Kadaba News

ಬೈಕ್ ಮೇಲಿದ್ದ ಯುವಕನ ರುಂಡ ಕತ್ತರಿಸಿ ಕಗ್ಗೊಲೆ

(ನ್ಯೂಸ್ ಕಡಬ) newskadaba.com ಕಲಬುರ್ಗಿ. ಆ,31:  ಬೈಕ್ ಮೇಲೆ ಕೂತಿದ್ದ ಯುವಕನನ್ನು ಹಿಂದಿನಿಂದ ಬಂದು ರುಂಡ ಕತ್ತರಿಸಿ ದುಷ್ಕರ್ಮಿಗಳು ಕಗ್ಗೊಲೆ ಮಾಡುವ ಮೂಲಕ ಕಲಬುರ್ಗಿ ಅಫಜಲಪುರ ತಾಲೂಕಿನ ಸಂಗಾಪೂರ ಗ್ರಾಮದಲ್ಲಿ ನಡೆದಿದೆ. ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದಿದ್ದು, ಬಾಬು ಮಲ್ಲೇಶಪ್ಪ ಕೋಬಾಳ್ (32) ಹತ್ಯೆಯಾದ ಯುವಕ.     ಅದೇ ಗ್ರಾಮದ ಪ್ರಭು ಕಾಂಬಳೆ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ. ಬೈಕ್ ಮೇಲೆ ಕುಳಿತಿದ್ದಾಗ ಪ್ರಭು ಕಾಂಬಳೆ ಕೊಡಲಿಯಿಂದ ಬಾಬು ಕೋಬಾಳನ ರುಂಡ ಕಡಿದಿದ್ದಾನೆ ಎಂದು ಆರೋಪಿಸಲಾಗಿದೆ. […]

ಬೈಕ್ ಮೇಲಿದ್ದ ಯುವಕನ ರುಂಡ ಕತ್ತರಿಸಿ ಕಗ್ಗೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಕೊರೊನಾ ಸೋಂಕಿಗೆ ಮೃತ್ಯು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ,. ಆ,31:  ದೇಶದಲ್ಲಿ ಕೊರೊನಾ ವೈರಸ್ ಅಬ್ಬರ ಮುಂದುವರೆದಿದ್ದು, ದೇಶದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ (103) ಅವರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಎಸ್.ಪದ್ಮಾವತಿ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.     ಹನ್ನೊಂದು ದಿನಗಳ ಹಿಂದೆ ಕೋವಿಡ್-19 ಸೋಂಕು ಕಂಡುಬಂದ ಇವರನ್ನು ನ್ಯಾಷನಲ್ ಹಾರ್ಟ್ ಇನ್‌ಸ್ಟಿಟ್ಯೂಟ್ (ಎನ್‌ಎಚ್‌ಐ)ಗೆ ದಾಖಲಿಸಲಾಗಿತ್ತು. 1981ರಲ್ಲಿ ಈ ಸಂಸ್ಥೆಯನ್ನು

ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಕೊರೊನಾ ಸೋಂಕಿಗೆ ಮೃತ್ಯು Read More »

ಕರಾವಳಿ

ಕುಕ್ಕೆ ಶ್ರಿ ಸುಬ್ರಹ್ಮಣ್ಯ ದೇವಸ್ಥಾನದ ಜಾಗವನ್ನು ಲೀಸ್ ಗೆ ಕೊಡದಂತೆ ಮನವಿ

(ನ್ಯೂಸ್ ಕಡಬ) newskadaba.com ಕುಕ್ಕೆ ಶ್ರೀ ಸುಬ್ರಹ್ಮಣ್ಯ. ಆ,31:  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದ ಯಾವುದೇ ಭೂಮಿಯನ್ನು ಸಂಸ್ಥೆಗೆ ಅಥವಾ ಖಾಸಗಿಯವರಿಗೆ ಲೀಸ್ ಗೆ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿಮನವಿ ಸಲ್ಲಿಸಲಾಗಿದೆ.   ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹೇಶ್ ಕುಮಾರ್ ಕರಿಕಳ್ಳ ವಿರೋಧ ವ್ಯಕ್ತಪಡಿಸಿ ಇಂದು ದೇವಳದ ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ ಎಂ. ಎಚ್ ಗೆ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಶ್ರೀನಾಥ್ ಭಟ್ ಪ್ರಶಾಂತ್ ಮಾಣಿಲ. ಗುರು ಪ್ರಸಾದ್ ಉಪಸ್ಥಿತರಿದ್ದರು.  

