Kadaba News

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಆರೋಗ್ಯದಲ್ಲಿ ಸುಧಾರಣೆ ➤ ಆಸ್ಪತ್ರೆಯಿಂದ ಡಿಸ್ಚಾರ್ಜ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.06: ಲೋ ಬಿಪಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಅವರು ಬಿಡುಗಡೆಯಾಗಿದ್ದಾರೆ.ಕಾರ್ಯಕ್ರಮದ ನಿಮಿತ್ತ ಚಿತ್ರದುರ್ಗಕ್ಕೆ ತೆರಳಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡರು, ಲೋ ಶುಗರ್ನಿಂದ ಅಸ್ವಸ್ಥಗಿದ್ದರು. ಅವರನ್ನ ಹತ್ತಿರದ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಝೀರೋ ಟ್ರಾಫಿಕ್ನಲ್ಲಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು. ನಗರದ ಅಸ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಸಚಿವರು  ಎರಡು ದಿನದ ಚಿಕಿತ್ಸೆಯ ಬಳಿಕ ಈಗ […]

ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ಆರೋಗ್ಯದಲ್ಲಿ ಸುಧಾರಣೆ ➤ ಆಸ್ಪತ್ರೆಯಿಂದ ಡಿಸ್ಚಾರ್ಜ್ Read More »

ಕರಾವಳಿ

ಶಾಲಾ ಬಾಲಕಿಗೆ ಸ್ಪ್ರೇ ಸಿಂಪಡಿಸಿದ ಪ್ರಕರಣ ➤ಶಾಲೆಯಿಂದ ತಪ್ಪಿಸಿಕೊಳ್ಳಲು ನಾಟಕವಾಡಿದ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಕುಕ್ಕುಜಡ್ಕ, ಜ.06: ಶಾಲಾ ಬಾಲಕಿಗೆ ಸ್ಪ್ರೇ ಸಿಂಪಡಿಸಿ ಅಪರಿಚಿತರು ಪರಾರಿಯಾಗಿದ್ದ ಘಟನೆಗೆ ರೋಚಕ ತಿರುವೊಂದು ಸಿಕ್ಕಿದೆ. ಈ ಘಟನೆ ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದ ಆನೆಕಾರ್ ಎಂಬಲ್ಲಿ ನಡೆದಿತ್ತು .ಇನ್ನು ಪ್ರಜ್ಞೆ ತಪ್ಪಿ ರಸ್ತೆಯಲ್ಲಿ ಬಿದ್ದಿದ್ದ ಬಾಲಕಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಕುಕ್ಕುಜಡ್ಕ ಶಾಲೆಗೆ ಹೋಗುತ್ತಿರುವಾಗ ಆನೆಕಾರ್ ಸಮೀಪ ಬೈಕ್ ನಲ್ಲಿ ಬಂದ ವ್ಯಕ್ತಿಗಳು ರಾಸಾಯನಿಕವೊಂದನ್ನು ಬಾಲಕಿಗೆ ಸ್ಪ್ರೇ ಮಾಡಿ ಆಕೆಯ ಪ್ರಜ್ಞೆ ತಪ್ಪಿಸಿ ಪರಾರಿಯಾಗಿದ್ದರು. ಈ ಮೂಲಕ ಮತ್ತೊಂದು ಅಪಹರಣಕ್ಕೆ ಈ ಕೃತ್ಯ

ಶಾಲಾ ಬಾಲಕಿಗೆ ಸ್ಪ್ರೇ ಸಿಂಪಡಿಸಿದ ಪ್ರಕರಣ ➤ಶಾಲೆಯಿಂದ ತಪ್ಪಿಸಿಕೊಳ್ಳಲು ನಾಟಕವಾಡಿದ ವಿದ್ಯಾರ್ಥಿನಿ Read More »

