Kadaba News

ಪೇಜಾವರ ಶ್ರೀಗಳಿಂದ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ

(ನ್ಯೂಸ್ ಕಡಬ) newskadaba,ಉಡುಪಿ ಜೂ.27: ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಸುಬ್ರಹ್ಮಣ್ಯನಗರ ವಾರ್ಡಿನಲ್ಲಿ 11 ಎಕರೆ ಹಡಿಲು ಭೂಮಿಯಲ್ಲಿ ಸಾವಯವ ಕೃಷಿ ಮಾಡಲಾಗುತ್ತಿದ್ದು, ಇಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಶಾಸಕ ಕೆ. ರಘುಪತಿ ಭಟ್ ಅವರೊಂದಿಗೆ ಭೂ ಮಾತೆಗೆ ಹಾಲನ್ನು ಅರ್ಪಿಸಿ ನಾಟಿ ಕಾರ್ಯಕ್ಕೆ ಚಾಲನೆ ನೀಡಿ ಸ್ಥಳೀಯರೊಂದಿಗೆ ಸೇರಿ ನೇಜಿ ನೆಟ್ಟರು.ಈ ಭಾಗದಲ್ಲಿ ಹಡಿಲು […]

ಪೇಜಾವರ ಶ್ರೀಗಳಿಂದ ಹಡಿಲು ಭೂಮಿ ಕೃಷಿ ನಾಟಿಗೆ ಚಾಲನೆ Read More »

ಕರಾವಳಿ

ಹಡೀಲು ಭೂಮಿಯಲ್ಲಿ ಸ್ವತಃ ನಾಟಿ ಮಾಡಿ ಗಮನ ಸೆಳೆದ ಶಾಸಕ ಖಾದರ್

(ನ್ಯೂಸ್ ಕಡಬ) newskadaba,ಮಂಗಳೂರು ಜೂ.27: ಹಡೀಲು ಭೂಮಿಯಲ್ಲಿ ಕೃಷಿ ಕಾರ್ಯ ನಡೆಯುತ್ತಿರುವಲ್ಲಿಗೆ ಹೋಗಿದ್ದ ಶಾಸಕ ಯು.ಟಿ.ಖಾದರ್ ಅವರು ಸ್ವತಃ ಗದ್ದೆಗಿಳಿದು ನಾಟಿ ಮಾಡಿ ಕೃಷಿಕರಿಗೆ ಸಾಥ್ ನೀಡಿದ್ದು, ಇದೀಗ ಇದರ ಫೋಟೋಗಳು ವೈರಲ್ ಆಗುತ್ತಿದ್ದು, ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಶುಕ್ರವಾರ ನಗರದ ಕೊಣಾಜೆಯ ಕೆಳಗಿನ ಮನೆಯ ಹಡೀಲು ಬಿದ್ದ ಗದ್ದೆಯಲ್ಲಿ ನಾಗಬ್ರಹ್ಮ ಪ್ರಗತಿಪರ ಸಂಘ ಹಾಗೂ ಊರಿನ ಪ್ರಮುಖರು ಸೇರಿ ಭತ್ತದ ಕೃಷಿ ಮಾಡುವ ಸಂಕಲ್ಪ ಮಾಡಿದ್ದರು. ಇಲ್ಲಿಗೆ ಭತ್ತದ ಪೈರು ನಾಟಿ ಮಾಡಲು ಇಬ್ಬರು ಮಹಿಳೆಯರು ತೆರಳುತ್ತಿದ್ದರು.

ಹಡೀಲು ಭೂಮಿಯಲ್ಲಿ ಸ್ವತಃ ನಾಟಿ ಮಾಡಿ ಗಮನ ಸೆಳೆದ ಶಾಸಕ ಖಾದರ್ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಗೆ ‘ಡೆಲ್ಟಾ’ಪ್ಲಸ್ ಭೀತಿ..?!!

