Kadaba News

ತಡರಾತ್ರಿ ಬೆಂಕಿಗಾಹುತಿಯಾದ ಮಾರುತಿ ಇಂಡಸ್ಟ್ರೀಸ್ ➤ 1.5 ಕೋಟಿ ರೂ ಮೌಲ್ಯದ ನಷ್ಟ

(ನ್ಯೂಸ್ ಕಡಬ) newskadaba.com ಕಾರ್ಕಳ. ಆ,25: ಕಾರ್ಕಳದ ಕುಕ್ಕುಂದೂರು ಗ್ರಾಮದ ಹಾರ್ಜೆಡ್ಡು ಎಂಬಲ್ಲಿ ಮಾರುತಿ ಇಂಡಸ್ಟ್ರೀಸ್ ಗೆ ಕಳೆದ ತಡರಾತ್ರಿ ಸುಮಾರು 1 ಗಂಟೆ ವೇಳೆಗೆ ಬೆಂಕಿ ತಗುಲಿದ್ದು ಅಪಾರ ಪ್ರಮಾಣದ ಹಾನಿಯಾಗಿ ನಷ್ಟವುಂಟಾಗಿದೆ.     ಪ್ರಕಾಶ್ ಪುತ್ರನ್ ಎಂಬುವರಿಗೆ ಸೇರಿದ ಮಾರುತಿ ಇಂಡಸ್ಟ್ರೀಸ್ ಇದು ಗೇರುಬೀಜದ ಎಣ್ಣೆ ತೆಗೆಯುವ ಕಂಪನಿಯಾಗಿದ್ದು, ಇದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಪರಿಣಾಮ ಫ್ಯಾಕ್ಟರಿ ಬೆಂಕಿಯ ಕೆನ್ನಾಲಿಗೆ ಆಹುತಿಯಾಗಿದೆ. ಇನ್ನು ಎರಡು ಲಾರಿಗಳು ಭಾಗಶ: ಭಸ್ಮವಾಗಿದೆ. ಸರಿ ಸುಮಾರು ಅಂದಾಜು […]

ತಡರಾತ್ರಿ ಬೆಂಕಿಗಾಹುತಿಯಾದ ಮಾರುತಿ ಇಂಡಸ್ಟ್ರೀಸ್ ➤ 1.5 ಕೋಟಿ ರೂ ಮೌಲ್ಯದ ನಷ್ಟ Read More »

ಕರಾವಳಿ, ಕರ್ನಾಟಕ

ಆರೋಗ್ಯ ಇಲಾಖೆಯಿಂದ ಪರಿಷ್ಕೃತ ಸುತ್ತೋಲೆ ➤ ಅಂತರ್‌ ರಾಜ್ಯ ಪ್ರಯಾಣಿಕರಿಗೆ ಕ್ವಾರಂಟೈನ್‌ ಅಗತ್ಯವಿಲ್ಲ…

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,25 : ರಾಜ್ಯಕ್ಕೆ ಆಗಮಿಸುವ ಅಂತರ್‌ ರಾಜ್ಯ ಪ್ರಯಾಣಿಕರಿಗೆ ಸಂಬಂಧಿಸಿದಂತೆ ಹಿಂದಿನ ಎಲ್ಲ ಸುತ್ತೋಲೆಗಳನ್ನು ರದ್ದುಗೊಳಿಸಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪರಿಷ್ಕೃತ ಸುತ್ತೋಲೆಯನ್ನು ಹೊರಡಿಸಲಾಗಿದೆ.ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ಪರಿಷ್ಕೃತ ಸುತ್ತೋಲೆ ಅನ್ವಯ, ಕೋವಿಡ್-19 ರೋಗ ಲಕ್ಷಣಗಳಿಲ್ಲದಿದ್ದಲ್ಲಿ 14 ದಿನಗಳ ಕ್ವಾರಂಟೈನ್ ಅಗತ್ಯವಿರುವುದಿಲ್ಲ, ಸೇವಾ ಸಿಂಧು ಆಪ್‌ನಲ್ಲಿ ರಿಜಿಸ್ಟರ್ ಅಗತ್ಯವಿಲ್ಲ. ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ. ಆದರೆ, ಅವರು ರಾಜ್ಯಕ್ಕಾಗಮಿಸಿದ ದಿನದಿಂದ 14 ದಿನಗಳವರೆಗೆ ಕೊರೋನಾ ರೋಗದ ಲಕ್ಷಣಗಳಾದ ಜ್ವರ,

