Kadaba News

ಕಾಸರಗೋಡು: ಅಪಾರ್ಟ್‌ಮೆಂಟ್‌ನಲ್ಲಿ ಬಚ್ಚಿಟ್ಟ ಗಾಂಜಾ ವಶಕ್ಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 04: ಅಪಾರ್ಟ್ ಮೆಂಟ್‌‌ವೊಂದರಲ್ಲಿ ಬಚ್ಚಿಡಲಾಗಿದ್ದ ಸುಮಾರು 18. 5 ಕಿಲೋ ಗಾಂಜಾವನ್ನು ಕುಂಬಳೆ ಅಬಕಾರಿ ದಳದ ಸಿಬಂದಿಗಳು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಲಾಗಿದೆ.   ಆರೋಪಿ ಸಯ್ಯಿದ್ ಜಾಬಿರ್ (32) ಎಂಬಾತನನ್ನು ಬಂಧಿಸಿದ್ದಾರೆ. ವರ್ಕಾಡಿ ಮೊರತ್ತಣೆಯ ಮನೆಯೊಂದರಲ್ಲಿ ಗಾಂಜಾ ಬಚ್ಚಿಡಲಾಗಿತ್ತು. ಅಬಕಾರಿ ದಳಕ್ಕೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದೆ.  

ಕಾಸರಗೋಡು: ಅಪಾರ್ಟ್‌ಮೆಂಟ್‌ನಲ್ಲಿ ಬಚ್ಚಿಟ್ಟ ಗಾಂಜಾ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು-ಮಂಗಳೂರು ರೈಲು ಸೇವೆ ಮತ್ತೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 04: ಕರಾವಳಿ ವಿಭಾಗದಲ್ಲಿ ಮೂರು ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೆ ವಿಭಾಗಕ್ಕೆ ರೈಲ್ವೆ ಮಂಡಳಿ ಅನುಮತಿ ನೀಡಿದ್ದು, ಇದರಲ್ಲಿ ಕಾರವಾರ-ಯಶವಂತ ಪುರ-ಕಾರವಾರ ರೈಲು ಕಾರ್ಯಾರಂಭಿಸಲಿದೆ.   ಸೆಪ್ಟೆಂಬರ್‌ 4ರ ಶುಕ್ರವಾರ ಸಂಜೆ 6.45ಕ್ಕೆ ನಂ.06585 ಯಶವಂತಪುರ ಹಾಗೂ ಕಾರವಾರ ನಡುವೆ ಕಾರ್ಯಾರಂಭಿಸಲಿದೆ. ಸೆಪ್ಟೆಂಬರ್‌ 5ರಂದು ಸಂಜೆ 6 ಗಂಟೆಗೆ ನಂ. 6595 ರೈಲು ಕಾರವಾರದಿಂದ ಹೊರಡಲಿದೆ. ಇನ್ನು ನಂ.16595/16596 ರೈಲುಗಳದ್ದೇ ವೇಳಾಪಟ್ಟಿ ಇವುಗಳಿಗೆ ಅನ್ವಯವಾಗಲಿದೆ. ಬೆಂಗಳೂರು-ಮಂಗಳೂರಿನ (06515) ನಡುವೆ

ಬೆಂಗಳೂರು-ಮಂಗಳೂರು ರೈಲು ಸೇವೆ ಮತ್ತೆ ಆರಂಭ Read More »

ಕರಾವಳಿ, ಕರ್ನಾಟಕ

ಪ್ರೇಮಿಯ ಜೊತೆ ಅಕ್ಕ ಪರಾರಿ ➤ ಆಘಾತದಿಂದ ತಂಗಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ. ಸೆ.04:   ಕಾರ್ಕಳದ ಮಾಳ ಗ್ರಾಮದಲ್ಲಿ ಅಕ್ಕ ಪ್ರೀತಿಸಿದ ಹುಡುಗನೊಂದಿಗೆ ಪರಾರಿಯಾಗಿದ್ದರಿಂದ ಆಘಾತಕ್ಕೊಳಗಾದ ತಂಗಿ ಮೃತಪಟ್ಟಿದ್ದಾಳೆ. ಯುವತಿ ಆಹಾರ ಉತ್ಪಾದನಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎರಡು ದಿನಗಳಿಂದ ಆಕೆ ನಾಪತ್ತೆಯಾಗಿದ್ದು, ಪೊಲೀಸರಿಗೆ ಪೋಷಕರು ದೂರು ನೀಡಿದ್ದಾರೆ. ಕಳೆದ ದಿನ ತಂಗಿಯ ಮೊಬೈಲ್ ಗೆ ಕರೆ ಮಾಡಿದ ಅಕ್ಕ ಮನೆಯಲ್ಲಿ ನೋಡಿದ ಹುಡುಗನೊಂದಿಗೆ ಮದುವೆಯಾಗಲು ಇಷ್ಟವಿಲ್ಲದ ಕಾರಣ ಪ್ರೀತಿಸಿದ ಸಹೋದ್ಯೋಗಿ ಯುವಕನೊಂದಿಗೆ ಹೋಗಿದ್ದೇನೆ ಎಂದು ತಿಳಿಸಿದ್ದಾಳೆ. ಅಲ್ಲದೆ ಹುಡುಕುವ ಪ್ರಯತ್ನ ಮಾಡದಂತೆ ತಂಗಿಗೆ ತಿಳಿಸಿದ್ದಾಳೆ.