(ನ್ಯೂಸ್ ಕಡಬ) newskadaba,ಮಂಗಳೂರು ಜೂ.27: ಕೇರಳದ ಕರಾವಳಿ ಭಾಗಗಳಲ್ಲಿ ಕೊರೊನಾ ಡೆಲ್ಟಾ ಪ್ಲಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನೆರೆಯ ದಕ್ಷಿಣಕನ್ನಡ ಜಿಲ್ಲೆಗೂ ಭೀತಿ ಹೆಚ್ಚಾಗಿದೆ. ಕೇರಳದಿಂದ ಪ್ರತಿನಿತ್ಯ ಸಾವಿರಾರು ಮಂದಿ ದಕ್ಷಿಣ ಕನ್ನಡ ಜಿಲ್ಲೆಗೆ ವ್ಯಾಪಾರ, ಉದ್ಯೋಗಕ್ಕಾಗಿ ಬಂದು ಹೋಗುತ್ತಾರೆ. ಹೀಗಾಗಿ ಜಿಲ್ಲೆಯ ಜನತೆಗೆ ಭೀತಿ ಹೆಚ್ಚಾಗಿದ್ದು, ಜಿಲ್ಲಾಡಳಿತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ವ್ಯಕ್ತವಾಗಿದೆ.ಈ ವಾರದ ವೀಕೆಂಡ್ ಕರ್ಪ್ಯೂ ಜಾರಿ ಇದ್ದ ಕಾರಣ ಗಡಿ ಭಾಗದಲ್ಲಿ ಹೆಚ್ಚಿನ ವಾಹನ ಓಡಾಟ ಇರಲಿಲ್ಲ. ಆದರೂ ಯಾವೊಂದು

ದಕ್ಷಿಣ ಕನ್ನಡ ಜಿಲ್ಲೆಗೆ ‘ಡೆಲ್ಟಾ’ಪ್ಲಸ್ ಭೀತಿ..?!! Read More »

ಕರಾವಳಿ

ಸುಬ್ರಹ್ಮಣ್ಯ: ಪರಿಶೀಲನಾ ಸಭೆಯಲ್ಲಿಆಶಾ ಕಾರ್ಯಕರ್ತೆಯರಿಗೆ ಸಚಿವರಿಂದ ದಿನಸಿ ಕಿಟ್ ವಿತರಣೆ

(ನ್ಯೂಸ್ ಕಡಬ) newskadaba,ಸುಬ್ರಹ್ಮಣ್ಯ ಜೂ.27:ಕೋವಿಡ್ ಸೋಂಕಿತರು ಕೇರ್ ಸೆಂಟರ್ ನಲ್ಲಿ ಇದ್ದುಕೊಂಡೆ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ಸಚಿವ ಅಂಗಾರ ಹೇಳಿದ್ದಾರೆ. ಅವರು  ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಕೋವಿಡ್ ಪಾಸಿಟಿವ್ ವರದಿ ಬಂದವರು ಮನೆಯಲ್ಲಿ ಇರುವುದಕ್ಕಿಂತ ಆರೈಕೆ ಕೇಂದ್ರಗಳಲ್ಲಿ ಉಳಿಯುವುದು ಸೂಕ್ತ. ಮನೆಯಲ್ಲಿದ್ದರೆ ನೆರೆಹೊರೆಯವರಿಗೆ ಸೋಂಕು ಹರಡುವ ಸಂಭವ ಹೆಚ್ಚು. ಅದಕ್ಕಾಗಿ ಸಾರ್ವಜನಿಕರು ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯಬೇಕು. ಆರೈಕೆ ಕೇಂದ್ರದಲ್ಲಿ ಆಹಾರ ಮತ್ತು ಔಷಧ ವಿತರಣೆ ವ್ಯವಸ್ಥಿತವಾಗಿ

ಸುಬ್ರಹ್ಮಣ್ಯ: ಪರಿಶೀಲನಾ ಸಭೆಯಲ್ಲಿಆಶಾ ಕಾರ್ಯಕರ್ತೆಯರಿಗೆ ಸಚಿವರಿಂದ ದಿನಸಿ ಕಿಟ್ ವಿತರಣೆ Read More »

ಕರಾವಳಿ

ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆಗೆ ಯತ್ನಿಸಿದ ಚಾಲಕ

(ನ್ಯೂಸ್ ಕಡಬ) newskadaba,ಕಾರ್ಕಳ ಜೂ.27: ನಗರದ ಮಂಜುನಾಥ ಪೈ ಸಭಾಂಗಣ ಬಳಿಯ ದೇವರಗದ್ದೆ ರಸ್ತೆಯಲ್ಲಿ ಚಾಲಕನೊಬ್ಬ ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆಗೆ ಯತ್ನಿಸಿದ ಘಟನೆ  ನಡೆದಿದೆ. ಚಿಕ್ಕಮಗಳೂರು ಮೂಲದವನಾಗಿದ್ದು, ಹಿರಿಯಂಗಡಿ ನಿವಾಸಿಯಾಗಿರುವ ಮಂಜುನಾಥ (34) ಎಂಬಾತ ವಿಷ ಸೇವನೆಗೈದವರು. ಇದೀಗ ಮಂಜುನಾಥನನ್ನು ಸ್ಥಳೀಯ ನಾಗರಿಕರು ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಿಕ್ಷಾದಲ್ಲಿ ವಿಷ ಸೇವನೆಗೈದು ಆತ್ಮಹತ್ಯೆಗೆ ಯತ್ನಿಸಿದ ಚಾಲಕ Read More »

