Kadaba News

ಉಪ್ಪಿನಂಗಡಿ : ಮನನೊಂದು ವಿಷ ಸೇವಿಸಿ ಆತ್ಯಹತ್ಯೆ ಗೆ ಶರಣಾದ ವ್ಯಕ್ತಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ. 07: ಉಪ್ಪಿನಂಗಡಿಯ ಸಮೀಪ ಉರುವಾಲು ಪದವು ಬಳಿಯ ಬರಮೇಲು ನಿವಾಸಿ ನಾರಾಯಣ ಶೆಟ್ಟಿ (47) ಎಂಬುವರು ಅ.6 ರಂದು ವಿಷ ಸೇವಿಸಿ ಆತ್ಮ ಹತ್ಯೆಗೆ ಶರಣಾಗಿದ್ದಾರೆ.   ಕೊವೀಡ್-19 ಲಾಕ್ ಡೌನ್ ಬಳಿಕ ಕೆಲಸವಿಲ್ಲದೆ ಮನೆಯಲ್ಲಿಯೇ ಇದ್ದು, ಮಾನಸಿಕವಾಗಿ ಮನನೊಂದು ಆತ್ಯಹತ್ಯೆಗೆ ಶರಣಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಆಗಲಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  

ಉಪ್ಪಿನಂಗಡಿ : ಮನನೊಂದು ವಿಷ ಸೇವಿಸಿ ಆತ್ಯಹತ್ಯೆ ಗೆ ಶರಣಾದ ವ್ಯಕ್ತಿ Read More »

ಕರಾವಳಿ

ಮಂಡ್ಯ: ಮಹಡಿಯಿಂದ ಬಿದ್ದು ಹೆಣ್ಣು ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಅ. 07: ಮೂರು ವರ್ಷದ ಮಗುವಿಗೆ ಊಟ ಮಾಡಿಸಿ ತಾಯಿ ಕೈ ತೊಳೆಯಲು ಮನೆಯೊಳಗೆ ಹೋದ ವೇಳೆ ಮೂರು ವರ್ಷದ ಕಂದಮ್ಮ ಮಹಡಿಯ ಮೇಲಿನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ನಗರದ ರಾಜಕುಮಾರ್ ಬಡಾವಣೆಯ ನಿವಾಸಿ ಸತೀಶ್ ಹಾಗೂ ಶೃತಿ ದಂಪತಿಯ ಮಗಳು ಧನುಶ್ರೀ (3) ಮೃತ ದುರ್ದೈವಿಯಾಗಿದೆ. ರಾಜಕುಮಾರ್ ಬಡಾವಣೆಯಲ್ಲಿ ಸತೀಶ್ ಅವರದ್ದು ಮಹಡಿ ಮನೆಯಾಗಿದ್ದು, ಎಂದಿನಂತೆ ಶೃತಿ ತಮ್ಮ ಮಗಳು ಧನುಶ್ರೀಯನ್ನು ಆಟವಾಡಿಸಿಕೊಂಡು ಮನೆಯ ಮುಂಭಾಗ

ಮಂಡ್ಯ: ಮಹಡಿಯಿಂದ ಬಿದ್ದು ಹೆಣ್ಣು ಮಗು ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಹತ್ರಾಸ್‌ ಪ್ರಕರಣ ➤ ಸೂಕ್ತ ತನಿಖೆಗೆ ದಲಿತ ಸಂಘರ್ಷ ಸಮಿತಿಯಿಂದ ರಾಷ್ಟ್ರಪತಿಯವರಿಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಅ.06: ಉತ್ತರ ಪ್ರದೇಶದಲ್ಲಿ ನಡೆದ ದಲಿತ ಯುವತಿಯ ಕೊಲೆಯನ್ನು ಖಂಡಿಸಿ, ಪ್ರಕರಣವನ್ನು ಸೂಕ್ತ ತನಿಖೆಗೆ ಒಳಪಡಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಡಬ ತಾಲೂಕು ಸಂಘಟನೆಯು ತಹಶೀಲ್ದಾ ರ್‌ ಮೂಲಕ ಇಂದು ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.     ಉತ್ತರ ಪ್ರದೇಶ ಪೊಲೀಸ್‌ ಇಲಾಖೆ ಮತ್ತು ಜಿಲ್ಲಾಡಳಿತ ಕ್ರಮಗಳು ಆರೋಪಿಗಳನ್ನು ರಕ್ಷಣೆ ಮಾಡಿರುವಂತೆ ಅನುಮಾನ ಮೂಡಿದೆ. ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಮರಣ ದಂಡನೆಯನ್ನು ವಿಧಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ. ಈ

