Kadaba News

ಮೀನುಗಾರ ಕುಟುಂಬಗಳಿಗೆ ಮನೆ ನಿರ್ಮಾಣ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ.19:  ಪ್ರತಿ ಗ್ರಾಮದಲ್ಲೂ 20 ಮೀನುಗಾರ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡಲಾಗುವುದು. ಜಪಾನ್ ಮಾದರಿಯಲ್ಲಿ ಕರಾವಳಿ ತೀರ ಅಭಿವೃದ್ಧಿಪಡಿಸಲಾಗುವುದು ಎಂದು ಹಿಂದು ಧಾರ್ಮಿಕ ದತ್ತಿ ಮತ್ತು ಮೀನುಗಾರಿಕೆ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.   ಕುಂದಾಪುರ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದೆ ರಾಜೀವ ಗಾಂಧಿ ವಸತಿ ಯೋಜನೆ ಮೂಲಕ ಮೀನುಗಾರರಿಗೂ ಮನೆ ನಿರ್ಮಿಸಿಕೊಡಲಾಗುತ್ತಿತ್ತು. ಪ್ರಸ್ತುತ ಮೀನುಗಾರಿಕಾ ಇಲಾಖೆಯಿಂದಲೇ ವಸತಿ ಯೋಜನೆ […]

ಮೀನುಗಾರ ಕುಟುಂಬಗಳಿಗೆ ಮನೆ ನಿರ್ಮಾಣ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ಚಿರತೆ ದಾಳಿಗೆ ಸಾಕು ನಾಯಿ ಬಲಿ

(ನ್ಯೂಸ್ ಕಡಬ) newskadaba.com ಕಲ್ಮಕಾರು, ಸೆ.19: ಚಿರತೆ ದಾಳಿಗೆ ನಾಯಿಯೊಂದು ಬಲಿಯಾದ ಘಟನೆ ಕಲ್ಮಕಾರಿನಲ್ಲಿ ಕಳೆದ ದಿನ ರಾತ್ರಿ ವರದಿಯಾಗಿದೆ.     ಕಲ್ಮಕಾರು ಗ್ರಾಮದ ಪನ್ನೆ ಬಳಿ ರಾತ್ರಿ ಚಿರತೆಯೊಂದು ದಾಳಿ ನಡೆಸಿ ಲಿಂಗಪ್ಪ ಗೌಡ ಅಂತಿಬೆಟ್ಟು(ಪುಟ್ಟಮಜಲು)ರ ಮನೆಗೆ ಸಾಕು ನಾಯಿಯನ್ನು ತಿಂದು ಹಾಕಿದ್ದು, ಇಂದು ಮುಂಜಾನೆ ಮನೆಯ ಅಂಗಳದಲ್ಲಿ ಅರ್ಧ ತಿಂದ ನಾಯಿಯ ಮೃತ ದೇಹ ಪತ್ತೆಯಾಗಿದೆ.      

ಸುಬ್ರಹ್ಮಣ್ಯ: ಚಿರತೆ ದಾಳಿಗೆ ಸಾಕು ನಾಯಿ ಬಲಿ Read More »

ಕರಾವಳಿ

ರಾಗಿಣಿ-ಸಂಜನಾಗೆ ಇನ್ನೆರಡು ದಿನ ಜೈಲೇ ಫಿಕ್ಸ್​​

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.19:  ಸ್ಯಾಂಡಲ್​ವುಡ್ ಡ್ರಗ್ಸ್​ ಲಿಂಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್​ ಸೋಮವಾರಕ್ಕೆ ಮುಂದೂಡಿದೆ.     ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಪಬ್ಲಿಕ್ ಪ್ರಾಸಿಕ್ಯೂಟರ್​ ಸಮಯಾವಕಾಶ ಕೇಳಿದ ಹಿನ್ನೆಲೆಯಲ್ಲಿ, ವಿಚಾರಣೆಯನ್ನು ಸೆಪ್ಟೆಂಬರ್ 21ಕ್ಕೆ ಎನ್​ಡಿಪಿಎಸ್​​ ಕೋರ್ಟ್​​ ಮುಂದೂಡಿದೆ.ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಇಂದು ಒಟ್ಟು ಐದು ಆರೋಪಿಗಳ ಜಾಮೀನಿನ ವಿಚಾರಣೆ ಇತ್ತು. ಇದರಲ್ಲಿ ಕೆಲವರು ಜೈಲಿನಲ್ಲಿದ್ದರೆ ಇನ್ನೂ

