Kadaba News

ಸಂಡೆ ಸ್ಪೇಶಲ್ ಲಾಕ್ ಡೌನ್ ಈ ಸಂಡೆಯೂ ಸ್ತಬ್ದವಾದ ದ.ಕ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.12: ಕೊರೊನಾ ಸೋಂಕಿತರ ಸಂಖ್ಯೆ ದಿನ ಕಳೆದಂತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಂಡೇ ಕರ್ಫ್ಯೂಗೆ ಈ ರವಿವಾರವೂ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿದೆ. ಹೆದ್ದಾರಿ, ರಸ್ತೆಗಳಲ್ಲಿ ಬೆರಳೆಣಿಕೆಯಷ್ಟು ವಾಹನಗಳು ಮಾತ್ರ ಸಂಚರಿಸುತ್ತಿವೆ. ನಗರದ ಪ್ರಮುಖ ಭಾಗಗಳಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ನಗರದ ಒಳಭಾಗದಲ್ಲಿ ಮಾಂಸ, ತರಕಾರಿ, ಕೆಲ ದಿನಸಿ ಅಂಗಡಿಗಳು ತೆರೆದಿವೆ. ಬೆರಳೆಣಿಕೆಯ ಮಂದಿ ರಸ್ತೆ ಗಳಲ್ಲಿ ನಡೆದಾಟ ಹಾಗೂ ಖರೀದಿ ನಡೆಸುತ್ತಿದ್ದಾರೆ. ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಪೊಲೀಸರು ಬ್ಯಾರಿಕೇಡ್ ಗಳನ್ನು ಆಳವಡಿಸಿ ಪಹರೆ ನೀಡುತ್ತಿದ್ದಾರೆ.

ಸಂಡೆ ಸ್ಪೇಶಲ್ ಲಾಕ್ ಡೌನ್ ಈ ಸಂಡೆಯೂ ಸ್ತಬ್ದವಾದ ದ.ಕ Read More »

ಕರಾವಳಿ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಶಿಕ್ಷಣ ಸಚಿವರ ಭೇಟಿ

(ನ್ಯೂಸ್ ಕಡಬ) newskadaba.com ಕುಕ್ಕೆ ಶ್ರೀ ಸುಬ್ರಹ್ಮಣ್ಯ,ಜು.11:  ಕೊರೊನಾ ಸೋಂಕಿನ ನಡುವೆಯೆ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಬಹುತೇಕ ಯಶಸ್ವಿಯಾಗಿ ಮುಗಿಸಿದ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ  ಪ್ರಸಿದ್ಧ ದೇವಾಲಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯ  ಕ್ಷೇತ್ರಕ್ಕೆ   ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹಾಗೂ ಅವರ ಪತ್ನಿ ಸಮೇತರಾಗಿ  ಭೇಟಿ ನೀಡಿ, ದೇವರ ದರ್ಶನ ಪಡೆದರು. ಕೊರೋನಾ ಆರ್ಭಟದ ನಡುವೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಯಶಸ್ವಿಯಾಗಿ ಪರೀಕ್ಷೆ ಬರೆದಿದ್ದಾರೆ.  ಕೊರೊನಾ ಹಿನ್ನೆಲೆ ಎಸ್ಸೆಸ್ಸೆಲ್ಸಿ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಶಿಕ್ಷಣ ಸಚಿವರ ಭೇಟಿ Read More »

ಕರಾವಳಿ, ಕರ್ನಾಟಕ

ಪುತ್ತೂರು : ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಸೇರಿ 5 ಮಂದಿಗೆ ಕೋವಿಡ್ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಪುತ್ತೂರು ,ಜು.11: ಪುತ್ತೂರು ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್, ಅದೇ ಠಾಣೆಯಲ್ಲಿರುವ ಮಹಿಳಾ ಕಾನ್‌ಸ್ಟೇಬಲ್ ಒಬ್ಬರ ತಾಯಿ ಸೇರಿದಂತೆ 5 ಮಂದಿಗೆ ಪುತ್ತೂರು ತಾಲೂಕಿನಲ್ಲಿ ಕೋವಿಡ್ ದೃಢಗೊಂಡ ಬಗ್ಗೆ ವರದಿಯಾಗಿದೆ. ಪುತ್ತೂರು ನಗರ ಪೊಲೀಸ್ ಠಾಣೆಯ 30 ವರ್ಷ ಪ್ರಾಯದ ಕಾನ್‌ಸ್ಟೇಬಲ್ ಮತ್ತು ಮಹಿಳಾ ಕಾನ್‌ಸ್ಟೇಬಲ್ ಒಬ್ಬರ 40 ವರ್ಷ ಪ್ರಾಯದ ತಾಯಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಾನ್‌ಸ್ಟೇಬಲ್ ಅವರ ಸಂಪ್ಯ ವಸತಿ ಗೃಹದ ಕೊಠಡಿಯನ್ನು ಸೀಲ್‌ಡೌನ್ ಮಾಡಲಾಗಿದ್ದು, ಮಹಿಳಾ ಕಾನ್‌ಸ್ಟೇಬಲ್ ಅವರ