ಕಡಬ: ಹತ್ರಾಸ್‌ ಪ್ರಕರಣ ➤ ಸೂಕ್ತ ತನಿಖೆಗೆ ದಲಿತ ಸಂಘರ್ಷ ಸಮಿತಿಯಿಂದ ರಾಷ್ಟ್ರಪತಿಯವರಿಗೆ ಮನವಿ Read More »

ಕರಾವಳಿ

ಡಿ. ಕೆ ಸುರೇಶ್ ಗೆ ಕೊರೋನಾ ಸೋಂಕು ದೃಢ.!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 06: ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದ ಡಿಕೆ ಸುರೇಶ್ ಅವರು, ಕೊರೋನಾ ಪರೀಕ್ಷೆಯಲ್ಲಿ ನನಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಧ್ಯಕ್ಕೆ ನನ್ನ ಆರೋಗ್ಯ ಸ್ಥಿರವಾಗಿದೆ ಹಾಗೂ ಸುರಕ್ಷಿತವಾಗಿ ಇದ್ದೇನೆ. ಕೆಲವು ದಿನಗಳಿಂದ ನನ್ನ ಸಂಪರ್ಕದಲ್ಲಿ ಇದ್ದ ಸ್ನೇಹಿತರು, ಬಂಧುಗಳು ಹಾಗೂ ನನ್ನ ಜೊತೆಗೆ ಇದ್ದ ಸಿಬಿಐ ಅಧಿಕಾರಿಗಳು, ಮಾಧ್ಯಮ ಮಿತ್ರರಿಗೆ ಕೊರೋನಾ ಪರೀಕ್ಷೆ

ಡಿ. ಕೆ ಸುರೇಶ್ ಗೆ ಕೊರೋನಾ ಸೋಂಕು ದೃಢ.! Read More »

ಕರಾವಳಿ

ಅಟಲ್ ಸರಂಗದಲ್ಲಿ 72 ಗಂಟೆಗಳಲ್ಲಿ 3 ಅಪಘಾತ..! ➤ ಕಾರಣವೇನು ಗೊತ್ತೆ?!!

(ನ್ಯೂಸ್ ಕಡಬ) newskadaba.com ರೋಹ್ಟಾಂಗ್, ಅ. 06: ಅಟಲ್​ ಸುರಂಗ ಮಾರ್ಗದಲ್ಲಿ ಕಳೆದ 72 ಗಂಟೆಗಳಲ್ಲಿ ಮೂರು ಅಪಘಾತಗಳು ಸಂಭವಿಸಿದೆ ಎಂದು ಮಂಗಳವಾರ ವರದಿಯಾಗಿದೆ. ಹಿಮಾಚಲ ಪ್ರದೇಶದ ರೋಹ್ಟಾಂಗ್​ನಲ್ಲಿ ನಿರ್ಮಿತವಾಗಿರುವ ವಿಶ್ವದಲ್ಲೇ ಅತಿ ಉದ್ದದ ಅಟಲ್​ ಸುರಂಗವೂ ಮನಾಲಿ ಮತ್ತು ಲೇಹ್​ ನಡುವೆ 46 ಕಿ.ಮೀ ಅಂತರವನ್ನು ತಗ್ಗಿಸಲಿದೆ.   ಅಪಘಾತಗಳೆಲ್ಲವೂ ನಿರ್ಲಕ್ಷ್ಯ ಮತ್ತು ವೇಗದ ಪ್ರಯಾಣದಿಂದಲೇ ಸಂಭವಿಸಿದ್ದು, ಸುರಂಗ ಮಾರ್ಗವೂ ತೆರೆದಾಗಿನಿಂದ ಪ್ರವಾಸಿಗರ ಅಸಭ್ಯ ವರ್ತನೆ ಗಮನಕ್ಕೆ ಬಂದಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಟಲ್ ಸರಂಗದಲ್ಲಿ 72 ಗಂಟೆಗಳಲ್ಲಿ 3 ಅಪಘಾತ..! ➤ ಕಾರಣವೇನು ಗೊತ್ತೆ?!! Read More »

ರಾಷ್ಟ್ರೀಯ ನ್ಯೂಸ್

ಈ ಬಾರಿ ಟಿ.ವಿ ಮೂಲಕವೂ ಪ್ರಸಾರವಾಗಲ್ಲ ದಸರಾ ಖಾಸಗಿ ದರ್ಬಾರ್!!

