Kadaba News

ಜಿಂಕೆಯ ಮೇಲೆ ಬೀದಿ ನಾಯಿಗಳ ದಾಳಿ ➤ ಸ್ಥಳೀಯರಿಂದ ಜಿಂಕೆಯ ರಕ್ಷಣೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ ,ಜು.15: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಜಿಂಕೆಯನ್ನು ಮಧ್ಯಾಹ್ನ ಬಿದಿ ನಾಯಿಗಳು ಅಟ್ಟಿಸಿಕೊಂಡು ಹೋಗಿರುವ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಡೆದಿದೆ.   ನಂತರ ಸುಸ್ತಾಗಿ ಜಿಂಕೆ ಧರ್ಮಸ್ಥಳ ಬಸ್ ನಿಲ್ದಾಣದ ಒಳಗೆ ಬಂದು ಆಶ್ರಯ ಪಡೆದಿದೆ. ಕೂಡಲೇ ಅರಣ್ಯ ಇಲಾಖೆಯ ಬೆಳ್ತಂಗಡಿ ಕಛೇರಿಗೆ ಮಾಹಿತಿ ತಿಳಿಸಿದ್ದು ಅಧಿಕಾರಿಗಳು ಹಾಗೂ ಸ್ಥಳೀಯರ ಸಹಾಯದಿಂದ ಹಿಡಿದು ಪಿಕಪ್ ವಾಹನದಲ್ಲಿ ಹಾಕಿಕೊಂಡು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.

ಜಿಂಕೆಯ ಮೇಲೆ ಬೀದಿ ನಾಯಿಗಳ ದಾಳಿ ➤ ಸ್ಥಳೀಯರಿಂದ ಜಿಂಕೆಯ ರಕ್ಷಣೆ Read More »

ಕರಾವಳಿ, ಕರ್ನಾಟಕ

ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ತಪಾಸನೆಗೆ ಆ್ಯಂಟಿಜೆನ್ ಕಿಟ್‍ನ ಬಳಕೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.15: ಕೋವಿಡ್-19 ಸೋಂಕಿತರನ್ನು ತಪಾಸನೆ ಮಾಡಿ ರ್ಯಾಪಿಡ್ ಫಲಿತಾಂಶ ನೀಡುವ ಆ್ಯಂಟಿಜೆನ್ ಕಿಟ್‍ನ ಬಳಕೆಯನ್ನು ಜು.14ರಿಂದ ದಕ್ಷಿಣ ಕನ್ನಡದಲ್ಲಿ ಆರಂಭಿಸಲಾಗಿದೆ. ಈ ಹಿಂದೆ ಕೊರೊನಾ ಸೋಂಕು ಇದೆಯೇ ಇಲ್ಲವೇ ಎಂದು ಪತ್ತೆ ಹಚ್ಚಲು ಎರಡು ದಿನಗಳ ಕಾಲ ಕಾಯಬೇಕಿತ್ತು. ಆ್ಯಂಟಿಜೆನ್ ಟೆಸ್ಟ್ ನಿಂದ 15 ರಿಂದ 20 ನಿಮಿಷದಲ್ಲಿ ಕೊರೊನಾ ಪಾಸಿಟಿವ್ ಪತ್ತೆ ಹಚ್ಚಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಗೆ ಇಂತಹ 3500 ಕಿಟ್ ರಾಜ್ಯ ಸರ್ಕಾರದಿಂದ ಪೂರೈಕೆಯಾಗಿದೆ. ಈ ಕಿಟ್ ನಲ್ಲಿ ಇರುವ ಸ್ಟ್ರಿಪ್

ದ.ಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ತಪಾಸನೆಗೆ ಆ್ಯಂಟಿಜೆನ್ ಕಿಟ್‍ನ ಬಳಕೆ Read More »