ಕರಾವಳಿ

ಪಣೋಲಿಬೈಲ್ ಕ್ಷೇತ್ರಕ್ಕೆ ಚಿತ್ರನಟಿ ತಾರಾ ಅನೂರಾಧ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧ ಅವರು ಕುಟುಂಬ ಸಹಿತ ಸೋಮವಾರ ಬಂಟ್ವಾಳ ತಾಲೂಕಿನ ಪ್ರಸಿದ್ಧ ಕಾರಣಿಕದ ಕ್ಷೇತ್ರ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನಕ್ಕೆ ಭೇಟಿ ನೀಡಿದರು.   ಕ್ಷೇತ್ರದ ಕಾರಣಿಕ ಶಕ್ತಿಯನ್ನು ನಂಬಿ ಇಲ್ಲಿಗೆ ಬಂದಿದ್ದು, ಪಣೋಲಿಬೈಲಿನ ತಾಯಿ ದರ್ಶನ ಪಡೆಯುವುದಕ್ಕೆ ಇದೇ ಮೊದಲ ಬಾರಿಗೆ ಕ್ಷೇತ್ರಕ್ಕೆ ಭೇಟಿ ನೀಡಿದ್ದೇನೆ ಎಂದು ಈ ಸಂದರ್ಭ ಅವರು ಹೇಳಿದರು. ತಾರ ಅವರ ತಾಯಿ ಪುಷ್ಪಮ್ಮ, ಉದ್ಯಮಿ ವೆಂಕಟೇಶ್,

ಪಣೋಲಿಬೈಲ್ ಕ್ಷೇತ್ರಕ್ಕೆ ಚಿತ್ರನಟಿ ತಾರಾ ಅನೂರಾಧ ಭೇಟಿ Read More »

ಕರಾವಳಿ

ಬಂಟ್ವಾಳ :ನಾಪತ್ತೆಯಾದ ಶಾಲಾ ಬಾಲಕ ಮಂಗಳೂರಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06: ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಗಣೇಶ ಎಂಬಾತ ಮಂಗಳೂರಲ್ಲಿ ಪತ್ತೆಯಾಗಿದ್ದಾನೆ. ಮಂಗಳೂರಿನಲ್ಲಿ ಗಣೇಶ್ ಪತ್ತೆಯಾಗಿದ್ದು ಬಳಿಕ ಆತನನ್ನು ವಿಟ್ಲ ಠಾಣೆಗೆ ಕರೆದೊಯ್ಯುದು ಬಾಲಕನಿಗೆ ಬುದ್ಧಿವಾದ ಹೇಳಿ ಪೋಷಕರಿಗೆ ಹಸ್ತಾಂತರಿಸಲಾಗಿದೆ. ವಿಟ್ಲ ಪೋಲೀಸರು ಸುರಕ್ಷಿತವಾಗಿ ಬಾಲಕನನ್ನು ಪೋಷಕರಿಗೆ ಒಪ್ಪಿಸಿದ್ದಾರೆ.ಈತ ಕರೋಪ್ಪಾಡಿ ಗ್ರಾಮದ ಹನುಮಂತ ಎಸ್ ಸುಡುಗಾಡಸಿದ್ದ ರವರ ಮಗ ಕೊರೊನಾ ಕಾರಣದಿಂದಾಗಿ ಶಾಲೆಗೆ ರಜೆ ಇದ್ದುದರಿಂದ ಮನೆಯಲ್ಲಿದ್ದ ಗಣೇಶ ಆನ್ ಲೈನ್

ಬಂಟ್ವಾಳ :ನಾಪತ್ತೆಯಾದ ಶಾಲಾ ಬಾಲಕ ಮಂಗಳೂರಿನಲ್ಲಿ ಪತ್ತೆ Read More »

