Kadaba News

ಗೋಳಿತೊಟ್ಟು: ಮಕ್ಕಳಿಗೆ ಈಜು ಕಲಿಸಲು ಹೋದ ತಂದೆ ನೀರುಪಾಲು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ , ಸೆ. 05: ಇಲ್ಲಿಗೆ ಸಮೀಪದ ಗೋಳಿತೊಟ್ಟು ಗ್ರಾಮದ ನಾಯಿಲ ಎಂಬಲ್ಲಿ ಇಂಗು ಗುಂಡಿಯಲ್ಲಿ ಮಕ್ಕಳಿಗೆ ಈಜು ಕಲಿಸಲು ಹೋದ ತಂದೆಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕಳೆದ ದಿನ ಸಂಭವಿಸಿದೆ.    ಗೋಳಿತೊಟ್ಟು ಗ್ರಾಮದ ಹರೀಶ್ ಪೂಜಾರಿ (38) ಎಂಬವರು ಮೃತಪಟ್ಟವರು. ಇವರು ತನ್ನ ಮನೆ ಸಮೀಪದ ಗೇರು ನಿಗಮದ ಭೂಮಿಯಲ್ಲಿ ನಿರ್ಮಿಸಿದ್ದ ಇಂಗು ಗುಂಡಿಯಲ್ಲಿ ತನ್ನ ಮಕ್ಕಳಿಗೆ ಈಜು ಕಲಿಸಲೆಂದು ಹೋದವರು, ನೀರಿನಲ್ಲಿ ಮುಳುಗಿ ಅಸ್ವಸ್ಥರಾದರು. ಕೂಡಲೇ ಅವರನ್ನು […]

ಗೋಳಿತೊಟ್ಟು: ಮಕ್ಕಳಿಗೆ ಈಜು ಕಲಿಸಲು ಹೋದ ತಂದೆ ನೀರುಪಾಲು Read More »

ಕರಾವಳಿ, ಕರ್ನಾಟಕ

ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 04: ಮಹಿಳೆಯೋರ್ವರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಅಲ್ಲದೇ ಮದುವೆಯಾಗುವುದಾಗಿ ನಂಬಿಸಿ ಅವರಿಂದ ಹಣ ಪಡೆದು ವಂಚಿಸಿದ ವಿವಾಹಿತ, ಮಾಜಿ ಪುರಸಭಾ‌ ಸದಸ್ಯನನ್ನು ಸೆ.4ರ ಶುಕ್ರವಾರದಂದು ಬಂಧಿಸಲಾಗಿದೆ.     ಸಂದೀಪ ಪೂಜಾರಿ ಕೋಡಿ ಎನ್ನುವ ವ್ಯಕ್ತಿ ಪರಿಶಿಷ್ಟ ಪಂಗಡಕ್ಕೆ ಸೇರಿರುವ ಮಹಿಳೆಯೋರ್ವರ ಪತಿ ಅಂಚೆ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ಮೃತಪಟ್ಟಿದ್ದು ಅವರ ಉದ್ಯೋಗವನ್ನು ಅವರ ಪತ್ನಿಗೆ ಕೊಡಿಸುವುದಾಗಿ ಹಾಗೂ ಮದುವೆಯಾಗುತ್ತೇನೆಂದು ಭರವಸೆ ಕೊಟ್ಟು ಆ ಮಹಿಳೆಯಿಂದ ಹಣವನ್ನು ಪಡೆದಿದ್ದನು. ನಂತರ

ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ವಂಚನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಅಕ್ರಮ ಗೋ ಸಾಗಾಟ ಆರೋಪಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 04: ಮಾರುತಿ ಓಮಿನಿಯಲ್ಲಿ ಕೇರಳದ ಅಕ್ರಮವಾಗಿ ಕರು ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸಿದ ಪುತ್ತೂರು ಪೊಲೀಸರು, ವಾಹನದಲ್ಲಿ ಕರುವಿನ ಕೈ ಕಾಲುಗಳನ್ನು ಕಟ್ಟಿ ಹಾಕಿದ್ದ ಕರುವನ್ನು ರಕ್ಷಣೆ ಮಾಡಿದ್ದಾರೆ. ಪುತ್ತೂರು ತಾಲೂಕು ನರಿಮೊಗರು ಸಮೀಪದ ಪುರುಷರಕಟ್ಟೆಯಲ್ಲಿ ಘಟನೆ ನಡೆದಿದೆ.   ಪುತ್ತೂರು ನಗರ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ಕೇರಳ ನೋಂದಾಯಿತ ಓಮಿನಿ ಮಾರುತಿ ಕಾರನ್ನು ನರಿಮೊಗ್ರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಗುರುವಾರ

ಪುತ್ತೂರು: ಅಕ್ರಮ ಗೋ ಸಾಗಾಟ ಆರೋಪಿಗಳಿಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಂಜ: ದೇವಿಪ್ರಾಸಾದ್‌ ಚಿಕ್ಮುಳಿಯರಿಗೆ ಸಾಧನಾಶ್ರೀ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಪಂಜ, ಸೆ. 04: ಜೇಸಿಐ ಪಂಜ ಪಂಚಶ್ರೀಯ ಕಾರ್ಯದರ್ಶಿ, ಯುವ ಉದ್ಯಮಿ, ಗುತ್ತಿಗಾರಿನ ದೇವಿ ಸಿಟಿ ಕಾಂಪ್ಲೆಕ್ಸ್‌ ನ ಮಾಲಕ ಜೇಸೀ ಜೆಎಫ್‌ಎಂ ದೇವಿಪ್ರಾಸಾದ್‌ ಚಿಕ್ಮುಳಿವಯರಿಗೆ ಜೇಸಿಐ ಭಾರತದ ವಲಯ 15ರ ವಿಭಾಗದ ಅಭಿವೃದ್ಧಿ, ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ನೀಡುವ ಸಾಧನಾಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.   ವ್ಯವಹಾರ ಅಥವಾ ವೃತ್ತಿ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿ ಜೇಸೀ ಘಟಕದ ಓರ್ವ ಸದಸ್ಯರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಪಂಜ ಜೇಸಿಐ ಘಟಕದಿಂದ ಇವರು

ಪಂಜ: ದೇವಿಪ್ರಾಸಾದ್‌ ಚಿಕ್ಮುಳಿಯರಿಗೆ ಸಾಧನಾಶ್ರೀ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ

ಕಡಬ , ಪುತ್ತೂರಿನಲ್ಲಿ ಇಂದು 40 ಮಂದಿಗೆ ಕೊರೋನ ದೃಢ

(ನ್ಯೂಸ್ ಕಡಬ) newskadaba.com ಕಡಬ. ಸೆ.04:  ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಶುಕ್ರವಾರ 40 ಮಂದಿಗೆ ಕೊರೋನ ಪಾಸಿಟಿವ್ ದೃಢಪಟ್ಟಿವೆ. ಈ ತನಕ ಉಭಯ ತಾಲೂಕುಗಳಲ್ಲಿ ಒಟ್ಟು 847 ಪ್ರಕರಣಗಳು ವರದಿಯಾಗಿವೆ. ಕಡಬ ತಾಲೂಕಿನ ಬಲ್ಯ ನಿವಾಸಿ 52 ವರ್ಷದ ಪುರುಷ, ಶಿರಾಡಿ ನಿವಾಸಿ 50 ವರ್ಷದ ಪುರುಷ, 48 ವರ್ಷದ ಮಹಿಳೆ, ನೂಜಿಬಾಳ್ತಿಲದ 39 ವರ್ಷದ ಪುರುಷ, ಬಿಳಿನೆಲೆಯ 62 ವರ್ಷದ ಮಹಿಳೆ, ಸವಣೂರಿನ 41 ವರ್ಷದ ಪುರುಷ, ನೆಲ್ಯಾಡಿ ದೋಂತಿಲದ 52 ವರ್ಷದ ಮಹಿಳೆ,

ಕಡಬ , ಪುತ್ತೂರಿನಲ್ಲಿ ಇಂದು 40 ಮಂದಿಗೆ ಕೊರೋನ ದೃಢ Read More »