ಕರಾವಳಿ

ರಾಜ್ಯದಲ್ಲಿ ಮತ್ತೆ ಏರಿದ ಕೊರೋನಾ ➤ 4 ಸಾವಿರಕ್ಕೂ ಹೆಚ್ಚು ಹೊಸ ಕೇಸ್ ಪತ್ತೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.27: ಲಾಕ್ಡೌನ್ ಸಡಿಲಗೊಳ್ಳುತ್ತಿದ್ದಂತೆಯೇ ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ತನ್ನ ಆರ್ಭಟವನ್ನು ಮತ್ತೆ ಆರಂಭ ಮಾಡಿರುವ ಸೂಚನೆ ಕಂಡು ಬರುತ್ತಿದೆ. ರಾಜ್ಯದಲ್ಲಿ ಶನಿವಾರ 4,272 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕಳೆದ ಒಂದು ವಾರದಿಂದ ಸೋಂಕಿನ ಪ್ರಮಾಣ ಇಳಿಕೆ ಕ್ರಮಾಂಕದಲ್ಲಿದ್ದ ಕಾರಣ ಸಕ್ರಿಯ ಸೋಂಕು ಪ್ರಕರಣಗಳು ಒಂದು ಲಕ್ಷದ ಆಸುಪಾಸಿಗೆ ಕುಸಿದಿದೆ. ಈ ನಡುವೆ ಪಾಸಿಟಿವಿಟಿ ಪ್ರಮಾಣ ಶೇ.8.43 ರಿಂದ ಶೇ.8.40ಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಅಂತ್ಯದಲ್ಲಿದ್ದು, ಮೂರು ಅಂಕಿಗೆ

ರಾಜ್ಯದಲ್ಲಿ ಮತ್ತೆ ಏರಿದ ಕೊರೋನಾ ➤ 4 ಸಾವಿರಕ್ಕೂ ಹೆಚ್ಚು ಹೊಸ ಕೇಸ್ ಪತ್ತೆ Read More »

ಕರಾವಳಿ

ಸಲಿಂಗಕಾಮಕ್ಕೆ ವಿದ್ಯಾರ್ಥಿಯ ಬಟ್ಟೆ ಬಿಚ್ಚಿಸುತಿದ್ದ ಮುಖ್ಯ ಶಿಕ್ಷಕ ಬಂಧನ

(ನ್ಯೂಸ್ ಕಡಬ) newskadaba,ನೆಲಮಂಗಲ ಜೂ.26: ವಿಶೇಷ ಮಕ್ಕಳ ವಸತಿ ಶಾಲೆಯಲ್ಲಿ ಮುಖ್ಯ ಶಿಕ್ಷಕನೊಬ್ಬ ವಿದ್ಯಾರ್ಥಿಯ ಜೊತೆ ವಿಕೃತಿ ಮೆರೆದ ಘಟನೆಯೊಂದು ತಡವಾಗಿ ಬೆಳಕಿಗೆ ಬಂದ ಘಟನೆ ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ವಿಶೇಷ ಮಕ್ಕಳ ವಸತಿ ಶಾಲೆಯಲ್ಲಿ ನಡೆದಿದೆ. ಮುಖ್ಯ ಶಿಕ್ಷಕ ಎಸ್.ರಂಗನಾಥ್ ಬಂಧಿತ ಆರೋಪಿ. ಈತ ಸಲಿಂಗಕಾಮಕ್ಕೆ ವಿದ್ಯಾರ್ಥಿ ಬಟ್ಟೆ ಬಿಚ್ಚಿಸುತ್ತಿದ್ದ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಈ ಬಗ್ಗೆ ವಸತಿ ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದರು. ಆರೋಪಿ ಶಿಕ್ಷಕ ರಂಗನಾಥ್, ಒತ್ತಾಯದ ಸಲಿಂಗಕಾಮ

ಸಲಿಂಗಕಾಮಕ್ಕೆ ವಿದ್ಯಾರ್ಥಿಯ ಬಟ್ಟೆ ಬಿಚ್ಚಿಸುತಿದ್ದ ಮುಖ್ಯ ಶಿಕ್ಷಕ ಬಂಧನ Read More »

