Kadaba News

ಕುಕ್ಕೆಯಲ್ಲಿ ದಿನಕ್ಕೆ 225 ಆಶ್ಲೇಷ ಪೂಜೆ ಮಾಡಲು ಅವಕಾಶ ➤ ಆಡಳಿತಾಧಿಕಾರಿ ರೂಪಾ ಎಂ.ಜೆ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 24:  ಕುಕ್ಕೆ ಸುಬ್ರಹ್ಮಣ್ಯದಲ್ಲಿ ದಿನಕ್ಕೆ 225 ಶ್ಲೇಷ ಪೂಜೆ ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ರೂಪಾ ಎಂ ಜೆ ರವರು ತಿಳಿಸಿದ್ದಾರೆ.   ಕುಕ್ಕೆ ಯಲ್ಲಿ ನಡೆಯುತ್ತಿರುವ ಕಾಮಗಾರಿ ವೀಕ್ಷಣೆ ಬಳಿಕ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.  ಪೂಜೆಗಳ ಬಗ್ಗೆ ಮಾಹಿತಿ ನೀಡಿದ್ದು, ಆಶ್ಲೇಷ ಬಲಿ ಪೂಜೆ ಮೂರು ಬ್ಯಾಚ್ ಮಾಡಿ ತಲಾ 75ರಂತೆ ದಿನಕ್ಕೆ 225 ಆಶ್ಲೇಷ ಪೂಜೆ ನಡೆಸಲು ಅವಕಾಶ ಕಲ್ಪಿಸಿದ್ದು, ಬೆಳಗ್ಗೆ […]

ಕುಕ್ಕೆಯಲ್ಲಿ ದಿನಕ್ಕೆ 225 ಆಶ್ಲೇಷ ಪೂಜೆ ಮಾಡಲು ಅವಕಾಶ ➤ ಆಡಳಿತಾಧಿಕಾರಿ ರೂಪಾ ಎಂ.ಜೆ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಮಾಸ್ಕ್, ಕಡ್ಡಾಯ ತಪ್ಪಿದ್ದಲ್ಲಿ ಬೀಳುತ್ತೆ “ಈ” ಮೊತ್ತ ➤ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು , ಸೆ. 24:  ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಗ್ರಾಮಾಂತರ, ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್ ಬಳಕೆ ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.     ಹೊಟೇಲ್‌, ರೆಸ್ಟೋರೆಂಟ್‌ಗಳು, ವಾಣಿಜ್ಯ ಸಂಕೀರ್ಣಗಳು, ಮಾಲ್‌ಗಳು, ಅಂಗಡಿಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲ ಸಿಬಂದಿ ಹಾಗೂ ಸಾರ್ವಜನಿಕರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯ. ಪ್ರತಿ ಅಂಗಡಿ ಮಾಲಕರು ಸಾಮಾಜಿಕ ಅಂತರ ನಿಯಮಗಳನ್ನು ಕಟ್ಟುನಿಟ್ಟಾಗಿ

ಮಾಸ್ಕ್, ಕಡ್ಡಾಯ ತಪ್ಪಿದ್ದಲ್ಲಿ ಬೀಳುತ್ತೆ “ಈ” ಮೊತ್ತ ➤ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಸಿಸಿಬಿ ತನಿಖೆಗೆ ಸಹಕರಿಸುತ್ತೇನೆ : ನಟ ದಿಗಂತ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23:  ಸ್ಯಾಂಡಲ್ ವುಡ್‍ ನಲ್ಲಿ ಮಾದಕ ನಶೆಯ ನಂಟು ಪ್ರಕರಣಕ್ಕೆ ಸಂಬಂಧಿಸಿ, ನಟ ದಿಗಂತ್ ಎರಡನೇ ಬಾರಿ ಸಿಸಿಬಿ ವಿಚಾರಣೆ ಎದುರಿಸಿದ್ದಾರೆ.   ನಗರದ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ಮುಗಿಸಿ ಹೊರಬಂದ ಬಳಿಕ ಸುದ್ದಿಗಾರರೊಡನೆ ಮಾತನಾಡಿ, ಸಿಸಿಬಿಗೆ ನನ್ನ ಬಳಿಯಿದ್ದ ಅಗತ್ಯ ಮಾಹಿತಿ ನೀಡಿರುವೆ. ಅಗತ್ಯಬಿದ್ದರೆ ಮತ್ತೆ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಹಕರಿಸುತ್ತೇನೆ. ತನಿಖೆ ಪ್ರಗತಿಯಲ್ಲಿರುವ ಕಾರಣ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವಂತಿಲ್ಲ ಎಂದರು.  