ಕುಕ್ಕೆ ಶ್ರಿ ಸುಬ್ರಹ್ಮಣ್ಯ ದೇವಸ್ಥಾನದ ಜಾಗವನ್ನು ಲೀಸ್ ಗೆ ಕೊಡದಂತೆ ಮನವಿ Read More »

ಕರ್ನಾಟಕ

ಕಡಬ ಮತ್ತು ಪುತ್ತೂರು ಉಭಯ ತಾಲೂಕಿನಲ್ಲಿ ಇಂದು 21 ಕೊರೋನಾ ಪಾಸಿಟಿವ್‌ ದೃಢ

(ನ್ಯೂಸ್ ಕಡಬ) newskadaba.com ಕಡಬ , ಆ. 31: ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು ಒಟ್ಟು 21 ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದೆ. ಕಡಬ ತಾಲೂಕಿನ ನೆಲ್ಯಾಡಿ ಗ್ರಾಮದ 49 ವರ್ಷದ ಮಹಿಳೆಯಲ್ಲಿ ಕೊರೋನಾ ದೃಡಪಟ್ಟಿದೆ. ಪುತ್ತೂರು ತಾಲೂಕಿನ ಕಬಕ ಗ್ರಾಮದ 49 ವರ್ಷದ ಪುರುಷ, ಕೆಯ್ಯೂರು ಗ್ರಾಮದ 40 ವರ್ಷದ ಪುರುಷ, 34 ವರ್ಷದ ಮಹಿಳೆ, 52ವರ್ಷದ ಮಹಿಳೆ, 16 ವರ್ಷದ ಬಾಲಾಕಿ, 25 ವರ್ಷದ ಮಹಿಳೆ, 50 ವರ್ಷದ ಮಹಿಳೆ, 14 ವರ್ಷದ

ಕಡಬ ಮತ್ತು ಪುತ್ತೂರು ಉಭಯ ತಾಲೂಕಿನಲ್ಲಿ ಇಂದು 21 ಕೊರೋನಾ ಪಾಸಿಟಿವ್‌ ದೃಢ Read More »

ಕರಾವಳಿ, ಕರ್ನಾಟಕ

ರಾಜ್ಯಕ್ಕೆ ವಾಪಸ್ ಆಗುತ್ತಿದ್ದ ಸಂಶೋಧನಾ ವಿದ್ಯಾರ್ಥಿನಿ ವಿಮಾನ ನಿಲ್ದಾಣದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕೇರಳ . ಆ,31:  ವಿದೇಶದಿಂದ ತವರು ರಾಜ್ಯಕ್ಕೆ ವಾಪಸ್ ಆಗುತ್ತಿದ್ದ ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ವಿಮಾನ ನಿಲ್ದಾಣದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಕೇರಳದ ಇಡುಕ್ಕಿ ಜಿಲ್ಲೆಯ ಚೆರುಥೋನಿ ಮೂಲದ 28 ವರ್ಷದ ಲೀಜಾ ಜೋಸ್ ಮೃತ ವಿದ್ಯಾರ್ಥಿನಿ. ಲೀಸಾ ಕಳೆದ ನಾಲ್ಕು ವರ್ಷಗಳಿಂದ ದಕ್ಷಿಣ ಕೊರಿಯದ ಪುಸಾನ್ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿನಿಯಾಗಿದ್ದರು.   ಕೇರಳಕ್ಕೆ ವಾಪಸ್ ಬರಲೆಂದು ಲೀಸಾ, ಇಂಚಿಯಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ. ವಿಮಾನ ನಿಲ್ದಾಣಕ್ಕೆ ಬಂದ ಲೀಸಾ ಏಕಾಏಕಿ ಕುಸಿದು