ಕರಾವಳಿ

ಲಂಚ ಪಡೆಯುತ್ತಿದ್ದ ಭೂಮಾಪಕ ಅಧಿಕಾರಿ ಎಸಿಬಿ ಬಲೆಗೆ

(ನ್ಯೂಸ್ ಕಡಬ) newskadaba.com ಮೈಸೂರು, ಜ. 04.  ಲಂಚ ಪಡೆಯುತ್ತಿದ್ದಾಗ ಭೂಮಾಪಕ ಅಧಿಕಾರಿ ಎಸಿಬಿ ಬಲೆಗೆ ಸಿಕ್ಕಿಬಿದ್ದ ಘಟನೆ ಮೈಸೂರು ತಾಲ್ಲೂಕು ಕಚೇರಿಯಲ್ಲಿ ನಡೆದಿದೆ.   ಜಮೀನು ಸರ್ವೇ ಮಾಡಿಕೊಡಲು 8 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಸಂದರ್ಭ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಭೂಮಾಪನಾ ಇಲಾಖೆಯ ಸರ್ವೆಯರ್‌ ಹನುಮಂತರಾಯಪ್ಪ ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಎಸಿಬಿ ಎಸ್‌.ಪಿ ಡಾ.ಸುಮ್ ಡಿ ಪನೇಕರ್ ಮಾರ್ಗದರ್ಶನದಂತೆ ಡಿಎಸ್‌.ಪಿ ಎಚ್. ಪರಶುರಾಮಪ್ಪ ನೇತೃತ್ವದ ತಂಡವು ಈ ಕಾರ್ಯಾಚರಣೆ ನಡೆಸಿದೆ.

ಲಂಚ ಪಡೆಯುತ್ತಿದ್ದ ಭೂಮಾಪಕ ಅಧಿಕಾರಿ ಎಸಿಬಿ ಬಲೆಗೆ Read More »

ಕರ್ನಾಟಕ

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಿಂದ ಕುಮಾರ ಪರ್ವತ ಯಾತ್ರೆ ಆರಂಭ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 04. ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ಇಂದು ಮುಂಜಾನೆ ಕುಮಾರ ಪರ್ವತ ಯಾತ್ರೆಯನ್ನು ಆರಂಭಿಸಲಾಯಿತು. ಅಭಿವೃದ್ದಿ ಸಮಿತಿಯ ಸದಸ್ಯ ಮೋಹನ್ ರಾಮ್ ಸುಳ್ಮಿಯವರು ತೆಂಗಿನಕಾಯಿ ಒಡೆದು, ಧ್ವಜ ಹಸ್ತಾಂತರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು. ಅಪಾರ ಸಂಖ್ಯೆಯಲ್ಲಿ ಭಕ್ತರು ಹಾಗೂ ಸಿಬ್ಬಂದಿಗಳು ಯಾತ್ರೆಯನ್ನು ಕೈಗೊಂಡಿದ್ದಾರೆ.

ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದಿಂದ ಕುಮಾರ ಪರ್ವತ ಯಾತ್ರೆ ಆರಂಭ Read More »

ಕರಾವಳಿ, ಕರ್ನಾಟಕ

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ – ನಶೆ ಇಳಿಸಿದ ಪೊಲೀಸ್ ಆಯುಕ್ತರು

(ನ್ಯೂಸ್ ಕಡಬ) newskadaba,ಮಂಗಳೂರು ಜ.04:ನಗರ ನೂತನ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಿರುವವರಿಗೆ ಬಿಸಿ ಮುಟ್ಟಿಸಿ ವಶಕ್ಕೆ ಪಡೆದುಕೊಳ್ಳುವ ಮೂಲಕ ಅವರ ನಶೆ ಇಳಿಸುವ ಕಾರ್ಯ ಕೈಗೆತ್ತಿಕೊಂಡಿದ್ದಾರೆ. ನಿನ್ನೆ ರಾತ್ರಿ ನಗರದ ನೆಹರೂ ಮೈದಾನದ ಬಳಿ ನಡೆದುಕೊಂಡು ಹೋಗುತ್ತಿರುವಾಗಲೇ ಮದ್ಯಪಾನ ಮಾಡುತ್ತಿದ್ದ ಯುವಕರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಪಾಂಡೇಶ್ವರ ಹಾಗೂ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಹಾಗೂ ಧೂಮಪಾನ ಮಾಡುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿರುವ

