Kadaba News

ಕಾಸರಗೋಡು: ಇಂದಿನಿಂದ ಅ.9 ರ ವರೆಗೆ ನಿಷೇಧಾಜ್ಞೆ ಜಾರಿ ➤ ಡಾ.ಡಿ ಸಜಿತ್‌ ಬಾಬು ಆದೇಶ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.03: ಕಾಸರಗೋಡು ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಅಕ್ಟೋಬರ್‌ 2 ರಾತ್ರಿ 12 ಗಂಟೆಯಿಂದ ಅ.9 ರಂದು ರಾತ್ರಿ 12 ಗಂಟೆಯವರೆಗೆ 1973 ರ ಕ್ರಿಮಿನಲ್‌ ಕಾಯಿದೆ 144 ಪ್ರಕಾರದ ನಿಷೇಧಾಜ್ಞೆ ಜಾರಿಗೊಳಿಸಿ ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ ಸಜಿತ್‌ ಬಾಬು ಆದೇಶ ಹೊರಡಿಸಿದ್ದಾರೆ.     ಕಾಸರಗೋಡು, ಬೇಕಲ, ಬದಿಯಡ್ಕ, ಕುಂಬಳೆ, ಮಂಜೇಶ್ವರ ಹೊಸದುರ್ಗ, ವಿದ್ಯಾನಗರ, ಮೇಲ್ಪರಂಬ, ಚಂದೇರ ಪೊಲೀಸ್‌ ಠಾಣಾ ವ್ಯಾಪ್ತಿ ಹಾಗೂ ಪರಪ್ಪ, ಒಡೆಯಂಚಾಲ್‌, […]

ಕಾಸರಗೋಡು: ಇಂದಿನಿಂದ ಅ.9 ರ ವರೆಗೆ ನಿಷೇಧಾಜ್ಞೆ ಜಾರಿ ➤ ಡಾ.ಡಿ ಸಜಿತ್‌ ಬಾಬು ಆದೇಶ Read More »

ಕರಾವಳಿ

ಕಾಪು: ಡ್ರಗ್‌ ಸಾಗಾಟ ➤ ಇಬ್ಬರು ಆರೋಪಿಗಳ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಪು, ಅ.03: ಕಳೆದ ದಿನದಂದು ಗಾಂಜಾ ಮಾರಾಟ ಮಾಡಲು ತೆರಳುತ್ತಿದ್ದ ಆರೋಪದಲ್ಲಿ ಕಾಪು ಪೊಲೀಸ್‌ ಠಾಣೆಯ ಸಿಬ್ಬಂದಿಗಳು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಪುತ್ತೂರಿನ ಕುಕ್ಕಂಜೆ ರಸ್ತೆ ಬಳಿಯ ಎಲ್‌ವಿಟಿ ಬಸ್‌ ನಿಲ್ದಾಣದ ಸಮೀಪದ ನಿವಾಸಿ ಮೊಹಮ್ಮದ್‌ ಆಲಿ (33) ಹಾಗೂ ಕುಂಜಿಬೆಟ್ಟುವಿನ ಪೆರಂಪಲ್ಲಿ ನಿವಾಸಿ ಶ್ರೀಧರ್ (32) ಎಂದು ಗುರುತಿಸಲಾಗಿದೆ. ಆರೋಪಿಗಳ ತೀವ್ರ ವಿಚಾರಣೆ ನಡೆಸಿದಾಗ ತಾವು ಮಣಿಪಾಲ, ಮಲ್ಪೆಯಲ್ಲಿ ಗಾಂಜಾ ಮಾರಾಡ ಮಾಡಿದ್ದೇವೆ. ಇನ್ನುಳಿದ ಗಾಂಜಾವನ್ನು ಉದ್ಯಾವರದಲ್ಲಿ ಮಾರಾಟ ಮಾಡಲು