ಕರಾವಳಿ, ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ: ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 04: ಖ್ಯಾತ ಅಪ್ಪಟ ಸಿನಿಮಾ, ನಾಟಕ, ತುಳು ಹಾಸ್ಯಮಯ ಕಲಾವಿದರಾದ ಅರವಿಂದ ಬೋಳಾರ್‌ ರವರು ಕುಟುಂಬ ಸಮೇತ ಕಳೆದ ದಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.   ಬಳಿಕ ಸಂಪುಟ ನರಸಿಂಹ ಮಠದ ಶ್ರೀಗಳಾದ ಶ್ರೀ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿಯವರನ್ನು ಭೇಟಿ ನೀಡಿ ಆರ್ಶೀವಾದ ಪಡೆದರು. ಈ ವೇಳೆ ಅವರೊಂದಿಗೆ ಗಣೇಶ್‌ ಕಾಶಿಕಟ್ಟೆ ಉಪಸ್ಥಿತರಿದ್ದರು.      

ಕುಕ್ಕೆ ಸುಬ್ರಹ್ಮಣ್ಯ: ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ಭೇಟಿ Read More »

ಕರಾವಳಿ, ಕರ್ನಾಟಕ

ಕಡಬ: ವಲಸೆ ಹಕ್ಕಿ ಸಮೂಹಕ್ಕೆ ಪಟಾಕಿ ಎಸೆದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ. 04: ಕಡಬ ಪೊಲೀಸ್‌ ಠಾಣೆ ಸಮೀಪ ಮರದಲ್ಲಿ ಗುಂಪಾಗಿ ವಾಸವಿರುವ ವಲಸೆ ಹಕ್ಕಿ ಸಮೂಹಕ್ಕೆ ಇಂದು (ಗುರುವಾರ) ಕಿಡಿಗೇಡಿಗಳು ಪಟಾಕಿ ಎಸೆದು ವಿಕೃತಿ ಮೆರೆದಿದ್ದಾರೆ.     ಕಡಬದ ಮಾಡ ದೈವಸ್ಥಾನದ ಮುಂಭಾಗದಲ್ಲಿ ಈ ಮರವಿದ್ದು ಅಧಿಕ ಪಟಾಕಿಗಳನ್ನು ಎಸೆದ ಪರಿಣಾಮ ಗೂಡಿನಿಂದ ಹಕ್ಕಿಗಳು ಚೆಲ್ಲಾಪಿಲ್ಲಿಯಾಗಿ ಹಾರಾಡುವ ದೃಶ್ಯ ಕಂಡುಬಂದಿದೆ. ಲೋಕೋಪಯೋಗಿ ಇಲಾಖೆಯ ರಸ್ತೆ ಮಾರ್ಜಿನ್ ನಲ್ಲಿ ಈ ಮರವಿದ್ದು ಇದರ ಕೆಳಗೆ ಕೆಲ ವ್ಯಕ್ತಿಗಳು ಅನಧಿಕೃತ ಗೂಡಂಗಡಿಗಳನ್ನು ತೆರೆದು

ಕಡಬ: ವಲಸೆ ಹಕ್ಕಿ ಸಮೂಹಕ್ಕೆ ಪಟಾಕಿ ಎಸೆದ ಕಿಡಿಗೇಡಿಗಳು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

PSI ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ➤ ಹಣ ಕೇಳಿ ವಂಚಿಸಿದ ಕಿರಾತಕ

