Kadaba News

ಕೊರೊನಾ ರಣಕೇಕೆ ➤ ಮೂರನೇ ಸ್ಥಾನದತ್ತ ಮುನ್ನುಗ್ಗುತ್ತಿರುವ ಭಾರತ!

(ನ್ಯೂಸ್ ಕಡಬ) newskadaba.com ನವದೆಹಲಿ, ಜು.03., ದೇಶದಲ್ಲಿ ಕೊರೊನಾ ಸೋಂಕು ಅಬ್ಬರಿಸಿ ರಣಕೇಕೆ ಹಾಕುತ್ತಿದೆ. ಪ್ರತಿ ನಿತ್ಯ ಸರಿ ಸುಮಾರು 20 ಸಾವಿರ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗೆ ಹೆಚ್ಚಾಗುತ್ತಿರುವ ಸೋಂಕು ಭಾರತವನ್ನು ಇನ್ನು ಮೂರೇ ದಿನದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೂನರೇ ಸ್ಥಾನಕ್ಕೆ ತಂದು ನಿಲ್ಲಿಸುವ ಎಲ್ಲಾ ಲಕ್ಷಣಗಳು ದಟ್ಟವಾಗಿವೆ. ಹೌದು. ದೇಶದಲ್ಲಿ ಹಬ್ಬುತ್ತಿರುವ ಮಹಾಮಾರಿ ಸೋಂಕು ಭಾರತವನ್ನು ಕೊರೊನಾ ಪೀಡಿತ ರಾಷ್ಟ್ರಗಳಲ್ಲಿ ಅಗ್ರಗಣ್ಯ ಸ್ಥಾನಕ್ಕೆ ಕರೆದೊಯ್ಯುತ್ತಿದೆ. ದೇಶದಲ್ಲಿ ಸೋಂಕು ಹಬ್ಬುತ್ತಿರುವ ವೇಗ ಹೆಚ್ಚಾಗಿದ್ದು ಪ್ರತಿದಿನ 20 ಸಾವಿರ […]

ಕೊರೊನಾ ರಣಕೇಕೆ ➤ ಮೂರನೇ ಸ್ಥಾನದತ್ತ ಮುನ್ನುಗ್ಗುತ್ತಿರುವ ಭಾರತ! Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು :ಪತ್ನಿಯನ್ನು ಕಲ್ಲಿನ ಕೋರೆಗೆ ದೂಡಿ ಹತ್ಯೆಗೈದ ಪತಿ.!

(ನ್ಯೂಸ್ ಕಡಬ) newskadaba.com ಮಂಗಳೂರು,ಜು.03: ಕಾವೂರಿನ ಟಿಪ್ಪರ್ ಚಾಲಕ ಗಣೇಶ್ ತನ್ನ ಪತ್ನಿ ಶಾಂತಾ  ಅವರನ್ನು ಬಜ್ಪೆ ಸಮೀಪದ ಕರಂಬಾರು ಅಂತೋಣಿಕಟ್ಟೆಯ ಕಲ್ಲಿನ ಕ್ವಾರಿಗೆ ದೂಡಿ ಕೊಲೆ ಮಾಡಿ ಪರಾರಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ. ಪತಿ-ಪತ್ನಿ ಮಧ್ಯೆ ವಿರಸ ಉಂಟಾದ ಕಾರಣ ಪತ್ನಿ ಮಕ್ಕಳನ್ನು ಕರೆದುಕೊಂಡು ತವರಿಗೆ ಹೋಗಿದ್ದು, ಕೆಲವು ಸಮಯ ಪ್ರತ್ಯೇಕವಾಗಿ ವಾಸವಾಗಿದ್ದರು. ಇತ್ತೀಚೆಗೆ ಆತ ಆಕೆಯ ಮನೆಗೆ ತೆರಳಿ ಮಾತುಕತೆ ನಡೆಸಿ ಕಾವೂರಿಗೆ ಕರೆಸಿಕೊಂಡಿದ್ದನು.   ಬುಧವಾರ ಸಂಜೆ ಗಣೇಶ್ ಪತ್ನಿ ಶಾಂತಾಳನ್ನು