ಪುತ್ತೂರು : ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಸೇರಿ 5 ಮಂದಿಗೆ ಕೋವಿಡ್ ಸೋಂಕು ದೃಢ Read More »

ಕರಾವಳಿ, ಕರ್ನಾಟಕ

ನೂತನ ವಧು – ವರರಿಗೆ ತಯಾರಾದ ವಿಶಿಷ್ಟವಾದ ವಜ್ರದ ಮಾಸ್ಕ್..!!!

(ನ್ಯೂಸ್ ಕಡಬ) newskadaba.com ಸೂರತ್‍. ಜು.11. ಕೊರೊನಾ ನಂತರ ದೇಶಾದ್ಯಂತ ಫೇಸ್ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಆದ್ದರಿಂದ ಅನೇಕರು ವಿವಿಧ ರೀತಿಯ ಮಾಸ್ಕ್ ತಯಾರಿಸಿಕೊಂಡು ಧರಿಸುತ್ತಿದ್ದಾರೆ. ಇದೀಗ ಗುಜರಾತ್‍ನ ಸೂರತ್‍ನಲ್ಲಿ ಆಭರಣ ಅಂಗಡಿಯೊಂದು 1.5 ಲಕ್ಷದಿಂದ 4 ಲಕ್ಷದವರೆಗಿನ ವಜ್ರದ ಮಾಸ್ಕ್ ತಯಾರಿಸಿ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಮಾತನಾಡಿದ ಆಭರಣ ಅಂಗಡಿಯ ಮಾಲೀಕ ದೀಪಕ್ ಚೋಕ್ಸಿ, “ಲಾಕ್‍ಡೌನ್ ಸಡಿಲಗೊಳಿಸಿದ ನಂತರ ಗ್ರಾಹಕರೊಬ್ಬರು ನಮ್ಮ ಅಂಗಡಿಗೆ ಬಂದು, ನಮ್ಮ ಮನೆಯಲ್ಲಿ ವಿವಾಹ ನಡೆಯುತ್ತಿದೆ. ವಧು-ವರರಿಗೆ ವಿಶಿಷ್ಟವಾದ ಮಾಸ್ಕ್‌ಗಳನ್ನು ಮಾಡಿಕೊಂಡಿ

ನೂತನ ವಧು – ವರರಿಗೆ ತಯಾರಾದ ವಿಶಿಷ್ಟವಾದ ವಜ್ರದ ಮಾಸ್ಕ್..!!! Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು : ಹತ್ಯೆಗೀಡಾದ ಯೋಗೀಶ್ ಮನೆಗೆ ಶಾಸಕ ರಘುಪತಿ ಭಟ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಲಕ್ಷ್ಮೀನಗರ ನಿವಾಸಿ ಯೋಗೀಶ್ ಮನೆಗೆ ಶಾಸಕ ಕೆ. ರಘುಪತಿ ಭಟ್ ಶುಕ್ರವಾರ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಶಾಸಕರು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಜುಲೈ 6 ರ ಭಾನುವಾರ ರಾತ್ರಿ 11.30 ರ ಸುಮಾರಿಗೆ ಕಾರಿನಲ್ಲಿ ಆಗಮಿಸಿದ ಗ್ಯಾಂಗ್‌ನಿಂದ ಯೋಗೀಶ್ ಮೇಲೆ ಮಾರಣಾಂತಿಕ ಆಯುಧದಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು.ಕೊಲೆ ಬಗ್ಗೆ ಮಾಹಿತಿ ದೊರೆತ