ಕರಾವಳಿ

ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba,ಬೆಂಗಳೂರು ಜೂ.26: ಮುಂಗಾರು ಆಗಮನದ ಬಳಿಕ ಬಿರುಸಾಗಿದ್ದ ಮಳೆ, ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೊಂಚ ಕಡಿಮೆಯಾಗಿದೆ. ಆದರೆ, ಇಂದಿನಿಂದ ಮತ್ತೆ ಮಳೆಯ ಆರ್ಭಟ ಶುರುವಾಗಲಿದ್ದು, 3 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಜೂನ್ 27ರಿಂದ ರಾಜ್ಯಾದ್ಯಂತ ಬಹುತೇಕ ಪ್ರದೇಶಗಳಲ್ಲಿ ವರುಣನ ಆರ್ಭಟ ಹೆಚ್ಚಲಿದೆ. ಜೂನ್ 30ರವರೆಗೂ ದಕ್ಷಿಣ ಕನ್ನಡ,

ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ಕಡಬ ತಾಲೂಕಿನ 2 ಸರಕಾರಿ ಶಾಲೆಗಳಿಗೆ ಆಂಗ್ಲ ಮಾಧ್ಯಮ ಭಾಗ್ಯ

(ನ್ಯೂಸ್ ಕಡಬ) newskadaba,ಕಡಬ ಜೂ.26: ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಿ ಬಡ ವಿದ್ಯಾರ್ಥಿಗಳಿಗೂ ಇಂಗ್ಲಿಷ್ ಕಲಿಕೆ ದೊರೆಯಬೇಕು ಎನ್ನುವ ದೃಷ್ಠಿಯಿಂದ ರಾಜ್ಯ ಸರಕಾರ ಸರಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ತೆರೆಯಲು ಅನುಮತಿ ನೀಡಿದ್ದು, ಇದರಲ್ಲಿ ಕಡಬ ತಾಲೂಕಿನ ಆಲಂಕಾರು ಹಾಗೂ ಬೊಬ್ಬೆಕೇರಿ ಶಾಲೆಗೂ ಈ ಭಾಗ್ಯ ದೊರೆತಿದೆ. ಸರ್ಕಾರವು 2020-21ನೇ ಸಾಲಿನಲ್ಲಿ ರಾಜ್ಯದ 959 ಸರಕಾರಿ ಶಾಲೆಯಲ್ಲಿ ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮಮ ಶಿಕ್ಷಣ ನೀಡಲು ಮುಂದಾಗಿದೆ. ಈ ಯೋಜನೆ ನಿರ್ಧಾರ ಆಗುವ ಮೊದಲೇ ಈ ಎರಡು ಶಾಲೆಗಳಲ್ಲಿ

ಕಡಬ ತಾಲೂಕಿನ 2 ಸರಕಾರಿ ಶಾಲೆಗಳಿಗೆ ಆಂಗ್ಲ ಮಾಧ್ಯಮ ಭಾಗ್ಯ Read More »

ಕರಾವಳಿ

ಉಡುಪಿ: ಕೆಸರಿನಲ್ಲಿ ಹೂತು ಹೋದ ಕೃಷಿ ಸಚಿವರ ಕಾರು!

(ನ್ಯೂಸ್ ಕಡಬ) newskadaba,ಉಡುಪಿ ಜೂ.26: ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹಡಿಲು ಭೂಮಿ ಕೃಷಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಮಳೆಗೆ ತೇವಗೊಂಡಿದ್ದ ಗದ್ದೆಯಲ್ಲಿ ಕೃಷಿ ಸಚಿವರ ಕಾರು ಹೂತು ಹೋದ ಘಟನೆ ನಡೆಯಿತು. ಕೆಸರಿನಿಂದ ಕಾರು ಮೇಲೆತ್ತಲು ಕೆಲ ಕಾಲ ಪರದಾಟ ಮಾಡಿದ ಪ್ರಸಂಗ ನಡೆಯಿತು. ಉಡುಪಿಯ ಕಡೆಕಾರು ಎಂಬಲ್ಲಿ ಈ ಘಟನೆ ನಡೆದಿದೆ. ಕೃಷಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಯುವಕರು ಸಚಿವರ ಕಾರನ್ನು ಮೇಲಕ್ಕೆ ಎತ್ತಲು ಸಹಾಯ ಮಾಡಿದರು.

ಉಡುಪಿ: ಕೆಸರಿನಲ್ಲಿ ಹೂತು ಹೋದ ಕೃಷಿ ಸಚಿವರ ಕಾರು! Read More »

ಕರಾವಳಿ, ಕರ್ನಾಟಕ
Scroll to Top