ರಾಗಿಣಿ-ಸಂಜನಾಗೆ ಇನ್ನೆರಡು ದಿನ ಜೈಲೇ ಫಿಕ್ಸ್​​ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಣಿಪಾಲ : ದರೋಡೆಕೋರರರಿಂದ ಯುವಕನಿಗೆ ಚಾಕು ಇರಿತ

(ನ್ಯೂಸ್ ಕಡಬ) newskadaba.com ಮಣಿಪಾಲ, ಸೆ.19:  ಬೈಕ್ ನಲ್ಲಿ ಬಂದ ತಂಡವೊಂದು ಚಾಕು ತೋರಿಸಿ ಬೆದರಿಸಿ ಮೊಬೈಲ್ ಮತ್ತು ಹಣವನ್ನು ಲೂಟಿ ಮಾಡಿದ ಘಟನೆ ಇಂದು ಬೆಳ್ಳಂಬೆಳಗ್ಗೆ ಮಣಿಪಾಲ ಅಸುಪಾಸಿನಲ್ಲಿ ನಡೆದಿದೆ. ಒಂದು ಘಟನೆ ಅಲೆವೂರು ಗುಡ್ಡೆಯಂಗಡಿ ಬಳಿ ನಡೆದಿದ್ದರೆ, ಮತ್ತೊಂದು ಘಟನೆ ಮಣಿಪಾಲ ಈಶ್ವರ ನಗರದ ಬಿಗ್ ಬಾಸ್ ಬಾರ್ ಬಳಿ ನಡೆದಿದೆ. ಅಲೆವೂರು ಗುಡ್ಡೆಯಂಗಡಿ ಬಳಿ ರಾತ್ರಿ ಪಾಳಿ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕನನ್ನು ಎದುರಿನಿಂದ ಬೈಕ್ ನಲ್ಲಿ ಬಂದ ತಂಡ ಅಡ್ಡಗಟ್ಟಿ, ಬೆಲೆಬಾಳುವ ವಸ್ತು

ಮಣಿಪಾಲ : ದರೋಡೆಕೋರರರಿಂದ ಯುವಕನಿಗೆ ಚಾಕು ಇರಿತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಿರತೆಗೆ ಪ್ರಸವ ವೇದನೆ ➤ ಹೊಟ್ಟೆಯಲ್ಲೆ ಮೃತಪಟ್ಟ ಮರಿಗಳು!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19:  ನಗರ ಹೊರವಲಯದ ಪಿಲಿಕುಳ ನಿಸರ್ಗಧಾಮದಲ್ಲಿರುವ 8 ವರ್ಷ ಪ್ರಾಯದ ಚಿರತೆ ‘ಚಿಂಟು’ಗೆ ಪ್ರಸವ ಸಮಸ್ಯೆಯಿಂದ ಸ್ಥಿತಿ ಗಂಭೀರವಾದ ಕಾರಣ ತುರ್ತಾಗಿ ಶಸ್ತ್ರ ಚಿಕಿತ್ಸೆ ನಡೆಸಿ ಗರ್ಭದಲ್ಲಿದ್ದ ಎರಡು ಮರಿಗಳನ್ನು ಹೊರತೆಗೆಯಲಾಗಿದೆ ಎಂದು ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಎಚ್.ಜೆ. ಭಂಡಾರಿ ಪ್ರಕಟನೆ ತಿಳಿಸಿದೆ.     ಶಸ್ತ್ರಚಿಕಿತ್ಸೆಯ ನಂತರ ಚಿರತೆಯು ಚೇತರಿಸುತ್ತಿದ್ದು, ಮೃಗಾಲಯದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಚಿರತೆಯ ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿದ್ದಾರೆ. ಮೃಗಾಲಯದ ವೈದ್ಯಾಧಿಕಾರಿ ಡಾ.ವಿಷ್ಣುದತ್ ಮತ್ತು

ಚಿರತೆಗೆ ಪ್ರಸವ ವೇದನೆ ➤ ಹೊಟ್ಟೆಯಲ್ಲೆ ಮೃತಪಟ್ಟ ಮರಿಗಳು! Read More »