ಪ್ರೇಮಿಯ ಜೊತೆ ಅಕ್ಕ ಪರಾರಿ ➤ ಆಘಾತದಿಂದ ತಂಗಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಕೃತ ಮನಸ್ಸಿನ ಪುಸ್ತಕ ಮಾರಾಟಗಾರ ➤ 10ರ ಬಾಲೆ ಮೇಲೆ ಬಿತ್ತು ಆತನ ಕಣ್ಣು ..!

(ನ್ಯೂಸ್ ಕಡಬ) newskadaba.com ಬರೇಲಿ , ಸೆ.04:  ಸ್ಥಳೀಯ ಪುಸ್ತಕ ಮಾರಾಟಗಾರನೊಬ್ಬ ಪುಸ್ತಕ ಖರೀದಿಸಲು ಬಂದ 10 ವರ್ಷದ ಬಾಲಕಿಯ ಮೇಲೆ ದುಷ್ಕೃತ್ಯ ಎಸಗಲು ಯತ್ನಿಸಿದ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.   ಬಾಲಕಿ ನೋಟ್ ಬುಕ್ ಖರೀದಿಸಲು ಆರೋಪಿಯ ಅಂಗಡಿಗೆ ಹೋದಾಗ ಆತ ಆಕೆಯ ಮಾನಭಂಗ ಮಾಡಲು ಪ್ರಯತ್ನಿಸಿದ್ದಾನೆ. ಆಗ ಬಾಲಕಿ ಆತನಿಂದ ತಪ್ಪಿಸಿಕೊಂಡು ಬಂದು ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಬಾಲಕಿಯ ಪೋಷಕರು ಕಲಾನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ

ವಿಕೃತ ಮನಸ್ಸಿನ ಪುಸ್ತಕ ಮಾರಾಟಗಾರ ➤ 10ರ ಬಾಲೆ ಮೇಲೆ ಬಿತ್ತು ಆತನ ಕಣ್ಣು ..! Read More »

ಕ್ರೈಮ್ ನ್ಯೂಸ್

ಸಿಸಿಬಿ ಯಿಂದ ನಟಿ ರಾಗಿಣಿ ದ್ವಿವೇದಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು. ಸೆ.04:  ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಅವರನ್ನು ಸಿಸಿಬಿ ವಶಕ್ಕೆ ಪಡೆದುಕೊಂಡಿದೆ. ಇಂದು ಬೆಳಗ್ಗೆ ಯಲಹಂಕದಲ್ಲಿರುವ ರಾಗಿಣಿ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಪ್ರಶ್ನೋತ್ತರದ ಬಳಿಕ ಸಿಸಿಬಿ ಅಧಿಕಾರಿಗಳು ರಾಗಿಣಿ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.   ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಿನ್‌ಎ ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ ಹಾಜರಾಗುವಂತೆ

ಸಿಸಿಬಿ ಯಿಂದ ನಟಿ ರಾಗಿಣಿ ದ್ವಿವೇದಿ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರ್ಕಳ : ವಿವಾಹ ನಿಶ್ಚಿತಗೊಂಡಿದ್ದ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಾರ್ಕಳ. ಸೆ.03:  ಮಾಳದ 20 ಹರೆಯದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಮಾಳ ಗ್ರಾಮದ ಯುವತಿ ಸ್ಥಳೀಯ ಸಿಹಿ ತಿಂಡಿ ಕಾರ್ಖಾನೆಯೊಂದರಲ್ಲಿ‌ ಕೆಲಸ ಮಾಡುತ್ತಿದಳು. ಇತ್ತೀಚೆಗೆ ಆಕೆಗೆ ಯುವಕನೋರ್ವನ ಜತೆ ಮದುವೆ ನಿಗದಿಯಾಗಿತ್ತು ಎನ್ನಲಾಗಿದೆ.     ಆದರೆ ಆಕೆ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿದ್ದು ಆತನ ಜೊತೆಯೇ ತೆರಳಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಯುವತಿಯ ಮನೆಯವರು ಕೂಡ ಅದೇ ಸಂಶಯ ವ್ಯಕ್ತಪಡಿಸಿದ್ದಾರೆ. ಗೊತ್ತು ಪಡಿಸಿದ ಯುವಕನ ಜೊತೆ ವಿವಾಹಕ್ಕೆ ಇಷ್ಟವಿಲ್ಲದೆ