ಕಾಪು: ಡ್ರಗ್‌ ಸಾಗಾಟ ➤ ಇಬ್ಬರು ಆರೋಪಿಗಳ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಶ್ವದ ಅತಿ ಉದ್ದದ ಅಟಲ್ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಶಿಮ್ಲಾ, ಅ. 03: ಹಿಮಾಚಲ ಪ್ರದೇಶದ ಮನಾಲಿ ಮತ್ತು ಲೇಹ್ ಅನ್ನು ಸಂಪರ್ಕಿಸುವ ಜಗತ್ತಿನ ಅತೀ ಉದ್ದದ ಅಟಲ್ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರಮೋದಿ ಅವರು ಶನಿವಾರ ಉದ್ಘಾಟನೆ ಮಾಡಿದರು.   ಈ ಐತಿಹಾಸಿಕ ಉದ್ಘಾಟನಾ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೇನಾ ಮುಖ್ಯಸ್ಥ ಬಿಪಿನ್‌ ರಾವತ್‌ , ಮುಖ್ಯಮಂತ್ರಿ ಜೈರಾಮ್‌ ಠಾಕೂರ್‌ ಅವರೂ ಭಾಗವಹಿಸಿದ್ದರು.ಮನಾಲಿಯನ್ನು ಲೇಹ್‌ಗೆ ಸಂಪರ್ಕಿಸುವ 9.02 ಕಿ.ಮೀ ಉದ್ದದ ಅಟಲ್ ಸುರಂಗವು ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗವಾಗಿದೆ.

ವಿಶ್ವದ ಅತಿ ಉದ್ದದ ಅಟಲ್ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ Read More »

ರಾಷ್ಟ್ರೀಯ ನ್ಯೂಸ್

ಕಾರವಾರ :ಪ್ಯಾರಾಗ್ಲೈಡಿಂಗ್ ಅಪಘಾತದಲ್ಲಿ ಭಾರತೀಯ ನೌಕಾಪಡೆ ಕ್ಯಾಪ್ಟನ್ ಮೃತ್ಯು

(ನ್ಯೂಸ್ ಕಡಬ) newskadaba.com ಕಾರವಾರ, ಅ. 03.  ಪ್ಯಾರಾಗ್ಲೈಡಿಂಗ್ ಅಪಘಾತದಲ್ಲಿ ಭಾರತೀಯ ನೌಕಾಪಡೆಯ ಕ್ಯಾಪ್ಟನ್ ಮಧುಸೂದನ್ ರೆಡ್ಡಿ ಮೃತಪಟ್ಟಿದ್ದಾರೆ.   ಕುಟುಂಬ ಸದಸ್ಯರೊಂದಿಗೆ ಬೆಂಗಳೂರಿನಿಂದ ಶುಕ್ರವಾರ ಬೆಳಗ್ಗೆ ಕಾರವಾರಕ್ಕೆ ಬಂದಿದ್ದ ಆಂಧ್ರಪ್ರದೇಶ ಮೂಲದ ನೌಕಾಪಡೆಯ ಕ್ಯಾಪ್ಟನ್ ಮಧುಸೂದನ್ ರೆಡ್ಡಿ ಅವರು ಸಂಜೆ ಬೀಚ್ ನಲ್ಲಿದ್ದರು. ಪ್ಯಾರಾಗ್ಲೈಡಿಂಗ್ ಹಾರಾಟದಲ್ಲಿದ್ದ ವೇಳೆಯಲ್ಲಿ ಅಪಘಾತ ಸಂಭವಿಸಿದೆ. ಅರಬ್ಬೀ ಸಮುದ್ರದ ಮೇಲೆ ಹಾರಾಟದಲ್ಲಿದ್ದ ಸಂದರ್ಭದಲ್ಲೇ ಇಂಜಿನ್ ತಾಂತ್ರಿಕ ದೋಷದಿಂದ ಅವರು ಸಮುದ್ರದಲ್ಲಿ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.  

ಕಾರವಾರ :ಪ್ಯಾರಾಗ್ಲೈಡಿಂಗ್ ಅಪಘಾತದಲ್ಲಿ ಭಾರತೀಯ ನೌಕಾಪಡೆ ಕ್ಯಾಪ್ಟನ್ ಮೃತ್ಯು Read More »

ಕರಾವಳಿ

ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆದು ಎಸ್ಕೇಪ್ ➤ ಕಾರನ್ನು ಬೆನ್ನಟ್ಟಿ ಹಿಡಿದ ಸ್ಥಳೀಯರು

 (ನ್ಯೂಸ್ ಕಡಬ) newskadaba.com ಸುಳ್ಯ, ಅ. 03.  ಗೂನಡ್ಕ ಬಳಿ ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸಿದೆ. ತಕ್ಷಣವೇ ಸ್ಥಳೀಯರು ಕಾರನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರಾ ಗಾಯವಾಗಿದೆ. ಗಾಯಗೊಂಡಿದ್ದ ಬೈಕ್ ಸವಾರನನ್ನು ತಕ್ಷಣವೇ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲ್ಲುಗುಂಡಿ ಸಮೀಪದ ಗೂನಡ್ಕ ಬಳಿ ಮಹೀಂದ್ರ ಕಾರೋಂದು ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ಎಸ್ಕೇಪ್ ಆಗಿದೆ. ಇದನ್ನ ಗಮನಿಸಿದ ಸ್ಥಳೀಯರಾದ ಲಕ್ಷ್ಮೀಶ್ ಪಾಲ್ತಾಡು ಎಂಬುವವರು ಕಾರನ್ನು ಬೆನ್ನಟ್ಟಿ