ರಾಜ್ಯಕ್ಕೆ ವಾಪಸ್ ಆಗುತ್ತಿದ್ದ ಸಂಶೋಧನಾ ವಿದ್ಯಾರ್ಥಿನಿ ವಿಮಾನ ನಿಲ್ದಾಣದಲ್ಲೇ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಮುಲ್ಕಿ : ಮಾನಸಿಕ ಖಿನ್ನತೆ, ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮುಲ್ಕಿ. ಆ,31: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿ ಸಮೀಪದ ಕೊಲಕಾಡಿ ಎಂಬಲ್ಲಿ ನಡೆದಿದೆ. ಕೊಲಕಾಡಿ ನಿವಾಸಿ ರತ್ನಾಕರ್ ಆಚಾರ್ಯ ಎಂಬುವವರ ಪತ್ನಿ ಶಶಿ ಆರ್ ಆಚಾರ್ಯ (55) ಎಂಬುವವರು ಮೃತ ಮಹಿಳೆಯಾಗಿದ್ದಾರೆ.       ಭಾನುವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಮಹಿಳೆಯನ್ನು ಸ್ಥಳೀಯರು ಹುಡುಕಾಟ ನಡೆಸಿದಾಗ ಅವರ ಮೃತ ದೇಹ ಬಾವಿಯಲ್ಲಿ ಪತ್ತೆಯಾಗಿದೆ. ಆಪದ್ಬಾಂಧವ ಆಸಿಫ್ ನೇತೃತ್ವದ ಕಾರ್ನಾಡು ಮೈಮುನಾ ಫೌಂಡೇಶನ್ ಸಿಬ್ಬಂದಿ ಮುಸ್ತಕ್

ಮುಲ್ಕಿ : ಮಾನಸಿಕ ಖಿನ್ನತೆ, ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಸುಧಾರಣೆ ಕಾಣದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,31:  ಶ್ವಾಸಕೋಶದ ಸೋಂಕಿನಿಂದ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಅವರ ಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ ಎಂದು ಸೇನಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.   84 ವರ್ಷದ ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಇತ್ತೀಚೆಗೆ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಆಪರೇಷನ್ ಮಾಡಲಾಗಿತ್ತು. ಪ್ರಣಬ್ ಮುಖರ್ಜಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದಾರೆ. ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದೆ. ನಾವು

ಸುಧಾರಣೆ ಕಾಣದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ Read More »

ರಾಷ್ಟ್ರೀಯ ನ್ಯೂಸ್

ಗೃಹ ಸಚಿವ ಅಮಿತ್ ಶಾ ಆಸ್ಪತ್ರೆಯಿಂದ ಡಿಸ್ಚಾರ್ಜ್

(ನ್ಯೂಸ್ ಕಡಬ) newskadaba.com ನವದೆಹಲಿ. ಆ,31: ಕೇಂದ್ರ ಗೃಹ ಸಚಿವ ಅಮಿತ್ ಶಾ ದೆಹಲಿಯ ಏಮ್ಸ್ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕಿನಿಂದ ಗುಣಮುಖರಾದ ಬಳಿಕವೂ ಪೋಸ್ಟ್ ಕೊವಿಡ್ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.   ಆಗಸ್ಟ್ 2 ರಂದು ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಚಿಕಿತ್ಸೆಗಾಗಿ ಅವರನ್ನು ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಅಮಿತ್ ಶಾ ಸಂಪೂರ್ಣವಾಗಿ ಗುಣಮುಖರಾಗಿದ್ದರು. ಬೆಳಗ್ಗೆ 7 ಗಂಟೆಗೆ ಡಿಸ್ಚಾರ್ಜ್ ಆಗಿದ್ದಾರೆ.

ಗೃಹ ಸಚಿವ ಅಮಿತ್ ಶಾ ಆಸ್ಪತ್ರೆಯಿಂದ ಡಿಸ್ಚಾರ್ಜ್ Read More »

ರಾಷ್ಟ್ರೀಯ ನ್ಯೂಸ್

ಮೂರ್ಖತನದ ಪರಮಾವಧಿ: ಹುಚ್ಚುನಾಯಿ ಭೀತಿಗೆ ಮನೆಮುಂಭಾಗದ ತಂತಿಗೆ ವಿದ್ಯುತ್ ಹಾಯಿಸಿ, ತಾನೇ ತುಳಿದು ಸಾವನ್ನಪ್ಪಿದ !