ಮಂಗಳೂರು : ಹತ್ಯೆಗೀಡಾದ ಯೋಗೀಶ್ ಮನೆಗೆ ಶಾಸಕ ರಘುಪತಿ ಭಟ್ ಭೇಟಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯ ಯಾಕೂಬ್ ಮೇಲೆ ದಾಳಿ ನಡೆಸಿ ಹತ್ಯೆಗೈದ ಘಟನೆ ಶುಕ್ರವಾರ ಸಂಜೆ ಅಡ್ಯಾರ್ ಸಮೀಪದಲ್ಲಿ ನಡೆದಿದೆ. ಶುಕ್ರವಾರ ಸಂಜೆ ಅಡ್ಯಾರ್‌ ಸಮೀಪದಲ್ಲಿ ತಂಡವೊಂದು ಬಿಜೆಪಿ ಬೆಂಬಲಿತ ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯರಾಗಿರುವ ಯಾಕೂಬ್ ಅವರ ಮೇಲೆ ದಾಳಿ ನಡೆಸಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ನಗರದ ಫಳ್ನೀರ್‌ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಯಾಕೂಬ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಇನ್ನು ಕೊಲೆಗೆ ವೈಯಕ್ತಿಕ

ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರ್ಕಳ ಬೆಂಕಿಗೆ ಆಹುತಿಯಾದ ಲಕ್ಷಾಂತರ ಮೌಲ್ಯದ ಚಿನ್ನಾಭರಣದ ಬಾಕ್ಸ್

(ನ್ಯೂಸ್ ಕಡಬ) newskadaba.com.ಕಾರ್ಕಳ,ಜು.10: ಚಿನ್ನಾಭರಣಗಳ ಬಾಕ್ಸ್ ತಯಾರಿಕ ಫ್ಯಾಕ್ಟರಿಯಲ್ಲಿ ಆಕಸ್ಮಕಿ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತು ಸುಟ್ಟು ಭಸ್ಮವಾದ ಘಟನೆ ಇಂದು ಬೆಳಗ್ಗೆ ಮುಂಡ್ಕೂರಿನಲ್ಲಿ ನಡೆದಿದೆ. ಕಾರ್ಕಳದ ತಾಲೂಕಿನ ಮುಂಡ್ಕೂರು ಗ್ರಾಮದ ಸುಧೀರ್ ಶೆಣೈ ಎಂಬವರಿಗೆ ಸೇರಿದ ಫ್ಯಾಕ್ಟರಿಯಾಯಲ್ಲಿ ಮುಂಜಾನೆ ಆಕಸ್ಮಿಕವಾಗಿ ಕಾಣಿಸಿ ಕೊಂಡ ಬೆಂಕಿ  ನೋಡನೋಡುತ್ತಲೆ ಹಬ್ಬಿ ಅಪಾರ ಸೊತ್ತುಗಳು ನಾಶವಾಗಿವೆ. ತಕ್ಷಣ ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರ್ಕಳ ಬೆಂಕಿಗೆ ಆಹುತಿಯಾದ ಲಕ್ಷಾಂತರ ಮೌಲ್ಯದ ಚಿನ್ನಾಭರಣದ ಬಾಕ್ಸ್ Read More »

ಕರಾವಳಿ

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಯಶಸ್ವಿ ಹಿನ್ನೆಲೆ ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಶಿಕ್ಷಣ ಸಚಿವರು

(ನ್ಯೂಸ್ ಕಡಬ) newskadaba.com. ಬಂಟ್ವಾಳ,ಜು.10: ಕೊರೊನಾ ಸೋಂಕಿನ ನಡುವೆಯೆ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಬಹುತೇಕ ಯಶಸ್ವಿಯಾಗಿ ಮುಗಿಸಿದ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಇಂದು ಭೇಟಿ ನೀಡಿದರು. ಈ ಸಂದರ್ಭ ಕಾಲಿನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದು ಎಲ್ಲರ ಮೆಚ್ಚುಗೆ ಗಳಿಸಿಕೊಂಡಿದ್ದ ಕೌಶಿಕ್ ನನ್ನು ದೇವಸ್ಥಾನದ ಪ್ರವೇಶ ದ್ವಾರದ ಬಳಿ ಭೇಟಿಯಾಗಿ ನೀನೇ ನಮಗೆ ಸ್ಪೂರ್ತಿ ಎಂದು ಆತನ ಪಠ್ಯೇತರ