ಸಿಸಿಬಿ ತನಿಖೆಗೆ ಸಹಕರಿಸುತ್ತೇನೆ : ನಟ ದಿಗಂತ್ Read More »

ಕರ್ನಾಟಕ

ಪುತ್ತೂರು,ಕಡಬ ತಾಲೂಕಿನಲ್ಲಿ ಇಂದು 12 ಮಂದಿಯಲ್ಲಿ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಕಡಬ, ಸೆ.23: ಆರೋಗ್ಯ ಇಲಾಖೆಯ ವರದಿಯಂತೆ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ ಇಂದು 12 ಮಂದಿಯಲ್ಲಿ ಕೊರೋನಾ ದೃಢಪಟ್ಟಿದೆ.     ಕಡಬ ತಾಲೂಕಿನ ನೆಲ್ಯಾಡಿ ನಿವಾಸಿ 54 ವರ್ಷದ ವ್ಯಕ್ತಿ, ಶಿರಾಡಿಯ 47 ವರ್ಷದ ಮಹಿಳೆ, 22 ವರ್ಷದ ಯುವಕ, ಬಂಟ್ರ ನಿವಾಸಿ 50 ವರ್ಷದ ಮಹಿಳೆಯಲ್ಲಿ ಕೊರೋನಾ ದೃಢಪಟ್ಟಿದೆ.  

ಪುತ್ತೂರು,ಕಡಬ ತಾಲೂಕಿನಲ್ಲಿ ಇಂದು 12 ಮಂದಿಯಲ್ಲಿ ಕೊರೋನಾ ದೃಢ Read More »

ಕರಾವಳಿ

ಮಹಿಳೆಯೋರ್ವರ 4 ಪವನ್‌ ತೂಕದ ಚಿನ್ನದ ಕರಿಮಣಿಸರ ಎಳೆದು ಪರಾರಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.23: ದ್ವಿಚಕ್ರ ವಾಹನವೊಂದರಲ್ಲಿ ಬಂದ ವ್ಯಕ್ತಿಯೋರ್ವ ಬೀಡಿ ಬ್ರಾಂಚ್‌ ನಿಂದ ಮರಳುತ್ತಿದ್ದ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾದ ಘಟನೆ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಬಳಿಯ ಮರುವಾಳ ಎಂಬಲ್ಲಿ ನಡೆದಿದೆ.     ವಿಟ್ಲ ಮುಡ್ನೂರು ಗ್ರಾಮದ ಕುಂಡಡ್ಕ ಸಮೀಪದ ಮರುವಾಳ ನಿವಾಸಿ ಮಹಿಳೆ ದೂರು ನೀಡಿದ್ದಾರೆ. ಕಳೆದ ದಿನ ಮದ್ಯಾಹ್ನದ ವೇಳೆ ಬೀಡಿಕೊಟ್ಟು ಮನೆಗೆ ಹಿಂದಿರುಗುತ್ತಿದ್ದ ವೇಳೆ ಕುಂಡಡ್ಕ ಭಾಗದಿಂದ