ಕಾರ್ಕಳ : ವಿವಾಹ ನಿಶ್ಚಿತಗೊಂಡಿದ್ದ ಯುವತಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಗ ಮೃತಪಟ್ಟು ಅಂತ್ಯಸಂಸ್ಕಾರಕ್ಕೂ ಮುನ್ನವೇ ಅವರ ತಾಯಿಯೂ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.03: ನಡ ಗ್ರಾಮದ ಸುರ್ಯ ಕಾನಂಗಮನೆ ನಿವಾಸಿ, ಎಂಡೋಸಲ್ಫಾನ್ ಪೀಡಿತರಾಗಿ .ಬುದ್ಧಿಮಾಂದ್ಯರಾಗಿದ್ದ ವ್ಯಕ್ತಿ ಮೃತಪಟ್ಟು ಅವರ ಅಂತ್ಯಸಂಸ್ಕಾರಕ್ಕೂ ಮುನ್ನವೇ ಅವರ ವೃದ್ಧ ತಾಯಿಯೂ ಮೃತಪಟ್ಟಿದ್ದಾರೆ.   ಮಂಗಳವಾರ ಸಂಜೆ 7.30 ರ ವೇಳೆಗೆ ಕೃಷ್ಣ ಭಟ್ (72) ಮೃತಪಟ್ಟಿದ್ದು, ಅವರ ತಾಯಿ ಲಕ್ಷ್ಮೀ ಅಮ್ಮ (92) ಬುಧವಾರ ಬೆಳಗ್ಗಿನ ಜಾವ 4 ಗಂಟೆಗೆ ನಿಧನರಾದರು. ಕೃಷ್ಣ ಭಟ್ ಎಂಡೋಸಲ್ಫಾನ್ ಪೀಡಿತರು ಮತ್ತು ಬುದ್ಧಿಮಾಂದ್ಯರಾಗಿದ್ದರು. ಅವಿವಾಹಿತರಾಗಿದ್ದ ಅವರನ್ನು ಸಹೋದರರೇ ಸಲಹುತ್ತಿದ್ದರು. ಮಂಗಳವಾರ ಅವರಿಗೆ ಅನಾರೋಗ್ಯ

ಮಗ ಮೃತಪಟ್ಟು ಅಂತ್ಯಸಂಸ್ಕಾರಕ್ಕೂ ಮುನ್ನವೇ ಅವರ ತಾಯಿಯೂ ಮೃತ್ಯು Read More »

ಕರಾವಳಿ, ಕರ್ನಾಟಕ

ಮಂಗಳೂರು ವೈಭವದ ದಸರಾ ಆಚರಣೆಗೆ ಅಡ್ಡಿಯಾಗುತ್ತಾ ಕೊರೋನಾ..?

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03: ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಾಸ್ಥಾನದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಗಮನದಲಿಟ್ಟುಕೊಂಡು ಪ್ರತಿ ವರ್ಷದಂತೆ ದಸರಾವನ್ನು ಆಚರಿಸಲಿದ್ದು, ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಹೇಳಿದ್ದಾರೆ.   ಈ ಬಗ್ಗೆ ದಾಯ್ಡಿವಲ್ಡ್ ಜೊತೆ ಮಾತನಾಡಿದ ಅವರು, ಪ್ರತಿ ವರ್ಷದಂತೆ ವೈಭವದ ದಸರಾ ಆಚರಣೆಗೆ ಜನರ ಬೇಡಿಕೆ ಇದ್ದು, ಕೊರೊನಾ ಸೃಷ್ಟಿಸಿದ ಆರ್ಥಿಕ ಸಂಕಷ್ಟ, ಆತಂಕದಿಂದ ಹೊರಬರಲು ಚಿಂತನೆ ನಡೆಸುತ್ತಿದ್ದು, ಈ ಬಾರಿಯೂ ಪ್ರತಿವರ್ಷದಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಆದರೆ,