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಆ. 31: ಹುಚ್ಚು ನಾಯಿ ಭೀತಿಯಿಂದ ಮನೆ ಮುಂಭಾಗದ ಗೇಟ್‌ಗೆ ಅಡ್ಡಲಾಗಿ ತಂತಿಗೆ ವಿದ್ಯುತ್ ಹರಿಬಿಟ್ಟ ವ್ಯಕ್ತಿ ಅದೇ ತಂತಿಯನ್ನು ತುಳಿದು ಮೃತಪಟ್ಟಿರುವ ಘಟನೆ ಸೊರಬ ಪಟ್ಟಣದ ಕಾನಕೇರಿಯಲ್ಲಿ ಕಳೆದ ರಾತ್ರಿ ನಡೆದಿದೆ. ನಿಂಗಪ್ಪ ಪುಟ್ಟಪ್ಪ (58) ಮೃತ ದುರ್ಧೈವಿ. ಕೆಲ ದಿನಗಳಿಂದ ಹುಚ್ಚು ನಾಯಿಯೊಂದು ಮನೆಯ ಅಂಗಳ ಮಾತ್ರವಲ್ಲದೇ ಮನೆಯನ್ನು ಪ್ರವೇಶ ಮಾಡಿತ್ತು. ಇದರಿಂದ ಕುಟುಂಬಸ್ಥರು ಭಯಭೀತರಾಗಿದ್ದರು. ಮನೆಯ ಅಂಗಳದ ಗೇಟ್‌ನ ಮುಂಭಾಗ ತಂತಿ ಕಟ್ಟಿ ವಿದ್ಯುತ್ ಹಾಯಿಸಿದ್ದರು. ರಾತ್ರಿ

ಮೂರ್ಖತನದ ಪರಮಾವಧಿ: ಹುಚ್ಚುನಾಯಿ ಭೀತಿಗೆ ಮನೆಮುಂಭಾಗದ ತಂತಿಗೆ ವಿದ್ಯುತ್ ಹಾಯಿಸಿ, ತಾನೇ ತುಳಿದು ಸಾವನ್ನಪ್ಪಿದ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಲಕ್ಷ್ಮೀ’ ಆನೆ ಮರಿಯ ನಾಮಕರಣ ➤ ಮುದ್ದಾಗಿದೆ ಮರಿ ಆನೆಯ ಹೆಸರು…!?

(ನ್ಯೂಸ್ ಕಡಬ) newskadaba.com  ಧರ್ಮಸ್ಥಳ. ಆ,31:  ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ್ಮೀ ಎಂಬ ಹೆಸರಿನ ಆನೆಯು ಜುಲಾಯಿ 1 ರಂದು ಮುದ್ದಾದ ಹೆಣ್ಣು ಮರಿಗೆ ಜನ್ಮ ನೀಡಿತ್ತು.   ಈ ಲಕ್ಷ್ಮೀ ಆನೆಯ ಮರಿಯ ನಾಮಕರಣ ಕಾರ್ಯಕ್ರಮ ಇಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ತುಲಾ ಲಗ್ನದ ಶುಭಮೂರ್ತದಲ್ಲಿ ನಡೆಯಿತು. ಆನೆ ಮರಿ ‘ಶಿವಾನಿ’ ಇಂದು ಅಲಂಕಾರಗೊಂಡು ಕಂಗೊಳಿಸುತ್ತಿದ್ದಳು.  ಮುದ್ದಾದ ಲಕ್ಷ್ಮೀ ಆನೆಯ, ಮರಿಗೆ “ಶಿವಾನಿ” ಎಂದು ನಾಮಕರಣ ಮಾಡಲಾಯಿತು. ಆನೆ ಮರಿ ‘ಶಿವಾನಿ’ ಇಂದು ಅಲಂಕಾರಗೊಂಡು ಕಂಗೊಳಿಸುತ್ತಿದ್ದಳು. 

‘ಲಕ್ಷ್ಮೀ’ ಆನೆ ಮರಿಯ ನಾಮಕರಣ ➤ ಮುದ್ದಾಗಿದೆ ಮರಿ ಆನೆಯ ಹೆಸರು…!? Read More »

ಕರಾವಳಿ, ಕರ್ನಾಟಕ
Scroll to Top