ಮಂಗಳೂರು :ಪತ್ನಿಯನ್ನು ಕಲ್ಲಿನ ಕೋರೆಗೆ ದೂಡಿ ಹತ್ಯೆಗೈದ ಪತಿ.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು : ಜುಲೈ 04, 07, ಹಾಗೂ 09 ರಂದು ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.03. ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತವು ಪ್ರಕಟಣೆ ಹೊರಡಿಸಿದ್ದು, 33.ಕೆ.ವಿ ಪುತ್ತೂರು-ಕಡಬ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಜುಲೈ 04 ಶನಿವಾರ, ಜುಲೈ 07 ಮಂಗಳವಾರ ಹಾಗೂ ಜುಲೈ 09 ಗುರುವಾರ ಬೆಳಿಗ್ಗೆ 10:00 ರಿಂದ ಸಂಜೆ 5:00 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 33/11 ಕೆ.ವಿ. ಕಡಬ, ನೆಲ್ಯಾಡಿ ಮತ್ತು ಸುಬ್ರಹ್ಮಣ್ಯ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್ ಗಳಿಂದ ವಿದ್ಯುತ್ ಸರಬರಾಜಾಗುವ

ಪುತ್ತೂರು : ಜುಲೈ 04, 07, ಹಾಗೂ 09 ರಂದು ವಿದ್ಯುತ್ ನಿಲುಗಡೆ Read More »

ಕರಾವಳಿ, ಕರ್ನಾಟಕ

ಉಡುಪಿ : 1 ವರ್ಷದ ಮಗು ಸಹಿತ 14 ಕರೊನಾ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಉಡುಪಿ ,ಜು.03: ಜಿಲ್ಲೆಯಲ್ಲಿ ಕೊರೋನಾ ತನ್ನ ವರಸೆಯನ್ನು ಬದಲಾಯಿಸುತ್ತಿದೆಯೇ ಎಂಬ ಆತಂಕ ಎದುರಾಗಿದೆ. ಉಡುಪಿಯಲ್ಲಿ ಒಂದು ವರ್ಷದ ಹೆಣ್ಣು ಮಗು ಸಹಿತ 14 ಮಂದಿಗೆ ಕರೊನಾ ಸೋಂಕು ದೃಢಪಟ್ಟಿದೆ. ಇದರಲ್ಲಿ ಮಹಾರಾಷ್ಟ್ರದಿಂದ ಬಂದವರು ನಾಲ್ವರು. ಕೇರಳದಿಂದ ಬಂದ ಒಬ್ಬರಿದ್ದಾರೆ. ಬೆಂಗಳೂರಿನ ಆತಂಕ ಮುಂದುವರಿದಿದ್ದು, ಅಲ್ಲಿಂದ ಬಂದ 4 ಮಂದಿಗೆ ಸೋಂಕು ತಗುಲಿದೆ.   ಸೋಂಕು ಕಾಣಿಸಿಕೊಂಡ ಪ್ರಾಥಮಿಕ ಸಂಪರ್ಕದಿಂದ ಐವರಿಗೆ ಸೋಂಕು ತಗುಲಿದೆ. ಎಲ್ಲ 14 ಮಂದಿಯನ್ನು ನಿಗದಿತ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ

ಉಡುಪಿ : 1 ವರ್ಷದ ಮಗು ಸಹಿತ 14 ಕರೊನಾ ಸೋಂಕು ದೃಢ Read More »