ಮಂಗಳೂರು ವೈಭವದ ದಸರಾ ಆಚರಣೆಗೆ ಅಡ್ಡಿಯಾಗುತ್ತಾ ಕೊರೋನಾ..? Read More »

ಕರಾವಳಿ, ಕರ್ನಾಟಕ

ಸುಳ್ಯ: ಕ್ಯಾಂಪಸ್‌ ಫ್ರಂಟ್‌ ವತಿಯಿಂದ ಡ್ರಗ್ಸ್‌ ಕಡಿವಾಣಕ್ಕೆ ಒತ್ತಾಯ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 03: ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕಾಲೇಜು ವಿದ್ಯಾರ್ಥಿಗಳು ಯುವಕರನ್ನು ಗುರಿಯಾಗಿಸಿಕೊಂಡು ಮಾದಕ ಜಾಲಕ್ಕೆ ಬಲಿಯಾಗುತ್ತಿದ್ದಾರೆ. ಕೊಲೆ,ಸುಲಿಗೆ,ಅತ್ಯಾಚಾರದಂತಹ ಅಪರಾಧ ಚಟುವಟಿಕೆಗಳ ಹಿಂದೆ ಡ್ರಗ್ಸ್‌ ಜಾಲವು ಕಂಡು ಬರುತ್ತಿದೆ. ‌     ಈ ಜಾಲವನ್ನು ಸಂಪೂರ್ಣವಾಗಿ ಮಟ್ಟ ಹಾಕಲು ಕ್ಯಾಂಪಸ್‌ ಫ್ರಂಟ್‌ ಸುಳ್ಯ ವೃತ್ತ ನಿರೀಕ್ಷಕರಿಗೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಕ್ಯಾಂಪಸ್‌ ಫ್ರಂಟ್‌ ಪುತ್ತೂರು ಜಿಲ್ಲಾ ಕಾರ್ಯದರ್ಶಿ ಅನ್ಸಾರ್‌ ಬೆಳ್ಳಾರೆ, ಸುಳ್ಯ

ಸುಳ್ಯ: ಕ್ಯಾಂಪಸ್‌ ಫ್ರಂಟ್‌ ವತಿಯಿಂದ ಡ್ರಗ್ಸ್‌ ಕಡಿವಾಣಕ್ಕೆ ಒತ್ತಾಯ Read More »

ಕರಾವಳಿ, ಕರ್ನಾಟಕ

ಇಚ್ಲಂಪಾಡಿ: ಕಿರು ಸೇತುವೆ ಕಾಮಗಾರಿ ಪರಿಶೀಲನೆ

(ನ್ಯೂಸ್ ಕಡಬ) newskadaba.com ಇಚ್ಲಂಪಾಡಿ, ಸೆ. 03: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್‌ ರತ್ನಾಕರ ಹೆಗ್ಡೆ ಅವರು ಇಂದು ಇಚ್ಲಂಪಾಡಿ ಗ್ರಾಮಕ್ಕೆ ಭೇಟಿ ನೀಡಿದರು. ಕೌಕ್ರಾಡಿ ಗ್ರಾಮದ ಇಚ್ಲಂಪಾಡಿ ಹೊಸಮಠ ರಸ್ತೆಯಲ್ಲಿ ಬರುವ ಮುಡಿಪು ಕಿರು ಸೇತುವೆ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.     ಕೌಕ್ರಾಡಿ ತಾ.ಪಂ. ಸದಸ್ಯೆ ಕೆ.ಟಿ ವಲ್ಸಮ್ಮ ಮಾತನಾಡಿ ಇಚ್ಲಂಪಾಡಿ ಗಂಗಾಧರೇಶ್ವರ ದೇವಸ್ಥಾನಕ್ಕೆ ಗುಂಡ್ಯ ಹೊಳೆಯಿಂದ ಸಂಪರ್ಕಕ್ಕೆ ಮಧ್ಯದಲ್ಲಿ ನದಿ ಹರಿಯುತ್ತಿರುವುದರಿಂದ ಸಮಸ್ಯೆಯಾಗುತ್ತಿದ್ದು ಕರಾವಳಿ ಪ್ರಾಧಿಕಾರದಿಂದ ಇಚ್ಲಂಪಾಡಿ- ಹೊಸಮಠ ರಸ್ತೆಯಲ್ಲಿ ಇಚ್ಲಂಪಾಡಿಯಲ್ಲಿ

ಇಚ್ಲಂಪಾಡಿ: ಕಿರು ಸೇತುವೆ ಕಾಮಗಾರಿ ಪರಿಶೀಲನೆ Read More »

ಕರಾವಳಿ, ಕರ್ನಾಟಕ
Scroll to Top