ಕರಾವಳಿ, ಕರ್ನಾಟಕ

ಕಲ್ಲೇಗ :4 ವಾಹನಗಳ ನಡುವೆ ಸರಣಿ ಅಪಘಾತ

(ನ್ಯೂಸ್ ಕಡಬ) newskadaba.com ಪುತ್ತೂರು , ಸೆ.17:   ಕಲ್ಲೇಗ ಬಳಿ ಓಮ್ನಿ, ಆಕ್ಷೀವಾ, ಡಿಯೋ, ಹಾಗೂ ಆಟೋರಿಕ್ಷಾ ನಡುವೆ ಕಳೆದ ದಿನ ರಾತ್ರಿ ಸರಣಿ ಅಪಘಾತ ನಡೆದಿದೆ.   ಓಮ್ನಿ ಚಾಲಕನ ಅತೀ ಚಾಲನೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ರಿಕ್ಷಾಯೊಂದಕ್ಕೆ ತಾಗಿ, ರಸ್ತೆಯ ಬದಿಯಲ್ಲಿದ್ದ ಡಿಯೋ ಮತ್ತು ಆಕ್ಟೀವಾಗಳಿಗೆ ಡಿಕ್ಕಿಯಾಗಿದೆ. ಎಂದು ಸ್ಥಳೀಯರು ತಿಳಿಸಿದ್ದಾರೆ. ಇನ್ನು ಆಕ್ಟೀವಾ ಚಾಲಕ ಸಂದೇಶ್ ಎಂಬುವವರಿಗೆ ಗಂಭೀರಾ ಗಾಯಗಳಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಕುರಿತು ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲ್ಲೇಗ :4 ವಾಹನಗಳ ನಡುವೆ ಸರಣಿ ಅಪಘಾತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಹಣ್ಣು ಹಂಪಲು ವಿತರಿಸಿದ ಬಿಜೆಪಿ ಮುಖಂಡರು

(ನ್ಯೂಸ್ ಕಡಬ) newskadaba.com ಕಡಬ, ಸೆ.19: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿಯ ಸುಳ್ಯ ಮಂಡಲದ ಯುವ ಮೋರ್ಚಾ ಹಾಗೂ ಕಡಬ ಮಹಾಶಕ್ತಿ ಕೇಂದ್ರದ ವತಿಯಿಂದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಹಣ್ಣು ಹಂಪಲು ವಿತರಿಸಿದರು.   ಮೊದಲಿಗೆ ಕಡಬದ ಹಿರಿಯ ವೈದ್ಯ ಡಾ| ಸಿ.ಕೆ ಶಾಸ್ತ್ರೀ ಮತ್ತು ಸಿಬ್ಬಂದಿಗಳಿಗೆ ಹಾಗೂ ಕಡಬದ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ

ಕಡಬ: ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಹಣ್ಣು ಹಂಪಲು ವಿತರಿಸಿದ ಬಿಜೆಪಿ ಮುಖಂಡರು Read More »

ಕರಾವಳಿ

 ಬೆಳ್ತಂಗಡಿ: ಸ್ಕೂಟರ್‌ ಕಳವು ಮೂವರು ಆರೋಪಿಗಳು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ, ಸೆ.19: ತಾಲೂಕಿನ ವಿವಿಧ ಕಡೆಗಳಲ್ಲಿ ಸ್ಕೂಟರ್‌‌ ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.     ಮೇ 5ರಂದು ಉಜಿರೆ ಗ್ರಾಮದ ವಂದನಾ ಭಂಡರ್ಕಾರ್‌ (40) ಎಂಬವರ ಸ್ಕೂಟರ್‌‌ ಕಾಣೆಯಾಗಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದರು. ತದನಂತರ ಉಜಿರೆ ಗ್ರಾಮದ ಪಂಚರಿಕಾಡು ರಬ್ಬರ್‌ ತೋಟದಲ್ಲಿ ಮೂರು ಮಂದಿ ಸ್ಕೂಟರ್‌‌ನ ಬಿಡಿಭಾಗಗಳನ್ನು ಕಳಚುತ್ತಿರುವ ವಿಚಾರದ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ದಾಳಿ