ಬೈಕ್ ಗೆ ಕಾರೊಂದು ಢಿಕ್ಕಿ ಹೊಡೆದು ಎಸ್ಕೇಪ್ ➤ ಕಾರನ್ನು ಬೆನ್ನಟ್ಟಿ ಹಿಡಿದ ಸ್ಥಳೀಯರು Read More »

ಕರಾವಳಿ, ಕರ್ನಾಟಕ

ಹತ್ರಾಸ್ ರೇಪ್ & ಮರ್ಡರ್ ಕೇಸ್ ಖಂಡಿಸಿ ಬಿ. ಸಿ ರೋಡ್ ನಲ್ಲಿ ಮೊಂಬತ್ತಿ ಜಾಥಾ

 (ನ್ಯೂಸ್ ಕಡಬ) newskadaba.com ಬಿ. ಸಿ ರೋಡ್, ಅ. 03. ಉತ್ತರ ಪ್ರದೇಶದಲ್ಲಿ ನಡೆದ ದಲಿತ ಯುವತಿಯ ಆತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ಬಿ. ಸಿ ರೋಡ್ ನಲ್ಲಿ ಮಾಜಿ ಸಚಿವರಾದ ರಮಾನಾಥ್ ರೈ ಯವರ ನೇತೃತ್ವದಲ್ಲಿ ಮೊಂಬತ್ತಿ ಜಾಥಾ ಶುಕ್ರವಾರ ನಡೆಯಿತು.   ಈ ಸಂದರ್ಭದಲ್ಲಿ ಮಾತಾನಾಡಿದ ರಮಾನಾಥ್ ರೈ ರವರು” ಯೋಗಿ ಆದಿತ್ಯ ನಾಥ್ ಸರ್ಕಾರ ಹೆಣ್ಣು ಮಕ್ಕಳ ರಕ್ಷಣೆಯಲ್ಲಿ ವಿಫಲ ಆಗಿದ್ದು ಕೂಡಲೇ ರಾಜೀನಾಮೆ ಕೊಟ್ಟು ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು. ಕೇಂದ್ರ

ಹತ್ರಾಸ್ ರೇಪ್ & ಮರ್ಡರ್ ಕೇಸ್ ಖಂಡಿಸಿ ಬಿ. ಸಿ ರೋಡ್ ನಲ್ಲಿ ಮೊಂಬತ್ತಿ ಜಾಥಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹತ್ರಾಸ್ ಅತ್ಯಾಚಾರ ಪ್ರಕರಣ ➤ ಹತ್ರಾಸ್ ಎಸ್‌ಪಿ ಸೇರಿ ,ನಾಲ್ವರು ಪೊಲೀಸರ ಅಮಾನತು

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಅ. 03. ದೇಶಾದ್ಯಂತ ಭಾರೀ ಪ್ರತಿಭಟನೆಗೆ ಕಾರಣವಾಗಿರುವ ಉತ್ತರಪ್ರದೇಶದ ಹತ್ರಾಸ್‌ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ರಾಸ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ವಿಕ್ರಾಂತ್ ವೀರ್ ಸೇರಿದಂತೆ ನಾಲ್ವರು ಪೊಲೀಸರನ್ನು ಉತ್ತರ ಪ್ರದೇಶ ಸರ್ಕಾರ ಅಮಾನತು ಮಾಡಿದೆ. ಹತ್ರಾಸ್ ಜಿಲ್ಲೆಯ ಹಳ್ಳಿಯಲ್ಲಿ 19 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಸಾವಿನ ತನಿಖೆ ನಡೆಸುತ್ತಿರುವ ಹತ್ರಾಸ್ ಎಸ್‌ಪಿ ವಿಕ್ರಾಂತ್ ವೀರ್, ಸಿಒ ರಾಮ್ ಶಾಬ್, ಇನ್ಸ್‌ಪೆಕ್ಟರ್ ದಿನೇಶ್ ಮೀನಾ, ಎಸ್‌ಐ ಜಗವೀರ್