ಕರಾವಳಿ, ಕರ್ನಾಟಕ

ಉಡುಪಿ ಜುಲೈ 31ರ ತನಕ ಭಕ್ತರಿಗೆ ಶ್ರೀ ಕೃಷ್ಣನ ದರ್ಶನ ಭಾಗ್ಯವಿಲ್ಲ

(ನ್ಯೂಸ್ ಕಡಬ) newskadaba.com.ಉಡುಪಿ,ಜು. 03 :ಕೊರೊನಾ ತನ್ನ ನಾಗಾಲೋಟ ಇದೇ ರೀತಿ ಮುಂದುವರಿಸುತ್ತಿದ್ದರೆ. ಇತ್ತ ಕೃಷ್ಣನ ದರ್ಶನವು ಮುಂದೂಡಲ್ಪಡುತ್ತಿದೆ. ಜುಲೈ 31ರ ತನಕ ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಲಾಗಿದೆ. ಭಕ್ತರು ಹಾಗೂ ಕೃಷ್ಣ ಮಠದ ಸಿಬ್ಬಂದಿಗಳ ಆರೋಗ್ಯದ ಈ ದೃಷ್ಟಿಯಿಂದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ಮಾಹಿತಿ ನೀಡಿದ್ದಾರೆ. ದರ್ಶನ ಆರಂಭಿಸಿದರೆ ಎಲ್ಲೆಡೆಯಿಂದ ಭಕ್ತರು ಬರುತ್ತಾರೆ. ಭಕ್ತರ ಮತ್ತು ಕೃಷ್ಣಮಠದ ಸಿಬ್ಬಂದಿ ಆರೋಗ್ಯ ಮುಖ್ಯ. ಕೃಷ್ಣಮಠದಲ್ಲಿ ಬಹಳ ಹಿಂದಿನಿಂದ ಯತಿಗಳೇ ಪೂಜೆ ಮಾಡಿಕೊಂಡು

ಉಡುಪಿ ಜುಲೈ 31ರ ತನಕ ಭಕ್ತರಿಗೆ ಶ್ರೀ ಕೃಷ್ಣನ ದರ್ಶನ ಭಾಗ್ಯವಿಲ್ಲ Read More »

ಕರ್ನಾಟಕ

‘ಏಕ್ ದೋ ತೀನ್’ ಖ್ಯಾತಿಯ ಬಾಲಿವುಡ್ ನೃತ್ಯ ಸಂಯೋಜಕಿ ಸರೋಜ್ ಖಾನ್ ನಿಧನ

(ನ್ಯೂಸ್ ಕಡಬ) newskadaba.com ಮುಂಬೈ,ಜು.03:  ಬಾಲಿವುಡ್‌ ಮಾಸಿ- ಕ್ಲಾಸಿ ನೃತ್ಯ ಸಂಯೋಜಕಿ ಸರೋಜ್ ಖಾನ್ ಇಂದು (ಜುಲೈ 3) ಹೃದಯಾಘಾತದಿಂದ ಕೊನೆ ಉಸಿರೆಳೆದಿದ್ದಾರೆ. ಕಳೆದ ಒಂದು ತಿಂಗಳಿನಿಂದ ಮುಂಬೈನ ಗುರು ನಾನಕ್ ಆಸ್ಪತ್ರೆಯಲ್ಲಿ ಉಸಿರಾಟದ ತೊಂದರೆಗೆ ಚಿಕಿತ್ಸೆಪಡೆಯುತ್ತಿದ್ದರು.   2000 ಸಾವಿರಕ್ಕೂ ಹೆಚ್ಚು ಸಿನಿಮಾ ಹಾಡುಗಳಿಗೆ ನೃತ್ಯ ಸಂಯೋಜಿಸಿರುವ ಸರೋಜ್‌ ಖಾನ್‌ ಅವರನ್ನು ಬಿ-ಟೌನ್‌ನಲ್ಲಿ ಎಲ್ಲರೂ ‘ಮಾಸ್ಟರ್‌ಜಿ’ ಎಂದೇ ಸಂಬೋಧಿಸುತ್ತಿದ್ದರು. ಸರೋಜ್‌ ಖಾನ್‌ಗೆ ಕೋವಿಡ್‌-19 ಪರೀಕ್ಷೆ ಮಾಡಲಾಗಿದ್ದು, ವರದಿ ನೆಗೆಟಿವ್ ಬಂದಿತ್ತು ಎಂದು ತಿಳಿದು ಬಂದಿದೆ. .