ಆರೋಗ್ಯ ಇಲಾಖೆಯಿಂದ ಪರಿಷ್ಕೃತ ಸುತ್ತೋಲೆ ➤ ಅಂತರ್‌ ರಾಜ್ಯ ಪ್ರಯಾಣಿಕರಿಗೆ ಕ್ವಾರಂಟೈನ್‌ ಅಗತ್ಯವಿಲ್ಲ… Read More »

ಕರಾವಳಿ, ಕರ್ನಾಟಕ

ಬಿಜೆಪಿ ಪಕ್ಷಕ್ಕೆ ಇಂದು ಮಾಜಿ IPS ಅಧಿಕಾರಿ ‘ಸಿಂಗಂ’ ಅಣ್ಣಾಮಲೈ ಸೇರ್ಪಡೆ

(ನ್ಯೂಸ್ ಕಡಬ) newskadaba.com ನವದೆಹಲಿ . ಆ,25:  IPS ಹುದ್ದೆಗೆ ರಾಜೀನಾಮೆ ನೀಡಿದ್ದ ಮಾಜಿ ಅಧಿಕಾರಿ ಅಣ್ಣಾಮಲೈ ಇಂದು ದೆಹಲಿಯಲ್ಲಿ (ಮಂಗಳವಾರ) ಬೆಳಿಗ್ಗೆ 11 ಗಂಟೆಗೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ ಕರ್ಯಕ್ರಮ ನಡೆಯಲಿದೆ.   ನಾನು ಕಳೆದ ಕೆಲವು ತಿಂಗಳುಗಳಿಂದ ನನ್ನ ಆಯ್ಕೆಗಳನ್ನು ಪರಿಗಣಿಸುತ್ತಿದ್ದೆ ಆದರೆ ಅಂತಿಮವಾಗಿ ನಾನು ಬಿಜೆಪಿಗೆ ಸೇರಲು ಮತ್ತು ನನ್ನ ರಾಜಕೀಯ ಜೀವನವನ್ನು ಪ್ರಾರಂಭಿಸಲು ನಿರ್ಧರಿಸಿದ್ದೇನೆ” ಎಂದು ಅಣ್ಣಾಮಲೈ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಬಿಜೆಪಿ ಪಕ್ಷಕ್ಕೆ ಇಂದು ಮಾಜಿ IPS ಅಧಿಕಾರಿ ‘ಸಿಂಗಂ’ ಅಣ್ಣಾಮಲೈ ಸೇರ್ಪಡೆ Read More »

ರಾಷ್ಟ್ರೀಯ ನ್ಯೂಸ್

ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ನವದೆಹಲಿ . ಆ,24:  ಶ್ವಾಸಕೋಶ ಮತ್ತು ಮೂತ್ರಪಿಂಡದ ಸಮಸ್ಯೆಯಿಂದ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಸಚಿವ ರಾಮ್ ವಿಲಾಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಭಾನುವಾರ ದೆಹಲಿಯ ಪೋರ್ಟಿಸ್ ಹೃದಯ ಆಸ್ಪತ್ರೆಗೆ ದಾಖಲಿಸಲಾಗಿದೆ.   ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ 2017ರಲ್ಲಿ ಲಂಡನ್​ನಲ್ಲಿ ಆಪರೇಷನ್​ ಮಾಡಲಾಗಿತ್ತು. ನಿನ್ನೆ ಆಸ್ಪತ್ರೆಗೆ ದಾಖಲಾಗಿರುವ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಅದಕ್ಕೂ ಮೊದಲು ಅವರು ಆ್ಯಂಜಿಯೋಪ್ಲಾಸ್ಟಿಗೆ

ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ನ್ಯೂಸ್

ಕಾಲುವೆ ಬಿದ್ದ ವೃದ್ದೆಯನ್ನ ರಕ್ಷಿಸಿದ ಯುವಕ ➤ ಯುವಕನ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ

(ನ್ಯೂಸ್ ಕಡಬ) newskadaba.com ಬಳ್ಳಾರಿ. ಆ,24:  ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯನ್ನು ಯುವಕನೊಬ್ಬ ತನ್ನ ಪ್ರಾಣದ ಹಂಗುತೊರೆದು ರಕ್ಷಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರದ ಆರ್​ಟಿಓ ಕಚೇರಿಯ ಮುಂಭಾಗದ ಹೆಚ್​ಎಲ್​ಸಿ ಕಾಲುವೆಯಲ್ಲಿ ನಡೆದಿದೆ.     ಅಜಯ್​ ಎಂಬ ಯುವಕ ಅಜ್ಜಿಯನ್ನು ರಕ್ಷಿಸಿದ್ದಾನೆ.ಕಾಲುವೆಗೆ ಇಳಿದು ಮುಖ ತೊಳೆಯಲು ಹೋದ 70 ವರ್ಷದ ವೃದ್ಧೆ ಕಾಲು ಜಾರಿ ನೀರಿನಲ್ಲಿ ಬಿದ್ದಿದ್ದು, ನೀರಿನಲ್ಲಿ ಮುಳುಗಿ ಸುಮಾರು 300 ಮೀಟರ್​ ದೂರ ನೀರಿನ ರಭಸಕ್ಕೆ ಕೊಚ್ಚಿ ಹೋಗುತ್ತಿದ್ದರು. ಅದನ್ನು ಕೆಲವು

ಕಾಲುವೆ ಬಿದ್ದ ವೃದ್ದೆಯನ್ನ ರಕ್ಷಿಸಿದ ಯುವಕ ➤ ಯುವಕನ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ Read More »

ಕರ್ನಾಟಕ

ಕಿರಿಮಂಜೇಶ್ವರ ಕೊಡೆರಿಯಲ್ಲಿ ದೋಣಿ ದುರಂತ ➤ ಮೃತಪಟ್ಟ 4 ಮೀನುಗಾರರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿ.ಎಂ

(ನ್ಯೂಸ್ ಕಡಬ) newskadaba.com ಬೈಂದೂರು. ಆ,24:  ಕಿರಿಮಂಜೇಶ್ವರ ಕೊಡೆರಿಯಲ್ಲಿ ದೋಣಿ ದುರಂತದಲ್ಲಿ ಮೃತಪಟ್ಟ ನಾಲ್ಕು ಮೀನುಗಾರರ ಕುಟುಂಬಗಳಿಗೆ ತಲಾ 6 ಲಕ್ಷ ರೂ.ಗಳ ಪರಿಹಾರವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ.     ಪರಿಹಾರದ ಆದೇಶದ ಪ್ರತಿಯನ್ನು ಸಂತ್ರಸ್ತರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೋಮವಾರ ತಿಳಿಸಿದ್ದಾರೆ. ಇಂದು ಸಚಿವರು ಶಾಸಕ ಬಿ ಎಂ ಸುಕುಮಾರ್ ಶೆಟ್ಟಿ ಅವರೊಂದಿಗೆ ಸಂತ್ರಸ್ತರ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಆಗಸ್ಟ್ 16

ಕಿರಿಮಂಜೇಶ್ವರ ಕೊಡೆರಿಯಲ್ಲಿ ದೋಣಿ ದುರಂತ ➤ ಮೃತಪಟ್ಟ 4 ಮೀನುಗಾರರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿ.ಎಂ Read More »