ಮಹಿಳೆಯೋರ್ವರ 4 ಪವನ್‌ ತೂಕದ ಚಿನ್ನದ ಕರಿಮಣಿಸರ ಎಳೆದು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಾದೇಶಿಕ ಭಾಷಾ ತರಬೇತಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 23:  ಇಂದು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಾದೇಶಿಕ ಭಾಷೆಯಾದ ತುಳು ತರಬೇತಿಯನ್ನು ಆಯೋಜಿಸಲಾಗಿತ್ತು. ಜಿಲ್ಲಾ ಪೊಲೀಸ್ ಅಧೀಕ್ಷಕರು ಹೊರ ಜಿಲ್ಲಾ ಸಿಬ್ಬಂದಿಗಳಿಗೆ ತುಳು ಮತ್ತು ಕೊಂಕಣಿ ಭಾಷೆಯ ತರಬೇತಿಯನ್ನು ನೀಡಲು ಆದೇಶಸಿದ್ದರು. ಅದರಂತೆ ಇಂದು ಶ್ರೀ ಗೋಪಾಲಕೃಷ್ಣ ಪ್ರೌಢಶಾಲಾ ದೈಹಿಕ ಶಿಕ್ಷಕ ಶಿವರಾಮ ಏನೆಕಲ್ಲುರವರು ತುಳು ಭಾಷೆ ಬಗ್ಗೆ ತರಬೇತಿ ನೀಡಿದರು .      

ಇಂದು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಾದೇಶಿಕ ಭಾಷಾ ತರಬೇತಿ Read More »

ಕರಾವಳಿ, ಕರ್ನಾಟಕ

ಕಾರ್ಕಳ : ಮಾರಿಗುಂಡಿ ದೇವಸ್ಥಾನದಿಂದ 16 ಸಾವಿರ ರೂ, ಡಿವಿಆರ್ ಕಳ್ಳತನ..!!

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ. 23:  ಕಾರ್ಕಳದ ಮುಂಡ್ಕೂರು ಗ್ರಾಮದ ಕಜೆ ಶ್ರೀ ಮಹಮ್ಮಾಹಿ ದೇವಸ್ಥಾನದ ಬಾಗಿಲಿನ ಬೀಗ ಮುರಿದು ಗೋಡ್ರೆಜ್ ನಲ್ಲಿದ್ದ 16 ಸಾವಿರ ರೂ. ಮತ್ತು ಸಿಸಿಟಿವಿಯ ಡಿವಿಆರ್ ಅನ್ನು ಸೆ. 21 ರಂದು ಖದೀಮರು ಕಳವುಗೈದಿದ್ದಾರೆ.     ಒಂದು ಗೋಡ್ರೆಜ್ ನಲ್ಲಿದ್ದ 11 ಸಾವಿರ ರೂ. ಹಾಗು ಮತ್ತೂಂದು ಗೋಡ್ರೆಜ್ ನಲ್ಲಿದ್ದ 5 ಸಾವಿರ ರೂ. ಸೇರಿದಂತೆ ಒಟ್ಟು 16 ಸಾವಿರ ಕಳವುಗೈದಿದ್ಧಾರೆ. ದೇವರ ಗರ್ಭಗುಡಿಯ ಬಾಗಿಲನ್ನು ತೆರೆದಿಟ್ಟಿದ್ದಾರೆ. ಇನ್ನು

ಕಾರ್ಕಳ : ಮಾರಿಗುಂಡಿ ದೇವಸ್ಥಾನದಿಂದ 16 ಸಾವಿರ ರೂ, ಡಿವಿಆರ್ ಕಳ್ಳತನ..!! Read More »