 ಬೆಳ್ತಂಗಡಿ: ಸ್ಕೂಟರ್‌ ಕಳವು ಮೂವರು ಆರೋಪಿಗಳು ಪೊಲೀಸರ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಡ್ರಗ್ಸ್ ಸಾಗಾಟ ಮಾಡತ್ತಿದ್ದ ಡ್ಯಾನ್ಸರ್‌ ಕಿಶೋರ್‌ ಶೆಟ್ಟಿ ಬಂಧನ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.19: ಡ್ರಗ್ಸ್‌ ಸಾಗಿಸುತ್ತಿದ್ದ ಡ್ಯಾನ್ಸರ್‌ ಕಿಶೋರ್‌ ಶೆಟ್ಟಿಯನ್ನು ಮಂಗಳೂರಿನ ಸಿಸಿಬಿ ಪೊಲೀಸರು ಇಂದು (ಶನಿವಾರ) ಬಂಧಿಸಿದ್ದಾರೆ.     ಕಿಶೋರ್‌ ಶೆಟ್ಟಿ ಖ್ಯಾತ ಡ್ಯಾನ್ಸರ್‌ ಆಗಿದ್ದು, ಇವರು ಹಿಂದಿಯ ಎಬಿಸಿಡಿ ಸಿನಿಮಾದಲ್ಲಿ ನಟಿಸಿದ್ದರು, ಅಲ್ಲದೇ ಡ್ಯಾನ್ಸ್‌ ಇಂಡಿಯಾ ಡ್ಯಾನ್ಸ್‌‌‌ನಲ್ಲೂ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಇದೀಗ ಇವರು ಡ್ರಗ್ಸ್‌‌‌ ಸಾಗಿಸುತ್ತಿದ್ದರು ಎಂದು ವರದಿಯಾಗಿದೆ. ಮಾದಕವಸ್ತುಗಳ ಮಾರಾಟ ಜಾಲವನ್ನು ತಡೆಗಟ್ಟುವ ಸಲುವಾಗಿ ಪೊಲೀಸರು ಕಠಿಣ ಕ್ರಮಕೈಗೊಂಡಿದ್ದು, ಇವರನ್ನು ಬಂಧಿಸಲಾಗಿದೆ.    

ಮಂಗಳೂರು: ಡ್ರಗ್ಸ್ ಸಾಗಾಟ ಮಾಡತ್ತಿದ್ದ ಡ್ಯಾನ್ಸರ್‌ ಕಿಶೋರ್‌ ಶೆಟ್ಟಿ ಬಂಧನ..!! Read More »

ಕರಾವಳಿ, ಕರ್ನಾಟಕ

ಫೋಟೋಗೀಳಿಗೆ ಜಲಪಾತಕ್ಕೆ ಬಿದ್ದು ಪ್ರಾಣತೆತ್ತ ಯುವಕ

(ನ್ಯೂಸ್ ಕಡಬ) newskadaba.com ಹಾಸನ, ಸೆ.19:  ಸೆಲ್ಪಿ, ಫೋಟೋ ಗೀಳಿಗೆ ಬಿದ್ದು ಅದೆಷ್ಟೋ ಮಂದಿ ತಮ್ಮ ಪ್ರಾಣವನ್ನೆ ಕಳೆದುಕೊಂಡಿರುವುದು ಗೊತ್ತೇಯಿದೆ. ಹಾಸನದಲ್ಲೋಬ್ಬ ಯುವಕ ಫೋಟೋ ಗೀಳಿಗೆ ಬಿದ್ದು ಬಲಿಯಾಗಿದ್ದಾನೆ.     ಫೋಟೋ ತೆಗೆಸಿಕೊಳ್ಳಲು ಹೋಗಿ ಜಲಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ. ಸಕಲೇಶಪುರ ತಾಲೂಕಿನ ಮಾರನಹಳ್ಳಿ ಗ್ರಾಮದ ರತನ್ ಮೃತ ದುರ್ದೈವಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಇವರು 2ದಿನದ ಹಿಂದೆಯಷ್ಟೆ ಊರಿಗೆ ಬಂದಿದ್ದರು. ಜೊತೆಯಲ್ಲಿದ್ದ ಒಬ್ಬರಿಗೆ ಮೊಬೈಲ್ ಕೊಟ್ಟು ಫೋಟೋ ತೆಗೆಸಿಕೊಳ್ಳುವಾಗ ಕಾಲು ಜಾರಿ ಮೇಲಿಂದ ಬಿದ್ದ ಪರಿಣಾಮ

ಫೋಟೋಗೀಳಿಗೆ ಜಲಪಾತಕ್ಕೆ ಬಿದ್ದು ಪ್ರಾಣತೆತ್ತ ಯುವಕ Read More »

ಕರ್ನಾಟಕ
Scroll to Top