ಕರಾವಳಿ, ಕರ್ನಾಟಕ

ಅಂಗವೈಕಲ್ಯವನ್ನು ಮೆಟ್ಟಿನಿಂತ ಎಂಡೋಪೀಡಿತ ವಿದ್ಯಾರ್ಥಿ ➤ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

(ನ್ಯೂಸ್ ಕಡಬ) newskadaba.com ಕಡಬ ,ಜು.15: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ವಿದ್ಯಾರ್ಥಿಯೋರ್ವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎಂಡೋಸಲ್ಪಾನ್ ನಿಂದ ತನಗಾದ ಅಂಗವೈಕಲ್ಯವನ್ನೂ ಮೆಟ್ಟಿನಿಂತು ಉತ್ತಮ ಸಾಧನೆ ಮಾಡಿದ್ದಾರೆ. ಶೇ. 85 ರಷ್ಟು ಎಂಡೋ ಪೀಡಿತರಾಗಿರುವ ವಿದ್ಯಾರ್ಥಿ ಮನೋಜ್ ಕುಮಾರ್ ಮಂಗಳೂರಿನ ಸೇವಾಭಾರತಿ ¸ನಡೆಸುತ್ತಿರುವ ಕಾಜರುಕುಕ್ಕು ವಿದ್ಯಾಚೇತನಾ ವಿಶೇಷ ಮಕ್ಕಳ ಶಾಲೆಯಲ್ಲಿ ಪಿಯುಸಿ ಪರೀಕ್ಷೆಗೆ ತರಬೇತಿ ಪಡೆದು ಕಲಾ ವಿಭಾಗದಲ್ಲಿ 360 ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಮನೋಜ್ ಕುಮಾರ್ ಕಿವಿ. ಕೈ ಎಲುಬು

ಅಂಗವೈಕಲ್ಯವನ್ನು ಮೆಟ್ಟಿನಿಂತ ಎಂಡೋಪೀಡಿತ ವಿದ್ಯಾರ್ಥಿ ➤ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ Read More »

ಕರಾವಳಿ, ಕರ್ನಾಟಕ

ಸುಳ್ಯದ ಮಹಿಳೆ ಕೊರೋನಾ ಸೋಂಕಿಗೆ ಬಲಿ

(ನ್ಯೂಸ್ ಕಡಬ) newskadaba.com ಸುಳ್ಯ,ಜು.15: ಬೆಳ್ಳಾರೆ ಸಮೀಪದ 62 ವರ್ಷದ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದುದಾಗಿ ತಿಳಿದು ಬಂದಿದೆ. ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆಳ್ಳಾರೆಯ ನೆಟ್ಟಾರು ನಿವಾಸಿ ಮಹಿಳೆಯನ್ನು ಕುಲಾಯಿ 14ರ ಮಧ್ಯಾಹ್ನ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಕಲಿಸಲಾಗಿತ್ತು. ಮಹಿಳೆ ಬಿಪಿ, ಶುಗರ್, ಲಂಗ್ಸ್ ಸಮಸ್ಯೆಯಿಂದ ಬಳಲುತ್ತಿದ್ದರು. ಈ ವೇಳೆ ಅವರ ಕೋವಿಡ್ ಪರೀಕ್ಷೆ ವೇಳೆ ಸೋಂಕು ದೃಢ ಪಟ್ಟಿರುವುದು ಬೆಳಕಿಗೆ ಬಂದಿದೆ ತೀರಾ ಗಂಭೀರಾ ಸ್ಥಿತಿಯಲ್ಲಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ

ಸುಳ್ಯದ ಮಹಿಳೆ ಕೊರೋನಾ ಸೋಂಕಿಗೆ ಬಲಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ : ಇಂದು ರಾತ್ರಿಯಿಂದ ಉಡುಪಿ ಜಿಲ್ಲೆಯ ಗಡಿಗಳು 14ದಿನಗಳ ಕಾಲ ಸೀಲ್‌ಡೌನ್