‘ಏಕ್ ದೋ ತೀನ್’ ಖ್ಯಾತಿಯ ಬಾಲಿವುಡ್ ನೃತ್ಯ ಸಂಯೋಜಕಿ ಸರೋಜ್ ಖಾನ್ ನಿಧನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸ್ಯಾಂಡಲ್ ವುಡ್ ನ ‘ಗೋಲ್ಡನ್ ಗಣಿ’ಗೆ ಬರ್ತ್ ಡೇ ಸಂಭ್ರಮ ➤ ಸೆಟ್ಟೇರಿದೆ ಹೊಸ ಸಿನಿಮಾ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.02: ಗೋಲ್ಡನ್​ ಸ್ಟಾರ್​ ಗಣೇಶ್​ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ. ನಟ ಗಣೇಶ್​ ಅವರ ಫೋಟೋ ಹಾಕಿಕೊಂಡು ಬರ್ತ್​​​ ಡೇಗೆ ವಿಶ್​ ಮಾಡುತ್ತಿದ್ದಾರೆ. ಟ್ವಿಟ್ಟರ್​ನಲ್ಲಿ ಹ್ಯಾಪಿ ಬತ್​​​ ಡೇ ಗಣೇಶ್​ ಎಂಬ ಹ್ಯಾಶ್​​ಟ್ಯಾಗ್​ ಟ್ರೆಂಡಿಂಗ್​ನಲ್ಲಿ ಕಾಣಿಸಿಕೊಂಡಿದೆ.  ಈ ದಿನಕ್ಕೆ ಅವರ ಅಭಿಮಾನಿಗಳಾಗಿ ಎರಡು ಹೊಸ ಸಿನಿಮಾಗಳ ಘೋಷಣೆಯ ಸಿಹಿ ಸುದ್ದಿ ಸಿಕ್ಕಿದೆ. ಇನ್ನು, ಈ ಬಾರಿ ಕೊರೋನಾದಿಂದಾಗಿ ಗಣೇಶ್ ಅಭಿಮಾನಿಗಳೊಂದಿಗೆ ಬರ್ತ್

ಸ್ಯಾಂಡಲ್ ವುಡ್ ನ ‘ಗೋಲ್ಡನ್ ಗಣಿ’ಗೆ ಬರ್ತ್ ಡೇ ಸಂಭ್ರಮ ➤ ಸೆಟ್ಟೇರಿದೆ ಹೊಸ ಸಿನಿಮಾ Read More »

ಕರಾವಳಿ, ಕರ್ನಾಟಕ, ಲೈಫ್‍ಸ್ಟೈಲ್

ಪುತ್ತೂರು ಆಸ್ಪತ್ರೆಗಳಲ್ಲಿ ದಾಖಲಾಗಿದ್ದ ವ್ಯಕ್ತಿಗಳಿಬ್ಬರ ಕೊವೀಡ್ ವರದಿ ನೆಗೆಟಿವ್

(ನ್ಯೂಸ್ ಕಡಬ) newskadaba.com ಪುತ್ತೂರು ,ಜು.02: ಪುತ್ತೂರಿನ ಎರಡು ಆಸ್ಪತ್ರೆಗಳಲ್ಲಿ ದಾಖಲಾಗಿದ್ದ ಬಜತ್ತೂರಿನ 80ರ ವೃದ್ದ ಮತ್ತು ಬಪ್ಪಳಿಗೆಯ 20 ವರ್ಷದ ಯುವಕನಿಗೆ ಜೂ.27 ರಂದು ಕೊರೋನಾ ದೃಢಪಟ್ಟಿತ್ತು.   ಅದೇ ದಿನ ಅವರಿಬ್ಬರನ್ನ ಮಂಗಳೂರು ಕೋವಿಡ್ ಆಸ್ಪತ್ರೆ ಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು. ಇದೀಗ ಅವರಿಬ್ಬರು ಗುಣಮುಖ ಹೊಂದಿದ್ದು ಕೊವೀಡ್ ನೆಗೆಟಿವ್ ವರದಿ ಬಂದಿದೆ.ಎಂದು ಆರೋಗ್ಯಧಿಕಾರಿಯವರು ತಿಳಿಸಿದ್ದಾರೆ.      