ಕರಾವಳಿ, ಕ್ರೈಮ್ ನ್ಯೂಸ್

IPL ಬೆಟ್ಟಿಂಗ್ ➤ 6 ಮಂದಿ ಬಂಧನ, 6 ಲಕ್ಷ ರೂ. ವಶಕ್ಕೆ.!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23:  ಐಪಿಎಲ್-2020 ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳ ಮೇಲೆ ಸಿಸಿಬಿ ಪೊಲೀಸರು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಆರು ಮಂದಿಯನ್ನು ಬಂಧಿಸಿದ್ದಾರೆ.     ಐಪಿಎಲ್ ಪಂದ್ಯದ ಹೆಸರಿನಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದಾರೆ ಎಂದು ಖಚಿತ ಮಾಹಿತಿ ಪಡೆದ ಪೊಲೀಸರು ಬಾಣಸವಾಡಿ ಮತ್ತು ಮಲ್ಲೇಶ್ವರಂನಲ್ಲಿ ಆರು ಮಂದಿಯನ್ನು ಬಂಧಿಸಿ ಅವರ ಬಳಿಯಿಂದ 6 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಎರಡು ಕೇಸುಗಳು ದಾಖಲಾಗಿದೆ ಎಂದು ನಗರ ಅಪರಾಧ ದಳದ ಜಂಟಿ

IPL ಬೆಟ್ಟಿಂಗ್ ➤ 6 ಮಂದಿ ಬಂಧನ, 6 ಲಕ್ಷ ರೂ. ವಶಕ್ಕೆ.!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಡಿಕೇರಿಯಲ್ಲಿ ಏಕಾಏಕಿ ಕುಸಿದು ಬಿದ್ದ ಮನೆ ಗೋಡೆ ➤ ಮನೆಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಡಿಕೇರಿ, ಸೆ.23: ಕೆಲವು ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಎಡೆಬಿಡದೆ ಮಳೆಸುರಿಯುತ್ತಿದೆ. ಭಾರೀ ಮಳೆಯಿಂದಾಗಿ ಸೋಮವಾರಪೇಟೆ ನಗರದ ಕಲ್ಕಂದೂರು ಬಾಣೆಯಲ್ಲಿ ಅಬ್ಬಾಸ್ ಎಂಬುವರ ಮನೆಯ ಗೋಡೆ ಕುಸಿತಗೊಂಡಿದೆ. ಸಿನಿಮೀಯ ರೀತಿಯಲ್ಲಿ ಮನೆಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.     ಸೋಮಪಾರಪೇಟೆಯ ಕಲ್ಕಂದೂರು ಬಾಣೆಯ ಅಬ್ಬಾಸ್ ಎಂಬುವರ ಮನೆ ಭಾರೀ ಗಾಳಿ ಮಳೆಗೆ ಮುಂಜಾನೆ 3.30ಕ್ಕೆ ಕುಸಿತಗೊಂಡಿದೆ. ಕುಸಿಯುತ್ತಿದ್ದಂತ ಶಬ್ದ ಕೇಳಿದ್ದೇ ತಡ, ಮನೆಯಲ್ಲಿದ್ದಂತ ನಾಲ್ವರು ತಕ್ಷಣವೇ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಈ

ಮಡಿಕೇರಿಯಲ್ಲಿ ಏಕಾಏಕಿ ಕುಸಿದು ಬಿದ್ದ ಮನೆ ಗೋಡೆ ➤ ಮನೆಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ

ಸುಳ್ಯ ಆರೋಗ್ಯ ಇಲಾಖೆಯ ನೌಕರರಿಂದ ಪ್ರತಿಭಟನೆ ➤ ನಾಳೆಯಿಂದ ಅನಿರ್ಧಿಷ್ಟಾವದಿ ಮುಷ್ಕರಕ್ಕೆ ಕರೆ!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 23:  ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ(ರಿ) ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯವ್ಯಾಪಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಸುಳ್ಯದ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಗುತ್ತಿಗೆ ಹಾಗು ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು. ಕೋರೋನಾ ನಡುವೆ ಕೋವಿಡ್ ವಾರಿಯರ್ಸ್ ಗಾಳಗಿ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ

ಸುಳ್ಯ ಆರೋಗ್ಯ ಇಲಾಖೆಯ ನೌಕರರಿಂದ ಪ್ರತಿಭಟನೆ ➤ ನಾಳೆಯಿಂದ ಅನಿರ್ಧಿಷ್ಟಾವದಿ ಮುಷ್ಕರಕ್ಕೆ ಕರೆ! Read More »

ಕರಾವಳಿ, ಕರ್ನಾಟಕ
Scroll to Top