(ನ್ಯೂಸ್ ಕಡಬ) newskadaba.com ಉಡುಪಿ,ಜು.15: ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಜಿಲ್ಲೆಗಳು ಲಾಕ್‌ಡೌನ್ ಮೊರೆ ಹೋಗಿದ್ದರೆ, ಉಡುಪಿ ಜಿಲ್ಲೆ ಮಾತ್ರ ವಿಭಿನ್ನವಾಗಿ ಗಡಿಗಳನ್ನು ಸೀಲ್ ಮಾಡಲು ಮುಂದಾಗಿದೆ. ಹೀಗಾಗಿ ಜುಲೈ 15ರ ರಾತ್ರಿ 8 ಗಂಟೆಯಿಂದ ಉಡುಪಿ ಜಿಲ್ಲೆಗೆ ಯಾರು ಬರುವಂತಿಲ್ಲ ಉಡುಪಿ ಜಿಲ್ಲೆಯಿಂದ ಯಾರು ಹೊರಹೋಗುವಂತಿಲ್ಲ ಎಂದು ಜಿಲ್ಲಾಡಳಿತ ಆದೇಶಿಸಿದೆ. ಜಿಲ್ಲೆಯ ತಜ್ಞ ಆರೋಗ್ಯಾಧಿಕಾರಿಗಳ ಜೊತೆಗೆ ಮಂಗಳವಾರ ಮಹತ್ವದ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಜನಪ್ರತಿನಿಧಿಗಳ ಅಭಿಪ್ರಾಯವನ್ನು ಸಂಗ್ರಹಿಸಿ ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ. ಬುಧವಾರ ರಾತ್ರಿ

ಉಡುಪಿ : ಇಂದು ರಾತ್ರಿಯಿಂದ ಉಡುಪಿ ಜಿಲ್ಲೆಯ ಗಡಿಗಳು 14ದಿನಗಳ ಕಾಲ ಸೀಲ್‌ಡೌನ್ Read More »

ಕರಾವಳಿ, ಕರ್ನಾಟಕ

ಖ್ಯಾತ ಯಕ್ಷಗಾನ ಹಿಮ್ಮೇಳ ವಾದಕ ಯುವರಾಜ ಆಚಾರ್ಯ ಕಾವಳಕಟ್ಟೆ ಇನ್ನಿಲ್ಲ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜು.15 : ಖ್ಯಾತ ಯಕ್ಷಗಾನ ಹಿಮ್ಮೇಳ ವಾದಕರಾಗಿ ಹಲವು ಮೇಳಗಳಲ್ಲಿ ಭಾಗವಹಿಸಿ ಖ್ಯಾತರಾಗಿದ್ದ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ನಿವಾಸಿ ಯುವರಾಜ ಆಚಾರ್ಯ ಕಾವಳಕಟ್ಟೆ( 60) ಅನಾರೋಗ್ಯದಿಂದ ಜು.14 ರಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಆರಂಭದಲ್ಲಿ ಹವ್ಯಾಸಿ ಮದ್ದಳೆವಾದಕರಾಗಿದ್ದ ಅವರು ಬಳಿಕ ಸುಮಾರು 15 ವರ್ಷಗಳ ಕಾಲ ವಿವಿಧ ಮೇಳಗಳಲ್ಲಿ ಮದ್ದಳೆಗಾರರಾಗಿ ಸೇವೆ ಸಲ್ಲಿಸಿದ್ದರು. ಹೊಸನಗರ ಮೇಳ, ಹಿರಿಯಡ್ಕ, ಮಂಗಳಾದೇವಿ, ಬಪ್ಪನಾಡು, ಸಸಿಹಿತ್ಲು ಮೇಳಗಳಲ್ಲಿ ಮದ್ದಳೆ ವಾದಕರಾಗಿದ್ದ ಅವರು ಅನಾರೋಗ್ಯ ದಿಂದ ಮೇಳದಿಂದ ನಿವೃತ್ತಿ