(ನ್ಯೂಸ್ ಕಡಬ) newskadaba.com ಮೈಸೂರು , ಅ. 06: ಕೊರೊನಾ ಸೋಂಕಿನ ಹಾವಳಿಯಿಂದ ಜಗದ್ವಿಖ್ಯಾತ ಮೈಸೂರು ದಸರಾವನ್ನ ಸರಳವಾಗಿ ಆಚರಿಸಲು ನಿರ್ಧರಿಸಲಾಗಿರುವುದರಿಂದ ಈ ಬಾರಿಯ ರಾಜ ದರ್ಬಾರ್ ನೋಡಲು ಸಾರ್ವಜನಿಕರು ಹಾಗೂ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ. ಸಾರ್ವಜನಿಕರಿಗೆ ನಿರ್ಬಂಧವಿದ್ದರೂ ಟಿ.ವಿಗಳ ಮೂಲಕ ಈ ದಸರಾವನ್ನು ಸವಿಯುವ ಅವಕಾಶವಿತ್ತು. ಆದರೆ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಮಾಧ್ಯಮದವರಿಗೂ ನಿರ್ಬಂಧ ವಿಧಿಸಿರುವ ಕಾರಣ, ಖಾಸಗಿ ದಸರಾ ನೋಡುವ ಭಾಗ್ಯ ಈ ಬಾರಿ ಸಿಗುವುದಿಲ್ಲ. ಮೈಸೂರಿನಲ್ಲಿ ಹೆಚ್ಚಿನ ಕೋವಿಡ್ ಪ್ರಕರಣಗಳ ದೃಷ್ಟಿಯಿಂದ

ಈ ಬಾರಿ ಟಿ.ವಿ ಮೂಲಕವೂ ಪ್ರಸಾರವಾಗಲ್ಲ ದಸರಾ ಖಾಸಗಿ ದರ್ಬಾರ್!! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಾಗೇಶ್ ಬಾಬು ಇನ್ನಿಲ್ಲ!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 06: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಾಗೇಶ್ ಬಾಬು ಅನಾರೋಗ್ಯದಿಂದ ನಿಧನರಾಗಿದ್ದಾರೆ. ನಾಗೇಶ್ ಬಾಬು ಅವರಿಗೆ 82 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಾಗೇಶ್ ಬಾಬು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಇಂದು ನಾಗೇಶ್ ಬಾಬು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.   1957ರಲ್ಲಿ ಸಹಾಯಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ನಾಗೇಶ್ ಬಾಬು 1970ರಲ್ಲಿ ‘ಅನಿರೀಕ್ಷಿತ’ ಎಂಬ ಚಿತ್ರದ ಮೂಲಕ ಪೂರ್ಣಪ್ರಮಾಣದಲ್ಲಿ ನಿರ್ದೇಶಕರಾಗಿ ಹಾಗೂ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಾಗೇಶ್ ಬಾಬು ಇನ್ನಿಲ್ಲ!! Read More »

ಕರ್ನಾಟಕ

ಕಾಸರಗೋಡು : ಜಿಲ್ಲಾಧಿಕಾರಿಯ ನಿವಾಸದ ಸಮೀಪ ಶ್ರೀಗಂಧ ಸಾಗಾಟಕ್ಕೆ ಯತ್ನ..!!

(ನ್ಯೂಸ್ ಕಡಬ) newskadaba.com ಕಾಸರಗೋಡು , ಅ. 06: ಕಾಸರಗೋಡು ಜಿಲ್ಲಾಧಿಕಾರಿಯ ನಿವಾಸದ ಸಮೀಪ ಇರುವ ನಿವಾಸದಲ್ಲಿ ಸುಮಾರು 2.5 ಕೋಟಿ ರೂ ಮೌಲ್ಯ ಶ್ರೀಗಂಧವನ್ನು ವಶಪಡಿಸಿಕೊಳ್ಳಲಾಗಿದ್ದು, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿವಾಸಗಳಿಗೆ ಹತ್ತಿರವಿರುವ ಮನೆಯಲ್ಲಿ ಅಕ್ರಮ ಚಟುವಟಿಕೆ ಬೆಳಕಿಗೆ ಬಂದಿದೆ. ಮುಂಜಾನೆ 4.30 ರ ಸುಮಾರಿಗೆ ನಿಲ್ಲಿಸಿದ ಟ್ರಕ್‌ಗೆ ಶ್ರೀಗಂಧದ ತುಂಡುಗಳನ್ನು ತುಂಬುತ್ತಿರುವುದನ್ನು ಕಂಡು ಬಂದಿದೆ. ಕೂಡಲೇ ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದ್ದು ಸ್ಥಳಕ್ಕೆ ತಲುಪಿದ ಜಿಲ್ಲಾಧಿಕಾರಿ, ಪೊಲೀಸರ ಸಹಾಯದೊಂದಿಗೆ ಅಕ್ರಮ ಸಾಗಾಟವನ್ನು