ಕರಾವಳಿ, ಕರ್ನಾಟಕ

ನಾಯಿ ಅಡ್ಡ ಬಂದ ಪರಿಣಾಮ ಸ್ಕೂಟರ್ ಪಲ್ಟಿ, ಸವಾರೆ ತಂದೆ ಮೃತ್ಯು ➤ ಮದುವೆ ಮನೆಯಲ್ಲಿ ಸೂತಕದ ಛಾಯೆ

(ನ್ಯೂಸ್ ಕಡಬ) newskadaba.com ಕಡಬ. ಆ,24:  ಅವರು ಮನೆಯ ಹಿರಿಯ ಮಗಳ ಮದುವೆ ತಯಾರಿಯಲ್ಲಿದ್ದರು.  ದೇವಸ್ಥಾನಕ್ಕೆ ತೆರಳಿ ಹಿಂತಿರುತ್ತಿದ್ದವರಿಗೆ ಅಲ್ಲಿ ಆಗಿದ್ದೇ ಬೇರೆ,  ನಾಯಿಯೊಂದು ಅಡ್ಡ ಬಂದ ಪರಿಣಾಮ ಹೋಂಡಾ ಆಕ್ಟಿವಾ ಪಲ್ಟಿಯಾಗಿ ಹಿಂಬದಿ ಸವಾರ ಮೃತಪಟ್ಟ ಘಟನೆ ಇಂದು ಮಾಣಿ -ಮೈಸೂರು ಹೆದ್ದಾರಿಯ ಕೌಡಿಚ್ಚಾರು ಸಮೀಪದ ಸೇತುವೆ ಬಳಿ ಕಳೆದ ದಿನ ನಡೆದಿದೆ. ಮದುವೆ ಮನೆಯಲ್ಲಿಗೆ ಸೂತಕದ ಛಾಯೆ ಆವರಿಸಿದೆ.  ಮೃತಪಟ್ಟವರನ್ನು ಮಾಡ್ನೂರು ಗ್ರಾಮದ ಸಸ್ಪೇಟಿ ನಿವಾಸಿ 53 ವರ್ಷದ ಕೃಷ್ಣಪ್ಪ ನಾಯ್ಕ ಎಂದು ಗುರುತಿಸಲಾಗಿದೆ.

ನಾಯಿ ಅಡ್ಡ ಬಂದ ಪರಿಣಾಮ ಸ್ಕೂಟರ್ ಪಲ್ಟಿ, ಸವಾರೆ ತಂದೆ ಮೃತ್ಯು ➤ ಮದುವೆ ಮನೆಯಲ್ಲಿ ಸೂತಕದ ಛಾಯೆ Read More »

ಕರ್ನಾಟಕ

ಸಬಳೂರು: ಆಯುಷ್ಮಾನ್‌ ಕಾರ್ಡ್‌ ನೋಂದಾವಣೆ ಶಿಬಿರ

(ನ್ಯೂಸ್ ಕಡಬ) newskadaba.com ಕೊಯಿಲ. ಆ,24: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆಯ ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಸಬಳೂರು ಒಕ್ಕೂಟದ ಆಶ್ರಯದಲ್ಲಿ ಸರಕಾರಿ ಸೌಲಭ್ಯಗಳ ಮಾಹಿತಿ, ಆಯುಷ್ಮಾನ್‌ ಕಾರ್ಡ್‌ ನೋಂದಾವಣೆ ಮತ್ತು ವಿತರಣಾ ಕಾರ್ಯಕ್ರಮವು ಶ್ರೀ ರಾಮ ಭಜನ ಮಂದಿರದ ವಠಾರದಲ್ಲಿ ಕಳೆದ ದಿನ ನಡೆಯಿತು. ಸಬಳೂರು ಅಂಗನವಾಡಿ ಕೇಂದ್ರದ ವಠಾರದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಮೀನಾಕ್ಷಿ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಡಬ ತಾಲೂಕು ಪತ್ರಕರ್ತರ ಸಂಘದ