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಯಶಸ್ವಿ ಹಿನ್ನೆಲೆ ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಶಿಕ್ಷಣ ಸಚಿವರು Read More »

ಕರ್ನಾಟಕ

ಕೊರೊನಾ ವಾರಿಯರ್‍ಗಳಾಗಿ ದುಡಿದ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ ➤ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯ

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜು.10:  ಇಂದು ರಾಜ್ಯಾದ್ಯಂತ ವಿವಿಧ ಬೇಡಿಕೆ ಪೂರೈಸುವಂತೆ ಕೋರಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಆರಂಭವಾಗಿದೆ. ಮಾಸಿಕ 12 ಸಾವಿರ ರೂ. ಗೌರವಧನ ನಿಗದಿಪಡಿಸುವುದರ ಜತೆಗೆ, ಕೊರೊನಾ ವಿರುದ್ಧ ಹೋರಾಡಲು ಅಗತ್ಯ ಪ್ರಮಾಣದ ಸುರಕ್ಷತಾ ಕಿಟ್‌ಗಳನ್ನು ಒದಗಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರು ಶುಕ್ರವಾರದಿಂದ ಸೇವೆ ಸ್ಥಗಿತಗೊಳಿಸಿ ಹೋರಾಟ ನಡೆಸಲಿದ್ದಾರೆ. ಕಳೆದ ಒಂದು ವಾರದಿಂದ ಆಶಾ ಕಾರ್ಯಕರ್ತೆಯರು ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ರಾಜ್ಯದ ಸಂಬಂಧಪಟ್ಟ ಸಚಿವರಿಗೆ ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ. ಈ ವರ್ಷದ ಜನವರಿಯಿಂದ ಸುಮಾರು

ಕೊರೊನಾ ವಾರಿಯರ್‍ಗಳಾಗಿ ದುಡಿದ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ ➤ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯ Read More »

ಕರ್ನಾಟಕ

ಮಂಗಳೂರು :ಜಿಲ್ಲೆಯ ಹಾಲು ಉತ್ಪಾದಕರಿಗೆ ಮತ್ತೆ ಶಾಕ್

(ನ್ಯೂಸ್ ಕಡಬ) newskadaba.com ಮಂಗಳೂರು,ಜು.10: ಕಳೆದ ಮೂರು ತಿಂಗಳಿನಿಂದ ಸರ್ಕಾರ ಪ್ರೋತ್ಸಾಹ ಧನ ನೀಡದ ಕಾರಣ ಹಾಲು ಉತ್ಪಾದಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೇ ಸಂದರ್ಭದಲ್ಲಿ ಹಾಲಿನ ಖರೀದಿ ದರವನ್ನು ಒಕ್ಕೂಟಗಳು ಕಡಿಮೆ ಮಾಡುತ್ತಿರುವುದರಿಂದ ಹಾಲು ಉತ್ಪಾದಕರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕೊರೊನಾ ಸೋಂಕು ಲಾಕ್‍ಡೌನ್ ಕಾರನದಿಂದ ರಾಜ್ಯದಲ್ಲಿ ಹಾಲು ಮತ್ತು ಹಾಲಿನ ಉತ್ಪಾನ್ನಗಳ ಮಾರಾಟ ಗಣನೀಯ ಪ್ರಮಾಣದಲ್ಲಿ ಕುಸಿದಿದ್ದರಿಂದ ಹಾಲು ಉತ್ಪಾಪಾದಕರಿಗೆ ಸಂಕಷ್ಟ ಎದುರಾಗಿದೆ. ಒಕ್ಕೂಟಗಲಲ್ಲಿ ಸಂಗ್ರಹವಾದ ಹಾಲಿನಲ್ಲಿ ಪ್ರತಿದಿನ ಸುಮಾಋಉ 35 ಲಕ್ಷ ಲೀಟರ್ ಹಾಲು

ಮಂಗಳೂರು :ಜಿಲ್ಲೆಯ ಹಾಲು ಉತ್ಪಾದಕರಿಗೆ ಮತ್ತೆ ಶಾಕ್ Read More »

ಕರಾವಳಿ, ಕರ್ನಾಟಕ
Scroll to Top