ಖ್ಯಾತ ಯಕ್ಷಗಾನ ಹಿಮ್ಮೇಳ ವಾದಕ ಯುವರಾಜ ಆಚಾರ್ಯ ಕಾವಳಕಟ್ಟೆ ಇನ್ನಿಲ್ಲ Read More »

ಕರಾವಳಿ

ಬಂಟ್ವಾಳ ಹೋಮ್ ಕ್ವಾರಂಟೈನ್ ನಿಯಮ ಮೀರಿದಾತನ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com.ಬಂಟ್ವಾಳ,ಜು.15:  ಕೊರೊನಾ ತನ್ನ ವೇಗವನ್ನು ಹೆಚ್ಚಿಸುತ್ತಾ ಮುಂದುವರಿಯುತ್ತಿದೆ ಇದರ ನಡುವೆ ವ್ಯಕ್ತಿಯೊಬ್ಬರ ವಿರುದ್ಧ ಹೋಮ್ ಕ್ವಾರಂಟೈನ್ ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡಿದ ಆರೋಪದಡಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತುಂಬೆ ಗ್ರಾಮದ ಕಾಣೆಮಾರ್ ನಿವಾಸಿ ಸಾಹಿದ್ (32) ವಿರುದ್ಧ ಕಾನೂನು ಉಲ್ಲಂಘಿಸಿದ ಆರೋಪ ಕೇಳಿಬಂದಿರುವುದು. ಸಾಹಿದ್ ಗೆ ಜು.೦೯ ರಿಂದ ಜು.23 ರವರೆಗೆ ಹೋಮ್ ಕಾರಂಟೈನ್ ಇರುವಂತೆ ತುಂಬೆ ಗ್ರಾಮ ಪಂಚಾಯತ್ ನಿಂದ ನೋಟಿಸು ಕೂಡ ಜಾರಿ ಮಾಡಿತ್ತು. ಆದರೆ ಜುಲೈ 14

ಬಂಟ್ವಾಳ ಹೋಮ್ ಕ್ವಾರಂಟೈನ್ ನಿಯಮ ಮೀರಿದಾತನ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ಪಡುಕೋಣೆ ಶ್ರೀ ರಾಮ ದೇವಸ್ಥಾನದಲ್ಲಿ ಕಳ್ಳತನ ➤ 1.5 ಲಕ್ಷ ಮೌಲ್ಯದ ಪ್ರಭಾವಳಿ ಕಳವು

(ನ್ಯೂಸ್ ಕಡಬ) newskadaba.com ಬೈಂದೂರು,ಜು.14:  ಪಡುಕೋಣೆಯ ಶ್ರೀರಾಮ ದೇವಸ್ಥಾನಕ್ಕೆ ಜು.13ರ ತಡರಾತ್ರಿ ನುಗ್ಗಿದ ಕಳ್ಳರು 1.5 ಲಕ್ಷ ಮೌಲ್ಯದ ಬೆಳ್ಳಿಯ ಪ್ರಭಾವಳಿಯನ್ನು ಕಳವು ಗೈದಿದ್ದಾರೆ.ದೇವಸ್ಥಾನದ ಮುಖ್ಯದ್ವಾರದ ಚಿಲಕ ಮುರಿದು ಒಳ ನುಗ್ಗಿದ ಕಳ್ಳರು ಈ ಕೃತ್ಯವೆಸಗಿದ್ದಾರೆ. ಮಂಗಳವಾರ ಬೆಳಿಗ್ಗೆ ಅರ್ಚಕರು ಪೂಜೆಗೆ ಬಂದಾಗ ಬಾಗಿಲು ಒಡೆದಿರುವುದು ಕಂಡು ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬೈಂದೂರು ಸರ್ಕಲ್ ಇನ್ಸ್‍ಪೆಕ್ಟರ್ ಸುರೇಶ್, ಗಂಗೊಳ್ಳಿ ಠಾಣಾಧಿಕಾರಿ ಭೀಮಾಶಂಕರ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ದೇವಸ್ಥಾನಗಳ ಭದ್ರತೆಗೆ ಸಂಬಂಧಿಸಿದಂತೆ ಕೆಲವು ದಿನಗಳ ಹಿಂದೆಯಷ್ಟೇ