(ನ್ಯೂಸ್ ಕಡಬ) newskadaba.com ಕಾರವಾರ. ಸೆ.04:  ಟಿ ನಗರದ ಗ್ರಾಮೀಣ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ರೇವಣಸಿದ್ದಪ್ಪ ಅವರ ಹೆಸರಿನಲ್ಲಿ ಫೇಸ್‌ಬುಕ್‌ ನಕಲಿ ಖಾತೆಯೊಂದನ್ನು ತೆರೆದು ವಂಚಿಸಿದ ಬಗ್ಗೆ ಸಿ.ಇ.ಎನ್ ಅಪರಾಧ ಠಾಣೆಯಲ್ಲಿ ಗುರುವಾರ ದೂರು ದಾಖಲಾಗಿದೆ. ಅವರ ಫೇಸ್‌ಬುಕ್ ಖಾತೆಯಿಂದ ಭಾವಚಿತ್ರ ಡೌನ್‌ಲೋಡ್ ಮಾಡಿಕೊಂಡ ಅಪರಿಚಿತ ಆರೋಪಿ, ನಕಲಿ ಖಾತೆಯನ್ನು ತೆರೆದಿದ್ದಾನೆ.   ಬಳಿಕ ಅವರ ಸ್ನೇಹಿತರಿಗೆ ‘ಫ್ರೆಂಡ್ ರಿಕ್ವೆಸ್ಟ್’ ಕಳುಹಿಸಿದ್ದ. ಅದನ್ನು ಸ್ವೀಕರಿಸಿದವರೊಂದಿಗೆ ‘ಮೆಸೆಂಜರ್’ ಮೂಲಕ ಮಾತಿಗೆ ಇಳಿದು, ತುರ್ತಾಗಿ  10 ಸಾವಿರ ಅಗತ್ಯವಿದೆ. ಕಳುಹಿಸಿಕೊಡುವಂತೆ

PSI ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ➤ ಹಣ ಕೇಳಿ ವಂಚಿಸಿದ ಕಿರಾತಕ Read More »

ಕರಾವಳಿ, ಕ್ರೈಮ್ ನ್ಯೂಸ್

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ ➤ ಕಡಬ ತಾಲೂಕಿನ ನಾಲ್ವರು ಶಿಕ್ಷಕರು ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ. 04: 2020-21 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಕಡಬ ತಾಲೂಕಿನ ನಾಲ್ವರು ಮತ್ತು ಪುತ್ತೂರು ಮತ್ತು ಬಂಟ್ವಾಳ ತಾಲೂಕಿನ ಓರ್ವ ಶಿಕ್ಷಕ ಆಯ್ಕೆಗೊಂಡಿದ್ದಾರೆ. ಕಡಬ ತಾಲೂಕಿನಿಂದ ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಕುಂಡಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಪಿ.ಎಸ್.ನಾರಾಯಣ ಮತ್ತು ಬಾನಡ್ಕ ಕಿ.ಪ್ರಾ.ಶಾಲೆಯ ಶಿಕ್ಷಕಿ ಶ್ರೀಮತಿ ಜಾನಕಿ ಪ್ರೌಢಶಾಲಾ ವಿಭಾಗದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಪ್ರೌಢಶಾಲೆಯ ವೆಂಕಟೇಶ್‌ ದಾಮ್ಲೆ ಮತ್ತು ಕಡಬ

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ ➤ ಕಡಬ ತಾಲೂಕಿನ ನಾಲ್ವರು ಶಿಕ್ಷಕರು ಆಯ್ಕೆ Read More »

ಕರಾವಳಿ, ಕರ್ನಾಟಕ

ಮಂಗಳೂರು :ಹೃದಯಾಘಾತದಿಂದ ಪೊಲೀಸ್ ಸಿಬ್ಬಂದಿ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.04:  ಮಂಗಳೂರು ಬಂದರು ಠಾಣೆಯ ಪೊಲೀಸ್ ಸಿಬ್ಬಂದಿ ದಿನೇಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿನೇಶ್(44) ಮೃತಪಟ್ಟ ಪೊಲೀಸ್ ಸಿಬ್ಬಂದಿ. ದಿನೇಶ್ ರವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಗುರುವಾರ ಬೆಳಗ್ಗೆ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ಧಾರೆ. ಎಂದು ಮೂಲಗಳು ತಿಳಿಸಿವೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ವಲಸೆ ಕರ್ತವ್ಯದಲ್ಲಿ ಕೆಲಸ ಮಾಡುತ್ತಿದ್ದಾಗ ಉತ್ತಮ ಸೇವಾ ದಾಖಲೆ ಹೊಂದಿದ್ದರು.

ಮಂಗಳೂರು :ಹೃದಯಾಘಾತದಿಂದ ಪೊಲೀಸ್ ಸಿಬ್ಬಂದಿ ನಿಧನ Read More »

ಕರಾವಳಿ
Scroll to Top