ಸಬಳೂರು: ಆಯುಷ್ಮಾನ್‌ ಕಾರ್ಡ್‌ ನೋಂದಾವಣೆ ಶಿಬಿರ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ 10 ಸಾವಿರದ ಗಡಿ ದಾಟಿದ ಕಿಲ್ಲರ್ ಕೊರೋನಾ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,24:  ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾನುವಾರ ಕರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ತಲಾ 10 ಸಾವಿರದ ಗಡಿ ದಾಟಿದೆ. ದ.ಕ.ದಲ್ಲಿ ಮೊದಲ ಕರೊನಾ ಪತ್ತೆಯಾಗಿ ಐದು ತಿಂಗಳಲ್ಲಿ ಸೋಂಕಿತರ ಸಂಖ್ಯೆ ಈ ಮಟ್ಟಕ್ಕೆ ಏರಿದೆ. ಶನಿವಾರ 228 ಮತ್ತು ಭಾನುವಾರ 193 ಪ್ರಕರಣಗಳು ವರದಿಯಾಗುವ ಮೂಲಕ ಒಟ್ಟು ಪ್ರಕರಣಗಳು 10,330ಕ್ಕೆ ಏರಿಕೆಯಾಗಿವೆ.     ಎರಡು ದಿನದಲ್ಲಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 2,343 ಸಕ್ರಿಯ ಪ್ರಕರಣಗಳಿದ್ದು,

ಕರಾವಳಿಯಲ್ಲಿ 10 ಸಾವಿರದ ಗಡಿ ದಾಟಿದ ಕಿಲ್ಲರ್ ಕೊರೋನಾ Read More »

ಕರಾವಳಿ, ಕರ್ನಾಟಕ

ಮಂಗಳೂರು : ಅಕ್ರಮ ಅಂಗಡಿಗಳ ತೆರವು ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,24: ಅಕ್ರಮವಾಗಿ ಬೀದಿ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ಸುಮಾರು 15 ರಿಂದ 20 ಸಣ್ಣ ಅಂಗಡಿಗಳನ್ನು ಪಾಲಿಕೆ ಅಧಿಕಾರಿಗಳು ಹಾಗೂ ಪೊಲೀಸರು ತೆರವುಗೊಳಿಸಿದರು. ವ್ಯಾಪಾರಸ್ಥರ ವಿರೋಧದ ನಡುವೆಯೂ ನಗರದ ಕಾವೂರಿನಲ್ಲಿ ಯಾವುದೇ ಅನುಮತಿಯಿಲ್ಲದೆ ವ್ಯಾಪಾರ ಚಟುವಟಿಯನ್ನ ಮುಂದುವರಿಸುತ್ತಿದ್ದವರಿಗೆ ಅಧಿಕಾರಿಗಳು ಈ ಮೂಲಕ ಬಿಸಿ ಮುಟ್ಟಿಸಿದ್ದಾರೆ.   ಈಗಾಗಲೇ ಹಲವು ಕಡೆ ಅಕ್ರಮ ಅಂಗಡಿಗಳನ್ನ ಸಂಬಂಧಪಟ್ಟ ಅಧಿಕಾರಿಗಳು ತೆರವುಗೊಳಿಸುತ್ತ ಬರುತ್ತಿದ್ದಾರೆ.  ಕಾರ್ಯಾಚರಣೆಯ ಸಂದರ್ಭದಲ್ಲಿ ಇಲ್ಲಿನ ಕಾವೂರು ಠಾಣೆಯ ಪೊಲೀಸ್‌ ಸಿಬ್ಬಂದಿಗಳು ರಕ್ಷಣೆ ಒದಗಿಸಿದರು. ತೆರವು

ಮಂಗಳೂರು : ಅಕ್ರಮ ಅಂಗಡಿಗಳ ತೆರವು ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ
Scroll to Top