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ – ನಶೆ ಇಳಿಸಿದ ಪೊಲೀಸ್ ಆಯುಕ್ತರು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಚಿರತೆ ಪ್ರತ್ಯಕ್ಷ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 04. ಬಡಾವಣೆಯೊಂದರ ಕಾಂಪೌಂಡ್ ಗೋಡೆಯ ಮೇಲೆ ಚಿರತೆ ಮತ್ತು ಎರಡು ಚಿರತೆ ಮರಿಗಳು ಓಡಾಡಿರುವುದು ಪಡೀಲ್ ನಿಂದ ವರದಿಯಾಗಿದೆ. ಇಲ್ಲಿನ ಬಡಾವಣೆಯ ಚಂದ್ರಶೇಖರ್ ಭಟ್ ಎಂಬವರ ಅಂಗಳದಲ್ಲಿರುವ ಕಾಂಪೌಂಡ್ ಗೋಡೆಯ ಮೇಲೆ ಈ ಚಿರತೆಗಳು ಇರುವುದನ್ನು ಅವರ ಪತ್ನಿ ನೋಡಿರುವುದಾಗಿ ತಿಳಿದು ಬಂದಿದೆ.

ಪುತ್ತೂರು: ಚಿರತೆ ಪ್ರತ್ಯಕ್ಷ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನ ಕೊಂದ ಯುವತಿ

(ನ್ಯೂಸ್ ಕಡಬ) newskadaba.com ಚೆನ್ನೈ, ಜ.04. ಅತ್ಯಾಚಾರಕ್ಕೆ ಯತ್ನಿಸಿದ ದುಷ್ಕರ್ಮಿಯನ್ನು ಚಾಕುವಿನಿಂದ ಇರಿದು ಕೊಂದ ಘಟನೆ ತಮಿಲಕುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ನಡೆದಿದೆ. ಯುವತಿಯು ಶೋಲಾವರಂನಲ್ಲಿನ ಚಿಕ್ಕಮ್ಮನ ಮನೆಗೆ ತೆರಳಿದ್ದ ವೇಳೆ ಅಲ್ಲಿದ್ದ ಅಜಿತ್ ಎಂಬಾತನು ಆಕೆಯ ಅತ್ಯಾಚರಾಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈತನ ಕೃತ್ಯಕ್ಕೆ ಆಕೆ ವಿರೋಧಿಸಿದಾಗ ಚಾಕು ತೋರಿಸಿ ಬೆದರಿಕೆ ಹಾಕಿದ್ದು, ಈ ಸಂದರ್ಭ ಆತನಿಂದ ಚಾಕುವನ್ನು ಕಸಿದು ಆತನ ಕುತ್ತಿಗೆಗೆ ಇರಿದಿದ್ದಾಳೆ. ಪರಿಣಾಮ ಅಜಿತ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನ ಕೊಂದ ಯುವತಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಫಲ್ಗುಣಿ ನದಿಯಲ್ಲಿ ನವಜಾತ ಶಿಶುವಿನ‌ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 03, ನವಜಾತ ಶಿಶುವಿನ ಮೃತದೇಹವೊಂದು ಫಲ್ಗುಣಿ ನದಿಯಲ್ಲಿ ತೇಲುತ್ತಿದ್ದುದನ್ನು ಕಂಡ ಮೀನುಗಾರರು ಈ ಕುರಿತು ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೀನುಗಾರಿಕೆಯಿಂದ ಮರಳುತ್ತಿದ್ದ ಮೀನುಗಾರರಿಗೆ ನದಿಯು ಸಮುದ್ರವನ್ನು ಸೇರುವ ತೋಟ ಬೆಂಗ್ರೆಯಲ್ಲಿ ಮಗುವಿನ ಮೃತದೇಹ ಕಂಡುಬಂದಿದ್ದು, ಮೃತದೇಹವನ್ನು ಮೇಲಕ್ಕೆತ್ತಿದ ಮೀನುಗಾರರು ಪಣಂಬೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕುರಿತಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು: ಫಲ್ಗುಣಿ ನದಿಯಲ್ಲಿ ನವಜಾತ ಶಿಶುವಿನ‌ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top