ಪುತ್ತೂರು ಆಸ್ಪತ್ರೆಗಳಲ್ಲಿ ದಾಖಲಾಗಿದ್ದ ವ್ಯಕ್ತಿಗಳಿಬ್ಬರ ಕೊವೀಡ್ ವರದಿ ನೆಗೆಟಿವ್ Read More »

ಕರಾವಳಿ, ಕರ್ನಾಟಕ

ರೈತರ ಸಾಲ ಮರುಪಾವತಿ ಅವಧಿ ವಿಸ್ತರಣೆಗೆ ಚಿಂತನೆ ➤ ಕೆಲವೇ ದಿನಗಳಲ್ಲಿ ಅಂತಿಮ ನಿರ್ಧಾರ ಸಚಿವ ಎಸ್ ಟಿ. ಸೋಮಶೇಖರ್

(ನ್ಯೂಸ್ ಕಡಬ) newskadaba.com.ಮಡಿಕೇರಿ,ಜು.2:  ಕೊರೊನಾ ಕಾರಣದಿಂದ ರೈತರ ಸಾಲ ಮರುಪಾವತಿ ಅವಧಿಯನ್ನು ಎರಡರಿಂದ ಮೂರು ತಿಂಗಳುಗಳ ಕಾಲ ವಿಸ್ತರಣೆ ಮಾಡಲಾಗುವುದು ಎಂದು ಸಹಕಾರಿ ಸಚಿವ ಎಸ್‌ಟಿ ಸೋಮಶೇಖರ್ ತಿಳಿಸಿದ್ದಾರೆ. ಜೂನ್ 30 ಕ್ಕೆ ರೈತರ ಸಾಲ ವಾಪಸ್ ಕೊಡಲು ಕೊನೇ ದಿನಾಂಕವಿತ್ತು. ಇನ್ನೂ ಡಿಸೆಂಬರ್ ವರೆಗೆ ಮರುಪಾವತಿ ಮಾಡುವಂತೆ ಆಗ್ರಹಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಆರ್ಥಿಕ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದ್ದಲ್ಲದೆ, ಮುಖ್ಯಮಂತ್ರಿಗಳ ಗಮನಕ್ಕೂ ತರಲಾಗಿದೆ. ಇನ್ನು 2-3 ದಿನಗಳಲ್ಲಿ ತೀರ್ಮಾನವನ್ನು ಪ್ರಕಟಿಸಲಾಗುವುದು ಎಂದು ಸಹಕಾರ

ರೈತರ ಸಾಲ ಮರುಪಾವತಿ ಅವಧಿ ವಿಸ್ತರಣೆಗೆ ಚಿಂತನೆ ➤ ಕೆಲವೇ ದಿನಗಳಲ್ಲಿ ಅಂತಿಮ ನಿರ್ಧಾರ ಸಚಿವ ಎಸ್ ಟಿ. ಸೋಮಶೇಖರ್ Read More »

ಕರ್ನಾಟಕ

ಬೆಂಗಳೂರು: BMTC ಯ 32 ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.02: ಬೆಂಗಳೂರು ನಗರದ ಜನರ ಜೀವನಾಡಿ ಬಿಎಂಟಿಸಿ ಬಸ್. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು ತಗುಲುತ್ತಿದೆ. ಕಳೆದ ಒಂದು ವಾರದಲ್ಲಿ 20 ಸಿಬ್ಬಂದಿಗೆ ಸೋಂಕು ತಗುಲಿದೆ. ಬಿಎಂಟಿಸಿಯ ಒಟ್ಟು 32 ಸಿಬ್ಭಂದಿಗಳಿಗೆ ಇದುವರೆಗೂ ಕೊರೊನಾ ವೈರಸ್ ಸೋಂಕು ತಗುಲಿದೆ. ಈಗಾಗಲೇ ಕೆಲವೇ ಬಸ್‌ಗಳು ಮಾತ್ರ ಸಂಚಾರ ನಡೆಸುತ್ತಿದ್ದು, ರಾತ್ರಿ 8 ಗಂಟೆಗೆ ಬಸ್ ಸಂಚಾರ ಸ್ಥಗಿತಗೊಳ್ಳುತ್ತಿದೆ.ಜೂನ್ 12ರಂದು ಬಿಎಂಟಿಸಿ ಸಿಬ್ಬಂದಿಗೆ ಸೋಂಕು ತಗುಲಿದ ಮೊದಲ ಪ್ರಕರಣ ದಾಖಲಾಗಿತ್ತು.

ಬೆಂಗಳೂರು: BMTC ಯ 32 ಸಿಬ್ಬಂದಿಗಳಿಗೆ ಕೊರೊನಾ ವೈರಸ್ ಸೋಂಕು Read More »

ಕರಾವಳಿ, ಕರ್ನಾಟಕ
Scroll to Top