ಹತ್ರಾಸ್ ಅತ್ಯಾಚಾರ ಪ್ರಕರಣ ➤ ಹತ್ರಾಸ್ ಎಸ್‌ಪಿ ಸೇರಿ ,ನಾಲ್ವರು ಪೊಲೀಸರ ಅಮಾನತು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಳಿನೆಲೆಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನವಜೀವನೋತ್ಸವ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಅ.02: ಶ್ರೀ. ಕ್ಷೇ.ಧ.ಗ್ರಾ.ಯೋಜನೆ ಬಿಳಿನೆಲೆ ವಲಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಿಳಿನೆಲೆ ವಲಯ ಇದರ ಸಂಯುಕ್ತದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನವಜೀವನೋತ್ಸವ ಕಾರ್ಯಕ್ರಮ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಸಭಾಭವನದಲ್ಲಿ ಇಂದು ನಡೆಯಿತು.     ಕಾರ್ಯಕ್ರಮದ ಮುಖ್ಯ ಅದ್ಯಕ್ಷತೆಯನ್ನು ತಮ್ಮಯ್ಯ ಗೌಡ, ಜನಜಾಗೃತಿ ವೇದಿಕೆ ವಲಯಾದ್ಯಕ್ಷರು ಬಿಳಿನೆಲೆ ವಲಯ, ಕಾರ್ಯಕ್ರಮದ ಉದ್ಘಾಟನೆಯನ್ನು ಸತೀಶ ಎರ್ಕ ಬಿಳಿನೆಲೆ ಒಕ್ಕೂಟಗಳ ವಲಯಾದ್ಯಕ್ಷರು, ಮುಖ್ಯ ಅಥಿತಿಗಳು ಶ್ರೀ ಯುತ, ಮೇದಪ್ಪ ನಾವೂರು ಯೋಜನಾದಿಕಾರಿಗಳು ಶ್ರೀ

ಬಿಳಿನೆಲೆಯಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನವಜೀವನೋತ್ಸವ ಕಾರ್ಯಕ್ರಮ Read More »

ಕರಾವಳಿ

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರಿಂದ ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.02: ದಕ್ಷಿಣ ಕನ್ನಡ ಜಿಲ್ಲಾಡಳಿತವು ಅಕ್ಟೋಬರ್ 2 ರ ಇಂದು ಮಹಾತ್ಮ ಗಾಂಧಿ ಉದ್ಯಾನದಲ್ಲಿ 151 ನೇ ಗಾಂಧಿ ಜಯಂತಿ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮತ್ತು ಇತರ ಗಣ್ಯರು ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೋಟಾ ಅವರು, “ಇಂದು ನಾವು ಮಹಾತ್ಮ ಗಾಂಧೀಜಿಯವರ 151 ನೇ ಜನ್ಮ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಗಾಂಧೀಜಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು ಮತ್ತು ಅಹಿಂಸೆಯ

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರಿಂದ ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ನೂತನ “ಬ್ರಹ್ಮ” ರಥಕ್ಕೆ ಇಂದು ಒಂದು ವರುಷದ ಸಂಭ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.02: ದಕ್ಷಿಣ ಭಾರತ ಪ್ರಸಿದ್ಧ ನಾಗಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ನೂತನ ಬ್ರಹ್ಮರಥಕ್ಕೆ ಇಂದು ಒಂದು ವರುಷ ಸಂದಿದೆ. ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನೂತನ ಬ್ರಹ್ಮ ರಥ ನೀಡಿದ ಉದ್ಯಮಿ ಮುತ್ತಪ್ಪ ರೈ ಹಾಗೂ ಬಿಡದಿ ರಿಯಾಲಿಟಿ ವೆಂಚರ್‌ ಪಾಲುದಾರ ಅಜಿತ್‌ ಶೆಟ್ಟಿ ಅವರ ನೇತೃತ್ವದಲ್ಲಿ 2.5ಕೋಟಿ ಮೌಲ್ಯದ ಬ್ರಹ್ಮರಥವು ಸುಬ್ರಹ್ಮಣ್ಯಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಉಡುಪಿಯ ಕೋಟೇಶ್ವರದಲ್ಲಿ ನಿರ್ಮಾಣ ಗೊಂಡ ಕುಕ್ಕೆ ಸುಬ್ರಹ್ಮಣ್ಯಕ್ಕೆ ನೂತನ ಬ್ರಹ್ಮ ರಥವನ್ನು

ಕುಕ್ಕೆ ಸುಬ್ರಹ್ಮಣ್ಯ: ನೂತನ “ಬ್ರಹ್ಮ” ರಥಕ್ಕೆ ಇಂದು ಒಂದು ವರುಷದ ಸಂಭ್ರಮ Read More »

ಕರಾವಳಿ
Scroll to Top