕಾವೂರಿನಲ್ಲಿ ಬೀದಿ ಬದಿ ವ್ಯಾಪಾರಸ್ಥರನ್ನು ಸ್ಥಳದಿಂದ ತೆರವುಗೊಳಿಸಿದ್ದು ತಂತಿ ಬೇಲಿ ಅಳವಡಿಸಿದ್ದರು. ಆದರೆ ಪಾಲಿಕೆಯ ಸೂಚನೆಗೆ

ಬೆಳ್ಳಂಬೆಳಗ್ಗೆ ಕಾವೂರು ಮಾರುಕಟ್ಟೆಗೆ ಮಹಾನಗರ ಮೇಯರ್ ದಾಳಿ Read More »

ಕರಾವಳಿ

ಬಂಟ್ವಾಳ :ಶ್ರೀ ಕ್ಷೇತ್ರ ಕಾರಿಂಜ ದೇವಸ್ಥಾನದಲ್ಲಿ ಬಂಡೆ ಕುಸಿತ

(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 14: ಕರಾವಳಿಯಲ್ಲಿ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ, ನಾಲ್ಕು ಯುಗಗಳ ಪುರಾಣ ಇತಿಹಾಸ ಹೊಂದಿರುವ ಶ್ರೀ ಕ್ಷೇತ್ರ ಕಾರಿಂಜ ದೇವಸ್ಥಾನದ ಎಡ ಪಾಶ್ರ್ವದ ಬದಿಗೆ ಕಟ್ಟಿದ್ದ ಕಲ್ಲಿನ ತಡೆಗೋಡೆ ಕುಸಿದು ಬಿದ್ದಿದೆ.     ಈ ಅಂಗಣವನ್ನು ವಾನರಗಳಿಗೆ ನೈವೇದ್ಯ ಹಾಕಲು ಬಳಸಲಾಗುತ್ತಿತ್ತು. ಆದರೆ ಇದೀಗಾ ಭಾರಿ ಮಳೆಗೆ ಇಂಟರ್ ಲಾಕ್ ಕಿತ್ತುಹೋಗಿದೆ.ಕುಸಿದ ಭಾಗದ ಕೆಳಭಾಗದಲ್ಲಿ ಕಲ್ಲು, ಮಣ್ಣಿನ ದಿಬ್ಬವಿದ್ದು, ಯಾವುದೇ ಹಾನಿಯಾಗಿಲ್ಲ, ತಜ್ಞನಪರಿಶೀಲನೆ ಬಳಿಕ ಪರಿಹಾರೋಪಾಯ ನಡೆಸಬೇಕಾಗಿದೆ ಎಂದು

ಬಂಟ್ವಾಳ :ಶ್ರೀ ಕ್ಷೇತ್ರ ಕಾರಿಂಜ ದೇವಸ್ಥಾನದಲ್ಲಿ ಬಂಡೆ ಕುಸಿತ Read More »

ಕರಾವಳಿ, ಕರ್ನಾಟಕ

ಸುರತ್ಕಲ್: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಆತ್ಯಹತ್ಯೆಗೆ ಶರಣಾದ ಬಾಲಕಿ.!

(ನ್ಯೂಸ್ ಕಡಬ) newskadaba.com ಸುರತ್ಕಲ್ ಅ. 14: ಬಾಲಕಿಯೊಬ್ಬಲಿಗೆ ಅತಿಯಾಗಿ ಮೊಬೈಲ್ ಬಳಸಬೇಡ ಎಂದು ಬುದ್ದಿ ಮಾತು ಹೇಳಿದಕ್ಕೆ ಆಕ್ರೋಶಗೊಂಡ ಬಾಲಕಿ ಆತ್ಮಹತ್ಯೆಗೆ ಶರಣಾದ ಘಟನೆ ಸುರತ್ಕಲ್ ಬಳಿಯ ಕುಳಾಯಿಯ ಗೋಕುಲದಲ್ಲಿ ನಡೆದಿದೆ.   ಸುಜೇತಾ(16) ಆತ್ಮಹತ್ಯೆಗೆ ಶರಣಾದ ಬಾಲಕಿ. ಈಕೆ ಅತಿಯಾಗಿ ಮೊಬೈಲ್ ಬಳಸುತ್ತಿದ್ದಳು. ಇದರಿಂದ ಆಕೆಯ ತಾಯಿ ಬಾಲಕಿಗೆ ಬುದ್ದಿ ಮಾತು ಹೇಳಿದ್ದಾರೆ. ಇದರಿಂದ ಮನನೊಂದ ಸುಜೇತಾ ಮನೆಯ ಕೋಣೆಯಲ್ಲಿ ಫ್ಯಾನಿಗೆ ಸೀರೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.  

ಸುರತ್ಕಲ್: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಆತ್ಯಹತ್ಯೆಗೆ ಶರಣಾದ ಬಾಲಕಿ.! Read More »

ಕರಾವಳಿ, ಕರ್ನಾಟಕ

ಯೋಗ ಮಾಡ್ತಿದ್ದಾಗ ಆನೆ ಮೇಲಿಂದ ಬಿದ್ದ ಬಾಬಾ ರಾಮ್‍ದೇವ್ ➤ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮಥುರಾ ಅ. 14: ಬಾಬಾ ರಾಮ್‍ದೇವ್ ಅವರು ಯೋಗಾಸನ ಹಾಗೂ ಯೋಗದ ವಿವಿಧ ಭಂಗಿಗಳ ಮೂಲಕವೇ ಪ್ರಸಿದ್ಧಿ ಪಡೆದಿದ್ದಾರೆ. ಆದರೆ ಇದೀಗಾ, ಯೋಗ ಮಾಡುತ್ತಿರುವಾಗ ಯೋಗ ಗುರು ಬಾಬಾ ರಾಮ್‍ದೇವ್ ಆನೆಯ ಮೇಲಿಂದ ಬಿದ್ದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.   ಮಥುರಾದ ರಾಮನಾರತಿಯ ಗುರು ಶರಣನ್ ಆಶ್ರಮದಲ್ಲಿ ಸಂತರಿಗೆ ಯೋಗ ಕಲಿಸುವಾಗ ಈ ಘಟನೆ ಸಂಭವಿಸಿದೆ. 22 ಸೆಕೆಂಡ್‍ಗಳ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಆನೆಯ

ಯೋಗ ಮಾಡ್ತಿದ್ದಾಗ ಆನೆ ಮೇಲಿಂದ ಬಿದ್ದ ಬಾಬಾ ರಾಮ್‍ದೇವ್ ➤ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್
Scroll to Top