ಕಾಸರಗೋಡು : ಜಿಲ್ಲಾಧಿಕಾರಿಯ ನಿವಾಸದ ಸಮೀಪ ಶ್ರೀಗಂಧ ಸಾಗಾಟಕ್ಕೆ ಯತ್ನ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಂಧ್ರ ಪ್ರದೇಶದ ಸಿಎಂ ಪರಿಹಾರ ನಿಧಿ ಹೆಸರಿನಲ್ಲಿ ವಂಚನೆ ➤ ದ. ಕನ್ನಡ ಜಿಲ್ಲೆಯ ಆರು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 06: ಆಂಧ್ರ ಪ್ರದೇಶದ ಮುಖ್ಯಮಂತ್ರಿ ಪರಿಹಾರ ನಿಧಿಗೆ ವಂಚಿಸಲು ಯೋಜನೆ ರೂಪಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಆರು ಮಂದಿಯನ್ನು ಆಂಧ್ರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಆಂಧ್ರದ ಎಸಿಬಿ ಪೊಲೀಸರ ತಂಡ ದ.ಕ ಜಿಲ್ಲೆಗೆ ಬಂದು ಆರು ಮಂದಿಯನ್ನು ಬಂಧಿಸಿದ್ದಾರೆ. ಮೂಡಬಿದ್ರೆ ನಿವಾಸಿಗಳಾದ ಯೋಗೀಶ್ ಆಚಾರ್ಯ (40) ಉದಯ ಶೆಟ್ಟಿ ಕಾಂತಾವಾರ (35), ಮಂಗಳೂರಿನ ಬ್ರಿಜೇಶ್ ರೈ(35) ಬೆಳ್ತಂಗಡಿಯ ಗಂಗಾಧರ ಸುವರ್ಣ (45) ಸೇರಿದಂತೆ ಆರು ಮಂದಿಯನ್ನು ಬಂಧಿಸಿ ಕರೆದೊಯ್ದಿದ್ದಾರೆ. ಆಂಧ್ರ ಪ್ರದೇಶದ

ಆಂಧ್ರ ಪ್ರದೇಶದ ಸಿಎಂ ಪರಿಹಾರ ನಿಧಿ ಹೆಸರಿನಲ್ಲಿ ವಂಚನೆ ➤ ದ. ಕನ್ನಡ ಜಿಲ್ಲೆಯ ಆರು ಮಂದಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜಾಲ್ಸೂರು: ಕಾರು-ರಿಕ್ಷಾ ಮುಖಾಮುಖಿ ಢಿಕ್ಕಿ ➤ ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ) newskadaba.com ಜಾಲ್ಸೂರು, ಅ.06: ಸುಳ್ಯದಿಂದ ಜಾಲ್ಸೂರಾಗಿ ಸುಬ್ರಹ್ಮಣ್ಯ ರಸ್ತೆಗೆ ತಿರುಗಿದ ಕಾರು ಸೋಣಂಗೇರಿ ಕಡೆಯಿಂದ ಜಾಲ್ಸೂರಿಗೆ ಬರುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದು ರಿಕ್ಷಾ ಪಲ್ಟಿಯಾದ ಘಟನೆ ಜಾಲ್ಸೂರಿನ ಗೋಳಿಕಟ್ಟೆಯಲ್ಲಿ ಇಂದು ನಡೆದಿದೆ.    ಪಲ್ಟಿಯಾಗಿದ್ದ ರಿಕ್ಕಾ ಜಖಂಗೊಂಡಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಣಾಮವಾಗಿ ಪಲ್ಟಿಯಾಗಿದ್ದ ರಿಕ್ಷಾದಲ್ಲಿದ್ದವರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.  

ಜಾಲ್ಸೂರು: ಕಾರು-ರಿಕ್ಷಾ ಮುಖಾಮುಖಿ ಢಿಕ್ಕಿ ➤ ಪ್ರಯಾಣಿಕರಿಗೆ ಗಾಯ Read More »

ಕರಾವಳಿ
Scroll to Top