ಪಡುಕೋಣೆ ಶ್ರೀ ರಾಮ ದೇವಸ್ಥಾನದಲ್ಲಿ ಕಳ್ಳತನ ➤ 1.5 ಲಕ್ಷ ಮೌಲ್ಯದ ಪ್ರಭಾವಳಿ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ದ.ಕ, ಉಡುಪಿ ಜಂಟಿ ಅಗ್ರ ಸ್ಥಾನ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.14: ಈಗಾಗಲೇ ದ್ವಿತೀಯ ಪಿಯುಸಿ ಪಿ.ಯು.ಸಿ ಫಲಿತಾಂಶ ಹೊರಬಿದ್ದಿದ್ದು ಅಚ್ಚರಿಯ ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಜಂಟಿಯಾಗಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ 90.71 ಫಲಿತಾಂಶ ಪಡೆದುಕೊಂಡರೆ ನಂತರದ ಸ್ಥಾನ ಕೊಡಗಿನ ಪಾಲಾಗಿದೆ 81.53, ಉತ್ತರ ಕನ್ನಡ 80.97,ಚಿಕ್ಕಮಗಳೂರು 79.11 ನಂತರದ ಸ್ಥಾನ ಪಡೆದ ಜಿಲ್ಲೆಗಳಾಗಿವೆ. ಈ ಬಾರಿಯೂ ಪಿಯುಸಿ ಫಲಿತಾಂಶದಲ್ಲಿ ಬಾಲಕಿಯರದ್ದೇ ಮೇಲುಗೈ ಆಗಿದೆ.

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ದ.ಕ, ಉಡುಪಿ ಜಂಟಿ ಅಗ್ರ ಸ್ಥಾನ Read More »

ಕರಾವಳಿ

ಕೋವಿಡ್-19 ಇವತ್ತಿನಿಂದ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಯಂ ಪ್ರೇರಿತ ಬಂದ್

(ನ್ಯೂಸ್ ಕಡಬ) newskadaba.com.ಉಪ್ಪಿನಂಗಡಿ,ಜು.14: ಕೋವಿಡ್-19 ದಿನನಿತ್ಯ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ಶಾಸಕರ ಮತ್ತು ತೆಕ್ಕಾರು ಗ್ರಾಮ ಪಂಚಾಯತ್ ನಿರ್ದೇಶನದಂತೆ ತೆಕ್ಕಾರು ಗ್ರಾಮ ಪಂಚಾಯತ್ ಇವತ್ತಿನಿಂದ ಜುಲೈ 28 ರ ವರೆಗೆ ಸ್ವಯಂ ಪ್ರೇರಿತ ಬಂದ್ ನಡೆಸಲಾಗುವುದು ಎಂದು ತೆಕ್ಕಾರು ಗ್ರಾಮ ವರ್ತಕರ ಮುಖ್ಯಸ್ಥ ಎ.ಟಿ ಅಶ್ರಫ್ ತೆಕ್ಕಾರು ತಿಳಿಸಿದರು. ಇವತ್ತಿನಿಂದಲೇ ಮದ್ಯಾಹ್ನ 3 ರಿಂದ ಬೆಳಿಗ್ಗೆ 6ರ ವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಲಾಗುತ್ತದೆ. ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ವೇಳೆಯಲ್ಲಿ ವಾಹನ

ಕೋವಿಡ್-19 ಇವತ್ತಿನಿಂದ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಯಂ ಪ್ರೇರಿತ ಬಂದ್ Read More »

ಕರಾವಳಿ
Scroll to Top